ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯಲು ಭಾರತ ಸರಣಿ ಉತ್ತಮ ಅವಕಾಶ: ಫಿಂಚ್
Team Udayavani, Feb 24, 2019, 5:57 AM IST
ವಿಶಾಖಪಟ್ಟಣ: ಭಾರತದ ಎದುರು ರವಿವಾರದಿಂದ ಆರಂಭವಾಗಲಿರುವ ಟಿ-ಟ್ವೆಂಟಿ ಸರಣಿ ಮತ್ತು ಏಕದಿನ ಸರಣಿ ಆಸೀಸ್ ಆಟಗಾರರಿಗೆ ವಿಶ್ವಕಪ್ ತಂಡದಲ್ಲಿ ಸ್ಥಾನ ಭದ್ರ ಪಡಿಸಲು ಉತ್ತಮ ಅವಕಾಶ ಎಂದು ಆಸ್ಟ್ರೇಲಿಯಾ ನಿಗದಿತ ಓವರ್ ಕ್ರಿಕೆಟ್ ನ ನಾಯಕ ಆರೋನ್ ಫಿಂಚ್ ಅಭಿಪ್ರಾಯಪಟ್ಟಿದ್ದಾರೆ.
ರವಿವಾರ ರಾತ್ರಿ ವಿಶಾಖಪಟ್ಟಣದಲ್ಲಿ ನಡೆಯಲಿರುವ ಮೊದಲ ಚುಟುಕು ಪಂದ್ಯದ ಮುನ್ನಾ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಆಸೀಸ್ ಆರಂಭಿಕ ಆಟಗಾರ, ಇದೇ ವರ್ಷ ಮೇ ಅಂತ್ಯದಲ್ಲಿ ಇಂಗ್ಲೆಂಡ್ ಮತ್ತು ವೇಲ್ಸ್ ನಲ್ಲಿ ನಡೆಯಲಿರುವ ಏಕದಿನ ಕ್ರಿಕೆಟ್ ನ ಮಹಾಕೂಟ ವಿಶ್ವಕಪ್ ಗೆ ಆಸ್ಟ್ರೇಲಿಯಾ ತಂಡ ಇನ್ನು ಕೂಡಾ ಅಂತಿಮವಾಗಿಲ್ಲ. ಸದ್ಯ ನನ್ನ ಜೊತೆ ಆರಂಭಿಕ ಆಟಗಾರನಾಗಿ ಕಣಕ್ಕಿಳಿಯಲು ಡಾರ್ಸಿ ಶಾರ್ಟ್, ಉಸ್ಮಾನ್ ಖ್ವಾಜಾ ಮತ್ತು ಮಾರ್ಕಸ್ ಸ್ಟೋಯಿನಸ್ ಸ್ಪರ್ಧೆಯಲ್ಲಿದ್ದಾರೆ. ಅವರೆಲ್ಲರಿಗೂ ಭಾರತ ಸರಣಿ ಉತ್ತಮ ಅವಕಾಶ ಎಂದರು.
ಕ್ರಿಕೆಟ್ ನಿಂದ ಒಂದು ವರ್ಷದ ಮಟ್ಟಿಗೆ ನಿಷೇಧ ಶಿಕ್ಷೆ ಅನುಭವಿಸುತ್ತಿರುವ ಮಾಜಿ ನಾಯಕ ಸ್ಟೀವ್ ಸ್ಮಿತ್ ಮತ್ತು ಡೇವಿಡ್ ವಾರ್ನರ್ ರ ಶಿಕ್ಷೆ ಮಾರ್ಚ್ ೨೯ ಕ್ಕೆ ಮುಗಿಯಲಿದ್ದು ಅವರಿಬ್ಬರು ತಂಡಕ್ಕೆ ಸೇರ್ಪಡೆಯಾದರೆ ತಂಡಕ್ಕೆ ಮತ್ತಷ್ಟು ಶಕ್ತಿ ಬರಲಿದೆ ಎಂದರು. ಆದರೆ ಸ್ಮಿತ್ ಮತ್ತು ವಾರ್ನರ್ ಇಬ್ಬರೂ ಮೊಣಕೈ ಗಾಯದಿಂದ ಬಳಲುತ್ತಿದ್ದು ವಿಶ್ವಕಪ್ ವೇಳೆ ಗುಣಮುಖರಾಗಿ ತಂಡ ಸೇರಿ ಕೊಳ್ಳಲಿದ್ದಾರೆ ಎಂದು ಫಿಂಚ್ ವಿಶ್ವಾಸ ವ್ಯಕ್ತಪಡಿಸಿದರು.
ಒಂದು ವೇಳೆ ವಾರ್ನರ್ ಮತ್ತು ಸ್ಮಿತ್ ವಿಶ್ವಕಪ್ ಗೆ ಲಭ್ಯವಾಗದೇ ಹೋದಲ್ಲಿ ಬೇರೆ ಯುವ ಆಟಗಾರರಿಗೆ ಅವಕಾಶ ಸಿಗಲಿದೆ. ಹಾಗಾಗಿ ಯುವ ಆಟಗಾರರು ಭಾರತ ಸರಣಿಯಲ್ಲೇ ತಮ್ಮ ಸ್ಥಾನವನ್ನು ಭದ್ರ ಪಡಿಸಿಕೊಳ್ಳಬೇಕು ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?