ಅ. ಭಾ. ಸಬ್ ಜೂ. ರ್ಯಾಂಕಿಂಗ್ ಬ್ಯಾಡ್ಮಿಂಟನ್ಗೆ ಚಾಲನೆ
Team Udayavani, Jul 3, 2019, 5:55 AM IST
ಉಡುಪಿ: ಯುವ ಸಮುದಾಯ ಬ್ಯಾಡ್ಮಿಂಟನ್ ಕಡೆ ಹೆಚ್ಚಿನ ಒಲವು ವ್ಯಕ್ತಪಡಿಸುತ್ತಿದೆೆ ಎಂದು ಬ್ಯಾಂಕ್ ಆಫ್ ಬರೋಡ ಪ್ರಾದೇಶಿಕ ಕಚೇರಿ ಪ್ರಬಂಧಕ ರವೀಂದ್ರ ರೈ ತಿಳಿಸಿದ್ದಾರೆ.
ಜಿಲ್ಲಾ ಬ್ಯಾಡ್ಮಿಂಟನ್ ಅಸೋ.ವತಿಯಿಂದ ಬ್ಯಾಂಕ್ ಆಫ್ ಬರೋಡ ಸಹ ಪ್ರಾಯೋಜಕತ್ವದಲ್ಲಿ 13ವರ್ಷ ವಯೋಮಿತಿಯೊಳಗಿನ ಬಾಲಕ, ಬಾಲಕಿಯರಿಗೆ ಏರ್ಪಡಿಸಲಾದ 6 ದಿನಗಳ ಅ.ಭಾ.ಸಬ್ ಜೂ.ರ್ಯಾಂಕಿಂಗ್ ರಾಷ್ಟ್ರೀಯ ಬ್ಯಾಡ್ಮಿಂಟನ್ ಪಂದ್ಯಾಟಕ್ಕೆ ಮಂಗಳವಾರ ಮಣಿಪಾಲದ ಮರಿನಾ ಕ್ರೀಡಾಂಗಣದಲ್ಲಿ ಚಾಲನೆ ನೀಡಿ ಮಾತನಾಡಿದರು.
ಬ್ಯಾಡ್ಮಿಂಟನ್ ಅಸೋಸಿಯೇಶನ್ ಆಫ್ ಇಂಡಿಯಾದ ವೀಕ್ಷಕ ಸುಖಾಂತ ದಾಸ್ ಮಾತನಾಡಿ, ಇಂದು ಯುವಕರು ಕ್ರೀಡೆಯ ಕಡೆ ಹೆಚ್ಚಿನ ಒಲವು ತೋರಿಸುತ್ತಿದ್ದಾರೆ. ಕ್ರಿಕೆಟ್ ಮೊದಲ ಸ್ಥಾನದಲ್ಲಿದ್ದರೆ ಬ್ಯಾಡ್ಮಿಂಟನ್ ದ್ವಿತೀಯ ಸ್ಥಾನದಲ್ಲಿದೆ. ಬ್ಯಾಡ್ಮಿಂಟನ್ ಕ್ರೀಡೆಯಲ್ಲಿ ಮಕ್ಕಳಿಗೆ ಉತ್ತಮ ಭವಿಷ್ಯ ಇದೆ ಎಂದು ಹೇಳಿದರು.
ಮಾಹೆಯ ಸಹಕುಲಾಧಿಪತಿ ಡಾ| ಎಚ್.ಎಸ್. ಬಲ್ಲಾಳ್ ಮಾತನಾಡಿ, ಮಾನಸಿಕ ಆರೋಗ್ಯದ ಜತೆಗೆ ದೈಹಿಕ ಆರೋಗ್ಯ ಕಾಪಾಡಿಕೊಳ್ಳುವುದು ಅತ್ಯಂತ ಮುಖ್ಯ. ವರ್ಷದ 12 ತಿಂಗಳು ಏರ್ಪಡಿಸಬಹುದಾದ ಏಕೈಕ ಕ್ರೀಡೆಯಾಗಿ ಬ್ಯಾಡ್ಮಿಂಟನ್ ಗುರುತಿಸಿ ಕೊಂಡಿದೆ. ಮಣಿಪಾಲದಲ್ಲಿ ವ್ಯವಸ್ಥಿತ ಬ್ಯಾಡ್ಮಿಂಟನ್ ಒಳಾಂಗಣ ಕ್ರೀಡಾಂಗಣ ನಿರ್ಮಿಸಲಾಗಿದೆ ಎಂದರು.
