ಬಾಂಗ್ಲಾ ವಿರುದ್ಧ ಟಿ20: ಕೊಹ್ಲಿಗೆ ವಿಶ್ರಾಂತಿ

ರೋಹಿತ್‌ ಶರ್ಮಗೆ ನಾಯಕತ್ವ, ಆಲ್‌ರೌಂಡರ್‌ ಶಿವಂ ದುಬೆ ಹೊಸಮುಖ

Team Udayavani, Oct 24, 2019, 9:30 PM IST

IND-BA-VK

ಮುಂಬೈ: ನ.3ರಿಂದ ಬಾಂಗ್ಲಾದೇಶ ವಿರುದ್ಧ ಆರಂಭವಾಗಲಿರುವ ಕ್ರಿಕೆಟ್‌ ಸರಣಿಗಾಗಿ, ಭಾರತ ತಂಡ ಪ್ರಕಟಿಸಲಾಗಿದೆ. 3 ಪಂದ್ಯಗಳ ಟಿ20 ಸರಣಿಗೆ ನಾಯಕ ವಿರಾಟ್‌ ಕೊಹ್ಲಿಗೆ ವಿಶ್ರಾಂತಿ ನೀಡಲಾಗಿದೆ. ರೋಹಿತ್‌ ಶರ್ಮ ನಾಯತ್ವ ವಹಿಸಲಿದ್ದಾರೆ. ಇನ್ನು ಟಿ20 ತಂಡದಲ್ಲಿ ಕಂಡುಬಂದಿರುವ ಮಹತ್ವದ ಬದಲಾವಣೆಯೆಂದರೆ, ಆಲ್‌ರೌಂಡರ್‌ ಶಿವಂ ದುಬೆಗೆ ಸ್ಥಾನ ಸಿಕ್ಕಿದ್ದು. ವೇಗದ ಬೌಲಿಂಗ್‌ ಜೊತೆಗೆ, ಆಕ್ರಮಣಕಾರಿಯಾಗಿ ಬ್ಯಾಟ್‌ ಮಾಡುವ ಸಾಮರ್ಥ್ಯವಿರುವುದರಿಂದ ಮುಂಬೈ ಆಟಗಾರನಿಗೆ ಸ್ಥಾನ ಸಿಕ್ಕಿದೆ.

ದುಬೆಗೆ ಸ್ಥಾನ ಸಿಗಲು ಇನ್ನೊಂದು ಮಹತ್ವದ ಕಾರಣ ಖ್ಯಾತ ಆಲ್‌ರೌಂಡರ್‌ ಹಾರ್ದಿಕ್‌ ಪಾಂಡ್ಯ, ಶಸ್ತ್ರಚಿಕಿತ್ಸೆಗೊಳಗಾಗಿರುವುದು. ವಿಜಯ್‌ ಶಂಕರ್‌ಗೆ ಸ್ಥಾನ ನೀಡಲು ಆಯ್ಕೆಗಾರರು ಮನಸ್ಸು ಮಾಡಲಿಲ್ಲ, ಅದರ ಬದಲು ಹೊಸ ಮುಖ ದುಬೆಯನ್ನು ಪ್ರಯತ್ನಿಸಿ ನೋಡಲು ತೀರ್ಮಾನಿಸಿದಂತಿದೆ. ಜಸ್ತ್ರಚಿಕಿತ್ಸೆಗೊಳಗಾಗಿರುವ ಇನ್ನೊಬ್ಬ ಆಟಗಾರ, ವೇಗಿ ಜಸಿøàತ್‌ ಬುಮ್ರಾ ಕೂಡ ತಂಡದಿಂದ ಹೊರಗುಳಿದಿದ್ದಾರೆ. ಗಾಯಗೊಂಡಿರುವ ಇನ್ನೊಬ್ಬ ವೇಗಿ ಭುವನೇಶ್ವರ್‌ ಕುಮಾರ್‌ಗೂ ಸ್ಥಾನ ಸಿಕ್ಕಿಲ್ಲ.

ಟಿ20 ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಮಹತ್ವದ ಹೆಸರೆಂದರೆ ವೇಗಿ ನವದೀಪ್‌ ಸೈನಿ. ವಿಂಡೀಸ್‌ ಪ್ರವಾಸದಲ್ಲಿ ತಂಡಕ್ಕೆ ಆಯ್ಕೆಯಾಗಿ ಉತ್ತಮ ಪ್ರದರ್ಶನವನ್ನೇ ನೀಡಿದ್ದ ಅವರು ಈಗ ಫಿಟೆ°ಸ್‌ ಹೊಂದಿಲ್ಲ ಎಂಬ ಕಾರಣಕ್ಕೆ ತಂಡದಿಂದ ಕೈಬಿಡಲಾಗಿದೆ. ಅವರ ಜಾಗದಲ್ಲಿ ಶಾದೂìಲ್‌ ಠಾಕೂರ್‌ರನ್ನು ಸೇರಿಸಿಕೊಳ್ಳಲಾಗಿದೆ.

