ಲಕ್ಷ್ಮಣ್ ಪ್ರಕಾರ ಭಾರತ ಬಿಟ್ಟರೆ ವಿಶ್ವಕಪ್ ಗೆಲ್ಲುವ ದೇಶ ಯಾವುದು?


Team Udayavani, Feb 21, 2019, 7:01 AM IST

vvs.jpg

ದುಬೈ: ಕ್ರಿಕೆಟ್ ಲೋಕದ ಒಲಿಂಪಿಕ್ಸ್ ಏಕದಿನ ವಿಶ್ವಕಪ್ ಗೆ ದಿನಗಣನೆ ಆರಂಭವಾಗಿದ್ದು, ಯಾರು ಈ ಬಾರಿಯ ಪ್ರಶಸ್ತಿ ಗೆಲ್ಲಬಹುದೆಂಬ ಲೆಕ್ಕಾಚಾರಗಳು ನಡೆಯುತ್ತಿವೆ. ಭಾರತದ ಮಾಜಿ ಆಟಗಾರ ವಿ ವಿ ಎಸ್ ಲಕ್ಷ್ಮಣ್ ತಮ್ಮ ಪ್ರಕಾರ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳನ್ನು ಹೆಸರಿಸಿದ್ದಾರೆ. 

ದುಬೈನಲ್ಲಿ ನಡೆದ ಡಬ್ಲ್ಯೂಐಓಎನ್ ಜಾಗತಿಕ ಶೃಂಗಸಭೆಯಲ್ಲಿ ಭಾಗವಹಿಸಿ ಮಾತನಾಡಿದ ವಿ ವಿ ಎಸ್ ಲಕ್ಷ್ಮಣ್, ಹಲವು ವರ್ಷಗಳಿಂದ ಸ್ಥಿರ ನಿರ್ವಹಣೆ ನೀಡುತ್ತಿರುವ ಭಾರತ ಮತ್ತು ಆತಿಥೇಯ ಇಂಗ್ಲೆಂಡ್ ತಂಡಗಳು ಈ ವರ್ಷದ ವಿಶ್ವಕಪ್ ಗೆಲ್ಲುವ ನೆಚ್ಚಿನ ತಂಡಗಳು ಎಂದು ಅಭಿಪ್ರಾಯಪಟ್ಟರು.

ಏಕದಿನ ಕ್ರಿಕೆಟ್ ನಲ್ಲಿ ವಿಶ್ವಕಪ್ ಗಿಂತ ದೊಡ್ಡದು ಯಾವುದೂ ಇಲ್ಲ. ಕಳೆದ ಒಂದು ವರ್ಷಗಳಿಂದ ಭಾರತ ತಂಡ ಅದ್ಭುತ ಪ್ರದರ್ಶನ ನೀಡುತ್ತಿದೆ. ಭಾರತ ಒಂದು ಸಂಪೂರ್ಣ ತಂಡ. ಆಸ್ಟ್ರೇಲಿಯಾ ಮತ್ತು ನ್ಯೂಜಿಲ್ಯಾಂಡ್  ವಿರುದ್ಧ ಅವರದೇ ನೆಲದಲ್ಲಿ ಸರಣಿ ಗೆದ್ದಿರುವುದು ಕಡಿಮೆ ಸಾಧನೆಯೇನಲ್ಲ. ಸದ್ಯ ಭಾರತ ತಂಡದ ದೊಡ್ಡ ಆಸ್ತಿಯೆಂದರೆ ಬೌಲರ್ ಗಳು. ಅದರಲ್ಲೂ ವೇಗದ ಬೌಲರ್ ಗಳು ಅಗತ್ಯ ಸಮಯದಲ್ಲಿ ವಿಕೆಟ್ ಕಬಳಿಸುವುದರಿಂದ ವಿರಾಟ್ ಬಳಗಕ್ಕೆ ವಿಶ್ವಕಪ್ ಗೆಲ್ಲುವ ಎಲ್ಲಾ ಅವಕಾಶಗಳಿವೆ ಎಂದು ಭಾರತದ ವೆರಿ ವೆರಿ ಸ್ಪೆಷಲ್ ಆಟಗಾರ ಅಭಿಪ್ರಾಯ ಪಟ್ಟರು.

