ಭಾರತ-ಇಂಗ್ಲೆಂಡ್‌ ವನಿತಾ ಏಕದಿನ ಸರಣಿ ;ಮಿಥಾಲಿ ಪಡೆಗೆ ಭಾರೀ ಸವಾಲು


Team Udayavani, Feb 22, 2019, 12:30 AM IST

95.jpg

ಮುಂಬಯಿ: ನ್ಯೂಜಿಲ್ಯಾಂಡ್‌ನ‌ಲ್ಲಿ ಏಕದಿನ ಸರಣಿ ಗೆದ್ದ ಸಂಭ್ರಮದಲ್ಲಿರುವ ಭಾರತದ ವನಿತಾ ತಂಡ ತವರಿನಲ್ಲಿ ಬಲಿಷ್ಠ ಇಂಗ್ಲೆಂಡ್‌ ವಿರುದ್ಧ ಸೆಣಸಲು ಸಜ್ಜಾಗಿದೆ. ಮುಂಬಯಿಯ ‘ವಾಖೇಂಡೆ ಸ್ಟೇಡಿಯಂ’ ನಲ್ಲಿ ಶುಕ್ರವಾರ 3 ಪಂದ್ಯಗಳ ಸರಣಿಯ ಮೊದಲ ಮುಖಾಮುಖೀ ನಡೆಯಲಿದೆ. 2021ರ ವಿಶ್ವಕಪ್‌ಗೆ ನೇರ ಪ್ರವೇಶ ಪಡೆದುಕೊಳ್ಳಲು ಭಾರತಕ್ಕೆ ಇದು ಮಹತ್ವದ ಸರಣಿ ಆಗಿದೆ. 2020ರ ವರೆಗೆ ವಿಶ್ವ ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರ 4ರಲ್ಲೇ ಉಳಿದುಕೊಳ್ಳಬೇಕಾದ ಒತ್ತಡವಿದೆ. ಹೀಗಾಗಿ ಮುಂದಿನ ಎಲ್ಲ ಪಂದ್ಯಗಳೂ ಭಾರತಕ್ಕೆ ಅತ್ಯಂತ ಮಹತ್ವದ್ದಾಗಿವೆ. 

ಕಳೆದ ವರ್ಷ ಪ್ರವಾಸಿ ಇಂಗ್ಲೆಂಡ್‌ ತಂಡ ವನ್ನು ಮಿಥಾಲಿ ಪಡೆ 2-1 ಅಂತರದಿಂದ ಸೋಲಿಸಿ ಸರಣಿ ಕೈವಶ ಮಾಡಿಕೊಂಡಿತ್ತು. ಹೀಗಾಗಿ ತವರಿನಲ್ಲಿ ಬಲಿಷ್ಠವಾಗಿರುವ‌ ಭಾರತ ಮತ್ತೂಮ್ಮೆ ಸರಣಿ ಕೈವಶ ಮಾಡಿಕೊಂಡೀತು ಎಂಬುದೊಂದು ನಿರೀಕ್ಷೆ. ಆದರೆ ಸವಾಲು ಸುಲಭದ್ದಲ್ಲ.

ತಂಡಕ್ಕೆ ಮಿಥಾಲಿ ಬಲ
ನಾಯಕಿ ಮಿಥಾಲಿ ರಾಜ್‌ ಟಿ20 ತಂಡ ದಿಂದ ಹೊರಗುಳಿದ್ದರೂ ಏಕದಿನದಲ್ಲಿ ಅತ್ಯು ತ್ತಮ ಫಾರ್ಮ್ನಲ್ಲಿದ್ದಾರೆ. ಇತ್ತೀಚೆಗಷ್ಟೇ 200 ಪಂದ್ಯಗಳನ್ನಾಡಿ ದಾಖಲೆ ಬರೆದ ಮಿಥಾಲಿ ನಾಯಕಿಯ ಆಟವನ್ನು ಮುಂದುವರಿಸುವ ನಿರೀಕ್ಷೆ ಎಲ್ಲರದೂ. ಆದರೆ ಭಾರತದ ಬ್ಯಾಟಿಂಗ್‌ ಇನ್‌ಫಾರ್ಮ ಆರಂಭಿಕರಾದ ಸ್ಮತಿ ಮಂಧನಾ ಮತ್ತು ಜೆಮಿಮಾ ರೋಡ್ರಿಗಸ್‌ ಅವರನ್ನು ಹೆಚ್ಚು ಅವಲಂಬಿಸಿದೆ. ಇವರಿಬ್ಬರೂ ನ್ಯೂಜಿ ಲ್ಯಾಂಡ್‌ ಸರಣಿಯಲ್ಲಿ ಭಾರತದ ಗೆಲುವಿನ ರೂವಾರಿಗಳಾಗಿದ್ದರು. ಇವರಿಗೆ ಉಳಿದ ಆಟಗಾರ್ತಿಯರಿಂದಲೂ ಸೂಕ್ತ ಬೆಂಬಲ ಸಿಗಬೇಕಾದುದು ಸದ್ಯದ ಅಗತ್ಯ.

ಉಪನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಗಾಯಾಳಾಗಿ ಕೂಟದಿಂದ ಹೊರಬಿದ್ದಿದ್ದಾರೆ. ಆದರೆ ಇದರಿಂದ ತಂಡಕ್ಕೆ ಹೆಚ್ಚಿನ ಸಮಸ್ಯೆ ಕಾಡಲಿಕ್ಕಿಲ್ಲ. ಇತ್ತೀಚೆಗೆ ಕೌರ್‌ ಫಾರ್ಮ್ ನಲ್ಲಿಲ್ಲದಿರುವುದೇ ಇದಕ್ಕೆ ಕಾರಣ. ಕೌರ್‌ ಬದಲಿಗೆ ಹರ್ಲಿನ್‌ ಡಿಯೋಲ್‌ ಸ್ಥಾನ ಸಂಪಾದಿಸಿದ್ದಾರೆ. 

ಮಧ್ಯಮ ಕ್ರಮಾಂಕದ ವೈಫ‌ಲ್ಯ
ಭಾರತ ಮಧ್ಯಮ ಕ್ರಮಾಂಕದ ಬ್ಯಾಟಿಂಗ್‌ ಸಮಸ್ಯೆಗಳಿಂದ ಕೂಡಿದೆ. ಮಂಧನಾ, ರೋಡ್ರಿಗಸ್‌ ಬಳಿಕ ಯಾವುದೇ ಆಟಗಾರ್ತಿ ಯರು ಹೆಚ್ಚು ಹೊತ್ತು ಕ್ರೀಸ್‌ನಲ್ಲಿ ನಿಲ್ಲುತ್ತಿಲ್ಲ. ಇದಕ್ಕೆ ನ್ಯೂಜಿಲ್ಯಾಂಡ್‌ ಎದುರಿನ ಕೊನೆಯ ಪಂದ್ಯ ಉತ್ತಮ ಉದಾಹರಣೆ. ಅಲ್ಲಿ ಭಾರತ ಕೇವಲ 149ಕ್ಕೆ ಅಲೌಟ್‌ ಆಗಿತ್ತು. 
ಬೌಲಿಂಗ್‌ ವಿಭಾಗದಲ್ಲಿ ಆಲ್‌ರೌಂಡರ್‌ ಜೂಲನ್‌ ಗೋಸ್ವಾಮಿ ತಂಡದ ಅನು ಭವಿ ಆಟಗಾರ್ತಿ. 
ಉಳಿದಂತೆ ಶಿಖಾ ಪಾಂಡೆ, ಮಾನ್ಸಿ ಜೋಶಿ, ದೀಪ್ತಿ ಶರ್ಮ, ಏಕ್ತಾ ಬಿಷ್ಟಾ ಮೋಡಿ ಮಾಡಲು ಸಿದ್ಧರಾಗಿದ್ದಾರೆ.

ಇಂಗ್ಲೆಂಡ್‌ ಹೆಚ್ಚು ಬಲಿಷ್ಠ 
ಇಂಗ್ಲೆಂಡ್‌ ಎಲ್ಲ ವಿಭಾಗಗಳಲ್ಲೂ ಬಲಿಷ್ಠವಾಗಿದ್ದು, ಅಭ್ಯಾಸ ಪಂದ್ಯದ ವೇಳೆ ಒಂದು ಕಂತಿನ ಸಾಮರ್ಥ್ಯ ತೋರ್ಪ ಡಿಸಿದ್ದಾರೆ. ಅಗ್ರ ಕ್ರಮಾಂಕದ ಬ್ಯಾಟ್ಸ್‌ಮನ್‌ಗಳಾದ ಡೇನಿಯಲ್‌ ವ್ಯಾಟ್‌ ಹಾಗೂ ಹೀತರ್‌ ನೈಟ್‌ ಈ ಸರಣಿಯ ಪ್ರಮುಖ ಆಕರ್ಷಣೆಯಾಗ ಬಹುದು. ಆಲ್‌ರೌಂಡರ್‌ ಸೋಫಿ ಎಕಲ್‌ಸ್ಟೋನ್‌, ವೇಗಿ ಅನ್ಯಾ ಶ್ರಬೋಲ್ಸ್‌, ಮಧ್ಯಮ ವೇಗಿ ನಥಾಲಿ ಶಿವರ್‌ ಬೌಲಿಂಗ್‌ ಅಪಾಯಕಾರಿ ಯಾದೀತು.

