ಸರಣಿ ಗೆಲುವಿನ ನಿರೀಕ್ಷೆಯಲ್ಲಿ ಭಾರತ


Team Udayavani, Aug 3, 2017, 7:20 AM IST

india.jpg

ಕೊಲಂಬೊ: ಆರಂಭಿಕ ಕೆಎಲ್‌ ರಾಹುಲ್‌ ಅಗಮನದಿಂದ ಬಲಿಷ್ಠಗೊಂಡಿರುವ ಭಾರತೀಯ ತಂಡವು ಗುರುವಾರದಿಂದ ಆರಂಭವಾಗುವ ಶ್ರೀಲಂಕಾ ವಿರುದ್ಧದ ದ್ವಿತೀಯ ಟೆಸ್ಟ್‌ ಪಂದ್ಯವನ್ನು ಗೆದ್ದು ಸರಣಿ ಗೆಲುವಿನ ನಿರೀಕ್ಷೆಯಲ್ಲಿದೆ. 

ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ದಾಖಲಿಸಿರುವ ಭಾರತವು ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಸ್ಥಾಪಿಸಿದೆ. ದ್ವಿತೀಯ ಪಂದ್ಯವನ್ನು ಗೆದ್ದರೆ ಸರಣಿ ತನ್ನದಾಗಿಸಿಕೊಳ್ಳಲಿದೆ. ಒಂದು ವೇಳೆ ಶ್ರೀಲಂಕಾ ಗೆದ್ದರೆ  ಮೂರನೇ ಪಂದ್ಯ ನಿರ್ಣಾಯಕವೆನಿಸಲಿದೆ.

ರಾಹುಲ್‌ ಅವರ ಅನುಪಸ್ಥಿತಿಯಲ್ಲಿ ಮೊದಲ ಟೆಸ್ಟ್‌ ಆಡಿದ್ದ ಭಾರತವು 304 ರನ್ನುಗಳಿಂದ ಜಯ ಸಾಧಿಸಿತ್ತು. ಆರಂಭಿಕ ಶಿಖರ್‌ ಧವನ್‌ ಅವರು ಮೊದಲ ಇನ್ನಿಂಗ್ಸ್‌ನಲ್ಲಿ 190 ರನ್‌ ಸಿಡಿಸಿ ರಾಹುಲ್‌ ಅವರ ಅನುಪಸ್ಥಿತಿಯ ಲಾಭ ಪಡೆದಿದ್ದರು. ದ್ವಿತೀಯ ಇನ್ನಿಂಗ್ಸ್‌ನಲ್ಲಿ ಇನ್ನೋರ್ವ ಆರಂಭಿಕ ಅಭಿನವ್‌ ಮುಕುಂದ್‌ 81 ರನ್‌ ಮಾಡಿದ್ದರು. ಆದರೆ ಇದೀಗ ರಾಹುಲ್‌ ಸೇರ್ಪಡೆಯಾಗಿದ್ದರಿಂದ ಧವನ್‌ ಅಥವಾ ಮುಕುಂದ್‌ ಅವರಲ್ಲಿ ಒಬ್ಬರು ಹೊರನಡೆಯಬೇಕಾಗಿದೆ.

