ಭಾರತ-ಆಸೀಸ್‌ ಪಂದ್ಯಗಳಿಗೆ ಸಿಡ್ನಿ ಸಮ್ಮತಿ: ಆಸೀಸ್ ಗೆ ತೆರಳಲಿದೆ 32 ಸದಸ್ಯರ ಜಂಬೋ ತಂಡ


Team Udayavani, Oct 23, 2020, 8:33 AM IST

ಭಾರತ-ಆಸೀಸ್‌ ಪಂದ್ಯಗಳಿಗೆ ಸಿಡ್ನಿ ಸಮ್ಮತಿ: ಆಸೀಸ್ ಗೆ ತೆರಳಲಿದೆ 32 ಸದಸ್ಯರ ಜಂಬೋ ತಂಡ

ಸಿಡ್ನಿ: ಪ್ರವಾಸಿ ಭಾರತ ಮತ್ತು ಆಸ್ಟ್ರೇಲಿಯ ನಡುವಿನ ವರ್ಷಾಂತ್ಯದ ಸೀಮಿತ ಓವರ್‌ಗಳ ಸರಣಿಗೆ ನ್ಯೂ ಸೌತ್‌ ವೇಲ್ಸ್‌ ಸರಕಾರ ಅನುಮತಿ ನೀಡಿದೆ. ಇದರಂತೆ ಇತ್ತಂಡಗಳ ನಡುವಿನ ಏಕದಿನ ಹಾಗೂ ಟಿ20 ಸರಣಿ ಸಿಡ್ನಿ ಮತ್ತು ಕ್ಯಾನ್‌ಬೆರಾದಲ್ಲಿ ನಡೆಯುವುದು ಖಾತ್ರಿಯಾಗಿದೆ.

ಇದೇ ವೇಳೆ ಐಪಿಎಲ್‌ ಮುಗಿಸಿ ಆಗಮಿಸಲಿರುವ ಭಾರತ ಮತ್ತು ಆಸ್ಟ್ರೇಲಿಯ ತಂಡದ ಆಟಗಾರರು ಸಿಡ್ನಿಯಲ್ಲೇ ಕ್ವಾರಂಟೈನ್‌ ನಲ್ಲಿ ಇರಬೇಕಾಗುತ್ತದೆ. ಯುಎಇಯಿಂದ ನೇರವಾಗಿ ಬ್ರಿಸ್ಬೇನ್‌ಗೆ ಆಗಮಿಸಿ, 72 ಗಂಟೆಗಳ ಬಳಿಕ ಸಿಡ್ನಿಗೆ ಬರುವಂತೆ ಇವರಿಗೆ ಸೂಚಿಸಲಾಗಿತ್ತು. ಆದರೆ ಇದರಲ್ಲೀಗ ಬದಲಾವಣೆ ಮಾಡಲಾಗಿದ್ದು, ಕ್ರಿಕೆಟಿಗರೆಲ್ಲ ನೇರವಾಗಿ ಸಿಡ್ನಿಗೆ ಆಗಮಿಸಲಿದ್ದಾರೆ. ಐಪಿಎಲ್‌ ಆಡದ ಚೇತೇಶ್ವರ್‌ ಪೂಜಾರ, ಹನುಮ ವಿಹಾರಿ ಮೊದಲಾದ ಕ್ರಿಕೆಟಿಗರು ನೇರವಾಗಿ ಯುಎಇಗೆ ಹೋಗಿ, ಅಲ್ಲಿಯೇ ಕ್ವಾರಂಟೈನ್‌ ಪೂರೈಸಿ ತಂಡವನ್ನು ಕೂಡಿಕೊಳ್ಳಲಿದ್ದಾರೆ.

