ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ


Team Udayavani, Jul 29, 2021, 11:11 PM IST

ಹಸರಂಗ ಕಮಾಲ್‌: ಟಿ20 ಸರಣಿ ಗೆದ್ದ ಲಂಕಾ

ಕೊಲಂಬೊ: ಬರ್ತ್‌ಡೇ ಬಾಯ್‌ ವನಿಂದು ಹಸರಂಗ ಅವರ ಘಾತಕ ಬೌಲಿಂಗ್‌ ದಾಳಿಗೆ ತತ್ತರಿಸಿದ ಭಾರತ, ಆತಿಥೇಯ ಶ್ರೀಲಂಕಾ ಎದುರಿನ ನಿರ್ಣಾಯಕ ಟಿ20 ಪಂದ್ಯದಲ್ಲಿ 7 ವಿಕೆಟ್‌ಗಳ ಸೋಲನುಭವಿಸಿದೆ. ಲಂಕಾ ಈ ಗೆಲುವಿನೊಂದಿಗೆ ಏಕದಿನ ಸರಣಿ ಸೋಲಿನ ಸೇಡನ್ನುತೀರಿಸಿಕೊಂಡಿದೆ.

ಟಾಸ್‌ ಗೆದ್ದು ಬ್ಯಾಟಿಂಗ್‌ ಆರಿಸಿಕೊಂಡ ಭಾರತ ನಿಗದಿತ 20 ಓವರ್‌ಗಳಲ್ಲಿ 8 ವಿಕೆಟ್‌ ನಷ್ಟಕ್ಕೆ ಕೇವಲ 81 ರನ್‌ ಗಳಿಸಿತು. ಗುರಿ ಬೆನ್ನತ್ತಿದ ಲಂಕಾ 14.3 ಓವರ್‌ಗಳಲ್ಲಿ 3 ವಿಕೆಟ್‌ ಕಳೆದುಕೊಂಡು 82 ರನ್‌ ಪೇರಿಸಿ ಟಿ20 ಸರಣಿಯನ್ನು ವಶಪಡಿಸಿಕೊಂಡಿತು.

ಭಾರತಕ್ಕೆ ಆರಂಭಿಕ ಆಘಾತ:

ಭಾರತದ ಎಲ್ಲ ಲೆಕ್ಕಾಚಾರವು ಮೊದಲ ಓವರಿನಲ್ಲೇ ತಲೆ ಕೆಳಗಾಗತೊಡಗಿತು. ನಾಯಕ ಶಿಖರ್‌ ಧವನ್‌ ತಾನೆದುರಿಸಿದ ಮೊದಲ ಎಸೆತದಲ್ಲೇ ಔಟಾಗಿ ಭಾರತದ ಕುಸಿತಕ್ಕೆ ಚಾಲನೆ ಕೊಟ್ಟರು. ಇದು ಎಷ್ಟು ತೀವ್ರವಾಗಿತ್ತೆಂದರೆ, ಪವರ್‌ ಪ್ಲೇ ಅವಧಿಯಲ್ಲೇ 4 ಪ್ರಮುಖ ವಿಕೆಟ್‌ ಉರುಳಿ ಹೋಯಿತು. ದೇವದತ್ತ ಪಡಿಕ್ಕಲ್‌ (9), ಸಂಜು ಸ್ಯಾಮ್ಸನ್‌ (0), ಋತುರಾಜ್‌ ಗಾಯಕ್ವಾಡ್‌ (14) ಸಾಲು ಸಾಲಾಗಿ ಪೆವಿಲಿಯನ್‌ ಹಾದಿ ಹಿಡಿದರು. ಧವನ್‌ “ಗೋಲ್ಡನ್‌ ಡಕ್‌’ ಸಂಕಟಕ್ಕೆ ಸಿಲುಕಿದ ಭಾರತದ ಮೊದಲ ನಾಯಕನೆನಿಸಿದರು.

ಲೆಗ್‌ಸ್ಪಿನ್ನರ್‌ ವನಿಂದು ಹಸರಂಗ ಒಂದೇ ಓವರ್‌ನಲ್ಲಿ ಸ್ಯಾಮ್ಸನ್‌, ಗಾಯಕ್ವಾಡ್‌ ಅವರನ್ನು ಉರುಳಿಸಿ ಲಂಕೆಗೆ ಭರ್ಜರಿ ಮೇಲುಗೈ ಒದಗಿಸಿದರು. ಭಾರತದ ಪವರ್‌ ಪ್ಲೇ ಸ್ಕೋರ್‌ 4ಕ್ಕೆ 29 ರನ್‌.

