INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ


Team Udayavani, Sep 24, 2023, 6:16 PM IST

INDvsAUS: ಹೋಳ್ಕರ್ ಮೈದಾನದಲ್ಲಿ ರನ್ ರಾಶಿ ಪೇರಿಸಿದ ಟೀಂ ಇಂಡಿಯಾ; ಆಸೀಸ್ ಗೆ 400 ರನ್ ಗುರಿ

ಇಂದೋರ್: ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ ಪಂದ್ಯದಲ್ಲಿ ಭಾರತ ತಂಡ ರನ್ ರಾಶಿ ಪೇರಿಸಿದೆ. ಶುಭಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಭರ್ಜರಿ ಶತಕ, ನಾಯಕ ಕೆಎಲ್ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಅವರ ಸ್ಪೋಟಕ ಅರ್ಧಶತಕದ ಸಹಾಯದಿಂದ ಟೀಂ ಇಂಡಿಯಾ 50 ಓವರ್ ಗಳಲ್ಲಿ ಐದು ವಿಕೆಟ್ ನಷ್ಟಕ್ಕೆ 399 ರನ್ ಗಳಿಸಿದೆ.

ಟಾಸ್ ಗೆದ್ದ ಆಸ್ಟ್ರೆಲಿಯಾ ಭಾರತವನ್ನು ಮೊದಲು ಬ್ಯಾಟಿಂಗ್ ಗೆ ಆಹ್ವಾನಿಸಿತು. ಇದಕ್ಕೆ ಫಲವಾಗಿ ಆರಂಭದಲ್ಲೇ ರುತುರಾಜ್ ಗಾಯಕ್ವಾಡ್ ವಿಕೆಟ್ ಪಡೆಯುವಲ್ಲಿ ಸಫಲವಾಯಿತು. 8 ರನ್ ಗಳಿಸಿದ್ದ ರುತುರಾಜ್ ಅವರು ಹೇಜಲ್ ವುಡ್ ಬಲೆಗೆ ಬಿದ್ದರು. ಆದರೆ ಬಳಿಕ ಜೊತೆಯಾದ ಶುಭ್ಮನ್ ಗಿಲ್ ಮತ್ತು ಶ್ರೇಯಸ್ ಅಯ್ಯರ್ ಆಸೀಸ್ ಬೌಲರ್ ಗಳ ಬೆಂಡೆತ್ತಿದರು.

ಈ ಇಬ್ಬರ ಜೊತೆಯಾಟದಲ್ಲಿ ಮೊದಲು ಶ್ರೇಯಸ್ ಅಯ್ಯರ್ ಶತಕ ಪೂರೈಸಿದರು. ಶಸ್ತ್ರಚಿಕಿತ್ಸೆಯ ಬಳಿಕ ಬ್ಯಾಟಿಂಗ್ ಫಾರ್ಮ್ ಕಂಡುಕೊಂಡ ಅಯ್ಯರ್ ತಮ್ಮ ಮೂರನೇ ಏಕದಿನ ಶತಕ ಬಾರಿಸಿದರು. 86 ಎಸೆತಗಳಲ್ಲಿ ಮೂರು ಸಿಕ್ಸರ್ ಮತ್ತು 10 ಬೌಂಡರಿಯೊಂದಿಗೆ ಅಯ್ಯರ್ ಶತಕ ಪೂರೈಸಿದರು. 105 ರನ್ ಗಳಿಸಿ ಸೀನ್ ಅಬಾಟ್ ಎಸೆತದಲ್ಲಿ ಔಟಾದರು.

ತಮ್ಮ ಅದ್ಭುತ ಫಾರ್ಮ್ ಮುಂದುವರಿಸಿರುವ ಶುಭ್ಮನ್ ಗಿಲ್ ಏಕದಿನ ಕ್ರಿಕೆಟ್ ನಲ್ಲಿ ಮತ್ತೊಂದು ಶತಕ ಬಾರಿಸಿದರು. 92 ಎಸೆತದಲ್ಲಿ ಶತಕ ಪೂರೈಸಿದ ಗಿಲ್ ತಂಡಕ್ಕೆ ಮತ್ತೊಮ್ಮೆ ಉತ್ತಮ ಆರಂಭ ಒದಗಿಸಿದರು. ಒಟ್ಟು ಆರನೇ ಆಟ ಏಕದಿನ ಶತಕ ಬಾರಿಸಿದ ಗಿಲ್ ಈ ವರ್ಷದಲ್ಲೇ ಐದನೇ ಶತಕ ಪೂರೈಸಿದರು. ಗಿಲ್ 104 ರನ್ ಗಳಿಸಿ ಔಟಾದರು. ಅಯ್ಯರ್ ಮತ್ತು ಗಿಲ್ ಎರಡನೇ ವಿಕೆಟ್ ಗೆ ಭರ್ತಿ ಇನ್ನೂರು ರನ್ ಜೊತೆಯಾಟವಾಡಿದರು.

