ತಂಡದಿಂದ ಬಿಡುಗಡೆಗೊಂಡ ರಿಷಭ್ ಪಂತ್, ಶುಭಮನ್ ಗಿಲ್
Team Udayavani, Nov 23, 2019, 11:21 PM IST
ಕೋಲ್ಕತಾ: ಬಾಂಗ್ಲಾದೇಶ ವಿರುದ್ಧದ ದ್ವಿತೀಯ ಟೆಸ್ಟ್ ಪಂದ್ಯದಲ್ಲೂ ಅವಕಾಶ ಪಡೆಯದ ರಿಷಭ್ ಪಂತ್ ಮತ್ತು ಶುಭಮನ್ ಗಿಲ್ ಅವರನ್ನು ಭಾರತ ತಂಡದಿಂದ ಬಿಡುಗಡೆ ಮಾಡಲಾಗಿದೆ. ಇವರಿನ್ನು ಸಯ್ಯದ್ ಮುಷ್ತಾಕ್ ಅಲಿ ಟಿ20 ಪಂದ್ಯಾವಳಿಯಲ್ಲಿ ಆಡಲು ಲಭ್ಯರಿರುತ್ತಾರೆ ಎಂದು ಬಿಸಿಸಿಐ ತಿಳಿಸಿದೆ.
ಕೋಲ್ಕತಾ ಟೆಸ್ಟ್ನಲ್ಲಿ ಕೀಪರ್ ವೃದ್ಧಿಮಾನ್ ಸಾಹಾ ಅವರಿಗೆ ಸ್ಟಾಂಡ್ಬೈ ಆಗಿ ಆಂಧ್ರಪ್ರದೇಶದ ಕೆ. ಶ್ರೀಕರ್ ಭರತ್ ಅವರನ್ನು ಆರಿಸಲಾಗಿದೆ. ಪ್ರಥಮ ದರ್ಜೆ ಕ್ರಿಕೆಟ್ನಲ್ಲಿ ಅಮೋಘ ಪ್ರದರ್ಶನ ಕಾಯ್ದುಕೊಂಡು ಬಂದಿರುವ ಭರತ್, 69 ಪಂದ್ಯಗಳಿಂದ 3,909 ರನ್ ಬಾರಿಸಿದ್ದಾರೆ. ಇದರಲ್ಲಿ 8 ಶತಕ, 20 ಅರ್ಧ ಶತಕ ಸೇರಿದೆ.
ರಿಷಭ್ ಪಂತ್ ಮತ್ತು ಶುಭ ಮನ್ ಗಿಲ್ ಬಾಂಗ್ಲಾ ಟೆಸ್ಟ್ ಸರಣಿಗಾಗಿ ಆಯ್ಕೆಯಾಗಿದ್ದರೂ ಆಡುವ ಬಳಗದಲ್ಲಿ ಕಾಣಿಸಿ ಕೊಂಡಿರಲಿಲ್ಲ. ಹೀಗಾಗಿ ಈಗ ಸಾಗುತ್ತಿರುವ ಕೋಲ್ಕತಾ ಪಂದ್ಯದ ವೇಳೆ ಇವರ ಆವಶ್ಯಕತೆ ಇಲ್ಲದ ಕಾರಣ ತಂಡದಿಂದ ಬಿಡುಗಡೆ ಮಾಡಲಾಯಿತು. ದಿಲ್ಲಿ ತಂಡ ಸಯ್ಯದ್ ಮುಷ್ತಾಕ್ ಅಲಿ ಟಿ20 ಸರಣಿಯ “ಸೂಪರ್ ಲೀಗ್’ನಲ್ಲಿ ಇನ್ನೂ 2 ಪಂದ್ಯಗಳನ್ನು ಆಡಲಿದ್ದು, ಪಂತ್ ಆಯ್ಕೆಗೆ ಲಭ್ಯರಿರುತ್ತಾರೆ.
ಇನ್ನೊಂದೆಡೆ ಶುಭಮನ್ ಗಿಲ್ ಪಂಜಾಬ್ ತಂಡದ ಉಳಿದೆರಡು ಸೂಪರ್ ಲೀಗ್ ಪಂದ್ಯಗಳಲ್ಲಿ ಆಡಬಹುದಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್
Team India: ಟಿ20 ವಿಶ್ವಕಪ್ ತಂಡ ರಾಹುಲ್ಗೆ ಚಾನ್ಸ್, ಹಾರ್ದಿಕ್ ಪಾಂಡ್ಯಗೆ ಕೊಕ್?
Chess: ವಿಶ್ವ ಚೆಸ್ ಚಾಂಪಿಯನ್ಶಿಪ್: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್
Archery World Cup: ಆರ್ಚರಿ ವಿಶ್ವಕಪ್ ರಿಕರ್ವ್ ವಿಭಾಗದಲ್ಲೂ ಭಾರತ ಫೈನಲ್ಗೆ
IPL; ಸನ್ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ
MUST WATCH
ಹೊಸ ಸೇರ್ಪಡೆ
Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…
Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್ ಟನ್ ವಿವಿ ವಿದ್ಯಾರ್ಥಿನಿ ಬಂಧನ
ಸುಳ್ಳು ಹೇಳುವುದರಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಸ್ಸೀಮರು: ಸಚಿವ ಪ್ರಹ್ಲಾದ್ ಜೋಶಿ
Kalaburagi: ಸೋಲುವ ಭೀತಿಯಿಂದ ಪ್ರಧಾನಿಯಿಂದ ಕೀಳು ಮಟ್ಟದ ಹೇಳಿಕೆ: ಡಾ. ಅಜಯಸಿಂಗ್
Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