ಫರ್ಸ್ಟ್ ಟೆಸ್ಟ್: ಬುಮ್ರಾ ಘಾತಕ ದಾಳಿ ; ಭಾರತಕ್ಕೆ 318 ರನ್ನುಗಳ ಭರ್ಜರಿ ಜಯ

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನ ಮೊದಲ ಪಂದ್ಯ ಗೆದ್ದು ಶುಭಾರಂಭ ಮಾಡಿದ ಟೀಂ ಇಂಡಿಯಾ

Team Udayavani, Aug 26, 2019, 1:44 AM IST

Bumrah-726

ನಾರ್ತ್ ಸೌಂಡ್ (ಆ್ಯಂಟುಗುವಾ): ಐಸಿಸಿ ವಿಶ್ವ ಚಾಂಪಿಯನ್ ಶಿಪ್ ನಡಿಯಲ್ಲಿ ನಡೆಯುತ್ತಿರುವ ವೆಸ್ಟ್ ಇಂಡೀಸ್ ವಿರುದ್ಧದ ಪ್ರಥಮ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡವು 318 ರನ್ನುಗಳ ಭರ್ಜರಿ ಜಯ ದಾಖಲಿಸಿದೆ.

ಎರಡನೇ ಇನ್ನಿಂಗ್ಸ್ ನಲ್ಲಿ ಭಾರತ 343 ರನ್ ಗಳಿಸಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು. ವೆಸ್ಟ್ ಇಂಡೀಸ್ ಗೆಲುವಿಗೆ 419 ರನ್ನುಗಳ ಕಠಿಣ ಗುರಿ ನಿಗದಿಯಾಗಿತ್ತು. ಆದರೆ ವೇಗಿ ಜಸ್ಪೀತ್ ಬುಮ್ರಾ ಅವರ ಘಾತಕ ದಾಳಿಗೆ ಪಟಪಟನೆ ಉದುರಿದ ವೆಸ್ಟ್ ಇಂಡೀಸ್ ಬ್ಯಾಟ್ಸ್ ಮನ್ ಗಳು ಯಾವುದೇ ಹಂತದಲ್ಲಿ ಪ್ರತಿರೋಧವನ್ನೇ ತೋರಲಿಲ್ಲ. ಅಂತಿಮವಾಗಿ ವೆಸ್ಟ್ ವಿಂಡೀಸ್ 100 ರನ್ನುಗಳಿಗೆ ಆಲೌಟ್ ಆಗುವ ಮೂಲಕ ತನ್ನ ಹೋರಾಟವನ್ನು ಮುಗಿಸಿತು.

ಎರಡನೇ ಇನ್ನಿಂಗ್ಸ್ ನ ತನ್ನ ಮಾರಕ ಸ್ಪೆಲ್ ನಲ್ಲಿ ವೇಗಿ ಬುಮ್ರಾ ಅವರು 5 ವಿಕೆಟ್ ಗಳನ್ನು ಪಡೆದು ವೆಸ್ಟ್ ಇಂಡೀಸ್ ನ ಬ್ಯಾಟಿಂಗ್ ಸರದಿಯನ್ನು ಚಿಂದಿ ಉಡಾಯಿಸಿದರು.

ಎರಡನೇ ಇನ್ನಿಂಗ್ಸ್ ನಲ್ಲಿ ಭರ್ಜರಿ ಶತಕ (102) ದಾಖಲಿಸಿದ ಮತ್ತು ಪ್ರಥಮ ಇನ್ನಿಂಗ್ಸ್ ನಲ್ಲಿ 81 ರನ್ ಸಿಡಿಸಿದ್ದ ಅಜಿಂಕ್ಯ ರಹಾನೆ ಅವರು ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಪ್ರಥಮ ಇನ್ನಿಂಗ್ಸ್ ನಲ್ಲಿ ತೋರಿಸಿದ ಬ್ಯಾಟಿಂಗ್ ಛಾತಿಯಷ್ಟನ್ನೂ ಸಹ ಎರಡನೇ ಇನ್ನಿಂಗ್ಸ್ ನಲ್ಲಿ ತೋರಿಸಲು ಕೆರಿಬಿಯನ್ ಬ್ಯಾಟ್ಸ್ ಮನ್ ಗಳು ವಿಫಲರಾದರು. ವೆಸ್ಟ್ ವಿಂಡೀಸ್ ಬ್ಯಾಟಿಂಗ್ ಸರದಿಯಲ್ಲಿ ರೋಸ್ಟನ್ ಚೇಸ್ (12) ಮತ್ತು ಕೆಮರ್ ರೋಚ್ (38) ಮತ್ತು ಮಿಗ್ವೆಲ್ ಕಮಿನ್ಸ್ ( ಔಟಾಗದೆ 19) ಮಾತ್ರವೇ ಎರಡಂಕೆ ಮೊತ್ತವನ್ನು ದಾಟಿದರು. ಮೊದಲ ಇನ್ನಿಂಗ್ಸ್ ನಲ್ಲೂ ಸಹ ಚೇಸ್ (48) ಅವರದ್ದೇ ಅಧಿಕ ಮೊತ್ತವಾಗಿತ್ತು.

