ಭಾರತದ ಫುಟ್ಬಾಲ್ ದಂತಕತೆ, ದಿಗ್ಗಜ ಆಟಗಾರ ಚುನಿ ಗೋಸ್ವಾಮಿ ವಿಧಿವಶ

1962ರಲ್ಲಿ ಏಷಿಯನ್ ಗೇಮ್ಸ್ ನಲ್ಲಿ ಗೋಸ್ವಾಮಿ ನೇತೃತ್ವದ ಭಾರತದ ಫುಟ್ಬಾಲ್ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕ ಗಳಿಸಿತ್ತು.

Team Udayavani, Apr 30, 2020, 8:35 PM IST

ಭಾರತದ ಫುಟ್ಬಾಲ್ ದಂತಕತೆ, ದಿಗ್ಗಜ ಆಟಗಾರ ಚುನಿ ಗೋಸ್ವಾಮಿ ವಿಧಿವಶ

Chuni Goswami

ಕೋಲ್ಕತಾ: ಭಾರತದ ಫುಟ್ಬಾಲ್ ದಂತಕತೆ, ಖ್ಯಾತ ಆಟಗಾರ ಚುನಿ ಗೋಸ್ವಾಮಿ(82ವರ್ಷ) ದೀರ್ಘಕಾಲದ ಅನಾರೋಗ್ಯದಿಂದ ಗುರುವಾರ ಕೋಲ್ಕತಾದಲ್ಲಿ ವಿಧಿವಶರಾಗಿರುವುದಾಗಿ ವರದಿ ತಿಳಿಸಿದೆ.

1962ರಲ್ಲಿ ಏಷಿಯನ್ ಗೇಮ್ಸ್ ನಲ್ಲಿ ಗೋಸ್ವಾಮಿ ನೇತೃತ್ವದ ಭಾರತದ ಫುಟ್ಬಾಲ್ ತಂಡ ಭರ್ಜರಿ ಗೆಲುವು ಸಾಧಿಸುವ ಮೂಲಕ ಚಿನ್ನದ ಪದಕ ಗಳಿಸಿತ್ತು.

ನರಸಂಬಂಧಿ ರೋಗ, ಡಯಾಬಿಟೀಸ್ ನಿಂದ ಬಳಲುತ್ತಿದ್ದ ಫುಟ್ಬಾಲ್ ಖ್ಯಾತ ಆಟಗಾರ ಗೋಸ್ವಾಮಿ ಅವರು ಹಲವು ತಿಂಗಳುಗಳಿಂದ ಚಿಕಿತ್ಸೆ ಪಡೆಯುತ್ತಿದ್ದರು. ಚಿಕಿತ್ಸೆ ಫಲಕಾರಿಯಾಗದೆ ಚುನಿ ಗೋಸ್ವಾಮಿ ಅವರು ನಿಧನರಾಗಿರುವುದಾಗಿ ಕುಟುಂಬದ ಸದಸ್ಯರು ಖಚಿತಪಡಿಸಿದ್ದಾರೆ.

ದೀರ್ಘಕಾಲದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಗೋಸ್ವಾಮಿ ಅವರು ಹೃದಯ ಸ್ತಂಭನದಿಂದ ಗುರುವಾರ ವಿಧಿವಶರಾಗಿದ್ದಾರೆ ಎಂದು ಕುಟುಂಬದ ಮೂಲಗಳು ತಿಳಿಸಿವೆ. ಗೋಸ್ವಾಮಿ 50 ಅಂತಾರಾಷ್ಟ್ರೀಯ ಪಂದ್ಯಗಳಲ್ಲಿ ಭಾರತವನ್ನು ಪ್ರತಿನಿಧಿಸಿದ್ದರು. ಸುಮಾರು 200 ಗೋಲುಗಳನ್ನು ಗಳಿಸಿದ್ದ ಕೀರ್ತಿ ಚುನಿ ಗೋಸ್ವಾಮಿ ಅವರದ್ದು. 25 ಗೋಲು, ಐಎಫ್ ಎ ಪದಕ, ದುರಾಂಡ್ ಕಪ್ ನಲ್ಲಿ 18 ಗೋಲು, ರೋವರ್ಸ್ ಕಪ್ ನಲ್ಲಿ 11 ಗೋಲು ಹಾಗೂ ಡಾ.ಎಚ್ ಕೆ ಮುಖರ್ಜಿ ಶೀಲ್ಡ್ ನಲ್ಲಿ ಒಂದು ಗೋಲು ಗಳಿಸಿದ್ದ ಕೀರ್ತಿ ಗೋಸ್ವಾಮಿ ಅವರದ್ದಾಗಿದೆ.

ತಮ್ಮ 8ನೇ ವಯಸ್ಸಿಗೆ ಜ್ಯೂನಿಯರ್ ತಂಡದಲ್ಲಿ ಫುಟ್ಬಾಲ್ ಆಟಕ್ಕೆ ಸೇರಿಕೊಂಡಿದ್ದರು. ಕ್ರಿಕೆಟ್ ಕ್ಷೇತ್ರದಲ್ಲಿಯೂ ಕೂಡಾ ಹಲವು ಸಾಧನೆಗೈದ ಹೆಗ್ಗಳಿಕೆ ಗೋಸ್ವಾಮಿಯದ್ದಾಗಿದೆ. ಬಂಗಾಳದ ಅವಿಭವಿತ (ಈಗಿನ ಬಾಂಗ್ಲಾದೇಶ್) ಕಿಶೋರ್ ಗಂಜ್ ನಲ್ಲಿ ಜನಿಸಿದ್ದ ಗೋಸ್ವಾಮಿ ಅವರು 1971-72ರಲ್ಲಿ ಬಂಗಾಳದ ರಣಜಿ ಸೀಸನ್ ಕ್ಯಾಪ್ಟನ್ ಆಗಿದ್ದರು. 1963ರಲ್ಲಿ ಗೋಸ್ವಾಮಿ ಅರ್ಜುನ್ ಪ್ರಶಸ್ತಿಯನ್ನು ಡಿಗೇರಿಸಿಕೊಂಡಿದ್ದರು. ಅಷ್ಟೇ ಅಲ್ಲ 1983ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಪ್ರಶಸ್ತಿಗೂ ಭಾಜನರಾಗಿದ್ದರು.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.