ಇಂದಿನಿಂದ ಬಾಂಗ್ಲಾ ಬ್ಯಾಟಲ್‌: ಪೂರ್ಣ ಸಾಮರ್ಥ್ಯದ ಭಾರತ ತಂಡ ಸಜ್ಜು


Team Udayavani, Dec 4, 2022, 7:20 AM IST

ಇಂದಿನಿಂದ ಬಾಂಗ್ಲಾ ಬ್ಯಾಟಲ್‌: ಪೂರ್ಣ ಸಾಮರ್ಥ್ಯದ ಭಾರತ ತಂಡ ಸಜ್ಜು

ಢಾಕಾ: ಟೀಮ್‌ ಇಂಡಿಯಾ ಮತ್ತೆ “ಪೂರ್ಣ ಸಾಮರ್ಥ್ಯ’ದ ಪಡೆಯೊಂದಿಗೆ ಏಕದಿನ ಸರಣಿಗೆ ಸಜ್ಜಾಗಿದೆ. ಬಾಂಗ್ಲಾದೇಶ ವಿರುದ್ಧ ಅವರದೇ ನೆಲದಲ್ಲಿ 3 ಪಂದ್ಯಗಳ ಏಕದಿನ ಸರಣಿ ರವಿವಾರ ಆರಂಭವಾಗಲಿದ್ದು, ರೋಹಿತ್‌ ಶರ್ಮ ಮತ್ತೆ ತಂಡವನ್ನು ಮುನ್ನಡೆಸಲಿದ್ದಾರೆ. ಕೆ.ಎಲ್‌. ರಾಹುಲ್‌, ವಿರಾಟ್‌ ಕೊಹ್ಲಿ ಮೊದಲಾದ ಸೀನಿಯರ್‌ ಆಟಗಾರರು ಈ ಸರಣಿಯ ಕೇಂದ್ರಬಿಂದುವಾಗಿದ್ದಾರೆ.

ನ್ಯೂಜಿಲ್ಯಾಂಡ್‌ನ‌ಲ್ಲಿ ಏಕದಿನ ತಂಡವನ್ನು ಮುನ್ನಡೆಸಿದ ಓಪನರ್‌ ಶಿಖರ್‌ ಧವನ್‌ ಕೂಡ ತಂಡದಲ್ಲಿದ್ದಾರೆ. ಆದರೆ ಶುಭಮನ್‌ ಗಿಲ್‌, ಸಂಜು ಸ್ಯಾಮ್ಸನ್‌ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಹಾರ್ದಿಕ್‌ ಪಾಂಡ್ಯ ಕೂಡ ಆಡುತ್ತಿಲ್ಲ. ಇವರ ಬದಲು ರಜತ್‌ ಪಾಟೀದಾರ್‌, ರಾಹುಲ್‌ ತ್ರಿಪಾಠಿ ಅವಕಾಶ ಪಡೆದಿದ್ದಾರೆ.

ಓಪನರ್ ಯಾರು?
ಭಾರತ ತಂಡದಲ್ಲಿ ಉದ್ಭವಿಸಿರುವ ಪ್ರಮುಖ ಪ್ರಶ್ನೆಯೆಂದರೆ ಓಪನಿಂಗ್‌ ಜೋಡಿ ಯಾವುದು ಎಂಬುದು. ರೋಹಿತ್‌ ಶರ್ಮ ಅವರೊಡನೆ ಇನ್ನಿಂಗ್ಸ್‌ ಆರಂಭಿಸಲು ರಾಹುಲ್‌ ಬರುತ್ತಾರೋ ಅಥವಾ ಧವನ್‌ ಆಗಮಿಸುವರೋ ಎಂಬ ಕುತೂಹಕವಿದೆ. ಆದರೆ ಇವರಿಬ್ಬರೂ ಹೇಳಿಕೊಳ್ಳುವಂಥ ಫಾರ್ಮ್ ನಲ್ಲಿಲ್ಲ.

