ಭಾರತ-ಬಾಂಗ್ಲಾದೇಶ ಟೆಸ್ಟ್‌ : ಕುಲ್‌ ದೀಪ್‌, ಪೂಜಾರ ಕಮಾಲ್; ಭಾರತಕ್ಕೆ ಭರ್ಜರಿ ಜಯ


Team Udayavani, Dec 18, 2022, 10:48 AM IST

ಭಾರತ-ಬಾಂಗ್ಲಾದೇಶ ಟೆಸ್ಟ್‌ : ಕುಲ್‌ ದೀಪ್‌, ಪೂಜಾರ ಕಮಾಲ್; ಭಾರತಕ್ಕೆ ಭರ್ಜರಿ ಜಯ

ಚತ್ತೋಗ್ರಾಮ್‌: ಭಾರತ-ಬಾಂಗ್ಲಾದೇಶ ನಡುವಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ಭಾರತ 188 ರನ್‌ ಗಳ ಅಂತರದಿಂದ ಭರ್ಜರಿ ಜಯ ಸಾಧಿಸಿದೆ.

ಗೆಲುವಿಗೆ 513 ರನ್ನುಗಳ ಕಠಿನ ಗುರಿ ಪಡೆದಿದ್ದ ಬಾಂಗ್ಲಾ, 4ನೇ ದಿನದ ಅಂತ್ಯಕ್ಕೆ 6 ವಿಕೆಟ್‌ ಕಳೆದುಕೊಂಡು 272 ರನ್‌ ಗಳಿಸಿತ್ತು. ವಿಕೆಟ್‌ ಉಳಿಸಿಕೊಂಡು ಕೊನೆಯ ದಿನ ಬಾಂಗ್ಲಾ 241 ರನ್‌ ಪೇರಿಸಬೇಕಿತ್ತು.ದ್ವಿತೀಯ ಇನ್ನಿಂಗ್ಸ್‌ ನಲ್ಲಿ ಬಾಂಗ್ಲಾ 324 ರನ್ನಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಭಾರತದ ಆಲ್‌ ರೌಂಡ್‌ ಆಟಕ್ಕೆ ಶರಣಾಗಿದೆ.

ಮೊದಲ ಇನ್ನಿಂಗ್ಸ್‌ ನಲ್ಲಿ ಭಾರತ ಚೇತೇಶ್ವರ್ ಪೂಜಾರಾ‌ 90 ರನ್‌, ಶ್ರೇಯಸ್‌ ಅಯ್ಯರ್‌ ಅವರ 86 ರನ್‌, ಅಶ್ವಿನ್‌ ಅವರ 58, ರಿಷಬ್‌ ಪಂತ್‌ 46 ರನ್ ಹಾಗೂ ಕೊನೆಯಲ್ಲಿ ಕುಲ್‌ ದೀಪ್‌ ಅವರ 40 ಸಹಾಯದಿಂದ 404‌ ರನ್‌ ಗಳಿಸಿತ್ತು.

ಮೊದಲ ಇನ್ನಿಂಗ್ಸ್‌ ರನ್‌ ಬೆನ್ನಟ್ಟಿದ ಬಾಂಗ್ಲಾ ಆಟಗಾರರು 150 ರನ್‌ ಗೆ ಸರ್ವಪತನವಾಯಿತು. ಕುಲ್‌ ದೀಪ್‌ 5 ವಿಕೆಟ್‌ ಹಾಗೂ ಸಿರಾಜ್‌ 3 ವಿಕೆಟ್‌ ಪಡೆದು ಶ್ರೇಷ್ಠಮಟ್ಟದ ಬೌಲಿಂಗ್‌ ನಿಭಾಯಿಸಿದರು.

ಇದನ್ನೂ ಓದಿ: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮ: ಕಿಂಗ್ ಪಿನ್ ಆರ್‌.ಡಿ.ಪಾಟೀಲ್ ಜೈಲಿನಿಂದ ಬಿಡುಗಡೆ

