ಲಂಕಾದಲ್ಲಿ  ಕ್ರೀಡಾಪಟುಗಳಿಗೆ ಸರಕಾರದಿಂದ ಹೆಚ್ಚಿನ ಪ್ರೋತ್ಸಾಹವಿಲ್ಲ


Team Udayavani, Dec 13, 2017, 12:11 PM IST

13-26.jpg

ಶ್ರೀಲಂಕಾದ ಆ್ಯತ್ಲೆಟಿಕ್‌  ಕೋಚ್‌ ಡಿ.ಎ. ಯಾಸರೋಹನ ಡೆ ಸಿಲ್ವ  ಮಂಗಳೂರಿನ “ಮಂಗಳಾ ಸ್ಟೇಡಿಯಂ’ನಲ್ಲಿ ನಡೆಯುತ್ತಿರುವ ದಕ್ಷಿಣ ಕನ್ನಡ, ಉಡುಪಿ ಮತ್ತು ಶ್ರೀಲಂಕಾ ಜೂ.ಆ್ಯತ್ಲೆಟಿಕ್‌ ಮೀಟ್‌ಗೆ ಸುಮಾರು 65 ಮಂದಿ ವಿದ್ಯಾರ್ಥಿಗಳನ್ನು ಕರೆತಂದಿದ್ದಾರೆ, ಈ ವೇಳೆ “ಉದಯವಾಣಿ’ ಜತೆೆ ಅವರು ಶ್ರೀಲಂಕಾದ  ಕ್ರೀಡಾ ಕ್ಷೇತ್ರದ ಕುರಿತು ಮಾತನಾಡಿದರು.

ಶ್ರೀಲಂಕಾದ ಕ್ರೀಡಾ ಕ್ಷೇತ್ರದಲ್ಲಿ ಗುರುತಿಸಿಕೊಂಡವರ ಪೈಕಿ ಆ್ಯತ್ಲೀಟ್‌ ಡಿ.ಎ. ಯಾಸರೋಹನ ಡೆ ಸಿಲ್ವ ಪ್ರಮುಖರು. ಆ್ಯತ್ಲೀಟ್‌ ಆಗಿದ್ದ ಅವರು, ಬಳಿಕ  ಕ್ರೀಡಾ ತರಬೇತುದಾರರಾಗಿ ಅನೇಕ ಆ್ಯತ್ಲೀಟ್‌ಗಳನ್ನು ರೂಪಿಸಿ ಕ್ರೀಡಾ ಜಗತ್ತಿಗೆ ನೀಡಿದವರು. ಪ್ರಸ್ತುತ ತರಬೇತುದಾರ ರಾಗಿರುವುದರೊಂದಿಗೆ ಶ್ರೀಲಂಕಾದ ಸಿಲೋನೀಸ್‌ ಟ್ರ್ಯಾಕ್‌ ಆ್ಯಂಡ್‌ ಫೀಲ್ಡ್‌ ಕ್ಲಬ್‌ನ ಕಾರ್ಯದರ್ಶಿಯಾಗಿ ಕೆಲಸ ಮಾಡುತ್ತಿದ್ದಾರೆ. ಮಂಗಳೂರಿನ “ಮಂಗಳಾ ಸ್ಟೇಡಿಯಂ’ನಲ್ಲಿ ನಡೆಯುವ ದಕ್ಷಿಣ ಕನ್ನಡ, ಉಡುಪಿ ಮತ್ತು ಶ್ರೀಲಂಕಾ ಜೂನಿಯರ್‌ ಆ್ಯತ್ಲೆಟಿಕ್‌ ಮೀಟ್‌ಗೆ ಸುಮಾರು 65 ಮಂದಿ ವಿದ್ಯಾರ್ಥಿಗಳನ್ನು ಮಂಗಳೂರಿಗೆ ಕರೆತಂದಿದ್ದು, ಈ ವೇಳೆ “ಉದಯವಾಣಿ’ಯೊಂದಿಗೆ ಅವರು ಮಾತನಾಡಿದರು.

