23 ವರ್ಷಗಳ ಸುದೀರ್ಘ‌ ಪಯಣ ಅಂತ್ಯ: ಮಾಜಿ ನಾಯಕಿ ರುಮೇಲಿ ಧರ್‌ ಕ್ರಿಕೆಟ್‌ ವಿದಾಯ


Team Udayavani, Jun 22, 2022, 11:29 PM IST

23 ವರ್ಷಗಳ ಸುದೀರ್ಘ‌ ಪಯಣ ಅಂತ್ಯ: ಮಾಜಿ ನಾಯಕಿ ರುಮೇಲಿ ಧರ್‌ ಕ್ರಿಕೆಟ್‌ ವಿದಾಯ

ಕೋಲ್ಕತಾ: ಭಾರತೀಯ ವನಿತಾ ಕ್ರಿಕೆಟ್‌ ತಂಡದ ಮಾಜಿ ನಾಯಕಿ, ಆಲ್‌ರೌಂಡರ್‌ ರುಮೇಲಿ ಧರ್‌ ಎಲ್ಲ ಮಾದರಿಯ ಕ್ರಿಕೆಟಿಗೆ ಬುಧವಾರ ಗುಡ್‌ಬೈ ಹೇಳಿದರು.

38 ವರ್ಷದ ರುಮೇಲಿ ಧರ್‌ ಭಾರತದ ಪರ 4 ಟೆಸ್ಟ್‌, 78 ಏಕದಿನ ಹಾಗೂ 18 ಟಿ20 ಪಂದ್ಯಗಳಲ್ಲಿ ಆಡಿದ್ದಾರೆ. 2003ರಲ್ಲಿ ಇಂಗ್ಲೆಂಡ್‌ ವಿರುದ್ಧ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಪದಾರ್ಪಣೆಗೈದಿದ್ದರು.

6 ವರ್ಷಗಳ ಸುದೀರ್ಘ‌ ವಿರಾಮದ ಬಳಿಕ 2018ರಲ್ಲಿ ಅಂತಾರಾಷ್ಟ್ರೀಯ ಕ್ರಿಕೆಟಿಗೆ ಪುನರಾಗಮನ ಮಾಡಿ ಸುದ್ದಿಯಾಗಿದ್ದರು. ಅಂದು ಗಾಯಾಳು ಜೂಲನ್‌ ಗೋಸ್ವಾಮಿ ಬದಲು ಭಾರತ ತಂಡವನ್ನು ಪ್ರವೇಶಿಸಿ ದಕ್ಷಿಣ ಆಫ್ರಿಕಾ ವಿರುದ್ಧ ಟಿ20 ಸರಣಿಯಲ್ಲಿ ಪಾಲ್ಗೊಂಡಿದ್ದರು. 2005ರ ಏಕದಿನ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಭಾರತ ಫೈನಲ್‌ ತಲುಪುವಲ್ಲಿ ರುಮೇಲಿ ಧರ್‌ ವಹಿಸಿದ ಪಾತ್ರ ಅಮೋಘವಾಗಿತ್ತು.

ಏರಿಳಿತಗಳಿಂದ ಕೂಡಿದ ಯಾನ
“ಪಶ್ಚಿಮ ಬಂಗಾಲದ ಶ್ಯಾಮ್‌ನಗರ್‌ನಿಂದ ಆರಂಭ ಗೊಂಡ ನನ್ನ 23 ವರ್ಷಗಳ ಕ್ರಿಕೆಟ್‌ ಪ್ರಯಾಣ ಕೊನೆಗೊಳ್ಳುತ್ತಿದೆ. ಎಲ್ಲ ಮಾದರಿಯ ಕ್ರಿಕೆಟಿಗೂ ನಾನು ವಿದಾಯ ಹೇಳುತ್ತಿದ್ದೇನೆ. ಇದೊಂದು ಏರಿಳಿತಗಳಿಂದ ಕೂಡಿದ ಯಾನವಾಗಿತ್ತು. 2005ರ ವಿಶ್ವಕಪ್‌ ಫೈನಲ್‌ನಲ್ಲಿ ಆಡಿದ್ದು, ಭಾರತ ತಂಡವನ್ನು ಮುನ್ನಡೆಸಿದ್ದು ನನ್ನ ಕ್ರಿಕೆಟ್‌ ಬದುಕಿನ ಸ್ಮರಣೀಯ ಕ್ಷಣ. ಆಗಾಗ ಗಾಯಗಳ ಸಮಸ್ಯೆಗೆ ಸಿಲುಕಿದೆ. ಬಲಿಷ್ಠವಾಗಿಯೇ ಪುನರಾಗಮನ ಸಾರಿದೆ. ಬಿಸಿಸಿಐ, ನನ್ನ ಕುಟುಂಬ, ನಾನು ಪ್ರತಿನಿಧಿಸಿದ ತಂಡಗಳ ಎಲ್ಲ ಸದಸ್ಯರಿಗೂ ಕೃತಜ್ಞತೆಗಳು’ ಎಂಬುದಾಗಿ ರುಮೇಲಿ ಧರ್‌ ಹೇಳಿದ್ದಾರೆ.

