ಮತ್ತೆ ಹಳಿ ತಪ್ಪಿದ ಭಾರತದ ಬ್ಯಾಟಿಂಗ್
Team Udayavani, Feb 3, 2019, 4:06 AM IST
ವೆಲ್ಲಿಂಗ್ಟನ್ : ನ್ಯೂಜಿಲ್ಯಾಂಡ್ ವಿರುದ್ಧದ ಏಕದಿನ ಸರಣಿಯ ಕೊನೆಯ ಪಂದ್ಯವಾಡಲಿಳಿದ ಭಾರತ ತಂಡದ ಬ್ಯಾಟಿಂಗ್ ಮತ್ತೆ ಹಳಿ ತಪ್ಪಿದೆ. ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿದ ಭಾರತ ತಂಡ ಆರಂಭಿಕ ಕುಸಿತದ ನಂತರ ಸುಧಾರಿಸಿದ ಭಾರತ 40 ಓವರ್ ನಷ್ಟಕ್ಕೆ ಐದು ವಿಕೆಟ್ ನಷ್ಟಕ್ಕೆ 168 ರನ್ ಗಳಿಸಿದೆ. ಅಂಬಟಿ ರಾಯುಡು 75 ರನ್ ಗಳಿಸಿ ಆಟವಾಡುತ್ತಿದ್ದಾರೆ.
ಕಳೆದ ಪಂದ್ಯದಂತೆ ಭಾರತದ ಆರಂಭಿಕರು ಉತ್ತಮ ಅಡಿಪಾಯ ಹಾಕುವಲ್ಲಿ ವಿಫಲರಾದರು. ನಾಯಕ ರೋಹಿತ್ ಶರ್ಮಾ ಕೇವಲ ಎರಡು ರನ್ ಗಳಿಸಿ ಮ್ಯಾಟ್ ಹೆನ್ರಿ ಗೆ ವಿಕೆಟ್ ಒಪ್ಪಿಸಿದರೆ, ಶಿಖರ್ ಧವನ್ ಗಳಿಕೆ ಆರು ರನ್. ಯುವ ಆಟಗಾರ ಶುಭ್ಮನ್ ಗಿಲ್ ಮತ್ತೊಂದು ಚಾನ್ಸ್ ಪಡೆದರೂ ಗಳಿಸಿದ್ದು ಮಾತ್ರ ಏಳು ರನ್.
ಕಳೆದೆರಡು ಪಂದ್ಯಗಳನ್ನು ತಪ್ಪಿಸಿಕೊಂಡಿದ್ದ ಅನುಭವಿ ಆಟಗಾರ ಮಹೇಂದ್ರ ಸಿಂಗ್ ಧೋನಿ ಕೇವಲ ಒಂದು ರನ್ ಮಾಡಿ ಬೌಲ್ಟ್ ಗೆ ಬೌಲ್ಡ್ ಆದರು. ಸದ್ಯ ಅಂಬಾಟಿ ರಾಯುಡುಗೆ ಉತ್ತಮ ಸಾಥ್ ನೀಡಿ ವಿಜಯ್ ಶಂಕರ್ 45 ರನ್ ಮಾಡಿ ಔಟಾದರು.
ಮ್ಯಾಟ್ ಹೆನ್ರಿ ಮತ್ತು ಟ್ರೆಂಟ್ ಬೌಲ್ಟ್ ತಲಾ ಎರಡು ವಿಕೆಟ್ ಪಡೆದರು. ಈ ಪಂದ್ಯದಲ್ಲಿ ಭಾರತ ಮೂರು ಬದಲಾವಣೆ ಮಾಡಿಕೊಂಡಿತು. ದಿನೇಶ್ ಕಾರ್ತಿಕ್, ಖಲೀಲ್ ಅಹಮದ್, ಕುಲದೀಪ್ ಯಾದವ್ ಬದಲಿಗೆ ಮಹೇಂದ್ರ ಸಿಂಗ್ ಧೋನಿ, ಮೊಹಮ್ಮದ್ ಶಮಿ, ವಿಜಯ್ ಶಂಕರ್ ಸ್ಥಾನ ಪಡೆದಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Sandalwood: ಗಾಡ್ ಪ್ರಾಮಿಸ್ಗೆ ಸ್ಕ್ರಿಪ್ಟ್ ಪೂಜೆ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
Mollywood: “ಆಡುಜೀವಿತಂ” ಮೇಲೆ ಪೃಥ್ವಿರಾಜ್ ನಿರೀಕ್ಷೆ
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