ಶ್ರೀಲಂಕಾದಲ್ಲಿ ಕ್ರೀಡೆಗೆ ಮನ್ನಣೆ ಹೇಗಿದೆ?
ಶ್ರೀಲಂಕಾದಲ್ಲಿ ಉತ್ತಮ ಕ್ರೀಡಾಪಟುಗಳಿದ್ದಾರೆ. ಆದರೆ ಅವರಿಗೆ ಪ್ರೋತ್ಸಾಹದ ಕೊರತೆ ಕಾಡುತ್ತಿದೆ. ಮುಖ್ಯವಾಗಿ ಇತರ ದೇಶಗಳ ಕ್ರೀಡಾಪಟುಗಳಿಗೆ ಸರಕಾರದಿಂದ ಉತ್ತಮ ಬೆಂಬಲ ಸಿಗುತ್ತದೆ. ಆದರೆ ಶ್ರೀಲಂಕಾದಲ್ಲಿ ಸರಕಾರದ ಕ್ರೀಡಾ ಸಚಿವಾಲಯದ ವತಿಯಿಂದ ಯಾವುದೇ ಪ್ರೋತ್ಸಾಹ ದೊರೆಯುತ್ತಿಲ್ಲ. ಇದರಿಂದ ಪ್ರತಿಭೆಗಳಿದ್ದರೂ, ಅದನ್ನು ಬಳಸಿಕೊಳ್ಳಲು ಸೋತಿದ್ದೇವೆ.  

ಸರಕಾರ ಕ್ರೀಡೆಯನ್ನು ಪ್ರೋತ್ಸಾಹಿಸದಿರಲು ಕಾರಣವೇನು?
ಕ್ರೀಡೆಯ ಬಗ್ಗೆ ಸರಕಾರಕ್ಕೆ ನಿರ್ಲಕ್ಷ ಯಾಕೆ ಎಂಬುದು ತಿಳಿದಿಲ್ಲ. ಇದು ಇವತ್ತು ನಿನ್ನೆಯ ಕತೆಯಲ್ಲ, ಅದೆಷ್ಟೋ ವರ್ಷಗಳಿಂದ ಇದೇ ರೀತಿ ಇದೆ. ಬಹುಶಃ ಕ್ರೀಡೆಯಲ್ಲಿ ದೇಶ ಗುರುತಿಸಿಕೊಳ್ಳಬೇಕೆಂಬ ಆಸಕ್ತಿ ಸರಕಾರಕ್ಕೆ ಇಲ್ಲದಿರಬಹುದು. ಇತರ ದೇಶಗಳಲ್ಲಿ ಸಿಗುವಂತೆ ಜಿಲ್ಲಾ, ರಾಜ್ಯ, ರಾಷ್ಟ್ರ ಮಟ್ಟದ ಸ್ಪರ್ಧೆಗಳ ಆಯೋಜನೆಗೆ ನಮ್ಮಲ್ಲಿ ಸೌಲಭ್ಯಗಳನ್ನೇ ನೀಡುತ್ತಿಲ್ಲ. ಇದರಿಂದಲೇ ನಾವು ಕ್ರೀಡೆಯಲ್ಲಿ ಹಿಂದುಳಿದಿದ್ದೇವೆ ಎಂದರೂ ತಪ್ಪಲ್ಲ. 

ನಿಮ್ಮ ದೇಶದ ಶಾಲಾ- ಕಾಲೇಜುಗಳಲ್ಲಿ  ಕ್ರೀಡೆಯತ್ತ ಒಲವು ಹೇಗಿದೆ?
ಉತ್ತಮ ಕ್ರೀಡಾಪಟುಗಳು ತಯಾರಾಗುವುದು ಶಾಲಾ-ಕಾಲೇಜುಗಳಲ್ಲಿಯೇ. ಆದರೆ ಅಂತಹವರನ್ನು ಗುರುತಿಸಬೇಕಾದರೆ ಕನಿಷ್ಠ ಸೌಲಭ್ಯಗಳನ್ನಾದರೂ ಒದಗಿಸಿಕೊಡಬೇಕು. ಭಾರತದಲ್ಲಿರುವಂತೆ ಕ್ರೀಡಾ ಹಾಸ್ಟೆಲ್‌ಗ‌ಳು ನಮ್ಮ ದೇಶದಲ್ಲಿಲ್ಲ. ಇದರಿಂದ ಕ್ರೀಡಾಸಕ್ತ ಮಕ್ಕಳಿಗೂ ಸಮಸ್ಯೆಯಾಗುತ್ತಿದೆ. ಮಕ್ಕಳು ಯಾವುದೇ ಕ್ರೀಡಾ ಸ್ಪರ್ಧೆಗಳಿಗೆ ಹೋಗುವುದಿದ್ದರೂ, ಹೆತ್ತವರ ಹಣದಲ್ಲಿಯೇ ಹೋಗುತ್ತಾರೆ. 2006ರಲ್ಲಿ ಜೂನಿಯರ್‌ ವರ್ಲ್ಡ್ ಚಾಂಪಿಯನ್‌ಶಿಪ್‌ ಮತ್ತು ಜೂನಿಯರ್‌ ಏಶ್ಯನ್‌ ಚಾಂಪಿಯನ್‌ಶಿಪ್‌ಗೆ ಆಯ್ಕೆಯಾದ ಆ್ಯತ್ಲೀಟ್‌ ರತ್ನಾಯಕ್‌ ಅವರು 200 ಮೀಟರ್ನಲ್ಲಿ ಬಹುಮಾನ ಪಡೆದದ್ದನ್ನು ಇಲ್ಲಿ ನೆನಪಿಸಿಕೊಳ್ಳಬಹುದು.