ಎರಡು ವರ್ಷಗಳ ಹಿಂದೆ ಭಾರತ ಇಲ್ಲಿ ಆಡಿದಾಗಲೂ ಆರಂಭಿಕ ಆಟಗಾರರ ಆಯ್ಕೆ ಬಗ್ಗೆ ಸಮಸ್ಯೆಯನ್ನು ಎದುರಿಸಿತ್ತು. ಧವನ್‌ ಮತ್ತು ಮುರಳಿ ವಿಜಯ್‌ ಗಾಯದಿಂದಾಗಿ ತಂಡದಿಂದ ಹೊರಬಿದ್ದಾಗ ತನ್ನ ಎರಡನೇ ಸರಣಿ ಆಡಿದ ಯುವ ಆಟಗಾರ ರಾಹುಲ್‌ ಅವರು ಪೂಜಾರ ಜತೆ ಇನ್ನಿಂಗ್ಸ್‌ ಆರಂಭಿಸಿದ್ದರು.  ಹುಲ್ಲುಹಾಸಿದ ಪಿಚ್‌ನಲ್ಲಿ ಅಮೋಘ ಬ್ಯಾಟಿಂಗ್‌ ಪ್ರದರ್ಶಿಸಿದ್ದ ಪೂಚಾರ ಮೊದಲ ಇನ್ನಿಂಗ್ಸ್‌ನಲ್ಲಿ ಅಜೇಯ 145 ರನ್‌ ಹೊಡೆ ದಿದ್ದರು. ಇದರಿಂದಾಗಿ ಭಾರತ ಜಯ ಸಾಧಿಸಿತ್ತು.

ಆಬಳಿಕ ಪೂಜಾರ ಮೂರನೇ ಕ್ರಮಾಂಕದಲ್ಲಿ ಆಡುತ್ತಿದ್ದಾರೆ. ಪೂಜಾರ ಮೊದಲ ಟೆಸ್ಟ್‌ನಲ್ಲಿ ಗಮ ನಾರ್ಹ ಬ್ಯಾಟಿಂಗ್‌ ಪ್ರದರ್ಶಿಸಿದ್ದರು. ಕೊಲಂಬೊ ಟೆಸ್ಟ್‌ ಪೂಜಾರ ಅವರ 50ನೇ ಟೆಸ್ಟ್‌ ಆಗಿದೆ. ಆಶ್ಚರ್ಯವೆಂಬಂತೆ ಆರ್‌. ಅಶ್ವಿ‌ನ್‌ ಗಾಲೆಯಲ್ಲಿ ತನ್ನ 50ನೇ ಟೆಸ್ಟ್‌ ಆಡಿದ್ದರು.

ಭಾರತ 2015ರಲ್ಲಿ ಇಲ್ಲಿ ನಡೆದ ಪಂದ್ಯದಲ್ಲಿ ಜಯ ಸಾಧಿಸಿತ್ತು. ಅದಕ್ಕಿಂತ ಮೊದಲು 1993ರಲ್ಲಿ ಮೊಹಮ್ಮದ್‌ ಅಜರುದ್ದೀನ್‌ ನಾಯಕತ್ವದಡಿ ಭಾರತ 235 ರನ್ನುಗಳಿಂದ ಜಯ ಸಾಧಿಸಿತಲ್ಲದೇ ಸರಣಿಯನ್ನು 1-0 ಅಂತರದಿಂದ ಗೆದ್ದುಕೊಂಡಿತ್ತು. ಈ ಎರಡು ಸರಣಿ ಗೆಲುವಿನ ಅಂತರ 22 ವರ್ಷ ಎಂಬುದನ್ನು ಕೋಚ್‌ ರವಿಶಾಸಿŒ ತಂಡದ ಸದಸ್ಯರಿಗೆ ಮನದಟ್ಟು ಮಾಡಿದ್ದಾರೆ. 

2015ರಲ್ಲಿ ಅಷ್ಟೊಂದು ಬಲಿಷ್ಠವಲ್ಲದ  ಶ್ರೀಲಂಕಾ ತಂಡವನ್ನು ಎದುರಿಸಿ  ಭಾರತ ಜಯಭೇರಿ ಬಾರಿಸಿತ್ತು. ಈ ಬಾರಿ ಕೊಹ್ಲಿ ಪಡೆ ಸರಣಿ ಗೆಲುವಿನ ಪುನರಾವರ್ತನೆಗೈದು ಕೋಚ್‌ ಅವರ ಮಾತಿಗೆ ಬೆಲೆ ಕೊಡಲು ಪ್ರಯತ್ನಿಸಬೇಕಾಗಿದೆ.
2015ಕ್ಕೆ ಹೋಲಿಸಿದರೆ ಈ ಬಾರಿ ಭಾರತ ಗೆಲ್ಲುವ ಸಾಧ್ಯತೆ ಹೆಚ್ಚಾಗಿದೆ. ಮೊದಲ ಟೆಸ್ಟ್‌ ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ ಬ್ಯಾಟಿಂಗ್‌, ಬೌಲಿಂಗ್‌ನಲ್ಲಿಯೂ ಬಲಿಷ್ಠವಾಗಿದೆ. ಇಲ್ಲಿನ ಪಿಚ್‌ ಗಾಲೆ  ಪಿಚ್‌ನ ಹಾಗೇ ಇರುವುದು ಭಾರತೀಯರಿಗೆ ಖುಷಿ ನೀಡಿದೆ. 

