ಬಾಂಗ್ಲಾ ಎದುರು ಭರ್ಜರಿ ಜಯ: ಭಾರತಕ್ಕೆ ನಿರಂತರ 6ನೇ ಟೆಸ್ಟ್‌ ಸರಣಿ


Team Udayavani, Feb 13, 2017, 3:14 PM IST

India Victory-700.jpg

ಹೈದರಾಬಾದ್‌ : ಪ್ರವಾಸಿ ಬಾಂಗ್ಲಾದೇಶ ಎದುರಿನ ಏಕೈಕ ಟೆಸ್ಟ್‌ ಪಂದ್ಯವನ್ನು ಭಾರತ 208 ರನ್‌ಗಳಿಂದ ಭರ್ಜರಿಯಾಗಿ ಜಯಿಸಿದೆ. 

ಯಾವುದೇ ರೀತಿಯಲ್ಲಿ ಫ‌ಲಕಾರಿಯಾಗಿರದ ಇಲ್ಲಿನ ರಾಜೀವ್‌ ಗಾಂಧಿ ಕ್ರಿಕೆಟ್‌ ಅಂಗಣದ ಪಿಚ್‌ ಮೇಲೆ ಭಾರತೀಯ ಎಸೆಗಾರರು, ವಿಶೇವಾಗಿ ಸ್ಪಿನ್ನರ್‌ ರವಿಚಂದ್ರನ್‌ ಅಶ್ವಿ‌ನ್‌ ಮತ್ತು ರವೀಂದ್ರ ಜಡೇಜ ಅತ್ಯಂತ ಸಹನೆಯ ಬೌಲಿಂಗ್‌ ನಡೆಸಿ ಭಾರತಕ್ಕೆ ವಿಜಯ ತಂದು ಕೊಡುವಲ್ಲಿ ಸಫ‌ಲರಾಗಿದ್ದಾರೆ. 

ಇದು ಭಾರತೀಯ ಕ್ರಿಕೆಟ್‌ ತಂಡಕ್ಕೆ ವಿರಾಟ್‌ ಕೊಹ್ಲಿ ನಾಯಕತ್ವದಲ್ಲಿ  ಸಂದಿರುವ ನಿರಂತರ ಆರನೇ ಟೆಸ್ಟ್‌  ಸರಣಿ ವಿಜಯವಾಗಿದೆ. ಟೆಸ್ಟ್‌ ಗೆಲವಿನ ಈ ಸರಣಿಯು 2015ರಲ್ಲಿ ಲಂಕಾ ಎದುರಿನ ವಿಜಯದೊಂದಿಗೆ ಆರಂಭವಾಗಿತ್ತು. 2015ರಲ್ಲಿ ಗಾಲೆಯಲ್ಲಿ ಲಂಕಾ ವಿರುದ್ಧದ ಟೆಸ್ಟ್‌ ಪಂದ್ಯವನ್ನು ಸೋತ ಬಳಿಕದ 19 ಟೆಸ್ಟ್‌ ಪಂದ್ಯಗಳಲ್ಲಿ ಭಾರತ ಅಜೇಯವಾಗಿ ತನ್ನ ಸಾಧನೆಯನ್ನು ಮುಂದುವರಿಸಿಕೊಂಡು ಬಂದಿರುವುದು ಗಮನಾರ್ಹವಾಗಿದೆ. 

ಈ ಟೆಸ್ಟ್‌ ಪಂದ್ಯದ ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ ಆರು ವಿಕೆಟ್‌ ನಷ್ಟಕ್ಕೆ 687 ರನ್‌ಗಳ ಬೃಹತ್‌ ಮೊತ್ತವನ್ನು ಕಲೆ ಹಾಕಿತ್ತು. ಇದಕ್ಕೆ ಉತ್ತರವಾಗಿ ಬಾಂಗ್ಲಾದೇಶ 388 ರನ್‌ಗಳಿಗೆ ಆಲೌಟಾಗಿತ್ತು. 

ಎರಡನೇ ಇನ್ನಿಂಗ್ಸ್‌ನಲ್ಲಿ ಭಾರತ ನಾಲ್ಕು ವಿಕೆಟಿಗೆ 159 ರನ್‌ ಬಾರಿ ಇನ್ನಿಂಗ್ಸ್‌ ಡಿಕ್ಲೇರ್‌ ಮಾಡುವ ಮೂಲಕ ಬಾಂಗ್ಲಾದೇಶಕ್ಕೆ  ಈ ಟೆಸ್ಟ್‌ ಪಂದ್ಯ ಜಯಿಸಲು 459ರನ್‌ಗಳ ಗುರಿಯನ್ನು ನಿಗದಿಸಿತ್ತು.

ನಿನ್ನೆ ಚಹಾ ವಿರಾಮದ ಅನಂತರ ಈ ವಿಜಯದ ಗುರಿಯನ್ನು ಬೆಂಬತ್ತಲು ತನ್ನ ಎರಡನೇ ಇನ್ನಿಂಗ್ಸ್‌ ಆರಂಭಿಸಿದ್ದ ಬಾಂಗ್ಲಾದೇಶ 103 ರನ್‌  ತೆಗೆಯುವಷ್ಟರಲ್ಲಿ  ಮೂರು ವಿಕೆಟ್‌ ಕಳೆದುಕೊಂಡಿತ್ತು. 