ದೇಶಿ ಕ್ರಿಕೆಟ್‌ನಲ್ಲಿ ಬಂಗಾಲ, ರೈಲ್ವೇಸ್‌, ಏರ್‌ ಇಂಡಿಯಾ, ದಿಲ್ಲಿ, ರಾಜಸ್ಥಾನ, ಅಸ್ಸಾಮ್‌, ಇಂಡಿಯಾ ರೆಡ್‌ ಮತ್ತು ಅಂಡರ್‌-21 ತಂಡಗಳನ್ನು ರುಮೇಲಿ ಧರ್‌ ಪ್ರತಿನಿಧಿಸಿದ್ದಾರೆ. ಜತೆಗೆ ಏಷ್ಯಾ ವನಿತಾ ಇಲೆವೆನ್‌ ಪರವಾಗಿಯೂ ಆಡಿದ್ದಾರೆ.

ಬಲಗೈ ಬ್ಯಾಟರ್‌ ಹಾಗೂ ಮಧ್ಯಮ ವೇಗಿಯಾಗಿದ್ದ ರುಮೇಲಿ ಧರ್‌ ಟೆಸ್ಟ್‌ ಕ್ರಿಕೆಟ್‌ನಲ್ಲಿ 236 ರನ್‌ ಹಾಗೂ 8 ವಿಕೆಟ್‌; ಏಕದಿನದಲ್ಲಿ 961 ರನ್‌ ಮತ್ತು 63 ವಿಕೆಟ್‌; ಟಿ20ಯಲ್ಲಿ 131 ರನ್‌ ಹಾಗೂ 13 ವಿಕೆಟ್‌ ಸಂಪಾದಿಸಿದ್ದಾರೆ.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Crime News; ಕಾಸರಗೋಡು ಭಾಗದ ಅಪರಾಧ ಸುದ್ದಿಗಳು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು

Dharmasthala; ಕೆಎಸ್ಸಾರ್ಟಿಸಿ ಬಸ್‌ನಡಿ ಸಿಲುಕಿ ಮಹಿಳೆ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ-ಚಿಕ್ಕಮಗಳೂರು; ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿಯ ಸ್ಪಷ್ಟತೆಯಿದೆ: ಜೆ.ಪಿ.

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಉಡುಪಿ- ಚಿಕ್ಕಮಗಳೂರು: ಕ್ಷೇತ್ರದ ಅಭಿವೃದ್ಧಿಗೆ ಸಾಕಷ್ಟು ಅವಕಾಶಗಳು ಇವೆ: ಕೋಟ

ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Kinnigoli ಅಡಿಕೆ, ಹಿಂಗಾರ ಕಳವು ಮಾಡುತ್ತಿದ್ದ ವ್ಯಕ್ತಿಯ ಸೆರೆ

Perla, Kasaragod; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

Perla; ಪತ್ನಿಯನ್ನು ಕೊಠಡಿಯೊಳಗೆ ಕೂಡಿ ಹಾಕಿ ಪತಿ ಆತ್ಮಹತ್ಯೆ

raKundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Kundapura ರೈಲಿಗೆ ತಲೆಕೊಟ್ಟು ವ್ಯಕ್ತಿ ಆತ್ಮಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.