ಕಾನ್ಪುರದಲ್ಲಿ ಕೇನ್ ಪಡೆ ಸವಾಲು: ಟಾಸ್ ಗೆದ್ದ ಭಾರತ; ಶ್ರೇಯಸ್ ಅಯ್ಯರ್ ಪದಾರ್ಪಣೆ
Team Udayavani, Nov 25, 2021, 9:04 AM IST
ಕಾನ್ಪುರ: ಟಿ20 ಸರಣಿ ವಿಜಯದ ಬಳಿಕ ಭಾರತ ತಂಡ ಟೆಸ್ಟ್ ಸರಣಿಗೆ ಸಿದ್ದವಾಗಿದೆ. ವಿಶ್ವ ಚಾಂಪಿಯನ್ ನ್ಯೂಜಿಲ್ಯಾಂಡ್ ವಿರುದ್ಧ ಕಾನ್ಪುರದ ಗ್ರೀನ್ ಪಾರ್ಕ್ ಸ್ಟೇಡಿಯಂನಲ್ಲಿ ಸರಣಿಯ ಮೊದಲ ಟೆಸ್ಟ್ ಪಂದ್ಯ ಆರಂಭವಾಗಿದೆ. ಟಾಸ್ ಗೆದ್ದ ಅಜಿಂಕ್ಯ ರಹಾನೆ ಮೊದಲು ಬ್ಯಾಟಿಂಗ್ ಮಾಡಲು ನಿರ್ಧರಿಸಿದ್ದಾರೆ.
ನಾಯಕ ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಅಜಿಂಕ್ಯ ರಹಾನೆ ತಂಡವನ್ನು ಮುನ್ನಡೆಸುತ್ತಿದ್ದಾರೆ. ಯುವ ಆಟಗಾರ ಶ್ರೇಯಸ್ ಅಯ್ಯರ್ ಟೆಸ್ಟ್ ಕ್ರಿಕೆಟ್ ಗೆ ಪದಾರ್ಪಣೆ ಮಾಡುತ್ತಿದ್ದು, ದಿಗ್ಗಜ ಸುನೀಲ್ ಗಾವಸ್ಕರ್ ಅವರಿಂದ ಕ್ಯಾಪ್ ಪಡೆದರು.
ಕೆ.ಎಲ್. ರಾಹುಲ್ ಗಾಯಾಳಾಗಿ ಹೊರಗುಳಿದಿರುವುದರಿಂದ ಮಾಯಾಂಕ್ ಅಗರ್ವಾಲ್-ಶುಭಮನ್ ಗಿಲ್ ಜೋಡಿ ಇನ್ನಿಂಗ್ಸ್ ಆರಂಭಿಸಲಿದೆ. ಚೇತೇಶ್ವರ್ ಪೂಜಾರ ಎಂದಿನಂತೆ ಒನ್ಡೌನ್ನಲ್ಲಿ ಬರಲಿದ್ದಾರೆ. ನಾಲ್ಕನೇ ಕ್ರಮಾಂಕದಲ್ಲಿ ಶ್ರೇಯಸ್ ಅಯ್ಯರ್ ಬ್ಯಾಟ್ ಬೀಸಲಿದ್ದಾರೆ.
ಇದನ್ನೂ ಓದಿ:ಅಜಿಂಕ್ಯ ರಹಾನೆ ಬಳಗಕ್ಕೆ ಕಾದಿದೆ ಕಾನ್ಪುರ ಟೆಸ್ಟ್
ನ್ಯೂಜಿಲ್ಯಾಂಡ್ ಟೆಸ್ಟ್ ಸರಣಿಯ ಅಭ್ಯಾಸಕ್ಕೆಂದೇ ಟಿ20 ಸರಣಿಗೆ ಪ್ರಮುಖ ಆಟಗಾರರಿಗೆ ವಿಶ್ರಾಂತಿ ನೀಡಿತು. ನಾಯಕ ಕೇನ್ ವಿಲಿಯಮ್ಸನ್ ಕೂಡ ಇವರಲ್ಲೊಬ್ಬರು. ಹಾಗೇಯೇ ವೇಗಿ ಕೈಲ್ ಜಾಮೀಸನ್ ಕೂಡ ಟಿ20 ಆಡಿರಲಿಲ್ಲ. ಇದೀಗ ವಿಲಿಯಮ್ಸನ್, ಜಾಮೀಸನ್ ಪುನರಾಗಮನ ಆಗುತ್ತಿದೆ. ಪ್ರವಾಸಿಗರ ಟೆಸ್ಟ್ ಟೀಮ್ ಹೆಚ್ಚು ಬಲಿಷ್ಠವಾಗಿ ಗೋಚರಿಸುತ್ತಿದೆ.
ತಂಡಗಳು:
ಭಾರತ: ಶುಭ್ಮನ್ ಗಿಲ್, ಮಯಾಂಕ್ ಅಗರ್ವಾಲ್, ಚೇತೇಶ್ವರ್ ಪೂಜಾರ, ಅಜಿಂಕ್ಯ ರಹಾನೆ(ನಾ), ಶ್ರೇಯಸ್ ಅಯ್ಯರ್, ವೃದ್ಧಿಮಾನ್ ಸಹಾ(ವಿ.ಕೀ), ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ರವಿಚಂದ್ರನ್ ಅಶ್ವಿನ್, ಇಶಾಂತ್ ಶರ್ಮಾ, ಉಮೇಶ್ ಯಾದವ್
ನ್ಯೂಜಿಲ್ಯಾಂಡ್: ಟಿಮ್ ಲ್ಯಾಥಮ್, ವಿಲ್ ಯಂಗ್, ಕೇನ್ ವಿಲಿಯಮ್ಸನ್ (ನಾ), ರಾಸ್ ಟೇಲರ್, ಹೆನ್ರಿ ನಿಕೋಲ್ಸ್, ಟಾಮ್ ಬ್ಲಂಡೆಲ್ (ವಿ.ಕೀ), ರಚಿನ್ ರವೀಂದ್ರ, ಟಿಮ್ ಸೌಥಿ, ಅಜಾಜ್ ಪಟೇಲ್, ಕೈಲ್ ಜೇಮಿಸನ್, ವಿಲಿಯಂ ಸೊಮರ್ವಿಲ್ಲೆ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ಲಕ್ನೋ ಸೂಪರ್ ಜೈಂಟ್ಸ್ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ
IPL; ಆಸ್ಟ್ರೇಲಿಯನ್ ಆಲ್ರೌಂಡರ್ ಮಾರ್ಷ್ ಔಟ್
IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್ ನೀಡಿದ ಆರ್ಸಿಬಿ!
IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ
IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ
MUST WATCH
ಹೊಸ ಸೇರ್ಪಡೆ
Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ
ಶರ್ಟ್ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!
ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ
Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ
Editorial: ಗುಕೇಶ್ ಗೆಲುವು- ಭಾರತದ ಯುವಶಕ್ತಿಯ ಸಂಕೇತ