ಪಾಂಚಾಲ್‌ ದ್ವಿಶತಕ; ಭಾರತ “ಎ’ ಮೇಲುಗೈ


Team Udayavani, Feb 10, 2019, 12:30 AM IST

q-29.jpg

ವಯನಾಡ್‌: ಪ್ರಿಯಾಂಕ್‌ ಪಾಂಚಾಲ್‌ ಅವರ ಅಮೋಘ ದ್ವಿಶತಕ ಹಾಗೂ ಕೀಪರ್‌ ಶ್ರೀಕರ್‌ ಭರತ್‌ ಬಾರಿಸಿದ 142 ರನ್‌ ಸಾಹಸದಿಂದ ಪ್ರವಾಸಿ ಇಂಗ್ಲೆಂಡ್‌ ಲಯನ್ಸ್‌ ಎದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ “ಎ’ ಬೃಹತ್‌ ಮೊತ್ತ ಪೇರಿಸಿದೆ. 

ಪ್ರವಾಸಿ ತಂಡದ 340ಕ್ಕೆ ಉತ್ತರವಾಗಿ 3ನೇ ದಿನವಾದ ಶನಿವಾರ 6 ವಿಕೆಟಿಗೆ 540 ರನ್‌ ಗಳಿಸಿ ಡಿಕ್ಲೇರ್‌ ಮಾಡಿದೆ. ದ್ವಿತೀಯ ಇನ್ನಿಂಗ್ಸ್‌ ಆರಂಭಿಸಿರುವ ಇಂಗ್ಲೆಂಡ್‌ ಲಯನ್ಸ್‌ ವಿಕೆಟ್‌ ನಷ್ಟವಿಲ್ಲದೆ 20 ರನ್‌ ಗಳಿಸಿದೆ. ರವಿವಾರ ಪಂದ್ಯದ ಅಂತಿಮ ದಿನವಾಗಿದ್ದು, ಕ್ಷಿಪ್ರಗತಿಯಲ್ಲಿ ವಿಕೆಟ್‌ ಉರುಳಿಸಿದರೆ ಆತಿಥೇಯ ತಂಡ ಗೆಲುವು ಸಾಧಿಸಬಹುದು.

ಒಂದಕ್ಕೆ 219 ರನ್‌ ಮಾಡಿದಲ್ಲಿಂದ ದಿನದಾಟ ಮುಂದುವರಿಸಿದ ಭಾರತ “ಎ’ ತಂಡ ಆರಂಭಕಾರ ಕೆ.ಎಲ್‌. ರಾಹುಲ್‌ ಅವರನ್ನು ಬೇಗನೇ ಕಳೆದುಕೊಂಡಿತು. ಹಿಂದಿನ ದಿನದ ಮೊತ್ತಕ್ಕೆ ಒಂದೇ ರನ್‌ ಸೇರಿಸಿದ ಅವರು 89 ರನ್ನಿಗೆ ಔಟಾದರು (192 ಎಸೆತ, 11 ಬೌಂಡರಿ). ಈ ವಿಕೆಟ್‌ ಡ್ಯಾನಿ ಬ್ರಿಗ್ಸ್‌ ಪಾಲಾಯಿತು. ಅದೇ ಓವರಿನಲ್ಲಿ ಅವರು ನಾಯಕ ಅಂಕಿತ್‌ ಬವೆ°ಗೂ (0) ಪೆವಿಲಿಯನ್‌ ಹಾದಿ ತೋರಿಸಿದರು. ರಿಕಿ ಭುಯಿ (16) ಕೂಡ ಬೇಗನೇ ಔಟಾದರು.