ನ್ಯೂಜಿಲ್ಯಾಂಡ್‌ ಪ್ರವಾಸದಲ್ಲಿ ಧವನ್‌ ತೀವ್ರ ಬ್ಯಾಟಿಂಗ್‌ ಬರಗಾಲ ಅನುಭವಿಸಿದ್ದರು. 2022ರಲ್ಲಿ ಧವನ್‌ ಒಟ್ಟು 19 ಏಕದಿನ ಪಂದ್ಯವಾ ಡಿದ್ದು, ಕೇವಲ 75.11ರ ಸ್ಟ್ರೈಕ್‌ರೇಟ್‌ ಹೊಂದಿದ್ದಾರೆ. 2016-18ರ ಅವಧಿಯಲ್ಲಿ 101, ಬಳಿಕ 2019-21ರ ಅವಧಿಯಲ್ಲಿ 91ರಷ್ಟು ಸ್ಟ್ರೈಕ್‌ರೇಟ್‌ ಗಳಿಸಿದ್ದರು. ಇದು ಅವರ ಹಿನ್ನಡೆಯನ್ನು ಸೂಚಿಸುತ್ತದೆ.

ಇನ್ನೊಂದೆಡೆ ರಾಹುಲ್‌ 45 ಏಕದಿನ ಪಂದ್ಯಗಳಿಂದ 85 ಪ್ಲಸ್‌ ಸ್ಟ್ರೈಕ್‌ರೇಟ್‌ ಹೊಂದಿದ್ದಾರೆ. ಸರಾಸರಿ 45ರಷ್ಟಿದೆ. ಆದರೆ ಮೊನ್ನೆಯ ಟಿ20 ವಿಶ್ವಕಪ್‌ನಲ್ಲಿ ನಿರೀಕ್ಷಿತ ಯಶಸ್ಸು ಕಂಡಿಲ್ಲ. ಒಂದು ವೇಳೆ ಧವನ್‌ ಓಪನರ್‌ ಆಗಿ ಇಳಿದರೆ, ರಾಹುಲ್‌ ಮಿಡ್ಲ್ ಆರ್ಡರ್‌ನಲ್ಲಿ ಆಡುವ ಸಾಧ್ಯತೆಯೂ ಇಲ್ಲದಿಲ್ಲ. ರವಿಶಾಸ್ತ್ರಿ ಕೋಚ್‌ ಆಗಿದ್ದಾಗ ರಾಹುಲ್‌ ಕೆಲವು ಪಂದ್ಯಗಳಲ್ಲಿ ತಮ್ಮ ಸ್ಥಾನ ಬದಲಿಸಿ ಬಂದಿದ್ದರು.

ಹಾಗೆಯೇ ನಾಯಕ ರೋಹಿತ್‌ ಶರ್ಮ ಫಾರ್ಮ್ ಕೂಡ ಉಜ್ವಲವೇನಲ್ಲ. ಆರಂಭದಲ್ಲಿ ಮುನ್ನುಗ್ಗಿದರೂ ಇನ್ನಿಂಗ್ಸ್‌ ವಿಸ್ತರಿಸಲು ವಿಫ‌ಲರಾಗುತ್ತಿದ್ದಾರೆ. ಹೀಗಾಗಿ ಪವರ್‌ ಪ್ಲೇಯಲ್ಲಿ ರನ್‌ ಹರಿದು ಬರುತ್ತಿಲ್ಲ. ಇದರಿಂದ ಮಧ್ಯಮ ಕ್ರಮಾಂಕದವರ ಮೇಲೆ ಸಹಜವಾಗಿಯೇ ಒತ್ತಡ ಬೀಳುತ್ತದೆ. ಇದನ್ನು ವಿರಾಟ್‌ ಕೊಹ್ಲಿಯೇ ನಿಭಾಯಿಸಬೇಕಾಗುತ್ತದೆ. ಪಂತ್‌ ಕೂಡ ಸತತವಾಗಿ ಬ್ಯಾಟಿಂಗ್‌ ವೈಫ‌ಲ್ಯ ಕಾಣುತ್ತಿದ್ದಾರೆ. ಪಾಟೀದಾರ್‌, ತ್ರಿಪಾಠಿ ನಿಂತು ಆಡಿ ತಮ್ಮ ಸ್ಥಾನವನ್ನು ಗಟ್ಟಿಗೊಳಿಸಬೇಕಿದೆ. ಹಾಗೆಯೇ ಇಶಾನ್‌ ಕಿಶನ್‌ ಕೂಡ.

