ಸಿಡಿದ ಪೂರಣ್, ಪೊಲಾರ್ಡ್ : ಟೀಂ ಇಂಡಿಯಾ ಸರಣಿ ಗೆಲುವಿಗೆ 316 ಟಾರ್ಗೆಟ್


Team Udayavani, Dec 22, 2019, 5:24 PM IST

Final-Match-730

ಕಟಕ್: ಇಲ್ಲಿನ ಬಾರಾಬತಿ ಸ್ಟೇಡಿಯಂನಲ್ಲಿ ನಡೆಯುತ್ತಿರುವ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವಿನ ಸರಣಿ ನಿರ್ಣಾಯಕ ಏಕದಿನ ಪಂದ್ಯದಲ್ಲಿ ಭಾರತದ ಗೆಲುವಿಗೆ 316 ರನ್ ಗಳ ಗುರಿ ನಿಗದಿಯಾಗಿದೆ.

ನಿಕೊಲಸ್ ಪೂರಣ್ (89) ಹಾಗೂ ನಾಯಕ ಕೈರನ್ ಪೊಲಾರ್ಡ್ (74 ನಾಟೌಟ್) ಭರ್ಜರಿ ಬ್ಯಾಟಿಂಗ್ ನೆರವಿನೊಂದಿಗೆ ಹಾಗೂ ಅಗ್ರ ಕ್ರಮಾಂಕದ ಬ್ಯಾಟ್ಸ್ ಮನ್ ಗಳ ಜವಾಬ್ದಾರಿಯುತ ಆಟದ ನೆರವಿನಿಂದ ವೆಸ್ಟ್ ಇಂಡೀಸ್ ನಿಗದಿತ 50 ಓವರ್ ಗಳಲ್ಲಿ 05 ವಿಕೆಟ್ ನಷ್ಟಕ್ಕೆ 315 ರನ್ ಕಲೆಹಾಕಿತು.

ಈ ಏಕದಿನ ಸರಣಿಯಲ್ಲಿ ಇದೇ ಮೊದಲ ಸಲ ಟಾಸ್ ಗೆಲ್ಲುವ ಅವಕಾಶ ಪಡೆದ ವಿರಾಟ್ ಕೊಹ್ಲಿ ವೆಸ್ಟ್ ಇಂಡೀಸ್ ಗೆ ಬ್ಯಾಟಿಂಗ್ ನೀಡಿದರು. ಇಂಡೀಸ್ ಸರದಿಯಲ್ಲಿ ಇವಿನ್ ಲೆವೆಸಿ (21) ಅವರನ್ನು ಹೊರತುಪಡಿಸಿ ಉಳಿದವರೆಲ್ಲರೂ ಉತ್ತಮ ಬ್ಯಾಟಿಂಗ್ ಪ್ರದರ್ಶಿಸಿದರು. ಶೈ ಹೋಪ್ (42), ರೋಸ್ಟನ್ ಚೇಸ್ (38) ಮತ್ತು ಶಿಮ್ರೋನ್ ಹೆಟ್ ಮೇರ್ (37) ಅವರ ಆಟ ಕೆರಿಬಿಯನ್ನರ ಬ್ಯಾಟಿಂಗ್ ಗೆ ಬಲ ತುಂಬಿತು.

