ಇಂದು ಕೊಹ್ಲಿ ಪಡೆಗೆ ಕೊನೆಯ ಅಭ್ಯಾಸ ಪಂದ್ಯ


Team Udayavani, Oct 20, 2021, 8:55 AM IST

fhgfd

ದುಬೈ: ಇಂಗ್ಲೆಂಡನ್ನು 7 ವಿಕೆಟ್‌ಗಳಿಂದ ಬಗ್ಗುಬಡಿದು ಟಿ20 ವಿಶ್ವಕಪ್‌ಗೆ ಪರಿಪೂರ್ಣ ಅಭ್ಯಾಸವೊಂದನ್ನು ನಡೆಸಿದ ಭಾರತ ಬುಧವಾರದ ಕೊನೆಯ ಅಭ್ಯಾಸ ಪಂದ್ಯದಲ್ಲಿ ಆಸ್ಟ್ರೇಲಿಯವನ್ನು ಎದುರಿಸಲಿದೆ. ಇನ್ನೊಂದೆಡೆ ಕಾಂಗರೂ ಪಡೆ ತನ್ನ ಮೊದಲ ಅಭ್ಯಾಸ ಪಂದ್ಯದಲ್ಲಿ ನ್ಯೂಜಿಲೆಂಡನ್ನು ಮಣಿಸಿದ ಹುರುಪಿನಲ್ಲಿದೆ.

ಹೀಗಾಗಿ ಇದು ಗೆದ್ದವರ ಗುದ್ದಾಟ. ತನ್ನ ಮೊದಲ ಲೀಗ್‌ ಪಂದ್ಯದಲ್ಲೇ ಬದ್ಧ ಎದುರಾಳಿ ಪಾಕಿಸ್ತಾನವನ್ನು ಎದುರಿಸುವುದರಿಂದ ಭಾರತಕ್ಕೆ ಆಸೀಸ್‌ ಎದುರಿನ ಮುಖಾಮುಖೀ ಅತ್ಯಂತ ಮಹತ್ವ ದ್ದಾಗಿದೆ. ಮುಖ್ಯವಾಗಿ ಬ್ಯಾಟಿಂಗ್‌ ಸಂಯೋ ಜನೆಯೊಂದನ್ನು ಅಂತಿಮಗೊಳಿಸಬೇಕಿದೆ. ಇಂಗ್ಲೆಂಡ್‌ ಎದುರಿನ ಪಂದ್ಯಕ್ಕೂ ಮುನ್ನ ರೋಹಿತ್‌ ಶರ್ಮ ಅವರಿಗೆ ಜೋಡಿ ಯಾರು ಎಂಬ ಚರ್ಚೆ ನಡೆದಿತ್ತು.

ಆದರೆ ಅವರು ಬ್ಯಾಟಿಂಗಿಗೇ ಬರಲಿಲ್ಲ. ಕೆ.ಎಲ್‌.ರಾಹುಲ್‌ -ಇಶಾನ್‌ ಕಿಶನ್‌ ಸ್ಫೋಟಕ ಆರಂಭದ ಮೂಲಕ ಆಂಗ್ಲ ಪಡೆಯನ್ನು ಬೆಚ್ಚಿ ಬೀಳಿಸಿ ದರು. ನಾಯಕ ಕೊಹ್ಲಿ ಒನ್‌ಡೌನ್‌ನಲ್ಲಿ ಬಂದರು. ಸೂರ್ಯಕುಮಾರ್‌ ಯಾದವ್‌ಗೂ ಮೊದಲು ರಿಷಭ್‌ ಪಂತ್‌ ಆಗಮಿಸಿದರು.

ರೋಹಿತ್‌ ಆರಂಭ: ಆಸ್ಟ್ರೇಲಿಯದ ವಿರುದ್ಧ ಆರಂಭಿಕ ಜೋಡಿ ಬದಲಾಗುವುದು ಬಹುತೇಕ ನಿಶ್ಚಿತ. ಇಲ್ಲಿ ಖಾಯಂ ಆರಂಭಿಕ ರೋಹಿತ್‌ ಶರ್ಮ ಬರಬೇಕಿದೆ. ಆಗ ರಾಹುಲ್‌ ಅಥವಾ ಇಶಾನ್‌ ಕಿಶನ್‌, ಇಬ್ಬರ ಲ್ಲೊಬ್ಬರಿಗೆ ವಿಶ್ರಾಂತಿ ನೀಡಬೇಕಾಗುತ್ತದೆ. ಅಥವಾ ಒಬ್ಬರು ಕೆಳ ಕ್ರಮಾಂಕದಲ್ಲಿ ಕಾಣಿಸಿಕೊಳ್ಳಲೂಬಹುದು.