ಎರಡನೇ ಇನ್ನಿಂಗ್ಸ್‌ ನಲ್ಲೂ ಭರ್ಜರಿ ಬ್ಯಾಟ್‌ ಮಾಡಿದ ಪೂಜಾರ 102 ರನ್‌ ತಂಡಕ್ಕೆ ನೀಡಿದರು. ಶುಭ್‌ಮನ್ ಗಿಲ್ ಚೊಚ್ಚಲ 110 ಗಳಿಸಿದರು.  ಎರಡನೇ ಇನ್ನಿಂಗ್ ನಲ್ಲಿ ಎರಡು ವಿಕೆಟ್ ನಷ್ಟಕ್ಕೆ 258 ರನ್ ಗಳಿಸಿದ ಭಾರತವು ಡಿಕ್ಲೇರ್ ಮಾಡಿಕೊಂಡು, ಬಾಂಗ್ಲಾಗೆ 513 ರನ್ ಗಳ ಗೆಲುವಿನ ಗುರಿ ನೀಡಿತ್ತು.

4ನೇ ದಿನ ಬಾಂಗ್ಲಾದ ಎಡಗೈ ಆರಂಭಕಾರ ಝಾಕಿರ್‌ ಹಸನ್‌ ಚೊಚ್ಚಲ ಟೆಸ್ಟ್‌ ಪಂದ್ಯದಲ್ಲೇ ಶತಕ ಬಾರಿಸಿದ್ದು ಬಾಂಗ್ಲಾ ಆಸರೆಯಾಯಿತು. ನಜ್ಮುಲ್‌ ಅವರನ್ನು ಕೀಪರ್‌ ಪಂತ್‌ ಕೈಗೆ ಕ್ಯಾಚ್‌ ಕೊಡಿಸಿದ ಉಮೇಶ್‌ ಯಾದವ್‌ ಭಾರತಕ್ಕೆ ಮೊದಲ ಯಶಸ್ಸು ತಂದಿತ್ತರು. ಬಳಿಕ ಬೆನ್ನು ಬೆನ್ನಿಗೆ ವಿಕೆಟ್‌ ಉರುಳುತ್ತ ಹೋಯಿತು. ಯಾಸಿರ್‌ ಅಲಿ (5), ಲಿಟನ್‌ ದಾಸ್‌ (19), ರಹೀಂ (23), ನುರುಲ್‌ ಹಸನ್‌ (3) ಬೇಗನೇ ಪೆವಿಲಿಯನ್‌ ಸೇರಿಕೊಂಡರು.

ಶಾಕಿಬ್ ಅಲ್ ಹಸನ್ ಕಪ್ತಾನನಾಗಿ ಹೆಚ್ಚು ಹೊತ್ತು ಕ್ರಿಸ್‌ ನಲ್ಲಿ ನಿಂತರೂ ಅವರಿಗೆ ಜೊತೆಯಾಟ ನೀಡುವಲ್ಲಿ ಉಳಿದವರು ವಿಫಲರಾದರು.

ಅಂತಿಮವಾಗಿ 324 ರನ್ನಿಗೆ ಬಾಂಗ್ಲಾ ಸರ್ವಪತನ ಕಂಡಿತು. ಟೀಮ್‌ ಇಂಡಿಯಾದ ಪರವಾಗಿ ಅಕ್ಷರ್‌ ಪಟೇಲ್‌ 4 ವಿಕೆಟ್‌ ಪಡೆದರೆ, ಕುಲ್‌ ದೀಪ್‌ ಯಾದವ್‌ 3 ಪ್ರಮುಖ ವಿಕೆಟ್‌ ಗಳನ್ನು ಪಡೆದರು. ಕುಲ್‌ ದೀಪ್‌ ಯಾದವ್‌ ಎರಡೂ  ಇನ್ನಿಂಗ್ಸ್‌ ಸೇರಿ 8 ವಿಕೆಟ್‌ ಗಳನ್ನು ಪಡೆದುಕೊಂಡರು.

ಟಾಪ್ ನ್ಯೂಸ್

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ಮುರುಘಾ ಶ್ರೀ ಜಾಮೀನು ರದ್ದು: ವಾರದಲ್ಲಿ ಶರಣಾಗಲು ತಾಕೀತು

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ

ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು

ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

Lok Sabha Election ಹಂತ-1: ಬಹಿರಂಗ ಪ್ರಚಾರಕ್ಕೆ ಇಂದು ತೆರೆ, ನಾಳೆ ಮನೆ ಪ್ರಚಾರ

arvind kejriwal aap

Lok Sabha Election; ಕೇಜ್ರಿವಾಲ್‌ ಸೆರೆ‌ ಆಪ್‌ಗೆ ವರವೇ? ಶಾಪವೇ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.