World Cup Final: ಹಾರಲಿ ಭಾರತದ ವಿಜಯ ಪತಾಕೆ; ಅಹಮದಾಬಾದ್ ನಲ್ಲಿ ಟಾಸ್ ಗೆದ್ದ ಆಸೀಸ್


Team Udayavani, Nov 19, 2023, 1:32 PM IST

World Cup Final: ಹಾರಲಿ ಭಾರತದ ವಿಜಯ ಪತಾಕೆ

ಅಹಮದಾಬಾದ್: ಹಾರಲಿ ಭಾರತದ ವಿಜಯ ಪತಾಕೆ.. ಮೊಳಗಲಿ ಗೆಲುವಿನ ದುಂಧುಭಿ.. ಮೇಳೈಸಲಿ ಭಾರತದ ಜಯಘೋಷ.. ಬಾನೆತ್ತರಕೆ ಹಾರಲಿ ತ್ರಿವರ್ಣ.. ಇದು ಕೋಟ್ಯಾಂತರ ಭಾರತೀಯರ ಮನದಾಳ ಭಾವ.

ಹೌದು, ಹತ್ತು ತಂಡಗಳು, 48 ಪಂದ್ಯಗಳು, 45 ದಿನಗಳು, ರನ್ ರಾಶಿ ಪೇರಿಸಿದ ಬ್ಯಾಟರ್ ಗಳು, ವಿಕೆಟ್ ಗಳನ್ನು ತರಗೆಲೆಗಳಂತೆ ಉಡಾಯಿಸಿದ ಬೌಲರ್ ಗಳು, ಅತ್ಯಂತ ರೋಮಾಂಚಕ ಪಂದ್ಯಗಳಿಗೆ ಸಾಕ್ಷಿಯಾದ 2023ರ ಐಸಿಸಿ ಏಕದಿನ ಕ್ರಿಕೆಟ್ ವಿಶ್ವಕಪ್ ಇದೀಗ ಅಂತಿಮ ಘಟ್ಟಕ್ಕೆ ಬಂದು ತಲುಪಿದೆ. ಕೂಟದಲ್ಲಿ ಆಡಿದ ಎಲ್ಲಾ ಪಂದ್ಯಗಳನ್ನು ಗೆದ್ದ, ಅಗ್ರ ಶ್ರೇಯಾಂಕಿತ ಭಾರತ ತಂಡ ಮತ್ತು ಸತತ ಎಂಟು ಪಂದ್ಯಗಳನ್ನು ಗೆದ್ದ, ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾ ಫೈನಲ್ ಪಂದ್ಯದಲ್ಲಿ ಸೆಣಸಾಡುತ್ತಿವೆ.

ಅಹಮದಾಬಾದ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಲಕ್ಷಕ್ಕೂ ಹೆಚ್ಚು ಅಭಿಮಾನಿಗಳ ಎದುರು ಈ ಫೈನಲ್ ಪಂದ್ಯ ನಡೆಯುತ್ತಿದೆ. ಅಂತಿಮ ಮುಖಾಮುಖಿಯಲ್ಲಿ ಟಾಸ್ ಗೆದ್ದ ಪ್ಯಾಟ್ ಕಮಿನ್ಸ್ ಮೊದಲು ಫೀಲ್ಡಿಂಗ್ ಮಾಡಲು ನಿರ್ಧರಿಸಿದ್ದಾರೆ.

ಭಾರತ ತಂಡವು ಫೈನಲ್ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಲ್ಲ. ಸೆಮಿ ಫೈನಲ್ ನಲ್ಲಿ ಆಡಿದ ತಂಡವೇ ಇಂದು ಆಡುತ್ತಿದೆ.

ಎರಡೂ ತಂಡಗಳ ಮೇಲೆ ಬೆಟ್ಟದಷ್ಟು ನಿರೀಕ್ಷೆ. ರೋಹಿತ್‌ ಪಡೆಯ 11 ಆಟಗಾರರ ಮೇಲೆ 140 ಕೋಟಿ ಭಾರತೀಯರ ಹರಕೆ, ಹಾರೈಕೆ ಇದೆ. ಭಾರತದ 2ನೇ ಕಪ್‌ ಗೆಲುವಿಗೆ 20 ವರ್ಷಗಳ ಹಿಂದೆ “ವಾಂಡರರ್ ಸ್ಟೇಡಿಯಂ’ನಲ್ಲಿ ಅಡ್ಡಗಾಲಿಕ್ಕಿದ ಆಸ್ಟ್ರೇಲಿಯವನ್ನು ಈ ಬಾರಿ ಮಣಿಸಲೇಬೇಕು ಎಂಬ ಹಕ್ಕೊತ್ತಾಯವೂ ಇದೆ. ಟಿ20 ಲೀಗ್‌ಗಳಿಂದ ಏಕದಿನ ಕ್ರಿಕೆಟ್‌ ಕೂಡ ಚಾರ್ಮ್ ಕಳೆದುಕೊಳ್ಳುತ್ತಿರುವ ಈ ಕಾಲಘಟ್ಟದಲ್ಲಿ ಭಾರತದ ಗೆಲುವು ಖಂಡಿತವಾಗಿಯೂ ಜಾಗತಿಕ ಕ್ರಿಕೆಟ್‌ ಮೇಲೆ ಸಕಾರಾತ್ಮಕ ಪರಿಣಾಮ ಬೀರಲಿದೆ ಎಂಬುದು ಸಾರ್ವತ್ರಿಕ ಅನಿಸಿಕೆ. ಈ ಕಾರಣಕ್ಕಾಗಿಯೂ ಟೀಮ್‌ ಇಂಡಿಯಾ ವಿಶ್ವಕಪ್‌ ಗೆಲ್ಲಬೇಕು ಮತ್ತು ಖಂಡಿತ ಗೆಲ್ಲಲಿದೆ; ಟ್ರೋಫಿಯ ಮೇಲೆ ಭಾರತದ ಹೆಸರೇ ಬರೆಯಲ್ಪಟ್ಟಿದೆ ಎಂಬುದು ಎಲ್ಲರ ದೃಢ ಅಭಿಪ್ರಾಯ.