ಸಂಜುಗೆ ಸ್ಥಾನ: 2015ರಲ್ಲಿ ಜಿಂಬಾಬ್ವೆ ವಿರುದ್ಧ ಒಂದೇ ಒಂದು ಟಿ20 ಪಂದ್ಯ ಆಡಿದ್ದ ಸಂಜು ಸ್ಯಾಮ್ಸನ್‌, ಮತ್ತೆ ಭಾರತ ತಂಡ ಪ್ರದರ್ಶಿಸಿದ್ದಾರೆ. ವಿಜಯ್‌ ಹಜಾರೆ ಕೂಟದಲ್ಲಿ ದ್ವಿಶತಕ ಸಹಿತ 410 ರನ್‌ ಪೇರಿಸಿರುವುದು ಅವರ ಆಯ್ಕೆಗೆ ಕಾರಣ. ಅತ್ಯುತ್ತಮ ವಿಕೆಟ್‌ ಕೀಪರ್‌ ಆಗಿರುವ ಅವರು ರಿಷಭ್‌ ಪಂತ್‌ಗೆ ಸವಾಲಾಗುವ ಸಾಧ್ಯತೆಯನ್ನು ಅಲ್ಲಗಳೆಯುವಂತಿಲ್ಲ. ಇದೇ ವೇಳೆ ರಿಷಭ್‌ ಪಂತ್‌ಗೂ ಮತ್ತೂಂದು ಅವಕಾಶ ನೀಡಲಾಗಿದೆ.

ರಾಹುಲ್‌, ಮನೀಷ್‌ಗೆ ಸ್ಥಾನ: ಇತ್ತೀಚೆಗೆ ಕಳಪೆ ಲಯದಿಂದ ಟೆಸ್ಟ್‌ ತಂಡದಲ್ಲಿ ಸ್ಥಾನ ಕಳೆದುಕೊಂಡಿರುವ ಕೆ.ಎಲ್‌.ರಾಹುಲ್‌, ಟಿ20 ತಂಡದಲ್ಲಿ ಸ್ಥಾನ ಉಳಿಸಿಕೊಳ್ಳುತ್ತಾರಾ ಎಂಬ ಅನುಮಾನವಿತ್ತು. ಅದೀಗ ನಿವಾರಣೆಯಾಗಿದ ರಾಹುಲ್‌ ಸ್ಥಾನ ಪಡೆದಿದ್ದಾರೆ. ಅವರ ಜೊತೆಗೆ ಮನೀಷ್‌ ಪಾಂಡೆ ಕೂಡ ಆಯ್ಕೆಯಾಗಿದ್ದಾರೆ. ಬೇಸರದ ಸಂಗತಿಯೆಂದರೆ ತಮಗೆ ಅವಕಾಶ ಸಿಕ್ಕಿದಾಗೆಲ್ಲ ಅತ್ಯುತ್ತಮವಾಗಿ ಆಡಿ ಭರವಸೆ ಮೂಡಿಸಿರುವ ಮನೀಷ್‌ ಪಾಂಡೆಗೆ, ಇತ್ತೀಚೆಗೆ 11ರ ಬಳಗದಲ್ಲಿ ಆಡಲು ಅವಕಾಶವೇ ಸಿಗುತ್ತಿಲ್ಲ. ಸಿಕ್ಕರೂ ಅವರು 5-6 ಕ್ರಮಾಂಕದಲ್ಲಿ ಬ್ಯಾಟಿಂಗ್‌ಗೆ ಬರುವಾಗ ಬಹುತೇಕ ಪಂದ್ಯ ಮುಗಿದುಹೋಗಿರುತ್ತದೆ. ಆದ್ದರಿಂದ ತಂಡದಲ್ಲಿ ತಮ್ಮ ಸ್ಥಾನ ಸ್ಥಿರ ಮಾಡಿಕೊಳ್ಳಲು ಇನ್ನೂ ಪರದಾಡುತ್ತಿದ್ದಾರೆ. ಇನ್ನು ರಾಹುಲ್‌ ಇಂಗ್ಲೆಂಡ್‌ನ‌ಲ್ಲಿ ನಡೆದ ಏಕದಿನ ವಿಶ್ವಕಪ್‌ನಲ್ಲಿ ಅತ್ಯುತ್ತಮ ಪ್ರದರ್ಶನ ನೀಡಿದ್ದರೂ, ಮುಂದೆ ವಿಂಡೀಸ್‌ನಲ್ಲಿ ಏಕದಿನ ಪಂದ್ಯದಲ್ಲಿ ಅವಕಾಶವನ್ನೇ ಪಡೆಯಲಿಲ್ಲ!