ಶಮಿ ಗಾಯಾಳು
ಕೊನೆಯ ಕ್ಷಣದಲ್ಲಿ ಬೌಲಿಂಗ್‌ ವಿಭಾಗದಿಂದ ಆಘಾತಕಾರಿ ಸುದ್ದಿ ಯೊಂದು ಹೊರಬಿದ್ದಿದೆ. ಅನುಭವಿ ವೇಗಿ ಮೊಹಮ್ಮದ್‌ ಶಮಿ ಗಾಯಾಳಾಗಿ ಸರಣಿಯಿಂದ ಹೊರಬಿದ್ದಿರುವುದು ಭಾರತಕ್ಕೊಂದು ಹಿನ್ನಡೆಯೇ ಆಗಿದೆ. ಇವರ ಸ್ಥಾನದಲ್ಲಿ ಉಮ್ರಾನ್‌ ಮಲಿಕ್‌ ಕಾಣಿಸಿಕೊಂಡಿದ್ದಾರೆ.

ಇಲ್ಲಿನ ಪಿಚ್‌ ನ್ಯೂಜಿಲ್ಯಾಂಡ್‌ನ‌ಂತಲ್ಲ. ಏಷ್ಯಾ ಟ್ರ್ಯಾಕ್‌ ಆದ ಕಾರಣ ಸ್ಪಿನ್‌ ಬೌಲಿಂಗ್‌ಗೆ ನೆರವು ಲಭಿಸಲಿದೆ. ಅಕ್ಷರ್‌ ಪಟೇಲ್‌, ಶಾಬಾಜ್‌ ಅಹ್ಮದ್‌, ವಾಷಿಂಗ್ಟನ್‌ ಸುಂದರ್‌ ಇದರ ಲಾಭವನ್ನೆತ್ತಬೇಕಿದೆ.

ಶಮಿ ಗೈರಿನಿಂದ ವೇಗದ ಬೌಲಿಂಗ್‌ ವಿಭಾಗದಲ್ಲಿ ಅನುಭವಿಗಳ ಕೊರತೆ ಎದ್ದು ಕಾಣುತ್ತದೆ. ಶಾದೂìಲ್‌ ಠಾಕೂರ್‌ ಅವರೇ ಸೀನಿಯರ್‌. ಸಿರಾಜ್‌, ದೀಪಕ್‌ ಚಹರ್‌, ಕುಲದೀಪ್‌ ಸೇನ್‌, ಉಮ್ರಾನ್‌ ಮಲಿಕ್‌ ಮೇಲೆ ಭಾರೀ ಒತ್ತಡ ಬೀಳುವುದು ಖಂಡಿತ. ಏಕೆಂದರೆ ಬಾಂಗ್ಲಾ ತವರಲ್ಲಿ ಹೆಚ್ಚು ಅಪಾಯಕಾರಿ. ಆದರೆ ನಾಯಕ ತಮಿಮ್‌ ಇಕ್ಬಾಲ್‌ ಅನುಪಸ್ಥಿತಿ ಹಿನ್ನಡೆಯಾಗಿ ಕಾಡುವುದರಲ್ಲಿ ಅನುಮಾನವಿಲ್ಲ. ಇವರ ಗೈರಲ್ಲಿ ಲಿಟನ್‌ ದಾಸ್‌ ತಂಡವನ್ನು ಮುನ್ನಡೆಸಲಿದ್ದಾರೆ.

