ಟಿ20 ವಿಶ್ವಕಪ್; ಸೆಮಿ ಹೋರಾಟದಲ್ಲಿ ಮಂಕಾದ ಟೀಮ್ ಇಂಡಿಯಾ: ಆಂಗ್ಲರ ಜಯಭೇರಿ
10 ವಿಕೆಟ್ ಗಳ ಅಮೋಘ ಜಯ ಸಾಧಿಸಿದ ಬಟ್ಲರ್ ಪಡೆ
Team Udayavani, Nov 10, 2022, 4:43 PM IST
ಆಡಿಲೇಡ್ : ಟಿ20 ವಿಶ್ವಕಪ್ನ ಎರಡನೇ ಸೆಮಿಫೈನಲ್ ಪಂದ್ಯದಲ್ಲಿ ಭಾರತ ತಂಡದ ಎದುರು ಆಂಗ್ಲರು ಪರಾಕ್ರಮ ಮೆರೆದು 10 ವಿಕೆಟ್ ಗಳ ಅತ್ಯಮೋಘ ಜಯ ಸಾಧಿಸಿ ಫೈನಲ್ ಗೆ ಲಗ್ಗೆ ಇಟ್ಟಿದ್ದಾರೆ. ಫಲಿತಾಂಶದಿಂದ ಫೈನಲ್ ನಲ್ಲಿ ಭಾರತ ಮತ್ತು ಪಾಕಿಸ್ಥಾನದ ರೋಚಕ ಕದನ ನಿರೀಕ್ಷಿಸಿದ್ದ ಕ್ರಿಕೆಟ್ ಅಭಿಮಾನಿಗಳಿಗೆ ಭಾರಿ ನಿರಾಸೆಯಾಗಿದೆ.
ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ ಪಟ್ಟ ಭಾರತ ತಂಡ ಇಂಗ್ಲೆಂಡ್ ಗೆ ಗೆಲ್ಲಲು 169 ರನ್ ಗಳ ಗುರಿ ನೀಡಿತು. ಗುರಿ ಬೆನ್ನಟ್ಟಿದ ಆಂಗ್ಲರ ಆರಂಭಿಕರು ಮೊದಲಿನಿಂದಲೂ ಆಕ್ರಮಣಕಾರಿಯಾಗಿ ಭಾರತದ ಬೌಲರ್ ಗಳನ್ನು ದಂಡಿಸಿ ಅಳುಕದೆ ಸುಲಭದಲ್ಲಿ ಗುರಿ ಮುಟ್ಟಿದರು. 16 ಓವರ್ ಗಳಲ್ಲಿ 170 ರನ್ ಗಳಿಸುವ ಮೂಲಕ ಜಯದ ಕೇಕೆ ಹಾಕಿದರು.
ನಾಯಕ ಜೋಸ್ ಬಟ್ಲರ್ 80 ರನ್ ಗಳಿಸಿ ಬ್ಯಾಟಿಂಗ್ ಬಲ ತೋರಿದರು. 49 ಎಸೆತಗಳಲ್ಲಿ 9 ಬೌಂಡರಿ ಮತ್ತು 3 ಸಿಕ್ಸರ್ ಗಳು ಅವರ ಇನ್ನಿಂಗ್ಸ್ ನಲ್ಲಿ ಒಳಗೊಂಡಿದ್ದವು. ಇವರಿಗೆ ಭರ್ಜರಿ ಸಾಥ್ ನೀಡಿದ ಅಲೆಕ್ಸ್ ಹೇಲ್ಸ್ 86 ರನ್ ಗಳಿಸಿದರು. 47 ಎಸೆತಗಳಲ್ಲಿ ಈ ಮೊತ್ತ ಅವರು ತನ್ನದಾಗಿಸಿಕೊಂಡರು. ಆಕರ್ಷಕ ಇನ್ನಿಂಗ್ಸ್ ನಲ್ಲಿ 4 ಬೌಂಡರಿ ಮತ್ತು 7 ಭರ್ಜರಿ ಸಿಕ್ಸರ್ ಗಳು ಒಳಗೊಂಡಿದ್ದವು.
ಭಾರತದ ಆರಂಭಿಕ ಆಟಗಾರರ ವೈಫಲ್ಯ ಎದ್ದು ಕಂಡಿತು. ಕೆಎಲ್ ರಾಹುಲ್ ಕೇವಲ 5 ರನ್ ಗಳಿಸಿ ಔಟಾದರು. ನಾಯಕ ರೋಹಿತ್ ಶರ್ಮಾ 28 ಎಸೆತಗಳಲ್ಲಿ 27 ರನ್ ಗಳಿಸಿದರು. ಸಂಕಷ್ಟದಲ್ಲಿ ನೆರವಾಗುವ ಭರವಸೆಯ ಆಟಗಾರ ವಿರಾಟ್ ಕೊಹ್ಲಿ 40 ಎಸೆತಗಳಲ್ಲಿ 50 ರನ್ ಗಳಿಸಿ ಔಟಾದರು. ಸೂರ್ಯಕುಮಾರ್ ಯಾದವ್ 14 ರನ್ ಗಳಿಸಿದರು.