ರೋಹಿತ್‌, ರಾಹುಲ್‌, ಕೊಹ್ಲಿ, ಇಶಾನ್‌ ಕಿಶನ್‌, ಸೂರ್ಯಕುಮಾರ್‌, ಪಂತ್‌… ಈ ಬ್ಯಾಟಿಂಗ್‌ ಸರದಿಯನ್ನು ಟಿ20 ಪ್ರಧಾನ ಸಮರಕ್ಕೆ ಅಂತಿಮಗೊಳಿಸುವ ಯೋಜನೆ ಭಾರತದ್ದು. ಆಲ್‌ರೌಂಡರ್‌ ಸ್ಥಾನಕ್ಕೆ ಹಾರ್ದಿಕ್‌ ಪಾಂಡ್ಯ ಫಿಟ್‌ ಆಗಲಾರರು ಎಂಬುದು ಈಗಾಗಲೇ ಸಾಬೀತಾಗಿದೆ.

ಕಾರಣ, ಅವರೀಗ ಬೌಲಿಂಗ್‌ ನಡೆಸುವ ಸ್ಥಿತಿಯಲ್ಲಿಲ್ಲ. ಆದರೂ ಆಸ್ಟ್ರೇಲಿಯ ವಿರುದ್ಧ ತಜ್ಞ ಬ್ಯಾಟ್‌ Õಮನ್‌ ಆಗಿ ಅವರು ಆಡುವ ಸಾಧ್ಯತೆ ಇದೆ. ಈ ಸ್ಥಾನಕ್ಕೆ ಶಾದೂìಲ್‌ ಠಾಕೂರ್‌ ಕೂಡ μಟ್‌ ಆಗಬಲ್ಲರು. ರವೀಂದ್ರ ಜಡೇಜ ಹೊರತುಪಡಿಸಿದರೆ ಬೌಲಿಂಗ್‌, ಬ್ಯಾಟಿಂಗ್‌ ಎರಡರನ್ನೂ ನಿಭಾಯಿಸಬಲ್ಲ ಸಾಮರ್ಥ್ಯ ಠಾಕೂರ್‌ ಅವರಲ್ಲಿದೆ. ಆಸೀಸ್‌ ವಿರುದ್ಧ ಭುವನೇಶ್ವರ್‌ ಅವರನ್ನು ಕೈಬಿಟ್ಟು ಠಾಕೂರ್‌ಗೆ ಅವಕಾಶ ನೀಡುವುದು ಖಚಿತ.

ಇಂಗ್ಲೆಂಡ್‌ ಎದುರು ಅತ್ಯಂತ ದುಬಾರಿಯಾದ ಭುವನೇಶ್ವರ್‌ 4 ಓವರ್‌ ಗಳಿಂದ 54 ರನ್‌ ಬಿಟ್ಟುಕೊಟ್ಟದ್ದು ಭಾರತದ ಪಾಲಿಗೆ ಚಿಂತೆಯ ಸಂಗತಿಯಾಗಿದೆ. ಉಳಿದಂತೆ ಬುಮ್ರಾ, ಅಶ್ವಿ‌ನ್‌ ಉತ್ತಮ ನಿಯಂತ್ರಣ ಸಾಧಿಸಿದ್ದರು. ಶಮಿ ಮೊದಲ ಸ್ಪೆಲ್‌ನಲ್ಲಿ ಘಾತಕವಾಗಿ ಪರಿಣಮಿಸಿದ್ದರು. ಅಷ್ಟೇನೂ ಪರಿಣಾಮ ಬೀರದ ರಾಹುಲ್‌ ಚಹರ್‌ ಬದಲು ವರುಣ್‌ ಚಕ್ರವರ್ತಿ ದಾಳಿಗಿಳಿಯುವ ಸಾಧ್ಯತೆ ಇದೆ.

ಟಾಪ್ ನ್ಯೂಸ್

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ

ಇಂದು ಬೆಳಗಾವಿಯಲ್ಲಿ ಮೋದಿ ವಾಸ್ತವ್ಯ; ಜೊಲ್ಲೆ ಸಮೂಹದ ವೆಲ್‌ಕಮ್‌ ಹೊಟೇಲ್‌ನಲ್ಲಿ ವ್ಯವಸ್ಥೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

1-weqeqwewe

Sunriser Hyderabad; ಚೇಸಿಂಗ್‌ ಸಾಮರ್ಥ್ಯ ಪ್ರದರ್ಶಿಸಬೇಕಿದೆ: ವೆಟೋರಿ

1-ewqere

World Record;ಮಹಿಳಾ ಅಂತಾರಾಷ್ಟ್ರೀಯ ಟಿ20 ಪಂದ್ಯ: ರನ್‌ ನೀಡದೆ 7 ವಿಕೆಟ್‌!

badminton

Badminton; ಇಂದಿನಿಂದ ಥಾಮಸ್‌ ಕಪ್‌ ಟೂರ್ನಿ ಆರಂಭ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.