ತಂಡಗಳು
ಭಾರತ: ರೋಹಿತ್‌ ಶರ್ಮ (ನಾಯಕ), ಕೆ.ಎಲ್‌. ರಾಹುಲ್‌ (ಉಪನಾಯಕ), ಶಿಖರ್‌ ಧವನ್‌, ವಿರಾಟ್‌ ಕೊಹ್ಲಿ, ರಜತ್‌ ಪಾಟೀದಾರ್‌, ಶ್ರೇಯಸ್‌ ಅಯ್ಯರ್‌, ರಾಹುಲ್‌ ತ್ರಿಪಾಠಿ, ರಿಷಭ್‌ ಪಂತ್‌ (ವಿ.ಕೀ.), ಇಶಾನ್‌ ಕಿಶನ್‌, ಶಾಬಾಜ್‌ ಅಹ್ಮದ್‌, ಅಕ್ಷರ್‌ ಪಟೇಲ್‌, ವಾಷಿಂಗ್ಟನ್‌ ಸುಂದರ್‌, ಶಾರ್ದೂಲ್ ಠಾಕೂರ್, ಮೊಹಮ್ಮದ್‌ ಸಿರಾಜ್‌, ದೀಪಕ್‌ ಚಹರ್‌, ಕುಲದೀಪ್‌ ಸೇನ್‌, ಉಮ್ರಾನ್‌ ಮಲಿಕ್‌.

ಬಾಂಗ್ಲಾದೇಶ: ಲಿಟನ್‌ ದಾಸ್‌ (ನಾಯಕ), ಅನಾಮುಲ್‌ ಹಕ್‌, ಶಕಿಬ್‌ ಅಲ್‌ ಹಸನ್‌, ಮುಶ್ಫಿಕರ್‌ ರಹೀಂ, ಆಫಿಫ್ ಹುಸೇನ್‌, ಯಾಸಿರ್‌ ಅಲಿ, ಮೆಹಿದಿ ಹಸನ್‌ ಮಿರಾಜ್‌, ಮುಸ್ತಫಿಜುರ್‌ ರೆಹಮಾನ್‌, ತಸ್ಕಿನ್‌ ಅಹ್ಮದ್‌, ಹಸನ್‌ ಮಹ್ಮದ್‌, ಎಬಾದತ್‌ ಹುಸೇನ್‌, ನಾಸುಮ್‌ ಅಹ್ಮದ್‌, ಮಹಮದುಲ್ಲ, ನಜ್ಮುಲ್‌ ಹುಸೇನ್‌, ನುರುಲ್‌ ಹಸನ್‌, ಶೊರಿಫ‌ುಲ್‌ ಇಸ್ಲಾಮ್‌.

ಟಾಪ್ ನ್ಯೂಸ್

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರಕಾರ ಬದ್ದ: ಸತೀಶ್ ಜಾರಕಿಹೊಳಿ

ನೇಹಾ ಹತ್ಯೆ ಖಂಡನೀಯ… ಅಪರಾಧಿಗೆ ಕಠಿಣ ಶಿಕ್ಷೆ ನೀಡಲು ಸರ್ಕಾರ ಬದ್ಧ: ಸತೀಶ್ ಜಾರಕಿಹೊಳಿ

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!

Lok Sabha Poll: 2019ರಲ್ಲಿ ಕೇವಲ 9 ರೂ. ಇದ್ದ ವ್ಯಕ್ತಿ ಈಗ 108 ಕೋಟಿ ಒಡೆಯ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-qweqwewq

Congress;ಕಾರ್ಕಳ ಕ್ಷೇತ್ರದಿಂದ 40 ಸಾವಿರ ಲೀಡ್ ಗೆ ಪ್ರಯತ್ನ: ಮುನಿಯಾಲು

1-wewqe

Belgavi; ತಂದೆ ಮಾಡಿದ ಅಭಿವೃದ್ಧಿ ಕೆಲಸಗಳನ್ನು ಮುಂದುವರಿಸುತ್ತೇವೆ: ಶ್ರದ್ಧಾ ಶೆಟ್ಟರ್

2-aa

ಮೂಡುಬೆಳ್ಳೆ : ವೈಭವದ ಹಸಿರುವಾಣಿ ಹೊರೆಕಾಣಿಕೆ ಮೆರವಣಿಗೆ

1-weew

Mudigere; ಹುಲಿ ಹತ್ಯೆ ಆರೋಪದ ಮೇಲೆ ಇಬ್ಬರ ಬಂಧನ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.