ಐಸಿಸಿ-ಬಿಸಿಸಿಐ ನಡುವೆ ಒಳಗೊಳಗೇ ಗುದ್ದಾಟ

ಎಂಟು ವಿಶ್ವಕೂಟ ನಡೆಸುವುದಕ್ಕೆ ಭಾರತ, ಆಸೀಸ್‌, ಇಂಗ್ಲೆಂಡ್‌ ವಿರೋಧ

Team Udayavani, Apr 11, 2020, 4:45 AM IST

ಐಸಿಸಿ-ಬಿಸಿಸಿಐ ನಡುವೆ ಒಳಗೊಳಗೇ ಗುದ್ದಾಟ

ಮುಂಬಯಿ: ಒಂದು ಕಡೆ ಕೋವಿಡ್ 19 ವೈರಸ್‌ ತನ್ನ ಅಟ್ಟಹಾಸವನ್ನು ಮುಂದುವರಿಸುತ್ತಲೇ ಇದೆ. ಇನ್ನೊಂದು ಕಡೆ ಅದಕ್ಕೆ ಸಿಲುಕಿಕೊಂಡು ಅಳಿವಿನಂಚಿಗೆ ಮನುಷ್ಯ ಸರಿಯುತ್ತಲೇ ಇದ್ದಾನೆ. ಮತ್ತೂಂದು ಕಡೆ ತಮ್ಮ ಕರ್ತವ್ಯವನ್ನು ಮರೆಯಲು ಸಾಧ್ಯವಿಲ್ಲ ಎಂಬ ಕಾರಣಕ್ಕೆ, ಕೆಲವರು ಚಟುವಟಿಕೆಯನ್ನು ತಮ್ಮ ಮಿತಿಯಲ್ಲಿಯೇ ಮುಂದುವರಿಸಿದ್ದಾರೆ. ಅದರಲ್ಲಿ ಕ್ರೀಡೆಗೆ ಮಹತ್ವದ ಸ್ಥಾನ. ಮುಂದೇನು ಮಾಡಬೇಕೆಂದು ಇನ್ನೂ ಹಲವು ಕೂಟಗಳ ಸಂಘಟಕರಿಗೆ ಖಚಿತವಾಗಿಲ್ಲ. ಆದ್ದರಿಂದ ಲೆಕ್ಕಾಚಾರ ಮುಂದುವರಿದಿದೆ.
ಈ ಪೈಕಿ ಅಂತಾರಾಷ್ಟ್ರೀಯ ಕ್ರಿಕೆಟ್‌ ಸಮಿತಿ (ಐಸಿಸಿ) ಬಹಳ ಇಕ್ಕಟ್ಟಿನಲ್ಲಿದೆ. ಮುಂದಿನ ಜುಲೈನಲ್ಲಿ ಅದರ ಚುನಾವಣೆಯಿದೆ. ಅಷ್ಟರೊಳಗೆ ಅದು ಹಲವು ಸಮಸ್ಯೆಗಳನ್ನು ಪರಿಹರಿಸಿಕೊಳ್ಳಬೇಕಿದೆ.

