ಬಾಕ್ಸಿಂಗ್‌ ಡೇ ಟೆಸ್ಟ್‌: ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಬದಲಾವಣೆ ಅನಿವಾರ್ಯ


Team Udayavani, Dec 21, 2020, 3:32 PM IST

ಬಾಕ್ಸಿಂಗ್‌ ಡೇ ಟೆಸ್ಟ್‌: ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಬದಲಾವಣೆ ಅನಿವಾರ್ಯ

ಹೊಸದಿಲ್ಲಿ: ಆಸ್ಟ್ರೇಲಿಯ ವಿರುದ್ಧದ 4 ಪಂದ್ಯಗಳ ಟೆಸ್ಟ್‌ ಸರಣಿಯಲ್ಲಿ ಭಾರತ ಮೊದಲ ಪಂದ್ಯವನ್ನು ಅತ್ಯಂತ ಹಿನಾಯವಾಗಿ ಸೋತು ಸರಣಿಯಲ್ಲಿ 0-1 ಹಿನ್ನಡೆ ಅನುಭವಿಸಿದ್ದು ಮುಂದಿನ ಬಾಕ್ಸಿಂಗ್‌ ಡೇ ಪಂದ್ಯದಲ್ಲಿ ಭಾರತ ಎಚ್ಚರಿಕೆಯ ಹೆಜ್ಜೆಯನ್ನಿಡುವುದು ಅನಿವಾರ್ಯವಾಗಿದೆ. ಇದಕ್ಕಾಗಿ ಭಾರತ ತಂಡದಲ್ಲಿ ಹಲವು ಬದಲಾವಣೆ ಸಂಭವಿಸುವುದು ಇಲ್ಲಿ ನಿರೀಕ್ಷಿತ.

ರಾಹುಲ್‌ ಸೇರ್ಪಡೆ

ಕಳಪೆ ಲಯದಲ್ಲಿರುವ ಆರಂಭಿಕನಾದ ಪೃಥ್ವಿ ಶಾ ಅವರನ್ನು ಮುಂದಿನ ಪಂದ್ಯಗಳಿಗೆ ಕೈ ಬಿಟ್ಟು ಈ ಸ್ಥಾನಕ್ಕೆ ಕನ್ನಡಿಗ ಕೆ. ಎಲ್‌. ರಾಹುಲ್‌ಗೆ ಅವಕಾಶ ನೀಡುವ ಸಾಧ್ಯತೆಯಿದೆ. ಏಕೆಂದರೆ ಆಸೀಸ್‌ ನೆಲದಲ್ಲಿ ರಾಹುಲ್‌ ಉತ್ತಮ ಬ್ಯಾಟಿಂಗ್‌ ನಡೆಸಿದ್ದಾರೆ. ಜತೆಗೆ ರಾಹುಲ್‌ ಸೇರ್ಪಡೆಯಿಂದ ಭಾರತಕ್ಕೆ ಉತ್ತಮ ಆರಂಭಿಕ ಜೋಡಿಯೂ ಲಭಿಸಿದಂತಾಗುತ್ತದೆ. ಐಪಿಎಲ್‌ನಲ್ಲಿಯೂ ಅಗರ್ವಾಲ್‌-ರಾಹುಲ್‌ ಜೋಡಿ ಉತ್ತಮ ಜತೆಯಾಟ ನಡೆಸಿದೆ. ಅದರಂತೆ ಇಲ್ಲಿಯೂ ಈ ಜೋಡಿಯಿಂದ ತಂಡಕ್ಕೆ ಉತ್ತಮ ಆರಂಭ ಸಿಗುವಲ್ಲಿ ಯಾವುದೇ ಅನುಮಾನವಿಲ್ಲ ಎಂಬುದು ಅನೇಕ ಮಾಜಿ ಕ್ರಿಕೆಟಿಗರ ಅಭಿಪ್ರಾಯವೂ ಆಗಿದೆ.