ನಿತೀಶ್‌ ರಾಣಾ (6) ಕೂಡ ಲಂಕಾ ದಾಳಿಯನ್ನು ನಿಭಾಯಿಸಿ ನಿಲ್ಲಲು ವಿಫ‌ಲರಾದರು. 9 ಓವರ್‌ ಮುಗಿಯುವಷ್ಟರಲ್ಲಿ ಭಾರತದ ಸ್ಪೆಷಲಿಸ್ಟ್‌ ಬ್ಯಾಟ್ಸ್‌ಮನ್‌ಗಳೆಲ್ಲ ಆಟ ಮುಗಿಸಿ ವಾಪಸಾಗಿದ್ದರು. ಅರ್ಧ ಹಾದಿ ಕ್ರಮಿಸುವಾಗ ಭಾರತ 39 ರನ್ನಿಗೆ 5 ವಿಕೆಟ್‌ ಉರುಳಿ ಸಿಕೊಂಡು ಪರದಾಡುತ್ತಿತ್ತು. ಬೌಲರ್‌ಗಳಾದ ಭುವನೇಶ್ವರ್‌  ಮತ್ತು ಕುಲದೀಪ್‌ ಆಗಲೇ ಕ್ರೀಸ್‌ ಇಳಿದಾಗಿತ್ತು.

15ನೇ ಓವರ್‌ ಅಂತ್ಯಕ್ಕೆ 6 ವಿಕೆಟಿಗೆ 55 ರನ್‌ ಗಳಿಸಿದ್ದ ಭಾರತ, ಸುಧಾರಿಸುವ ಯಾವ ಲಕ್ಷಣವನ್ನೂ ತೋರಲಿಲ್ಲ. ಈ ಅವಧಿಯಲ್ಲಿ ಭುವನೇಶ್ವರ್‌ ಕುಮಾರ್‌ ಅತೀ ಹೆಚ್ಚು 32 ಎಸೆತ ಎದುರಿಸಿಯೂ ಬೌಂಡರಿ ಬಾರಿಸದ ಭಾರತದ ದಾಖಲೆಯೊಂದನ್ನು ಬರೆದರು (32 ಎಸೆತ, 16 ರನ್‌). ಅಜೇಯ 23 ರನ್‌ ಮಾಡಿದ ಕುಲದೀಪ್‌ ಭಾರತ ಸರದಿಯ ಗರಿಷ್ಠ ಸ್ಕೋರರ್‌.  ಹಸರಂಗ 9 ರನ್ನಿತ್ತು 4 ವಿಕೆಟ್‌ ಉಡಾಯಿಸಿದರು.

ನೆಟ್‌ ಬೌಲರ್‌ ವಾರಿಯರ್‌ ಪದಾರ್ಪಣೆ :

ನಿರ್ಣಾಯಕ ಪಂದ್ಯಕ್ಕೆ ಭಾರತ ಒಂದು ಬದಲಾವಣೆ ಮಾಡಿಕೊಂಡಿತು. ಗಾಯಾಳು ನವದೀಪ್‌ ಸೈನಿ ಬದಲು ಸಂದೀಪ್‌ ವಾರಿಯರ್‌ ಅವರನ್ನು ಆಡಿಸಿತು. ಕೇರಳದ ಮಧ್ಯಮ ವೇಗಿಯಾಗಿರುವ ವಾರಿಯರ್‌ ಭಾರತದ ಮೂಲ ತಂಡದಲ್ಲಿರಲಿಲ್ಲ. ನೆಟ್‌ ಬೌಲರ್‌ ಆಗಿ ತಂಡದೊಂದಿಗೆ ತೆರಳಿದ್ದರು. ತಂಡದ ಕೋವಿಡ್‌ ಕೇಸ್‌, ಐಸೊಲೇಶನ್‌ ಮೊದಲಾದ ಕಾರಣಗಳಿಂದ ಪ್ರಮುಖ ಆಟಗಾರರು ಲಭ್ಯರಾಗದ ಕಾರಣ ವಾರಿಯರ್‌ಗೆ ಅದೃಷ್ಟ ಖುಲಾಯಿಸಿತು.

ಲಂಕಾ ತಂಡದಲ್ಲೂ ಒಂದು ಬದಲಾ ವಣೆ ಕಂಡುಬಂತು. ಉದಾನ ಬದಲು ಪಥುಮ್‌ ನಿಸ್ಸಂಕ ಅವಕಾಶ ಪಡೆದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qwqwewqe

IPL ಅಕ್ರಮ ಪ್ರಸಾರ ಕೇಸ್; ನಟಿ ತಮನ್ನಾಗೆ ಸಂಕಷ್ಟ: ಸೈಬರ್ ಸೆಲ್ ನೋಟಿಸ್

Anil Kumble Reveals His IPL Bid 2008

IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ಅನಿಲ್ ಕುಂಬ್ಳೆ

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.