196 ರನ್‌ ಜತೆಯಾಟ
ಆದರೆ 88 ರನ್‌ ಗಳಿಸಿ ಬ್ಯಾಟಿಂಗ್‌ ಕಾಯ್ದು ಕೊಂಡಿದ್ದ ಪ್ರಿಯಾಂಕ್‌ ಪಾಂಚಾಲ್‌ 206ರ ತನಕ ಬೆಳೆ ದರು. ಇವರಿಗೆ ಶ್ರೀಕರ್‌ ಭರತ್‌ ಉತ್ತಮ ಬೆಂಬಲ ವಿತ್ತರು. 5ನೇ ವಿಕೆಟಿಗೆ 196 ರನ್‌ ಹರಿದು ಬಂತು.
ಪ್ರವಾಸಿಗರ ಮೇಲೆ ಸವಾರಿ ಮಾಡಿದ ಗುಜರಾತ್‌ ಆರಂಭಕಾರ ಪಾಂಚಾಲ್‌ 313 ಎಸೆತಗಳನ್ನು ನಿಭಾಯಿಸಿ ಸ್ಮರಣೀಯ ಇನ್ನಿಂಗ್ಸ್‌ ಒಂದನ್ನು ಕಟ್ಟಿದರು. ಇದರಲ್ಲಿ 26 ಬೌಂಡರಿ, 3 ಸಿಕ್ಸರ್‌ ಒಳಗೊಂಡಿತ್ತು. ಸ್ಫೋಟಕ ಆಟವಾಡಿದ ಭರತ್‌ ಕೇವಲ 139 ಎಸೆತಗಳಲ್ಲಿ 8 ಸಿಕ್ಸರ್‌, 11 ಬೌಂಡರಿ ನೆರವಿನಿಂದ 142 ರನ್‌ ಬಾರಿಸಿದರು.

ಇಂಗ್ಲೆಂಡ್‌ ಲಯನ್ಸ್‌-
340; ಭಾರತ “ಎ’-540/6 ಡಿಕ್ಲೇರ್‌
 ಪಾಂಚಾಲ್‌ 206, ಭರತ್‌ 142, ಕೆ.ಎಲ್‌. ರಾಹುಲ್‌ 89

ಟಾಪ್ ನ್ಯೂಸ್

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

BJP ಅಧಿಕಾರಕ್ಕೆ ಬಂದರೆ ಮುಸ್ಲಿಂ ಮೀಸಲಾತಿ ರದ್ದು: ಯತ್ನಾಳ್‌

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ

H. D. Deve Gowda: ಕೈ ಗ್ಯಾರಂಟಿ ಕೀಳು ಮಟ್ಟದ ರಾಜಕೀಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

1-weewqewqe

Madrid: 16 ವರ್ಷದ ಎದುರಾಳಿ ವಿರುದ್ಧ ನಡಾಲ್‌ಗೆ ಸುಲಭ ಜಯ

Kohli IPL 2024

IPL; 10 ಸೀಸನ್‌, 400 ರನ್‌: ಕೊಹ್ಲಿ ಸಾಧನೆ

1-wewqewq

T20 World Cup; ಯುವರಾಜ್‌ ಸಿಂಗ್‌ ರಾಯಭಾರಿ: ಐಸಿಸಿ ಘೋಷಣೆ 

1-ewewqe

IPL; ಕೆಕೆಆರ್‌ ನೀಡಿದ 262 ರನ್ ಗುರಿ ತಲುಪಿ ದಾಖಲೆ ಬರೆದ ಪಂಜಾಬ್

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Road Mishap;ಅರಂತೋಡು: ಕಾರು – ಬೈಕ್‌ ಢಿಕ್ಕಿ: ಸವಾರ ಸಾವು

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

Vishweshwar Hegde Kageri; 50 ಸ್ಥಾನವನ್ನೂ ಗೆಲ್ಲಲಾಗದ ಕೈ ಪ್ರಣಾಳಿಕೆ ವ್ಯರ್ಥ

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಪರಿವಾರ, ಭ್ರಷ್ಟಾಚಾರ ಬಚಾವೋ ಐಎನ್‌ಡಿಐಎ ಧ್ಯೇಯ: ಜೆ.ಪಿ. ನಡ್ಡಾ

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

ಭಾರತೀಯ ಚೊಂಬು ಪಕ್ಷದಿಂದ ಕರ್ನಾಟಕಕ್ಕೆ ಚೊಂಬು: ರಾಹುಲ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.