ಸಮಸ್ಯೆ ಏನು?
ಜುಲೈ ತಿಂಗಳಲ್ಲಿ ಐಸಿಸಿ ಚುನಾವಣೆ ನಡೆಯಲಿದೆ. ಆ ವೇಳೆಗಾಗಲೇ ಐಸಿಸಿ ಮತ್ತು ಸದಸ್ಯ ರಾಷ್ಟ್ರಗಳ ನಡುವಿನ ಭಿನ್ನಮತ ಬಗೆಹರಿಯಬೇಕು. ಇಲ್ಲವಾದರೆ ಮುಂದಿನ ಕೂಟಗಳು ಅಸ್ತವ್ಯಸ್ತವಾಗುತ್ತವೆ. ಈಗ ಐಸಿಸಿ ಚುನಾವಣೆ ಎಂದಿನಂತಿಲ್ಲ. ಐಸಿಸಿಗೆ ಮುಖ್ಯಸ್ಥರಾ ಗುವವರಿಗೆ ಯಾವುದೇ ರಾಷ್ಟ್ರಗಳ ಹಂಗಿರುವುದಿಲ್ಲ. ಅವರು ಸ್ವತಂತ್ರರಾಗಿ ತಮ್ಮ ಸಾಮರ್ಥಯದ ಮೇಲೆ ಸ್ಪರ್ಧಿಸಬಹುದು. ಆ ವ್ಯಕ್ತಿಗೆ ಈ ಜಟಾಪಟಿಯನ್ನೆಲ್ಲ ಬಗೆಹರಿಸಬೇಕಾದ ತಾಪತ್ರಯ ಎದುರಾಗುತ್ತದೆ. ಇಲ್ಲಿ ಯಾವುದೇ ರಾಷ್ಟ್ರಗಳ ಬೆಂಬಲ ಸಿಕ್ಕದಿದ್ದರೆ ಕಷ್ಟ. ಇಲ್ಲಿ ಪ್ರತೀವರ್ಷ ವಿಶ್ವಕೂಟ ನಡೆಸುವುದಕ್ಕೆ ಬಿಸಿಸಿಐ, ಎಸಿಎ, ಇಸಿಬಿ ಸಿದ್ಧವಿಲ್ಲ. ಪ್ರತೀವರ್ಷದ ಕೂಟಗಳಿಂದ ಈ ರಾಷ್ಟ್ರಗಳು ದೇಶೀಯವಾಗಿ ನಡೆಸುವ ಐಪಿಎಲ್‌, ಬಿಗ್‌ಬಾಷ್‌, ದಿ ಹಂಡ್ರೆಡ್‌ನ‌ಂತಹ ಕೂಟಗಳ ಮೇಲೆ ಒತ್ತಡ ಬೀಳುತ್ತದೆ. ಆಟಗಾರರ ಹೊಂದಾಣಿಕೆ, ದಿನಾಂಕದ ಹೊಂದಾಣಿಕೆ ಇವೆಲ್ಲ ಸಮಸ್ಯೆಯಾಗುತ್ತದೆ. ಇವಕ್ಕೆ ಈ ಕೂಟಗಳಿಂದಲೇ ಗರಿಷ್ಠ ಆದಾಯ ಬರುವುದು. ಇನ್ನು ಇವು ದ್ವಿಪಕ್ಷೀಯ ಪಂದ್ಯ ನಡೆಸಲು ಬೇರೆ ದೇಶಗಳೊಂದಿಗೆ ಒಪ್ಪಂದ ಮಾಡಿಕೊಂಡಿರುತ್ತವೆ. ಅವೂ ರದ್ದಾಗುತ್ತವೆ. ಅದರಿಂದ ಬಿಸಿಸಿಐಗೆ ಪ್ರತೀ ಪಂದ್ಯಕ್ಕೆ ಮಾಧ್ಯಮ ಹಕ್ಕಿನ ರೂಪದಲ್ಲೇ 60 ಕೋಟಿ ರೂ. ನಷ್ಟ ಸಂಭವಿಸುವ ನಿರೀಕ್ಷೆಯಿದೆ.
ಐಸಿಸಿ ಕೂಟಗಳು ನಡೆದಾಗ ಆದಾಯ ಐಸಿಸಿ ಮತ್ತು ಆತಿಥೇಯ ರಾಷ್ಟ್ರದ ನಡುವೆ ಹಂಚಿ ಹೋಗುತ್ತದೆ. ಉಳಿದ ರಾಷ್ಟ್ರಗಳಿಗೆ ಸಿಗುವುದೇನು? ಆದ್ದರಿಂದ ಪ್ರತೀವರ್ಷ ವಿಶ್ವಕೂಟ ಬೇಡ ಎಂದು ಇವು ತಕರಾರು ತೆಗೆಯುತ್ತಿವೆ.