ಅಂಬಾಟಿ ರಾಯುಡು ಈ ವಿಶ್ವಕಪ್ ನಲ್ಲಿ ನಾಲ್ಕನೇ ಸ್ಥಾನದಲ್ಲಿ ಆಡಬೇಕು. ರಾಯುಡು ನ್ಯೂಜಿಲ್ಯಾಂಡ್ ವಿರುದ್ಧ ಅಗತ್ಯ ಸಮಯದಲ್ಲಿ ಆಡಿದ 90 ರನ್ ಇನ್ನಿಂಗ್ಸ್ ತಂಡದಲ್ಲಿ ಅವರ ಸ್ಥಾನವನ್ನು ಗಟ್ಟಿಗೊಳಿಸಿದೆ ಎಂದರು. ಟೀಂ ಇಂಡಿಯಾದ ಬಹುಚರ್ಚಿತ ವಿಷಯ, ಧೋನಿ ಬ್ಯಾಟಿಂಗ್ ಕ್ರಮಾಂಕದ ಬಗ್ಗೆ ಕೇಳಿದಾಗ ಲಕ್ಷ್ಮಣ್, ಧೋನಿ ಐದನೇ ಕ್ರಮಾಂಕದಲ್ಲಿ ಆಡಬೇಕು. ಧೋನಿ ಇನ್ನಿಂಗ್ಸ್ ಕಟ್ಟುವ ಮತ್ತು ಕೊನೆಯಲ್ಲಿ ಉತ್ತಮ ಫಿನಿಶರ್ ಆಗಿ ಕೆಲಸ ಮಾಡುತ್ತಾರೆ . ಹಾರ್ದಿಕ್ ಪಾಂಡ್ಯ ಮತ್ತು ಕೇದಾರ್ ಜಾಧವ್ ಉತ್ತಮವಾಗಿ ಆಡುತ್ತಿರುವುದರಿಂದ ನನ್ನ ಪ್ರಕಾರ ವಿಶ್ವಕಪ್ ನಲ್ಲಿ ಆಡುವ ಭಾರತ ತಂಡ ಸಿದ್ದವಾಗಿದೆ ಎಂದರು. 

ವಿಶ್ವಕಪ್ ನಲ್ಲಿ ಪಾಕ್ ವಿರುದ್ಧ ಆಟ?: ಇತ್ತೀಚಿಗೆ ಜಮ್ಮು ಮತ್ತು ಕಾಶ್ಮೀರದ ಪುಲ್ವಾಮಾದಲ್ಲಿ ಭಾರತೀಯ ಯೋಧರ ಮೇಲೆ ಉಗ್ರ ದಾಳಿಯ ನಂತರದ ಬೆಳವಣಿಗೆಯಲ್ಲಿ ವಿಶ್ವಕಪ್ ನಲ್ಲಿ ಭಾರತೀಯ ತಂಡ ಪಾಕಿಸ್ಥಾನ ವಿರುದ್ಧ ಆಟವಾಡಬಾರದು ಎಂಬ ಮಾತು ಕೇಳಿ ಬರುತ್ತಿರುವ ಬಗ್ಗೆ ಕೇಳಿದಾಗ ಲಕ್ಷ್ಮಣ್, ದೇಶದಲ್ಲಿ ಇಂತಹ ಘಟನೆಗಳು ನಡೆದಾಗ ನಮ್ಮ ಮನಸ್ಸಿಗೆ ಕ್ರಿಕೆಟ್ ನ ವಿಷಯ ಕೊನೆಯದಾಗಿ ಬರುತ್ತದೆ. ನಾವು ಭಯೋತ್ಪಾದನೆಯ ವಿರುದ್ದ ಸಮರ ಸಾರ ಬೇಕಿದೆ. ಮಡಿದ ಯೋಧರ ಪರಿವಾರದ ಪರವಾಗಿ ನಿಲ್ಲಬೇಕಿದೆ. ಕ್ರಿಕೆಟ್ ನ ಬಗ್ಗೆ ಕೊನೆಯದಾಗಿ ಚಿಂತಿಸಬೇಕು ಎಂದರು. 

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.