ಶ್ರೀಲಂಕಾಕ್ಕೆ ಹೋಲಿಸಿದರೆ ಭಾರತ ಎಲ್ಲ ವಿಭಾಗದಲ್ಲಿಯೂ ಬಲಿಷ್ಠವಾಗಿದೆ. ರ್‍ಯಾಂಕಿಂಗ್‌ನಲ್ಲಿ ಭಾರತ ಅಗ್ರಸ್ಥಾನದಲ್ಲಿದ್ದರೆ ಶ್ರೀಲಂಕಾ 7ನೇ ಸ್ಥಾನದಲ್ಲಿದೆ. ಮೊದಲ ಟೆಸ್ಟ್‌ ಸೋತಿರುವ ಶ್ರೀಲಂಕಾ ಈ ಪಂದ್ಯದಲ್ಲಾದರೂ ತಿರುಗೇಟು ನೀಡಲು ಪ್ರಯತ್ನಿಸಬೇಕಾಗಿದೆ.

ಚಂಡಿಮಾಲ್‌ ಲಭ್ಯ: ನಾಯಕ ದಿನೇಶ್‌ ಚಂಡಿ ಮಾಲ್‌ ನ್ಯುಮೋನಿಯದಿಂದ ಚೇತರಿಸಿಕೊಂಡಿದ್ದು ದ್ವಿತೀಯ ಟೆಸ್ಟ್‌ಗೆ ಲಭ್ಯರಿದ್ದಾರೆ. ಅವರ ಸೇರ್ಪಡೆ ಯಿಂದ ಶ್ರೀಲಂಕಾದ ಬ್ಯಾಟಿಂಗ್‌ ಬಲಿಷ್ಠವಾಗಲಿದೆ. 2015ರಲ್ಲಿ ಗಾಲೆಯಲ್ಲಿ ನಡೆದ ಟೆಸ್ಟ್‌ನಲ್ಲಿ ಭಾರತೀಯ ದಾಳಿಯನ್ನು ಪುಡಿಗಟ್ಟಿದ್ದ ಚಂಡಿಮಾಲ್‌ 169 ಎಸೆತಗಳಿಂದ 162 ರನ್‌ ಸಿಡಿಸಿದ್ದರು. ಈ ಪಂದ್ಯದಲ್ಲಿಯಾದರೂ ಚಂಡಿಮಾಲ್‌ ಭಾರತ ವಿರುದ್ಧ ಸ್ಫೋಟಕ ಆಟವಾಡುವ ನಿರೀಕ್ಷೆಯನ್ನು ಶ್ರೀಲಂಕಾ ಇಟ್ಟುಕೊಂಡಿದೆ.