ಇಂದಿನ ಐದನೇ ಹಾಗೂ ಅಂತಿಮ ದಿನದ ಆಟದಲ್ಲಿ  ಭೋಜನ ವಿರಾಮದ ನಂತರದ ಆಟದಲ್ಲಿ  ತನ್ನ ಗಳಿಕೆಯನ್ನು 250 ರನ್‌ ಮೊತ್ತಕ್ಕೆ ಏರಿಸುವುದರೊಳಗೆ ಬಾಂಗ್ಲಾ ತನ್ನೆಲ್ಲ ವಿಕೆಟ್‌ಗಳನ್ನು ಕಳೆದುಕೊಂಡು ಸೋಲೊಪ್ಪಿತು.

ಬಾಂಗ್ಲಾದೇಶದ ಎರಡನೇ ಇನ್ನಿಂಗ್ಸ್‌ ಆಟದಲಲ್ಲಿ ಭಾರತದ ಸ್ಪಿನ್‌ ಎಸೆಗಾರ ರವಿಚಂದ್ರನ್‌ ಅಶ್ವಿ‌ನ್‌ 73 ರನ್‌ ವೆಚ್ಚಕ್ಕೆ ನಾಲ್ಕು ವಿಕೆಟ್‌ ಕಿತ್ತರೆ, ರವೀಂದ್ರ ಜಡೇಜ 78 ರನ್‌ ವೆಚ್ಚಕ್ಕೆ ನಾಲ್ಕು ವಿಕೆಟ್‌ ಕಿತ್ತರು. ಇಶಾಂತ್‌ ಶರ್ಮಾ ಅವರಿಗೆ ಎರಡು ವಿಕೆಟ್‌ ಸಿಕ್ಕಿತು. 

ಬಾಂಗ್ಲಾ ದೇಶದ ದಾಂಡಿಗರ ಪೈಕಿ ಮಹಮ್ಮದುಲ್ಲಾ 64 ರನ್‌ ಬಾರಿಸಿ ಗರಿಷ್ಠ  ಸ್ಕೋರರ್‌ ಎನಿಸಿದರೆ ಸೌಮ್ಯಾ ಸರ್ಕಾರ್‌ 42 ರನ್‌ ಬಾರಿಸಿದರು. 

ಬಾಂಗ್ಲಾ ಎರಡನೇ ಇನ್ನಿಂಗ್ಸ್‌ ಆಟ ಕೇವಲ 100.3 ಓವರ್‌ಗಳಿಗೆ ಸೀಮಿತವಾಯಿತು. 

ಟಾಪ್ ನ್ಯೂಸ್

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

5-

Rabakavi-Banahatti: ತೀವ್ರ ಅನಾರೋಗ್ಯದಲ್ಲಿಯೂ ಮತದಾನ ಮಾಡಿದ ವ್ಯಕ್ತಿ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Bidar; ಒಂದೂವರೆ ವರ್ಷದ ಮಗು ಅಪಹರಣ ಸುಖಾಂತ್ಯ; ಹೈದರಾಬಾದ್ ನಲ್ಲಿ ಮಹಿಳೆ ಬಂಧನ

Money Laundering Case; Kejriwal’s stay in jail continues

Money Laundering Case; ಕೇಜ್ರಿವಾಲ್ ಜೈಲು ವಾಸ ಮುಂದುವರಿಕೆ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ

Siddapura: ಶಾರ್ಟ್ ಸರ್ಕ್ಯೂಟ್ ಗೆ ಅಂಗಡಿಗಳು ಬೆಂಕಿಗಾಹುತಿ… ಲಕ್ಷಾಂತರ ರೂ ನಷ್ಟ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

1-ewqqwewq

Must win ಡೆಲ್ಲಿ ಪ್ಲೇ ಆಫ್ ಆಸೆ ಜೀವಂತ: ರಾಜಸ್ಥಾನ್‌ ರಾಯಲ್ಸ್‌ ಸವಾಲು

CSK (2)

CSK; ಬಸ್‌ ಕಂಡಕ್ಟರ್‌ಗಳಿಗೆ ಚೆನ್ನೈ ಕಿಂಗ್ಸ್‌ನಿಂದ 8 ಸಾವಿರ ಅಗತ್ಯ ಗಿಫ್ಟ್ !

1-sss

Central government ಒಪ್ಪಿದರೆ ಪಾಕ್‌ಗೆ ಭಾರತ ಕ್ರಿಕೆಟ್‌ ತಂಡ: ರಾಜೀವ್‌ ಶುಕ್ಲ

1-wewqewqe

T20 ಸರಣಿ; ಬಾಂಗ್ಲಾ ಎದುರು ಭಾರತ ವನಿತೆಯರಿಗೆ 56 ರನ್‌ ಗೆಲುವು: 4-0 ಮುನ್ನಡೆ

MUST WATCH

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

ಹೊಸ ಸೇರ್ಪಡೆ

8-panaji

Panaji: ಮತದಾರರನ್ನು ಸೆಳೆದ ಇಕೋ ಫ್ರೆಂಡ್ಲಿ ಮತಕೇಂದ್ರ

7-Panaji

Panaji: ಬಿಚೋಲಿಯಲ್ಲಿ ಮತಯಂತ್ರದಲ್ಲಿ ತಾಂತ್ರಿಕ ತೊಂದರೆ…

Gadag; Vinay came from England and voted

Gadag; ಇಂಗ್ಲೆಂಡ್‌ನಿಂದ ಆಗಮಿಸಿ ಮತದಾನ ಮಾಡಿದ ಗದಗದ ವಿನಯ್

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Truth Behind MS Dhoni’s No. 9 Decision Out

CSK; ಧೋನಿ ಯಾಕೆ ಕೆಳ ಕ್ರಮಾಂಕದಲ್ಲಿ ಆಡುತ್ತಿದ್ದಾರೆ…: ಹೊರಬಿತ್ತು ಸತ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.