ಗಿಲ್‌ಗೆ ಅವಕಾಶ

ಮೊದಲ ಪಂದ್ಯವನ್ನಾಡಿದ ನಾಯಕ ವಿರಾಟ್‌ ಕೊಹ್ಲಿ ಪಿತೃತ್ವ ರಜೆಯಲ್ಲಿ ಭಾರತಕ್ಕೆ ವಾಪಸಾಗಲಿದ್ದು ಮುಂದಿನ ಪಂದ್ಯಗಳಿಗೆ ಅಲಭ್ಯರಾಗಿದ್ದಾರೆ. ಈ ಸ್ಥಾನಕ್ಕೆ ಯುವ ಆಟಗಾರ ಶುಭಮನ್‌ ಗಿಲ್‌ಗೆ ಅವಕಾಶ ಸಿಗಲಿದೆಯಾ ಎಂಬ ಪ್ರಶ್ನೆಯಿದೆ. ಅಭ್ಯಾಸ ಪಂದ್ಯದಲ್ಲಿ ಗಿಲ್‌ ಉತ್ತಮ ಪ್ರದರ್ಶನವನ್ನು ತೋರಿದ್ದಾರೆ. ಜತೆಗೆ ನಿಂತು ಆಡುವ ಕೌಶಲವೂ ಗಿಲ್‌ ಅವರಲ್ಲಿದೆ. ಪ್ರಥಮ ದರ್ಜೆ ಮತ್ತು ರಣಜಿ ಕೂಟದಲ್ಲಿ ಗಿಲ್‌ ತೋರಿದ ಬ್ಯಾಟಿಂಗ್‌ ಪ್ರದರ್ಶನವೇ ಇದಕ್ಕೆ ಉತ್ತಮ ನಿದರ್ಶನ. ಆದ್ದರಿಂದ ವಿರಾಟ್‌ ಸ್ಥಾನಕ್ಕೆ ಗಿಲ್‌ ಅವರನ್ನು ಹೊರತು ಪಡಿಸಿ ಮತ್ಯಾವ ಆಟಗಾರನ ಆಯ್ಕೆ ಅಷ್ಟು ನ್ಯಾಯ ಒದಿಸುವ ಸಾಧ್ಯತೆ ತೀರ ಕಡಿಮೆ ಎಂದರು ತಪ್ಪಾಗಲಾರದು.

ರಹಾನೆಗೆ ಹೆಚ್ಚಿದ ನಾಯಕತ್ವದ ಜವಾಬ್ದಾರಿ

ವಿರಾಟ್‌ ಅನುಪಸ್ಥಿತಿಯಲ್ಲಿ ನಾಯಕತ್ವದ ಜವಾಬ್ದಾರಿ ಹೊತ್ತುಕೊಂಡ ಅಜಿಂಕ್ಯ ರಹಾನೆ ಮೊದಲ ಪಂದ್ಯದ ಸೋಲಿನಿಂದ ಹೊರಬಂದು ಟೀಕೆಗಳ ಬಗ್ಗೆ ತೆಲೆಕೆಡಿಸಿಕೊಳ್ಳದೆ ಮುಂದಿನ ಪಂದ್ಯಕ್ಕೆ ಮಾನಸಿಕವಾಗಿ ಸದೃಡತೆಯಿಂದ ಸಜ್ಜಾಗಬೇಕಿದೆ. ತಂಡದ ಆಟಗಾರರಲ್ಲಿ ಆತ್ಮವಿಶ್ವಾಸದ ನುಡಿಗಳನ್ನಾಡಿ ತಂಡವನ್ನು ಮುನ್ನಡೆಸಬೇಕಿದೆ. ಜತೆಗೆ ಬ್ಯಾಟಿಂಗ್‌ನಲ್ಲಿಯೂ ಶ್ರೇಷ್ಠ ಪ್ರದರ್ಶನ ತೋರಬೇಕಿದೆ.

ಇದನ್ನೂ ಓದಿ:ಗೆಲ್ಲಬೇಕಾದರೆ ಈ ತಕ್ಷಣ ರಾಹುಲ್ ದ್ರಾವಿಡ್‌ರನ್ನು ಆಸ್ಟ್ರೇಲಿಯಕ್ಕೆ ಕಳಿಸಿಕೊಡಿ!

ಜಡೇಜ ಮರುಪ್ರವೇಶ?