ಪಿಂಕ್‌ ಬಾಲ್‌ ಟೆಸ್ಟ್‌

ಸರಣಿಯ ಮೊದಲ ಟೆಸ್ಟ್‌ “ಅಡಿಲೇಡ್‌ ಓವಲ್‌’ನಲ್ಲಿ ನಡೆಯಲಿದ್ದು (ಡಿ. 17-21), ಇದು ಹಗಲು-ರಾತ್ರಿ ಸಾಗುವ ಪಿಂಕ್‌ ಬಾಲ್‌ ಪಂದ್ಯವಾಗಿರಲಿದೆ. ಅನಂತರದ ಬಾಕ್ಸಿಂಗ್‌ ಡೇ ಟೆಸ್ಟ್‌ (ಡಿ. 26-30) ಆತಿಥ್ಯ ಕೂಡ ಅಡಿಲೇಡ್‌ ಪಾಲಾಗಿದೆ. ಸಂಪ್ರದಾಯದಂತೆ ಇದು ಮೆಲ್ಬರ್ನ್ನಲಿ ನಡೆಯಬೇಕಿತ್ತು. ಆದರೆ ಅಲ್ಲಿ ಕೋವಿಡ್‌-19 ಪ್ರಕರಣ ಜಾಸ್ತಿ ಇರುವುದರಿಂದ ಎಂಸಿಜಿಗೆ ಈ ಅವಕಾಶ ತಪ್ಪಿದೆ. ಉಳಿದೆರಡು ಟೆಸ್ಟ್‌ ಪಂದ್ಯಗಳು ಸಿಡ್ನಿ ಮತ್ತು ಬ್ರಿಸ್ಬೇನ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ:IPL 2020: ಪಾಂಡೆ-ಶಂಕರ್‌ ಅಬ್ಬರ; ಹೈದರಾಬಾದ್‌ಗೆ 8 ವಿಕೆಟ್‌ ಜಯ

32 ಸದಸ್ಯರ ಜಂಬೋ ತಂಡ

ಈ ಸರಣಿಗಾಗಿ ಭಾರತ 32 ಆಟಗಾರರ ಬೃಹತ್‌ ತಂಡವೊಂದನ್ನು ಪ್ರಕಟಿಸುವ ಸಾಧ್ಯತೆ ಇದೆ. ಕೋವಿಡ್ ಮುನ್ನೆಚ್ಚರಿಕೆಯ ಕಾರಣ ತಂಡದಲ್ಲಿ ಆಗಾಗ ಬದಲಾವಣೆ ಮಾಡಿಕೊಳ್ಳಲು ಅಸಾಧ್ಯವಾಗಿರುವುದರಿಂದ ಒಮ್ಮೆಲೇ ಅಧಿಕ ಸಂಖ್ಯೆಯ ಆಟಗಾರರನ್ನು ಆರಿಸುವುದು ಬಿಸಿಸಿಐ ಯೋಜನೆ. ಈ ವಾರಾಂತ್ಯದೊಳಗೆ ತಂಡ ಪ್ರಕಟಗೊಳ್ಳುವ ನಿರೀಕ್ಷೆ ಇದೆ.

ನ. 27ರಿಂದ ಸರಣಿ ಆರಂಭ

ಭಾರತ ಏಕದಿನ ಸರಣಿಯೊಂದಿಗೆ ಆಸ್ಟ್ರೇಲಿಯ ಪ್ರವಾಸವನ್ನು ಆರಂಭಿಸಲಿದೆ. ಮೊದಲೆರಡು ಪಂದ್ಯಗಳನ್ನು ನ. 27 ಮತ್ತು 29ರಂದು “ಸಿಡ್ನಿ ಕ್ರಿಕೆಟ್‌ ಗ್ರೌಂಡ್‌’ನಲ್ಲಿ ಆಡಲಾಗುವುದು. ಕ್ಯಾನ್‌ಬೆರಾದಲ್ಲಿ ಅಂತಿಮ ಏಕದಿನ (ಡಿ.1) ಮತ್ತು ಮೊದಲ ಟಿ20 ಪಂದ್ಯ (ಡಿ. 4) ನಡೆಯಲಿದೆ. ಬಳಿಕ ಎರಡೂ ತಂಡಗಳು ಸಿಡ್ನಿಗೆ ವಾಪಸಾಗಿ ಉಳಿದೆರಡು ಟಿ20 ಪಂದ್ಯಗಳಲ್ಲಿ ಪಾಲ್ಗೊಳ್ಳಲಿವೆ (ಡಿ. 6 ಮತ್ತು ಡಿ. 8)

