ಪದಕ ಗೆದ್ದರೆ ರೈಲ್ವೇ ಕ್ರೀಡಾಳುಗಳಿಗೆ ಭಡ್ತಿ
Team Udayavani, Aug 3, 2018, 10:59 AM IST
ಹೊಸದಿಲ್ಲಿ: ಅಂತಾರಾಷ್ಟ್ರೀಯ ಕ್ರೀಡಾಕೂಟ ಗಳಲ್ಲಿ ಪದಕ ಗೆಲ್ಲುವ ರೈಲ್ವೇ ಇಲಾಖೆಯ ಕ್ರೀಡಾಳುಗಳಿಗೆ ಅಧಿಕಾರಿ ಮಟ್ಟಕ್ಕೆ ಭಡ್ತಿ ನೀಡುವ ಹೊಸ ನಿಯಮಾವಳಿಗೆ ರೈಲ್ವೇ ಸಚಿವ ಪೀಯೂಷ್ ಗೋಯೆಲ್ ಅವರು ಗುರುವಾರ ಅಂಕಿತ ಹಾಕಿದ್ದಾರೆ.
ಇದರಿಂದಾಗಿ ಎರಡು ಒಲಿಂಪಿಕ್ಸ್ಗಳಲ್ಲಿ ಪಾಲ್ಗೊಂಡ ಯಾವುದೇ ಕ್ರೀಡಾಳುಗಳಿಗೆ, ಏಶ್ಯನ್ ಕ್ರೀಡಾಕೂಟ ಅಥವಾ ಕಾಮನ್ವೆಲ್ತ್ ಕ್ರೀಡಾಕೂಟದಲ್ಲಿ ಪದಕ ಗೆದ್ದವರಿಗೆ ಅಥವಾ ವಿಶ್ವ ಚಾಂಪಿಯನ್ಶಿಪ್ನಲ್ಲಿ ಪದಕ ಗೆದ್ದವರಿಗೆ ಅಧಿಕಾರಿ ಶ್ರೇಯಾಂಕದ ಭಡ್ತಿ ನೀಡಲು ನಿರ್ಧರಿಸಲಾಗಿದೆ.
ಪದ್ಮಶ್ರೀ ಪ್ರಶಸ್ತಿ ವಿಜೇತರು ಹಾಗೂ ಅರ್ಜುನ ಪ್ರಶಸ್ತಿ, ರಾಜೀವ್ ಗಾಂಧಿ ಖೇಲ್ರತ್ನ ಪ್ರಶಸ್ತಿ ಸೇರಿದಂತೆ ಯಾವುದೇ ರಾಷ್ಟ್ರೀಯ ಮಟ್ಟದ ಕ್ರೀಡಾ ಪ್ರಶಸ್ತಿಗಳನ್ನು ಪಡೆದ ಕ್ರೀಡಾಳುಗಳಿಗೂ ಇದೇ ಮಾದರಿಯಲ್ಲಿ ಭಡ್ತಿ ನೀಡುವ ಅಂಶವನ್ನು ಹೊಸ ನಿಯಮಾವಳಿಗಳಲ್ಲಿ ಸೇರ್ಪಡೆಗೊಳಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
Thirthahalli; ಬಿಜೆಪಿಯಿಂದ ಶ್ರೀಮಂತರ ಓಲೈಕೆ ; ಕಿಮ್ಮನೆ ರತ್ನಾಕರ್
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್