ಸ್ಪೋಟಕ ಆಟವಾಡಿದ ಹಾರ್ದಿಕ್ ಪಾಂಡ್ಯ 33 ಎಸೆತಗಳಲ್ಲಿ 63 ರನ್ ಕೊಡುಗೆ ಸಲ್ಲಿಸಿದರು. 4 ಬೌಂಡರಿ ಮತ್ತು 5 ಸಿಕ್ಸರ್ ಗಳನ್ನು ಸಿಡಿಸಿ ತಂಡದ ಉತ್ತಮ ಮೊತ್ತಕ್ಕೆ ಕಾರಣವಾದರು. ಕೊನೆಯ ಎಸೆತದಲ್ಲಿ ಹಿಟ್ ವಿಕೆಟ್ ಆದರು. ರಿಷಭ್ ಪಂತ್ 6 ರನ್ ಗಳಿಸಿದ್ದ ವೇಳೆ ರನ್ ಔಟಾದರು. 6 ವಿಕೆಟ್ ನಷ್ಟಕ್ಕೆ 168 ರನ್ ಕಲೆ ಹಾಕುವಲ್ಲಿ ಕೊಹ್ಲಿ ಮತ್ತು ಪಾಂಡ್ಯ ಪ್ರಮುಖ ಪಾತ್ರ ವಹಿಸಿದರು.
ಇಂಗ್ಲೆಂಡ್ ಪರ ಕ್ರಿಸ್ ಜೋರ್ಡಾನ್ 3 ವಿಕೆಟ್, ಆದಿಲ್ ರಶೀದ್ 4ಓವರ್ ಗಳಲ್ಲಿ ಕೇವಲ 20 ರನ್ ನೀಡಿ 1 ವಿಕೆಟ್ ಪಡೆದರು. ಕ್ರಿಸ್ ವೋಕ್ಸ್ 1 ವಿಕೆಟ್ ಪಡೆದರು.
ಭಾನುವಾರ (ನ 13) ಪಾಕಿಸ್ಥಾನ ಮತ್ತು ಇಂಗ್ಲೆಂಡ್ ನಡುವೆ ಫೈನಲ್ ಹಣಾಹಣಿ ನಡೆಯಲಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
IPL; ವಾಂಖೇಡೆಯಲ್ಲಿ ಬೌಲರ್ಗಳ ಮೇಲುಗೈ: ಮುಂಬೈ ವಿರುದ್ಧ ಕೆಕೆಆರ್ ಜಯಭೇರಿ
Mumbai Indians ನಾಯಕತ್ವ ಕಳೆದುಕೊಂಡ ಬಗ್ಗೆ ಮೊದಲ ಬಾರಿ ಮಾತನಾಡಿದ ರೋಹಿತ್
ICC Men’s Test Team Rankings; ಎರಡನೇ ಸ್ಥಾನಕ್ಕೆ ಜಾರಿದ ಟೀಂ ಇಂಡಿಯಾ
Thomas Cup: ಬ್ಯಾಡ್ಮಿಂಟನ್; ಭಾರತದ ಆಟಕ್ಕೆ ತೆರೆ
Hockey: ವನಿತಾ ಹಾಕಿ ನಾಯಕತ್ವದಲ್ಲಿ ಪರಿವರ್ತನೆ: ಸವಿತಾ ಬದಲು ಸಲೀಮಾ ಟೇಟೆ
MUST WATCH
ಹೊಸ ಸೇರ್ಪಡೆ
Dakshina Kannada ಕುಡಿಯುವ ನೀರು ಸಮಸ್ಯೆಯಾಗದಂತೆ ಕ್ರಮ: ಜಿಲ್ಲಾಧಿಕಾರಿ ಸೂಚನೆ
Sullia ವಿವಿಧೆಡೆ ಕಾಡಾನೆಗಳಿಂದ ಕೃಷಿ ಹಾನಿ : ಅರಣ್ಯ ಇಲಾಖೆ ಅಧಿಕಾರಿಗಳಿಂದ ಪರಿಶೀಲನೆ
Theme Park Karkala ಅವಶೇಷ ತೆರವಿಗೆ ಕೋರ್ಟ್ ಆದೇಶ; ಜಿಲ್ಲಾಧಿಕಾರಿ ತಡೆ!
E.D. ಬಂಧನ ಪ್ರಶ್ನಿಸಿದ್ದ ಸೊರೇನ್ ಅರ್ಜಿ ತಿರಸ್ಕಾರ
Parashurama Theme Park; ಕೊನೆಯ ಸಾಕ್ಷ್ಯವೂ ನಾಶಕ್ಕೆ ಯತ್ನ: ಉದಯ ಕುಮಾರ್ ಶೆಟ್ಟಿ ಆರೋಪ