ಮೊದಲ ಟೆಸ್ಟ್‌ನಲ್ಲಿ ಫೀಲ್ಡಿಂಗ್‌ ಮಾಡುವ ವೇಳೆ ಎಡ ಹೆಬ್ಬೆರಳಿಗೆ ಗಾಯ ಮಾಡಿಕೊಂಡಿದ್ದ ಆಸೇಲ ಗುಣರತ್ನೆ ಅವರ ಬದಲಿಗೆ ಅನುಭವಿ ಬ್ಯಾಟ್ಸ್‌ಮನ್‌ ಲಹಿರು ತಿರಿಮನ್ನೆ ಅವರನ್ನು ಕೂಡ ತಂಡಕ್ಕೆ ಕರೆಸಿಕೊಳ್ಳಲಾಗಿದೆ. ಗುಣರತ್ನೆ ಸರಣಿಯ ಇನ್ನುಳಿದ ಪಂದ್ಯಗಳಿಂದ ಹೊರಬಿದ್ದಿದ್ದಾರೆ. ತಿರಿಮನ್ನೆ ಈ ಹಿಂದೆ 2016ರಲ್ಲಿ ಇಂಗ್ಲೆಂಡ್‌ ವಿರುದ್ಧ ಶ್ರೀಲಂಕಾ ಪರ ಟೆಸ್ಟ್‌ ಆಡಿದ್ದರು. ಮೊದಲ ಟೆಸ್ಟ್‌ಗೆ ಮುಂಚಿತವಾಗಿ ಕೊಲಂಬೊದಲ್ಲಿ ನಡೆದ ಅಭ್ಯಾಸ ಪಂದ್ಯದಲ್ಲಿ ತಿರಿಮನ್ನೆ 59 ರನ್‌ ಹೊಡೆದಿದ್ದರು. 

ರಂಗನ ಹೆರಾತ್‌ ಅವರ ಬದಲಿಗೆ ಎಡಗೈ ಸ್ಪಿನ್ನರ್‌ ಲಕ್ಷಣ್‌ ಸಂಡಕನ್‌ ಅವರನ್ನು ತಂಡಕ್ಕೆ ಸೇರಿಸಿಕೊಳ್ಳಲಾಗಿದೆ. ಗಾಲೆಯಲ್ಲಿ ಪ್ರಭಾರ ನಾಯಕರಾಗಿ ಕರ್ತವ್ಯ ನಿಭಾಯಿಸಿದ್ದ ಹೆರಾತ್‌ ಕೂಡ ಫೀಲ್ಡಿಂಗ್‌ ಮಾಡುವ ವೇಳೆ ಎಡಕೈಗೆ ಗಾಯ ಮಾಡಿಕೊಂಡಿದ್ದರು. ಸ್ಕ್ಯಾನ್‌ನಲ್ಲಿ ಯಾವುದೇ ಮುರಿತ ಆಗಿರುವ ಸೂಚನೆ ಸಿಕ್ಕಿಲ್ಲ. ಆದರೆ ನೋವಿನಿಂದಾಗಿ ಅವರು ಗಾಲೆಯಲ್ಲಿ ದ್ವಿತೀಯ ಇನ್ನಿಂಗ್ಸ್‌ನಲ್ಲಿ ಬ್ಯಾಟಿಂಗ್‌ ಮಾಡಿರಲಿಲ್ಲ. ಅವರ ಫಿಟ್‌ನೆಸ್‌ ಪರೀಕ್ಷೆ ನಡೆಸಿದ ಬಳಿಕ ಆಟವಾಡುವ ಬಳಗಕ್ಕೆ ಸೇರಿಸಿಕೊಳ್ಳುವ ಸಾಧ್ಯತೆಯಿದೆ.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

ಮೊಣಕಾಲಿನ ಗಾಯಕ್ಕೆ ಶಸ್ತ್ರಚಿಕಿತ್ಸೆ ಅಗತ್ಯ ಒಲಿಂಪಿಕ್ಸ್‌ನಿಂದ ಹೊರಬಿದ್ದ ಶ್ರೀಶಂಕರ್‌

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

Virat Kohli: ಜೈಪುರದಲ್ಲಿ ಕೊಹ್ಲಿ ಪ್ರತಿಮೆ

26

ಅಮೆರಿಕ ತಂಡಕ್ಕೆ ಸ್ಟುವರ್ಟ್‌ ಕೋಚ್‌!

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.