ನಿಮ್ಮ ಪ್ರಕಾರ ಉತ್ತಮ ಕ್ರೀಡಾಪಟುವನ್ನು ತಯಾರು ಮಾಡುವುದು ಹೇಗೆ?
ಸರಕಾರದ ಮಟ್ಟದಿಂದ ಪ್ರೋತ್ಸಾಹ ಮುಖ್ಯವಾಗಿ ಬೇಕು. ಅದು ದೊರಕಿದಲ್ಲಿ ಉತ್ತಮ ಕ್ರೀಡಾಪಟುಗಳನ್ನು ತಯಾರು ಮಾಡಬಹುದು. ದಿನಂಪ್ರತಿ ಸರಿಯಾದ ತರಬೇತಿ, ಅವರಿಗೆ ಬೇಕಾದ ಮೂಲಭೂತ ಸೌಕರ್ಯಗಳು, ಪೂರಕ ವಾತಾವರಣದಿಂದ ಕ್ರೀಡಾಪಟು ಬೆಳೆಯಬಲ್ಲ. ಈ ನಿಟ್ಟಿನಲ್ಲಿ ಸರಕಾರಕ್ಕೂ ಮನವಿ ನೀಡುವ ಆಲೋಚನೆಯಲ್ಲಿದ್ದೇನೆ.

ನಿಮ್ಮ ನೆಲದಲ್ಲಿ ಇದುವರೆಗೆ ಅಂತಾರಾಷ್ಟ್ರೀಯ ಮಟ್ಟದ ಕ್ರೀಡಾಕೂಟಗಳೇ ನಡೆದಿಲ್ಲವೇ?
ಹಾಗೇನಿಲ್ಲ. ಕ್ರೀಡಾಕೂಟಗಳು ನಡೆಯುತ್ತವೆ. ಜತೆಗೆ ಇತರ ದೇಶಗಳಲ್ಲಿ ನಡೆಯುವ ಕ್ರೀಡಾಕೂಟಗಳಲ್ಲಿ ನಮ್ಮವರೂ ಭಾಗವಹಿಸುತ್ತಿದ್ದಾರೆ. ಮುಂದಿನ ವರ್ಷ ಕೊಲಂಬೋದಲ್ಲಿ 57ನೇ ವಾರ್ಷಿಕ ಆ್ಯತ್ಲೆಟಿಕ್‌ ಚಾಂಪಿಯನ್‌ಶಿಪ್‌ ನಡೆಯಲಿದ್ದು, ದಕ್ಷಿಣ ಕನ್ನಡ ಜಿಲ್ಲಾ ತಂಡವನ್ನು ಕೂಡಾ ಆಮಂತ್ರಿಸಲಾಗುವುದು.

ಅತೀ ಹೆಚ್ಚು ವೀಕ್ಷಕರನ್ನು ಹೊಂದಿರುವ ಕ್ರಿಕೆಟಿಗೂ ನಿಮ್ಮಲ್ಲಿ ಪ್ರೋತ್ಸಾಹದ ಕೊರತೆ ಇದೆ ಎನ್ನುವಿರಾ?
ಹೌದು. ಕ್ರಿಕೆಟಿಗೂ ಪ್ರೋತ್ಸಾಹದ ಕೊರತೆ ಇದೆ. ಆದರೆ ಇತರ ಕ್ರೀಡೆಗಳಿಗೆ ಹೋಲಿಸಿದರೆ ಕ್ರಿಕೆಟಿಗೆ ಮನ್ನಣೆ ಇದೆ ಎಂದೇ ಹೇಳಬಹುದು. ಅದರಿಂದಾಗಿಯೇ ನಮ್ಮ ಕ್ರಿಕೆಟಿಗರು ಬೇರೆ ದೇಶಗಳಿಗೆ ಹೋಗಿಯೂ ಉತ್ತಮ ಪ್ರದರ್ಶನ ನೀಡಿರುವುದನ್ನು ಗಮನಿಸಬಹುದು.

ಧನ್ಯಾ ಬಾಳೆಕಜೆ  

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.