ಭಾರತ 
ಮಿಥಾಲಿ ರಾಜ್‌ (ನಾಯಕಿ), ಸ್ಮತಿ ಮಂಧನಾ, ಜೆಮಿಮಾ ರೋಡ್ರಿಗಸ್‌, ದೀಪ್ತಿ ಶರ್ಮ, ತನಿಯಾ ಭಾಟಿಯ, ಜೂಲನ್‌ ಗೋಸ್ವಾಮಿ, ಆರ್‌. ಕಲ್ಪನಾ, ಮೋನಾ ಮೆಶ್ರಾಮ್‌, ಏಕ್ತಾ ಬಿಷ್ಟ್, ರಾಜೇಶ್ವರಿ ಗಾಯಕ್ವಾಡ್‌, ಪೂನಮ್‌ ಯಾದವ್‌, ಶಿಖಾ ಪಾಂಡೆ, ಮಾನ್ಸಿ ಜೋಶಿ, ಪೂನಮ್‌ ರಾವತ್‌, ಹರ್ಲಿನ್‌ ಡಿಯೋಲ್‌.

ಇಂಗ್ಲೆಂಡ್‌ 
ಹೀತರ್‌ ನೈಟ್‌ (ನಾಯಕಿ), ಟಾಮಿ ಬೇಮೌಂಟ್‌, ಕ್ಯಾಥರಿನ್‌ ಬ್ರಂಟ್‌, ಕೇಟ್‌ ಕ್ರಾಸ್‌, ಸೋಫಿಯಾ ಡಂಕ್ಲಿ, ಸೋಫಿ ಎಕಲ್‌ಸ್ಟೋನ್‌, ಜಾರ್ಜಿಯಾ ಎಲ್ವಿಸ್‌, ಎಲೆಕ್ಸ್‌ ಹಾಟ್ಲಿ, ಆ್ಯಮಿ ಜೋನ್ಸ್‌, ಲಾರಾ ಮಾರ್ಷ್‌, ನಥಾಲಿ ಶಿವರ್‌, ಅನ್ಯಾ ಶ್ರಬೋಲ್ಸ್‌, ಸಾರಾ ಟಯ್ಲರ್‌, ಲಾರೆನ್‌ ವಿನ್‌ಫೀಲ್ಡ್‌.

ಟಾಪ್ ನ್ಯೂಸ್

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Israel captures Hamas last stronghold rafah

Hamas ಕೊನೇ ಬಲಿಷ್ಠ ನೆಲೆ ಇಸ್ರೇಲ್‌ ವಶಕ್ಕೆ! ರಫಾ ಪೂರ್ವಭಾಗಕ್ಕೆ ನುಗ್ಗಿದ ಇಸ್ರೇಲ್‌ ಪಡೆ

We will make crores of people millionaires: Rahul Gandhi

Election; ಕೋಟ್ಯಂತರ ಜನರನ್ನು ನಾವು ಲಕ್ಷಾಧಿಪತಿ ಮಾಡುತ್ತೇವೆ: ರಾಹುಲ್‌ ಗಾಂಧಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

No plan fro rest to Bumrah

Mumbai Indians; ಬುಮ್ರಾಗೆ ವಿಶ್ರಾಂತಿ: ಯಾವುದೇ ಯೋಜನೆಯಿಲ್ಲ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Agartala; ಫೆಬ್ರವರಿಯಲ್ಲಿ ತ್ರಿಪುರ ಮೈದಾನ ಲೋಕಾರ್ಪಣೆ

Afghan batsman Rahmanullah Gurbaz to return to KKR team

KKR ತಂಡಕ್ಕೆ ಮರಳಲಿರುವ ಅಫ್ಘಾನ್‌ ಬ್ಯಾಟರ್‌ ರಹ್ಮಾನುಲ್ಲ ಗುರ್ಬಾಝ್

Bad weather: KKR team landed in Varanasi

Bad weather: ವಾರಾಣಸಿಯಲ್ಲಿ ಉಳಿದ ಕೆಕೆಆರ್‌ ತಂಡ

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

“ದೇವರಾಜೇಗೌಡ ಬಾಯಿ ಮುಚ್ಚಿಸಲು 15 ಕೋ.ರೂ.’: ಹಾಸನ ಕಾಂಗ್ರೆಸ್‌ ನಾಯಕ ಮಂಜೇಗೌಡ ಆರೋಪ

Ram temple is of no use: SP leader Yadav controversy

Lucknow; ಕೆಲಸಕ್ಕೆ ಬಾರದ ರಾಮ ಮಂದಿರ: ಎಸ್ಪಿ ನಾಯಕ ಯಾದವ್‌ ವಿವಾದ

T20 World Cup: India jersey sold for Rs 6000!

T20 World Cup: ಭಾರತದ ಜೆರ್ಸಿ 6000 ರೂ.ಗೆ ಮಾರಾಟ!

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

ಹೆಣ್ಣು ಭ್ರೂಣ ಹತ್ಯೆಗೆ ಸಂಪೂರ್ಣ ಕಡಿವಾಣ ಬೀಳಲಿ

Patanjali case; Supreme directive to self-declare before advertisement

Patanjali case; ಜಾಹೀರಾತಿಗೆ ಮುನ್ನ ಸ್ವ ಘೋಷಣೆ ಮಾಡಲು ಸುಪ್ರೀಂ ಸೂಚನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.