ತಂಡದಲ್ಲಿ ಕಾಡುತ್ತಿರುವ ಆಲ್‌ರೌಂಡರ್‌ ಸಮಸ್ಯೆಗೆ ರವೀಂದ್ರ ಜಡೇಜ ಆಯ್ಕೆ ಉತ್ತಮ ಪರಿಹಾರವಾಗಿದೆ. ಗಾಯದ ಸಮಸ್ಯೆಯಿಂದ ಮೊದಲ ಪಂದ್ಯಕ್ಕೆ ಅಲಭ್ಯರಾಗಿದ್ದ ಜಡೇಜ ಇದೀಗ ಸಂಪೂರ್ಣ ಚೇತರಿಸಿಕೊಂಡಿದ್ದಾರೆ. ಆದ್ದರಿಂದ ಮುಂದಿನ ಪಂದ್ಯಕ್ಕೆ ಹನುಮ ವಿಹಾರಿ ಬದಲು ಜಡೇಜ ಅವರು ಅವಕಾಶ ಪಡೆಯುವುದು ಬಹುತೇಕ ಖಾತ್ರಿ. ಜಡೇಜ ಲಭ್ಯತೆಯಿಂದ ಸ್ಪಿನ್‌ ಬೌಲಿಂಗ್‌ ಹಾಗೂ ಬ್ಯಾಟಿಂಗ್‌ ವಿಭಾಗ ಮತ್ತಷ್ಟು ಸದೃಢಗೊಳ್ಳಲಿದೆ.

ಶಮಿ ಸ್ಥಾನಕ್ಕೆ ಸಿರಾಜ್‌ ಸೂಕ್ತ

ಕಳೆದ ಪಂದ್ಯದಲ್ಲಿ ಗಯಾಳಾಗಿ ಟೆಸ್ಟ್‌ ಸರಣಿಯಿಂದ ಹೊರಬಿದ್ದ ಮೊಹಮ್ಮದ್‌ ಶಮಿ ಸ್ಥಾನಕ್ಕೆ ಸಿರಾಜ್‌ ಅವರನ್ನು ಆಡಿಸಿದರೆ ಉತ್ತಮ. ಅಭ್ಯಾಸ ಪಂದ್ಯದಲ್ಲಿ ಸಿರಾಜ್‌ ಉತ್ತಮ ಪ್ರದರ್ಶನ ತೋರಿದ್ದು ತಂಡದ ಆತ್ಮವಿಶ್ವಾಸ ಮೂಡಿಸಿದ್ದಾರೆ. ಉಳಿದಂತೆ ವಿಕೆಟ್‌ ಕೀಪರ್‌ ಕಮ್‌ ಬ್ಯಾಟ್ಸ್‌ಮನ್‌ ವೃದ್ಧಿಮಾನ್‌ ಸಾಹಾ ಬದಲಿಗೆ ಪಂತ್‌ಗೆ ಅವಕಾಶ ನೀಡಿದರೂ ತಪ್ಪಾಗಲಾರದು. ಪಂತ್‌ ಕಳೆದ ಆಸೀಸ್‌ ಸರಣಿಯಲ್ಲಿ ಉತ್ತಮ ಬ್ಯಾಟಿಂಗ್‌ ನಡೆಸಿದ್ದಾರೆ ಜತೆಗೆ ಅಭ್ಯಾಸ ಪಂದ್ಯದಲ್ಲಿಯೂ ಶತಕ ಸಿಡಿಸಿ ಮಿಂಚಿದ್ದರು. ಸಾಹಾ ಕೀಪಿಂಗ್‌ ಹೊರತುಪಡಿಸಿ ಬ್ಯಾಟಿಂಗ್‌ನಲ್ಲಿ ಘೋರ ವೈಫ‌ಲ್ಯ ಅನುಭವಿಸುತ್ತಿದ್ದು ತಂಡಕ್ಕೆ ಹಿನ್ನಡೆಯಾಗಿದೆ ಆದ್ದರಿಂದ ಪಂತ್‌ಗೆ ಆಡುವ ಅವಕಾಶ ನೀಡಬೇಕೆನ್ನುವುದು ಹಲವರ ಅಭಿಪ್ರಾಯವಾಗಿದೆ.