ಭಾರತದ ಮೊದಲ ಇನ್ನಿಂಗ್ಸ್ ಬೌಲಿಂಗ್ ನಲ್ಲಿ ವೇಗಿ ಇಶಾಂತ್ ಶರ್ಮಾ 5 ವಿಕೆಟ್ ಕಿತ್ತು ಗಮನ ಸೆಳೆದರೆ, ಎರಡನೇ ಇನ್ನಿಂಗ್ಸ್ ನಲ್ಲಿ ವೇಗಿ ಬುಮ್ರಾ 5 ವಿಕೆಟ್ ಕಿತ್ತು ವಿಜೃಂಭಿಸಿದರು. ಇಶಾಂತ್ ಶರ್ಮಾ 3 ವಿಕೆಟ್ ಮತ್ತು ಮಹಮ್ಮದ್ ಶಮಿ 2 ವಿಕೆಟ್ ಪಡೆದುಕೊಂಡರು.

ಮಿಂಚಿದ ರಹಾನೆ ; ಶತಕ ವಂಚಿತ ಹನುಮ ವಿಹಾರಿ

ಭಾರತದ ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ ನಲ್ಲಿ ನಾಯಕ ವಿರಾಟ್ ಕೊಹ್ಲಿ (51), ಶತಕವೀರ ಅಜಿಂಕ್ಯ ರಹಾನೆ (102) ಮತ್ತು ಚೊಚ್ಚಲ ಶತಕ ವಂಚಿತ ಹನುಮ ವಿಹಾರಿ (93) ಈ ಮೂವರ ಬ್ಯಾಟಿಂಗ್ ಸಾಹಸದಿಂದ 343 ರನ್ನುಗಳ ಸ್ಪರ್ಧಾತ್ಮಕ ಮೊತ್ತ ಕಲೆ ಹಾಕಿತು.

ಚೊಚ್ಚಲ ಶತಕದ ನಿರೀಕ್ಷೆಯಲ್ಲಿದ್ದ ಯುವ ಪ್ರತಿಭೆ ಹನುಮ ವಿಹಾರಿ 93 ರನ್ ಗಳಿಸಿದ್ದಾಗ ವಿಕೆಟ್ ಕೀಪರ್ ಗೆ ಕ್ಯಾಚ್ ನೀಡಿ ನಿರಾಶೆ ಅನುಭವಿಸಿದರು. ವಿಹಾರಿ ಔಟಾದೊಡನೆ ನಾಯಕ ಕೊಹ್ಲಿ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಳ್ಳುವ ನಿರ್ಧಾರಕ್ಕೆ ಬಂದರು.

ವೆಸ್ಟ್ ಇಂಡೀಸ್ ಬೌಲರ್ ಗಳ ಪರ ರೋಸ್ಟನ್ ಚೇಸ್ 4 ವಿಕೆಟ್ ಪಡೆದರು. ಮೊದಲ ಇನ್ನಿಂಗ್ಸ್ ನಲ್ಲೂ ಚೇಸ್ 2 ವಿಕೆಟ್ ಪಡೆದಿದ್ದರು.

ಭಾರತ ಪ್ರಥಮ ಇನ್ನಿಂಗ್ಸ್ : 297ಕ್ಕೆ ಆಲೌಟ್

ರಾಹುಲ್ 44, ರಹಾನೆ 81, ಜಡೇಜಾ 58 ; ರೋಚ್ 4 ವಿಕೆಟ್, ಗೇಬ್ರಿಯಲ್ 3 ವಿಕೆಟ್

ವೆಸ್ಟ್ ಇಂಡೀಸ್ ಪ್ರಥಮ ಇನ್ನಿಂಗ್ಸ್: 222ಕ್ಕೆ ಆಲೌಟ್

ರೋಸ್ಟನ್ ಚೇಸ್ 48, ಹೋಲ್ಡರ್ 39, ಹೈಟ್ಮೇರ್ 35, ಹೋಪ್ 24 ; ಇಶಾಂತ್ ಶರ್ಮಾ 5 ವಿಕೆಟ್

ಭಾರತ ದ್ವಿತೀಯ ಇನ್ನಿಂಗ್ಸ್ : 343/7 ಇನ್ನಿಂಗ್ಸ್ ಡಿಕ್ಲೇರ್ಡ್

ರಹಾನೆ 102, ಹನುಮ ವಿಹಾರಿ 93, ವಿರಾಟ್ ಕೊಹ್ಲಿ 51 ; ರೋಸ್ಟನ್ ಚೇಸ್ 4 ವಿಕೆಟ್

ವೆಸ್ಟ್ ಇಂಡೀಸ್ ದ್ವಿತೀಯ ಇನ್ನಿಂಗ್ಸ್: 100ಕ್ಕೆ ಆಲೌಟ್

ರೋಚ್ 38, ಮಿಗ್ವೆಲ್ ಕಮಿನ್ಸ್ ( ಔಟಾಗದೆ 19) ; ಜಸ್ಪ್ರೀತ್ ಬುಮ್ರಾ 5 ವಿಕೆಟ್

ಫಲಿತಾಂಶ: ಭಾರತಕ್ಕೆ 318 ರನ್ನುಗಳ ಜಯ


ಟಾಪ್ ನ್ಯೂಸ್

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Seat next to parents for children under 12 years on the plane?

DGCA: ವಿಮಾನದಲ್ಲಿ 12 ವರ್ಷದೊಳಗಿನ ಮಕ್ಕಳಿಗೆ ಪೋಷಕರ ಪಕ್ಕ ಆಸನ?

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.