ಜಿಲ್ಲಾಧಿಕಾರಿ ಹೆಪ್ಸಿಬಾರಾಣಿ ಕೊರ್ಲಪಾಟಿ ಬ್ಯಾಡ್ಮಿಂಟನ್ ಆಡುವ ಮೂಲಕ ಪಂದ್ಯಾಟಕ್ಕೆ ಚಾಲನೆ ನೀಡಿದರು. ಈ ಸಂದರ್ಭ ಪಂದ್ಯಾಟಕ್ಕೆ ಬ್ಯಾಂಕ್ ಆಫ್ ಬರೋಡದಿಂದ ನೀಡಲಾದ ಐದು ಲಕ್ಷ ರೂ. ಮೊತ್ತದ ಚೆಕನ್ನು ರವೀಂದ್ರ ರೈ ಅವರು ಅಸೋಸಿಯೇಶನ್ ಅಧ್ಯಕ್ಷ ರಘುಪತಿ ಭಟ್ಅವರಿಗೆ ಹಸ್ತಾಂತರಿಸಿದರು.
ಜಿ.ಪಂ. ಅಧ್ಯಕ್ಷ ದಿನಕರ್ ಬಾಬು, ಉದ್ಯಮಿ ಪುರುಷೋತ್ತಮ ಶೆಟ್ಟಿ, ಗುರ್ಮೆ ಸುರೇಶ್ ಶೆಟ್ಟಿ, ಬಡಗಬೆಟ್ಟು ಸೊಸೈಟಿ ಪ್ರಧಾನ ವ್ಯವಸ್ಥಾಪಕ ಜಯಕರ ಶೆಟ್ಟಿ ಇಂದ್ರಾಳಿ, ಮೀನು ಮಾರಾಟ ಫೆಡರೇಶನ್ ಅಧ್ಯಕ್ಷ ಯಶ್ಪಾಲ್ ಸುವರ್ಣ, ಮಾಹೆ ಕ್ರೀಡಾ ನಿರ್ದೇಶಕ ಡಾ| ವಿನೋದ್ ನಾಯಕ್ ಉಪಸ್ಥಿತರಿದ್ದರು.
ಅಸೋ. ಅಧ್ಯಕ್ಷ ಕೆ.ರಘುಪತಿ ಭಟ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಪ್ರಧಾನ ಕಾರ್ಯದರ್ಶಿ ವೈ.ಸುಧೀರ್ ಕುಮಾರ್ ವಂದಿಸಿದರು. ಜು. 6ರ ವರೆಗೆ ನಡೆಯುವ ಈ ಪಂದ್ಯಾಟದಲ್ಲಿ ಒಂದು ಸಾವಿರ ಆಟಗಾರರು ಭಾಗವಹಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?
IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್
MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್
Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್ ವಿರುದ್ಧ ಮುಖಾಮುಖಿ
RCB ; ರವಿವಾರ ಕೆಕೆಆರ್ ವಿರುದ್ಧ ಈಡನ್ನಲ್ಲಿ ಗೋ ಗ್ರೀನ್ ಗೇಮ್
MUST WATCH
ಹೊಸ ಸೇರ್ಪಡೆ
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Kollywood: 18 ವರ್ಷದ ಬಳಿಕ ಪತಿ ಸೂರ್ಯ ಜೊತೆ ನಟಿಸಲಿದ್ದಾರೆ ಜ್ಯೋತಿಕಾ