ಗೆಲ್ಲಲೇ ಬೇಕಾದ ಒತ್ತಡದಲ್ಲಿ ಭಾರತ

ನಾಲ್ಕು ಪಂದ್ಯಗಳ ಸರಣಿಯಲ್ಲಿ ಭಾರತ ಈಗಾಗಲೆ ಒಂದು ಪಂದ್ಯವನ್ನು ಸೋತಿದೆ. ಮುಂದಿನ ಪಂದ್ಯಕ್ಕೆ ವಿರಾಟ್‌, ಅನುಪಸ್ಥಿತಿ. ಕ್ವಾರಂಟೈನ್‌ ವಾಸದಲ್ಲಿರುವ ರೋಹಿತ್‌ ಶರ್ಮ ಕೂಡ ದ್ವಿತೀಯ ಟೆಸ್ಟ್‌ ಆಡುವುದ ಅನುಮಾನ ಆದ್ದರಿಂದ ಭಾರತಕ್ಕೆ ಅನುಭವಿ ಆಟಗಾರರ ಕೊರತೆ ಕಾಡುವುದರಲ್ಲಿ ಯಾವುದೇ ಅನುಮಾನವಿಲ್ಲ. ಈಗಾಗಲೇ ಸೋಲಿಗೆ ಅನೇಕ ಕ್ರಿಕೆಟಿಗರಿಂದ ದೊಡ್ಡಮಟ್ಟದಲ್ಲಿ ಟೀಕೆಯೂ ವ್ಯಕ್ತವಾಗುತ್ತಿದೆ.

ಇದೆಲ್ಲವನ್ನು ಮೆಟ್ಟಿನಿಂತು ಭಾರತ ಹೊಸ ಹುರುಪಿನೊಂದಿಗೆ ಮುಂದಿನ ಪಂದ್ಯದಲ್ಲಿ ಶಕ್ತಿ ಮೀರಿ ಪ್ರದರ್ಶನ ತೋರುವ ಮೂಲಕ ಎದುರಾಳಿಗಳ ವಿರುದ್ಧ ತಿರುಗಿ ಬೀಳಬೇಕಿದೆ. ಒಂದೊಮ್ಮೆ ಭಾರತ ಈ ಪಂದ್ಯವನ್ನು ಸೋತರೆ ಸರಣಿ ಗೆಲ್ಲುವ ಹೋರಾಟವೊಂದನ್ನು ಅರ್ಧ ದಾರಿಲ್ಲಿಯೇ ಕೊನೆಗೊಳಿಸಲಿದೆ ಎನ್ನಲಡ್ಡಿಯಿಲ್ಲ. ಗೆದ್ದರೆ ಹೋರಾಟ ಜಾರಿಯಲ್ಲಿರಲಿದೆ

ಟಾಪ್ ನ್ಯೂಸ್

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

it

Congress ಬಳಿಕ ಸಿಪಿಐಗೂ 11 ಕೋಟಿ ರೂ.ಬಾಕಿಗಾಗಿ ಐಟಿ ನೋಟಿಸ್

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

ಸಿರಿಯಾದ ಮೇಲೆ ಇಸ್ರೇಲ್ ವೈಮಾನಿಕ ದಾಳಿ… 5 ಹಿಜ್ಬುಲ್ ಸದಸ್ಯರು ಸೇರಿ 38 ಮಂದಿ ಹತ

20-

Crime: ಗುದದ್ವಾರಕ್ಕೆ ಗಾಳಿ: ಸ್ನೇಹಿತನ ದುರ್ಮರಣ: ಕೃತ್ಯವೆಸಗಿದಾತನ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

1-kkr

Kolkata Raiders ಕೋಚ್‌ ಬಗ್ಗೆ ಆಟಗಾರ ಡೇವಿಡ್‌ ವೀಸ್‌ ಆರೋಪ

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

partner kannada movie

Kannada Cinema; ಸ್ನೇಹಿತರ ಸುತ್ತ ‘ಪಾರ್ಟ್ನರ್‌’: ಟ್ರೇಲರ್‌, ಆಡಿಯೋದಲ್ಲಿ ಹೊಸಬರ ಚಿತ್ರ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.