ರಾಹುಲ್- ಸೂರ್ಯ ಅಬ್ಬರ: ಗಿಲ್- ಶ್ರೇಯಸ್ ಬಳಿಕ ನಾಯಕ ರಾಹುಲ್ ಮತ್ತು ಸೂರ್ಯಕುಮಾರ್ ಯಾದವ್ ಅರ್ಧಶತಕ ಬಾರಿಸಿ ಮಿಂಚಿದರು. ರಾಹುಲ್ 38 ಎಸೆತಗಳಲ್ಲಿ ತಲಾ ಮೂರು ಸಿಕ್ಸರ್ ಮತ್ತು ಬೌಂಡರಿ ನೆರವಿನಿಂದ 52 ರನ್ ಗಳಿಸಿದರೆ, ಸೂರ್ಯಕುಮಾರ್ ಯಾದವ್ ಅವರು ಕೇವಲ 37 ಎಸೆತಗಳಲ್ಲಿ ತಲಾ ಆರು ಸಿಕ್ಸರ್ ಮತ್ತು ಬೌಂಡರಿ ನೆರವಿನಿಂದ ಅಜೇಯ 72 ರನ್ ಮಾಡಿದರು. ಇಶಾನ್ ಕಿಶನ್ 18 ಎಸೆತಗಳಲ್ಲಿ 32 ರನ್ ಗಳಿಸಿದರು.

ಆಸೀಸ್ ಪರ ಕ್ಯಾಮರೂನ್ ಗ್ರೀನ್ ತಲಾ ಎರಡು ವಿಕೆಟ್ ಪಡೆದರೂ 103 ರನ್ ನೀಡಿ ದುಬಾರಿಯಾದರು.

ಟಾಪ್ ನ್ಯೂಸ್

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Karkala ಮಾಳ: ನಿಯಂತ್ರಣ ತಪ್ಪಿದ ಗೂಡ್ಸ್‌ ವಾಹನ ಅಪಘಾತ

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು

Mangaluru ಕಾವೂರು: ವಿದ್ಯುತ್‌ ಪ್ರವಹಿಸಿ ಪೆಟ್ರೋಲ್‌ ಪಂಪ್‌ ಸಿಬಂದಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

kejriwal 2

CM ‘ಅಲಂಕಾರಿಕವಲ್ಲ’: ಕೇಜ್ರಿಗೆ ಮತ್ತೆ ಕೋರ್ಟ್‌ ಗುದ್ದು

1-wewqwq-eqw

Amit Shah ನಕಲಿ ವೀಡಿಯೋ :ತೆಲಂಗಾಣ ಸಿಎಂಗೆ ಪೊಲೀಸ್‌ ಸಮನ್ಸ್‌

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

ಎ. 20ರ ಭಾರೀ ಗಾಳಿ – ಮಳೆ: ರೈತರ 21 ಹೆಕ್ಟೇರ್‌ ಅಡಿಕೆ ತೋಟಕ್ಕೆ ಹಾನಿ

1-eewqeqwe

Constitution ಬದಲಿಸಲು ಕಾಂಗ್ರೆಸ್‌ಗೆ ಅವಕಾಶ ಕೊಡಲ್ಲ: ಪಿಎಂ ಮೋದಿ

1-sahil

Betting app case: ಬಂಧನ ಮುನ್ನ ಹುಬ್ಬಳ್ಳಿಗೆ ಬಂದಿದ್ಧ ನಟ ಸಾಹಿಲ್‌!

BJP Symbol

OBC ಮೀಸಲು ರದ್ದು ಮಾಡಲು ಕಾಂಗ್ರೆಸ್‌ ಯತ್ನ: ಬಿಜೆಪಿ ಪ್ರತಿಭಟನೆ

Khalisthan

Canada ಪಿಎಂ ಟ್ರಾಡೋ ಆಗಮನಕ್ಕೆ ಖಲಿಸ್ಥಾನಿ ಘೋಷಣೆಗಳ ಸ್ವಾಗತ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.