ಆದರೆ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಮಾಡಲು ಬಂದ ಯುವ ಇನ್ ಫಾರ್ಮ್ ಬ್ಯಾಟ್ಸ್ ಮನ್ ನಿಕೊಲಸ್ ಪೂರಣ್ (89) ಅವರು ಭರ್ಜರಿ ಬ್ಯಾಟಿಂಗ್ ಪ್ರದರ್ಶಿಸುವ ಮೂಲಕ ವೆಸ್ಟ್ ಇಂಡೀಸ್ ಬೃಹತ್ ಮೊತ್ತ ಕಲೆಹಾಕಲು ನೆರವಾದರು. ಟೀಂ ಇಂಡಿಯಾ ಬೌಲರ್ ಗಳನ್ನು ಮನಬಂದಂತೆ ಚಚ್ಚಿದ ಪೂರಣ್ ಕೇವಲ 64 ಎಸೆತಗಳಲ್ಲಿ 89 ರನ್ ಸಿಡಿಸಿ ಶಾರ್ದೂಲ್ ಠಾಕೂರ್ ಬೌಲಿಂಗ್ ನಲ್ಲಿ ಜಡೇಜಾಗೆ ಕ್ಯಾಚ್ ನೀಡಿ ಔಟಾದರು. ಪೂರಣ್ ತಮ್ಮ ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ 10 ಬೌಂಡರಿ ಹಾಗೂ 3 ಭರ್ಜರಿ ಸಿಕ್ಸರ್ ಸಿಡಿಸಿದರು.

ಚೇಸ್ ಔಟಾದ ನಂತರ ಬ್ಯಾಟಿಂಗ್ ಮಾಡಲು ಬಂದ ನಾಯಕ ಕೈರನ್ ಪೊಲಾರ್ಡ್ ಅವರು ಆರಂಭದಲ್ಲಿ ಪೂರಣ್ ಅವರಿಗೆ ಬೆಂಬಲ ನೀಡಿದರೆ ಬಳಿಕ ತಮ್ಮ ಎಂದಿನ ಸ್ಪೋಟಕ ಆಟಕ್ಕೆ ತೊಡಗಿಕೊಂಡರು. ಸ್ಲ್ಯಾಗ್ ಓವರ್ ನಲ್ಲಿ ಸಿಡಿದುನಿಂತ ಪೊಲಾರ್ಡ್ ಕೇವಲ 51 ಎಸೆತೆಗಳಲ್ಲಿ 71 ರನ್ ಬಾರಿಸಿ ಅಜೇಯರಾಗಿ ಉಳಿದರು. ಇದರಲ್ಲಿ 07 ಭರ್ಜರಿ ಸಿಕ್ಸರ್ ಸಹ ಸೇರಿತ್ತು. ಪೂರಣ್ ಹಾಗೂ ಪೊಲಾರ್ಡ್ ಅವರು 135 ರನ್ ಗಳ ಅಮೂಲ್ಯ ಜೊತೆಯಾಟ ನೀಡಿದರು.

ಕೊನೆಯ 2.1 ಓವರ್ ಗಳಲ್ಲಿ (13 ಎಸೆತಗಳಲ್ಲಿ) ಪೊಲಾರ್ಡ್ ಮತ್ತು ಹೋಲ್ಡರ್ ಜೋಡಿಯ ಜೊತೆಯಾಟದಲ್ಲಿ 36 ರನ್ ಹರಿದು ಬಂತು. ಇದರಲ್ಲಿ ಪೊಲಾರ್ಡ್ 08 ಎಸೆತ ಎದುರಿಸಿ 29 ರನ್ ಬಾರಿಸಿದರು.


ಮಹಮ್ಮದ್ ಶಮಿ, ಶಾರ್ದೂಲ್ ಠಾಕೂರ್, ಮತ್ತು ಕಳೆದ ಪಂದ್ಯದ ಹ್ಯಾಟ್ರಿಕ್ ಹೀರೋ ಕುಲದೀಪ್ ಯಾದವ್ ಸಹಿತ ಭಾರತದ ಬೌಲರ್ ಗಳು ದುಬಾರಿಯಾದರು.

ಪ್ರಥಮ ಏಕದಿನ ಪಂದ್ಯದಲ್ಲಿ ಆಡುವ ಅವಕಾಶ ಪಡೆದ ನವದೀಪ್ ಸೈನಿ 02 ವಿಕೆಟ್ ಪಡೆದರೆ, ಶಾರ್ದೂಲ್ ಠಾಕೂರ್, ಶಮಿ ಮತ್ತು ಜಡೇಜಾ ತಲಾ 01 ವಿಕೆಟ್ ಪಡೆದರು.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.