ಕುಲದೀಪ್‌, ಸಿರಾಜ್‌ ಅಮೋಘ ನಿರ್ವಹಣೆ; ಫಾಲೋ ಆನ್‌ ಭೀತಿಯಿಲ್ಲಿ ಬಾಂಗ್ಲಾ 


Team Udayavani, Dec 15, 2022, 10:24 PM IST

1-asdasd-ad

ಚತ್ತೋಗ್ರಾಮ್‌: ಕುಲದೀಪ್‌ ಯಾದವ್‌ ಮತ್ತು ಮೊಹಮ್ಮದ್‌ ಸಿರಾಜ್‌ ಅವರ ಅಮೋಘ ನಿರ್ವಹಣೆಯಿಂದ ಭಾರತ ತಂಡವು ಬಾಂಗ್ಲಾದೇಶ ತಂಡದೆದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಸುಸ್ಥಿತಿಯಲ್ಲಿದೆ.
ಕಳೆದ 22 ತಿಂಗಳ ಬಳಿಕ ಮೊದಲ ಟೆಸ್ಟ್‌ ಆಡುತ್ತಿರುವ ಕುಲದೀಪ್‌ ಸಿಂಗ್‌ ಬ್ಯಾಟಿಂಗ್‌ ಮತ್ತು ಬೌಲಿಂಗ್‌ನಲ್ಲಿ ಆಲ್‌ರೌಂಡ್‌ ಪ್ರದರ್ಶನ ನೀಡಿದರು. ಅವರ ಈ ಸಾಧನೆಯಿಂದ ಭಾರತ ಮೊದಲ ಇನ್ನಿಂಗ್ಸ್‌ನಲ್ಲಿ 404 ರನ್ನುಗಳ ಉತ್ತಮ ಮೊತ್ತ ಪೇರಿಸಿತು. ಆಬಳಿಕ ಕುಲದೀಪ್‌ ಮತ್ತು ಸಿರಾಜ್‌ ದಾಳಿಗೆ ತತ್ತರಿಸಿದ ಬಾಂಗ್ಲಾದೇಶವು ಎರಡನೇ ದಿನದಾಟದ ಅಂತ್ಯಕ್ಕೆ ಕೇವಲ 133 ರನ್ನಿಗೆ 8 ವಿಕೆಟ್‌ ಕಳೆದುಕೊಂಡು ಒದ್ದಾಡುತ್ತಿದೆ. ಇನ್ನೆರಡು ವಿಕೆಟ್‌ ಉಳಿಸಿಕೊಂಡಿರುವ ಆತಿಥೇಯ ತಂಡ ಫಾಲೋ ಆನ್‌ ತಪ್ಪಿಸಲು ಇನ್ನೂ 72 ರನ್‌ ಗಳಿಸಬೇಕಾಗಿದೆ.

ಕುಲದೀಪ್‌ 40 ರನ್‌
ಆರು ವಿಕೆಟಿಗೆ 278 ರನ್ನುಗಳಿಂದ ದಿನದಾಟ ಆರಂಭಿಸಿದ ಭಾರತಕ್ಕೆ ಶ್ರೇಯಸ್‌ ಅಯ್ಯರ್‌ ಸೇರಿದಂತೆ ಆರ್‌. ಅಶ್ವಿ‌ನ್‌ ಮತ್ತು ಕುಲದೀಪ್‌ ಆಸರೆ ನೀಡಿದರು. ಈ ಮೂವರು ಉತ್ತಮ ಆಟದಿಂದಾಗಿ ಭಾರತದ ಮೊತ್ತ 400ರ ಗಡಿ ದಾಟಿತು. ಅಶ್ವಿ‌ನ್‌ ಮತ್ತು ಕುಲದೀಪ್‌ ಎಂಟನೇ ವಿಕೆಟಿಗೆ 92 ರನ್ನುಗಳ ಜತೆಯಾಟದಲ್ಲಿ ಪಾಲ್ಗೊಂಡರು. ತನ್ನ ಜೀವನಶ್ರೇಷ್ಠ ಬ್ಯಾಟಿಂಗ್‌ ಪ್ರದರ್ಶನ ನೀಡಿದ ಕುಲದೀಪ್‌ 114 ಎಸೆತ ಎದುರಿಸಿ 40 ರನ್‌ ಹೊಡೆದರು. ಅಶ್ವಿ‌ನ್‌ 58 ರನ್‌ ಹೊಡೆದರು. ಬಾಂಗ್ಲಾ ಪರ ತೈಜುಲ್‌ ಇಸ್ಲಾಮ್‌ ಮತ್ತು ಮೆಹಿದಿ ಹಸನ್‌ ಮಿರಾಜ್‌ ತಲಾ ನಾಲ್ಕು ವಿಕೆಟ್‌ ಕಿತ್ತು ಗಮನ ಸೆಳೆದರು.