ಟೆಸ್ಟ್‌ ತಂಡದಲ್ಲಿ ಬದಲಿಲ್ಲ
ಇನ್ನು ಭಾರತ ಟೆಸ್ಟ್‌ ತಂಡದಲ್ಲಿ ಮಹತ್ವದ ಬದಲಾವಣೆಗಳಿಲ್ಲ. ಗಾಯಗೊಂಡಿದ್ದ ಕುಲದೀಪ್‌ ಯಾದವ್‌ ಜಾಗದಲ್ಲಿ ಸ್ಥಾನ ಪಡೆದಿದ್ದ ಶಹಬಾಜ್‌ ನದೀಂ ತಂಡದಿಂದ ಹೊರಬಿದ್ದಿದ್ದಾರೆ. ಕುಲದೀಪ್‌ ಹಿಂತಿರುಗಿದ್ದಾರೆ. ಕೊಹ್ಲಿ ತಾವೇ ತಂಡವನ್ನು ಮುನ್ನಡೆಸಲಿದ್ದಾರೆ. ಉಳಿದಂತೆ ಯಾವುದೇ ಬದಲಾವಣೆಗಳಿಲ್ಲದ ತಂಡ ಕಣಕ್ಕಿಳಿಯಲಿದೆ. 2 ಪಂದ್ಯಗಳ ಟೆಸ್ಟ್‌ ಸರಣಿ ನ.14ರಿಂದ ಆರಂಭವಾಗಲಿದೆ.

ಟಿ20 ತಂಡ
ರೋಹಿತ್‌ ಶರ್ಮ (ನಾಯಕ), ಶಿಖರ್‌ ಧವನ್‌, ಕೆ.ಎಲ್‌.ರಾಹುಲ್‌, ಸಂಜು ಸ್ಯಾಮ್ಸನ್‌, ಶ್ರೇಯಸ್‌ ಐಯ್ಯರ್‌, ಮನೀಷ್‌ ಪಾಂಡೆ, ರಿಷಭ್‌ ಪಂತ್‌, ವಾಷಿಂಗ್ಟನ್‌ ಸುಂದರ್‌, ಕೃಣಾಲ್‌ ಪಾಂಡ್ಯ, ಯಜುವೇಂದ್ರ ಚಹಲ್‌, ರಾಹುಲ್‌ ಚಹರ್‌, ದೀಪಕ್‌ ಚಹರ್‌, ಖಲೀಲ್‌ ಅಹ್ಮದ್‌, ಶಿವಂ ದುಬೆ, ಶಾರ್ದೂಲ್ ಠಾಕೂರ್.

ಟೆಸ್ಟ್‌ ತಂಡ
ವಿರಾಟ್‌ ಕೊಹ್ಲಿ (ನಾಯಕ), ರೋಹಿತ್‌ ಶರ್ಮ, ಮಾಯಾಂಕ್‌ ಅಗರ್ವಾಲ್‌, ಚೇತೇಶ್ವರ ಪೂಜಾರ, ಅಜಿಂಕ್ಯ ರಹಾನೆ, ಹನುಮ ವಿಹಾರಿ, ವೃದ್ಧಿಮಾನ್‌ ಸಹಾ (ವಿಕೆಟ್‌ ಕೀಪರ್‌), ರವೀಂದ್ರ ಜಡೇಜ, ಆರ್‌.ಅಶ್ವಿ‌ನ್‌, ಕುಲದೀಪ್‌ ಯಾದವ್‌, ಮೊಹಮ್ಮದ್‌ ಶಮಿ, ಉಮೇಶ್‌ ಯಾದವ್‌, ಇಶಾಂತ್‌ ಶರ್ಮ, ಶುಬನ್‌ ಗಿಲ್‌, ರಿಷಭ್‌ ಪಂತ್‌.

ಟಾಪ್ ನ್ಯೂಸ್

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

Andhra Student passed away After Getting Trapped In Frozen Kyrgyzstan Waterfall

Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು

weapon used to attack Salman’s house was seized in the river!

Tapi River; ಸಲ್ಮಾನ್‌ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!

ಕಾಂಗ್ರೆಸ್‌ ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ

Congress ಸರ್ಕಾರದ್ದು ತಾಲಿಬಾನ್‌ ಆಡಳಿತ ಮಾದರಿ: ಸಿ.ಟಿ.ರವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

“Will not play T20 World Cup for West Indies”: Sunil Narine

T20 Cricket: “ವಿಂಡೀಸ್‌ ಪರ ಟಿ20 ವಿಶ್ವಕಪ್‌ ಆಡಲ್ಲ’: ಸುನೀಲ್‌ ನಾರಾಯಣ್‌ ಸ್ಪಷ್ಟ ನುಡಿ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು

Ireland postponed Aussie series

Dublin; ಆಸೀಸ್‌ ಸರಣಿ ಮುಂದೂಡಿದ ಐರ್ಲೆಂಡ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.