ಟಾಪ್ ನ್ಯೂಸ್

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

ಧ್ರುವ್‌ ರಾಠಿ ಮುಸ್ಲಿಂ, ಆತನ ಪತ್ನಿ ಪಾಕಿಸ್ತಾನಿ: ವೈರಲ್‌ ಪೋಸ್ಟ್‌ನ ಸತ್ಯಾಸತ್ಯತೆ ಏನು?

3

ಇನ್ಸ್ಟಾ ಪ್ರೊಫೈಲ್‌ ಮಾಯೆ: ಯುವತಿ ಎಂದು 45ರ ಆಂಟಿ ಜೊತೆ 20ರ ಯುವಕನ ಚಾಟ್: ಮುಂದೆ ಆದದ್ದು..

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!

NewsClick ಸ್ಥಾಪಕ ಪ್ರಬೀರ್‌ ವಿರುದ್ಧ 8,000 ಪುಟಗಳ ಆರೋಪಪಟ್ಟಿ; ಭಯೋತ್ಪಾದನೆಗೆ ನೆರವು!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ: ಅನುಭವಿ ಆಟಗಾರನಿಗಿಲ್ಲ ಚಾನ್ಸ್

T20 ವಿಶ್ವಕಪ್‌ ಗೆ ಆಸ್ಟ್ರೇಲಿಯಾ ತಂಡ ಪ್ರಕಟ; ಅನುಭವಿ ಆಟಗಾರನಿಗಿಲ್ಲ ಚಾನ್ಸ್

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

IPL 2024; ಚೆನ್ನೈ ಕಿಂಗ್ಸ್‌ಗೆ ಚೇಸಿಂಗ್‌ ಕಿಂಗ್‌ ಸವಾಲು

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

T20 World Cup: ಐಪಿಎಲ್‌ ಪ್ಲೇಆಫ್’ಗಿಲ್ಲ ಬಟ್ಲರ್‌, ಸಾಲ್ಟ್, ಬೇರ್‌ಸ್ಟೋ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

IPL 2024; ಮುಂಬೈ ವಿರುದ್ಧ ಭರ್ಜರಿ ಗೆಲುವು; ಮೂರಕ್ಕೇರಿದ ರಾಹುಲ್‌ ಪಡೆ

uber cup badminton; India lost against china

Uber Cup Badminton: ಚೀನಾ ವಿರುದ್ಧ ಭಾರತಕ್ಕೆ 5-0 ಸೋಲು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Rupali Ganguly : ʼಅನುಪಮಾʼ ಧಾರಾವಾಹಿ ಖ್ಯಾತಿಯ ನಟಿ ರೂಪಾಲಿ ಗಂಗೂಲಿ ಬಿಜೆಪಿ ಸೇರ್ಪಡೆ

Extortion:  ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

Extortion: ಆನ್‌ಲೈನ್‌ ಗೇಮ್‌; ಬಾಲಕನ ಬೆದರಿಸಿ ಸುಲಿಗೆ

9-kushtagi

Kushtagi: ಕಾಣೆಯಾಗಿದ್ದ ಪುರಸಭೆ ನೌಕರ ಪತ್ತೆ; ಆತಂಕ ದೂರ

8-

Politics: ಕೇಂದ್ರ ಬರ ಪರಿಹಾರ ನೀಡದಿರಲು ವಿಧಾನಸಭೆ ಚುನವಾಣೆ ಸೋಲಿನ ಸೇಡು: ರಾಮಲಿಂಗಾರೆಡ್ಡಿ

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

LPG Cylinders: ವಾಣಿಜ್ಯ ಬಳಕೆಯ ಎಲ್‌ ಪಿಜಿ ಸಿಲಿಂಡರ್ ಬೆಲೆ ಮತ್ತೆ ಇಳಿಕೆ; ಹೊಸ ದರ ಎಷ್ಟು?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.