ಲೀಗ್‌ನಲ್ಲಿ ಆಸ್ಟ್ರೇಲಿಯವನ್ನು ಮಣಿಸುವ ಮೂಲಕವೇ ತನ್ನ ಅಭಿಯಾನ ಆರಂಭಿಸಿರುವ ಭಾರತ, ಫೈನಲ್‌ನಲ್ಲಿ ಆಸೀಸ್‌ಗೆ ಇನ್ನೊಂದು ಆಘಾತ ನೀಡಿದರೆ ಅದೊಂದು ಪರಿಪೂರ್ಣ ಆವೃತ್ತವಾಗಲಿದೆ. ಚೆನ್ನೈ ಚೇಸಿಂಗ್‌ ವೇಳೆ 2 ರನ್ನಿಗೆ 3 ವಿಕೆಟ್‌ ಕಳೆದುಕೊಂಡೂ ಗೆದ್ದು ಬಂದದ್ದಿದೆಯಲ್ಲ, ಈ ಸ್ಫೂರ್ತಿಯೇ ಭಾರತವನ್ನು ಪ್ರಶಸ್ತಿ ಸುತ್ತಿನ ತನಕ ಕರೆದು ತಂದಿರುವುದು!

ಆಸ್ಟ್ರೇಲಿಯದ್ದು ಪ್ರತ್ಯೇಕ ಸಿದ್ಧಾಂತ. ಇವರನ್ನು ಸೆಮಿಫೈನಲ್‌ನಲ್ಲೇ ಹೊಡೆದುರುಳಿಸಿದರೋ ಬಚಾವ್‌, ಫೈನಲ್‌ಗೆ ಲಗ್ಗೆ ಹಾಕಿದರೆ ಯಾರನ್ನೂ ಬಿಡುವುದಿಲ್ಲ ಎಂಬುದಕ್ಕೆ ನಿದರ್ಶನಗಳು ಹಲವು. ದೊಡ್ಡ ಕೂಟಗಳಲ್ಲಿ ಗೆಲ್ಲುವ ಕಲೆ ಇವರಿಗೆ ಕರಗತ. ಆದರೆ ನೆನಪಿರಲಿ, ಈ ಬಾರಿ ಕಾಂಗರೂ ಸವಾಲು ಖಂಡಿತ ಸುಲಭದ್ದಲ್ಲ.

ಫೈನಲ್ ಪಂದ್ಯದ ತಂಡಗಳು

ಭಾರತ: ರೋಹಿತ್ ಶರ್ಮಾ (ನಾ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.

ಆಸ್ಟ್ರೇಲಿಯಾ: ಡೇವಿಡ್ ವಾರ್ನರ್, ಟ್ರಾವಿಸ್ ಹೆಡ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಬುಶೇನ್, ಗ್ಲೆನ್ ಮ್ಯಾಕ್ಸ್‌ವೆಲ್, ಜೋಶ್ ಇಂಗ್ಲಿಸ್ (ವಿ.ಕೀ), ಪ್ಯಾಟ್ ಕಮಿನ್ಸ್ (ನಾ), ಮಿಚೆಲ್ ಸ್ಟಾರ್ಕ್, ಆಡಮ್ ಝಂಪಾ, ಜೋಶ್ ಹ್ಯಾಜಲ್‌ವುಡ್

ಟಾಪ್ ನ್ಯೂಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

IPL 2024; ಗುಜರಾತ್ ಗೆ ಆರ್ ಸಿಬಿ ಸವಾಲು: ತಂಡಕ್ಕೆ ಮರಳಿದ ಗ್ಲೆನ್ ಮ್ಯಾಕ್ಸವೆಲ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

PCB: ಭಾರತದ ವಿಶ್ವಕಪ್ ಗೆಲುವಿನ ರೂವಾರಿ ಈಗ ಪಾಕಿಸ್ತಾನ ತಂಡದ ಹೊಸ ಕೋಚ್

4

IPL: ಆಟ ಮೆರೆದಾಟ; ಬ್ಯಾಟಿಂಗ್‌ ಅಷ್ಟೇ ಕ್ರಿಕೆಟ್ಟಾ?

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

T20 World Cup ಟೀಂ ಇಂಡಿಯಾ ಆಯ್ಕೆ; ರೋಹಿತ್ ಜತೆ ಅಜಿತ್ ಅಗರ್ಕರ್ ಚರ್ಚೆ

1-wqeqwewewqe

IPL; ಹೊಸ ಉತ್ಸಾಹದಲ್ಲಿರುವ ಆರ್‌ಸಿಬಿ ಮುಂದೆ ಗುಜರಾತ್‌ ಹರ್ಡಲ್ಸ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.