ನಾಳೆ ಭಾರತ-ಇಂಗ್ಲೆಂಡ್‌ ಸೆಮಿ ಕಾದಾಟ


Team Udayavani, Mar 4, 2020, 7:15 AM IST

india-england-semi-final

ಸಿಡ್ನಿ: ವನಿತಾ ಟಿ20 ವಿಶ್ವಕಪ್‌ ಸೆಮಿಫೈನಲ್‌ ಹೋರಾಟಕ್ಕೆ ವೇದಿಕೆ ಸಿದ್ಧವಾಗಿದೆ. ಅಜೇಯ ಭಾರತ, ಹಾಲಿ ಚಾಂಪಿಯನ್‌ ಆಸ್ಟ್ರೇಲಿಯ, ಇಂಗ್ಲೆಂಡ್‌ ಮತ್ತು ದಕ್ಷಿಣ ಆಫ್ರಿಕಾ ಸೆಮಿಫೈನಲ್‌ ಹಂತಕ್ಕೇರಿವೆ. ಗುರುವಾರ ನಡೆಯುವ ಸೆಮಿಫೈನಲ್‌ ಹೋರಾಟದಲ್ಲಿ ಭಾರತವು ಇಂಗ್ಲೆಂಡ್‌ ಸವಾಲನ್ನು ಎದುರಿಸಲಿದ್ದರೆ ಆಸ್ಟ್ರೇಲಿಯವು ದಕ್ಷಿಣ ಆಫ್ರಿಕಾ ವಿರುದ್ಧ ಸೆಣಸಾಟ ನಡೆಸಲಿದೆ.

ದ. ಆಫ್ರಿಕಾಕ್ಕೆ ಮಳೆಯ ಲಾಭ
ಮಂಗಳವಾರ ನಡೆದ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್‌ ಇಂಡೀಸ್‌ ನಡುವಣ ಲೀಗ್‌ ಪಂದ್ಯ ಭಾರೀ ಮಳೆಯಿಂದ ಒಂದೂ ಎಸೆತ ಕಾಣದೆ ರದ್ದುಗೊಂಡಿತ್ತು. ಇದರಿಂದಾಗಿ ಇತ್ತಂಡಗಳಿಗೂ ಒಂದೊಂದು ಅಂಕ ನೀಡಲಾಯಿತು. ಈ ಒಂದು ಅಂಕದ ಲಾಭವೆತ್ತಿದ ದಕ್ಷಿಣ ಆಫ್ರಿಕಾ “ಬಿ’ ಗುಂಪಿನ ಅಗ್ರಸ್ಥಾನ ಅಲಂಕರಿಸಿದರೆ ಇಂಗ್ಲೆಂಡ್‌ ದ್ವಿತೀಯ ಸ್ಥಾನಕ್ಕೆ ಕುಸಿಯಿತು. ಇದರಿಂದಾಗಿ ಇಂಗ್ಲೆಂಡ್‌ “ಎ’ ವಿಭಾಗದ ಅಗ್ರಸ್ಥಾನಿ ಅಜೇಯ ಭಾರತದ ವಿರುದ್ಧ ಸೆಮಿಫೈನಲ್‌ನಲ್ಲಿ ಆಡಲಿದೆ.

ಫೈನಲ್‌ ನಿರೀಕ್ಷೆಯಲ್ಲಿ ಭಾರತ
ಭಾರತ ಇದುವರೆಗೆ ಟಿ20 ವಿಶ್ವಕಪ್‌ನಲ್ಲಿ ಫೈನಲ್‌ ಪ್ರವೇಶ ಪಡೆದಿಲ್ಲ. ಈ ಸಲ ಪ್ರಶಸ್ತಿ ಗೆಲ್ಲುವ ಸುವರ್ಣಾವಕಾಶ ಭಾರತಕ್ಕೆ ಲಭಿಸಿದೆ. ಲೀಗ್‌ ಹಂತದ ಎಲ್ಲ ಪಂದ್ಯಗಳನ್ನು ಗೆದ್ದು ಆತ್ಮವಿಶ್ವಾಸದಲ್ಲಿರುವ ಭಾರತ ಚಾಂಪಿಯನ್‌ ಎನಿಸಿಕೊಳ್ಳುವ ಉತ್ಸಾಹದಲ್ಲಿದೆ. ಅದಕ್ಕಾಗಿ ಇನ್ನೆರಡು ಪಂದ್ಯ ಗೆದ್ದರೆ ಸಾಕಾಗುತ್ತದೆ. ಆದರೆ ಮುಂದಿನೆರಡು ಪಂದ್ಯ ಅಷ್ಟು ಸುಲಭದ್ದಲ್ಲ.