ಬಾಂಗ್ಲಾಕ್ಕೆ ಆರಂಭಿಕ ಆಘಾತ
ಬಾಂಗ್ಲಾದ ಆರಂಭ ಉತ್ತಮವಾಗಿರಲಿಲ್ಲ. ಮೊದಲ ಎಸೆತದಲ್ಲಿಯೇ ತಂಡ ಆರಂಭಿಕ ಆಟಗಾರನನ್ನು ಕಳೆದುಕೊಂಡು ಆಘಾತಕ್ಕೆ ಒಳಗಾಯಿತು. ಸಿರಾಜ್‌ ಮತ್ತು ಕುಲದೀಪ್‌ ಸೇರಿಕೊಂಡು ಬಾಂಗ್ಲಾಕ್ಕೆ ನಿರಂತರ ಆಘಾತವಿಕ್ಕಿದರು. ಇದರಿಂದ ಬಾಂಗ್ಲಾ ಕೊನೆಯವರೆಗೂ ಚೇತರಿಸಿಕೊಳ್ಳಲು ಸಾಧ್ಯವಾಗಲೇ ಇಲ್ಲ. ಸಿರಾಜ್‌ ಮೂರು ಮತ್ತು ಕುಲದೀಪ್‌ 4 ವಿಕೆಟ್‌ ಕಿತ್ತು ಭಾರತ ಮೇಲುಗೈ ಸಾಧಿಸುವಂತೆ ಮಾಡಿದರು.

ಸಂಕ್ಷಿಪ್ತ ಸ್ಕೋರು:

ಭಾರತ ಪ್ರಥಮ ಇನ್ನಿಂಗ್ಸ್‌ 404 (ಪೂಜಾರ 90, ಪಂತ್‌ 46, ಅಯ್ಯರ್‌ 86, ಆರ್‌. ಅಶ್ವಿ‌ನ್‌ 58, ಕುಲದೀಪ್‌ 40, ತೈಜುಲ್‌ ಇಸ್ಲಾಮ್‌ 133ಕ್ಕೆ 4, ಮೆಹಿದಿ ಹಸನ್‌ ಮಿರಾಜ್‌ 112ಕ್ಕೆ 4); ಬಾಂಗ್ಲಾದೇಶ ಪ್ರಥಮ ಇನ್ನಿಂಗ್ಸ್‌ 8 ವಿಕೆಟಿಗೆ 133 (ಲಿಟನ್‌ ದಾಸ್‌ 24, ಮುಶ್ಫಿàಕರ್‌ ರಹೀಮ್‌ 28, ಸಿರಾಜ್‌ 14ಕ್ಕೆ 3, ಕುಲದೀಪ್‌ 33ಕ್ಕೆ 4).

ಟಾಪ್ ನ್ಯೂಸ್

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ

voter

Vote ಮಾಡದಿದ್ದರೆ ಬ್ಯಾಂಕ್‌ ಖಾತೆಯಿಂದ 350 ರೂ. ಕಡಿತ?

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

gold

Gold 10 ಗ್ರಾಂ ಬೆಲೆ 74,100 ರೂ.: ಇದು ನೂತನ ದಾಖಲೆ

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

UCC; ದೇಶವು ಶರಿಯಾ ಕಾನೂನಿನಲ್ಲಿ ನಡೆಯಬೇಕೆ?: ಯುಸಿಸಿ ಜಾರಿ ಬಗ್ಗೆ ಅಮಿತ್ ಶಾ ಖಡಕ್ ಮಾತು

2-rain

Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ

1-24-saturday

Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್‌ ಧನಪ್ರಾಪ್ತಿ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

Heavy Rain; ದುಬಾೖ ಪ್ರಯಾಣ ಬೇಡ: ಸಲಹೆ

1-qweqwqe

Ban in Singapore; ಎವರೆಸ್ಟ್‌ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.