ಪರಿಸ್ಥಿತಿ ಏನು
ಐಸಿಸಿ 2023ರಿಂದ 31ರ ಅವಧಿಯಲ್ಲಿ ಪುರುಷರ ಕ್ರಿಕೆಟ್‌ನ 8 ಪ್ರಮುಖ ವಿಶ್ವಕೂಟಗಳು ಸೇರಿ, ಒಟ್ಟು 28 ಪ್ರಮುಖ ಕೂಟಗಳನ್ನು ಆಯೋಜಿಸಲಿದೆ. ಇದರಲ್ಲಿ 2024 ಮತ್ತು 28ರಲ್ಲಿ ನಡೆಯುವ ಟಿ20 ಚಾಂಪಿಯನ್ಸ್‌ ಟ್ರೋಫಿಯೂ ಸೇರಿದೆ. ಜತೆಗೆ 19 ವಯೋಮಿತಿ ವಿಶ್ವಕಪ್‌, ಎರಡು ವರ್ಷಗಳಿಗೊಮ್ಮೆ ಬರುವ ಟೆಸ್ಟ್‌ ವಿಶ್ವಚಾಂಪಿಯನ್‌ಶಿಪ್‌ ಫೈನಲ್‌, ಮಹಿಳಾ ಕ್ರಿಕೆಟ್‌ ಕೂಟಗಳ ಆತಿಥ್ಯವನ್ನೆಲ್ಲ ಸೇರಿಸಿ, ಸದಸ್ಯ ರಾಷ್ಟ್ರಗಳು, ಸಹ ಸದಸ್ಯ ರಾಷ್ಟ್ರಗಳಿಗೆ ಐಸಿಸಿ ಮಾಹಿತಿ ರವಾನಿಸಿದೆ. ವಿಶೇಷವೆಂದರೆ ಒಟ್ಟು 18 ರಾಷ್ಟ್ರಗಳು ಪ್ರತಿಕ್ರಿಯಿಸಿ, 93 ಬೇಡಿಕೆಗಳನ್ನಿಟ್ಟಿವೆಯಂತೆ. ಇದರಲ್ಲಿ 15 ರಾಷ್ಟ್ರಗಳು ತಮ್ಮ ಬಯಕೆಯನ್ನು ನಿರ್ದಿಷ್ಟವಾಗಿ ತಿಳಿಸಿದ್ದರೂ, ಮೂರು ರಾಷ್ಟ್ರಗಳು ಮಾತ್ರ, ತಮ್ಮ ಆಸಕ್ತಿಯನ್ನು ಸ್ಪಷ್ಟಪಡಿಸಿಲ್ಲ. ಅವು ಭಾರತ, ಆಸ್ಟ್ರೇಲಿಯ, ಇಂಗ್ಲೆಂಡ್‌ ಎಂದು ಊಹಿಸಲಾಗಿದೆ. ಇದನ್ನು ಬಗೆಹರಿಸಿಕೊಳ್ಳುವ ದಾರಿ ಕಾಣದೇ ಐಸಿಸಿ ಕಂಗಾಲಾಗಿದೆ.

ಟಾಪ್ ನ್ಯೂಸ್

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

Gadag; ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಕೊಲೆಗಡುಕರೇ ಪ್ರಥಮ ಪ್ರಜೆಗಳು: ಬಸವರಾಜ ಬೊಮ್ಮಾಯಿ

10-

Lok Sabha Election 2024: ಝಾರ್ಖಂಡ್‌, ಛತ್ತೀಸ್‌ಗಢದಲ್ಲಿ ಗೆಲುವು ಯಾರಿಗೆ?

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್

ಗ್ಯಾಂಗ್‌ ಸ್ಟರ್‌ ಬಿಷ್ಣೋಯಿ ಹೆಸರಿನಿಂದ ಸಲ್ಮಾನ್‌ ಮನೆಯಿಂದ ಕ್ಯಾಬ್‌ ಬುಕ್: ಯುವಕ ಅರೆಸ್ಟ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

Nalkane Ayama Movie Review

Nalkane Ayama Movie Review; ದೆವ್ವದ ಕಾಟದ ಹಿಂದೊಂದು ಅಸಲಿ ಆಟ!

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.