ಲೀಗ್‌ನಲ್ಲಿ ಮೂರು ಗೆಲುವು ಮತ್ತು ಒಂದು ಸೋಲು ಕಂಡಿರುವ ಇಂಗ್ಲೆಂಡ್‌ ತಂಡವು ಗುರುವಾರ ಭಾರತಕ್ಕೆ ಪ್ರಬಲ ಸವಾಲು ನೀಡುವ ಸಾಧ್ಯತೆಯಿದೆ. ಇದು 2018ರ ವಿಶ್ವಕಪ್‌ನ ಪುನರಾವರ್ತನೆಯಾಗಿದೆ. 2018ರಲ್ಲಿ ಭಾರತಕ್ಕೆ ಇಂಗ್ಲೆಂಡ್‌ ಸೆಮಿಫೈನಲ್‌ನಲ್ಲಿ ಎದುರಾಗಿತ್ತು. ಇಲ್ಲಿ ಇಂಗ್ಲೆಂಡ್‌ ಜಯಭೇರಿ ಮೊಳಗಿಸಿ ಫೈನಲ್‌ ಪ್ರವೇಶಿಸಿತ್ತು. ಆದರೆ ಫೈನಲ್‌ನಲ್ಲಿ ಆಸ್ಟ್ರೇಲಿಯಕ್ಕೆ ಶರಣಾಗಿತ್ತು.

ಲೀಗ್‌ನಲ್ಲಿ ಆಡಿದ ನಾಲ್ಕು ಪಂದ್ಯಗಳನ್ನು ಗೆದ್ದಿರುವ ಭಾರತವು ಸೆಮಿಫೈನಲ್‌ನಲ್ಲೂ ಭರ್ಜರಿ ಆಟ ಪ್ರದರ್ಶಿಸುವ ಸಾಧ್ಯತೆಯಿದೆ. ಬ್ಯಾಟಿಂಗ್‌ನಲ್ಲಿ ಮಿಂಚಿದರೆ ಭಾರತ ಮೇಲುಗೈ ಸಾಧಿಸಬಹುದು. ಗೆದ್ದರೆ ಫೈನಲ್‌ನಲ್ಲಿ ಮತ್ತೆ ಆಸ್ಟ್ರೇಲಿಯ ಎದುರಾಗುವ ಸಾಧ್ಯತೆಯಿದೆ.

ಗುರುವಾರ ನಡೆಯುವ ಇನ್ನೊಂದು ಸೆಮಿಫೈನಲ್‌ ಪಂದ್ಯವು ಆಸ್ಟ್ರೇಲಿಯ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಡೆಯಲಿದೆ. ಈ ಪಂದ್ಯ ಸಿಡ್ನಿ ಕ್ರಿಕೆಟ್‌ ಮೈದಾನದಲ್ಲಿ ನಡೆಯಲಿದೆ.

ಸೆಮಿಗೆ ಮಳೆ ಬಂದರೆ…
ಸಿಡ್ನಿ: ವನಿತಾ ಟಿ20 ವಿಶ್ವಕಪ್‌ನ ಎರಡು ಸೆಮಿಫೈನಲ್‌ ಪಂದ್ಯಗಳು ಸಿಡ್ನಿಯಲ್ಲಿ ಗುರುವಾರ ನಡೆಯಲಿವೆ. ಸಿಡ್ನಿಯಲ್ಲಿ ಮಂಗಳವಾರ ಸುರಿದ ಭಾರೀ ಮಳೆಯಿಂದ ದಕ್ಷಿಣ ಆಫ್ರಿಕಾ ಮತ್ತು ವೆಸ್ಟ್‌ಇಂಡೀಸ್‌ ನಡುವಣ ಪಂದ್ಯ ಯಾವುದೇ ಎಸೆತ ಕಾಣದೆ ರದ್ದಾಗಿತ್ತು. ಸಿಡ್ನಿಯಲ್ಲಿ ಇನ್ನೂ ಕೆಲವು ದಿನ ಮಳೆ ಬರುವ ಸಾಧ್ಯತೆಯಿದೆ.

ಗುರುವಾರ ಎರಡೂ ಸೆಮಿಫೈನಲ್‌ ಪಂದ್ಯ ನಡೆಯಲಿದೆ. ಒಂದು ವೇಳೆ ಪಂದ್ಯಕ್ಕೆ ಮಳೆ ಬಂದರೆ ಏನಾಗಬಹುದು. ಐಸಿಸಿ ನಿಯಮದ ಪ್ರಕಾರ ಪ್ರತಿಯೊಂದು ತಂಡ ಕಡಿಮೆಪಕ್ಷ 10 ಓವರ್‌ ಆಡಬೇಕಾಗುತ್ತದೆ. ಒಂದು ವೇಳೆ 10 ಓವರ್‌ ಆಡಲು ಸಾಧ್ಯವಾಗದಿದ್ದರೆ ಪಂದ್ಯವನ್ನು ರದ್ದುಗೊಳಿಸಲಾಗುತ್ತದೆ.

ಸೆಮಿಫೈನಲ್‌ ಪಂದ್ಯಗಳಿಗೆ ಮೀಸಲು ದಿನ ಇಲ್ಲದ ಕಾರಣ ಒಂದು ವೇಳೆ ಪಂದ್ಯ ರದ್ದುಗೊಂಡರೆ ಲೀಗ್‌ ಹಂತದಲ್ಲಿ ಅಗ್ರಸ್ಥಾನ ಪಡೆದ ಆಧಾರದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ಫೈನಲಿಗೇರಲಿವೆ. ಫೈನಲ್‌ ಪಂದ್ಯಕ್ಕೆ ಮೀಸಲು ದಿನ ಇರಲಿದೆ.

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.