ಇಂಗ್ಲೆಂಡಿಗೆ ತೆರಳಿದ ಪಂತ್‌, ಅಯ್ಯರ್‌


Team Udayavani, Jun 21, 2022, 6:39 AM IST

ಇಂಗ್ಲೆಂಡಿಗೆ ತೆರಳಿದ ಪಂತ್‌, ಅಯ್ಯರ್‌

ಬೆಂಗಳೂರು: ದಕ್ಷಿಣ ಆಫ್ರಿಕಾ ವಿರುದ್ಧದ ಟಿ20 ಸರಣಿ ಮುಗಿದ ಬೆನ್ನಲ್ಲೇ ಭಾರತದ ಟೆಸ್ಟ್‌ ತಂಡದ ಸದಸ್ಯರಾದ ರಿಷಭ್‌ ಪಂತ್‌ ಮತ್ತು ಶ್ರೇಯಸ್‌ ಅಯ್ಯರ್‌ ಇಂಗ್ಲೆಂಡ್‌ನ‌ತ್ತ ಪ್ರಯಾಣ ಬೆಳೆಸಿದರು.

ಕೊರೊನಾದಿಂದ ಮುಂದೂಡಲ್ಪಟ್ಟ ಸರಣಿಯ 5ನೇ ಹಾಗೂ ಅಂತಿಮ ಪಂದ್ಯವನ್ನು ಭಾರತ ಆಡಲಿಕ್ಕಿದೆ. ಈ ಪಂದ್ಯ ಜುಲೈ ಒಂದರಂದು ಬರ್ಮಿಂಗ್‌ಹ್ಯಾಮ್‌ನಲ್ಲಿ ಆರಂಭವಾಗಲಿದೆ. ಸರಣಿಯಲ್ಲಿ ಭಾರತ 2-1 ಮುನ್ನಡೆಯಲ್ಲಿದೆ.

ಭಾರತ ತಂಡದ ಉಳಿದ ಸದಸ್ಯರೆಲ್ಲ ಈಗಾಗಲೇ ಇಂಗ್ಲೆಂಡಿಗೆ ತಲುಪಿದ್ದು, ಅಭ್ಯಾಸವನ್ನೂ ಆರಂಭಿಸಿದ್ದಾರೆ. ಟಿ20 ತಂಡದಲ್ಲಿದುದ್ದರಿಂದ ಪಂತ್‌ ಮತ್ತು ಅಯ್ಯರ್‌ ಅವರ ಪ್ರಯಾಣ ವಿಳಂಬಗೊಂಡಿತು.

ಬದಲಾದ ನಾಯಕರು :

ಭಾರತ-ಇಂಗ್ಲೆಂಡ್‌ ನಡುವಿನ ಟೆಸ್ಟ್‌ ಸರಣಿ ಬದಲಾದ ನಾಯಕರೊಂದಿಗೆ ಮುಂದುವರಿಯುತ್ತಿರುವುದು ವಿಶೇಷ. ಕಳೆದ ವರ್ಷದ ಈ ಸರಣಿ ವೇಳೆ ಭಾರತವನ್ನು ವಿರಾಟ್‌ ಕೊಹ್ಲಿ ಮತ್ತು ಇಂಗ್ಲೆಂಡ್‌ ತಂಡವನ್ನು ಜೋ ರೂಟ್‌ ಮುನ್ನಡೆಸಿದ್ದರು. ಈಗ ಇವರಿಬ್ಬರೂ ನಾನಾ ಕಾರಣಗಳಿಂದ ನಾಯಕತ್ವದಿಂದ ಕೆಳಗಿಳಿದಿದ್ದಾರೆ. ಇವರ ಸ್ಥಾನಕ್ಕೆ ರೋಹಿತ್‌ ಶರ್ಮ ಮತ್ತು ಬೆನ್‌ ಸ್ಟೋಕ್ಸ್‌ ಬಂದಿದ್ದಾರೆ. “ಬರ್ಮಿಂಗ್‌ಹ್ಯಾಮ್‌ ಲಕ್‌’ ಯಾರಿಗಿದೆಯೋ ನೋಡಬೇಕು.

ಪೂಜಾರ ಪುನರಾಗಮನ :

ಇಂಗ್ಲೆಂಡ್‌ ಸರಣಿ ಅರ್ಧದಲ್ಲೇ ನಿಂತ ಬಳಿಕ ಶ್ರೀಲಂಕಾ ವಿರುದ್ಧ ತವರಿನಲ್ಲಿ ಆಡಲಾದ ಟೆಸ್ಟ್‌ ಸರಣಿಯಲ್ಲಿ ಚೇತೇಶ್ವರ್‌ ಪೂಜಾರ ಸ್ಥಾನ ಕಳೆದುಕೊಂಡಿದ್ದರು. ಆದರೆ ಇಂಗ್ಲೆಂಡ್‌ ಕೌಂಟಿಯಲ್ಲಿ ಸಸೆಕ್ಸ್‌ ಪರ ಅಮೋಘ ಬ್ಯಾಟಿಂಗ್‌ ಪ್ರದರ್ಶನ ನೀಡಿ ತಂಡಕ್ಕೆ ಮರಳಿದ್ದಾರೆ. ಅವರು ಕೌಂಟಿ ಪರ 720 ರನ್‌ ಬಾರಿಸಿ ಮಿಂಚಿದರು. 2 ಶತಕ ಹಾಗೂ ಒಂದು ದ್ವಿಶತಕವನ್ನು ಇದು ಒಳಗೊಂಡಿದೆ.

ಅಂದು ತಂಡದಲ್ಲಿದ್ದ ಅಜಿಂಕ್ಯ ರಹಾನೆ ಈ ಬಾರಿ ಸ್ಥಾನ ಕಳೆದುಕೊಂಡಿದ್ದಾರೆ. ಅವರು ಫಾರ್ಮ್ನಲ್ಲಿ ಇಲ್ಲದಿರುವುದೇ ಇದಕ್ಕೆ ಕಾರಣ. ಹಾಗೆಯೇ ಕೆ.ಎಲ್‌. ರಾಹುಲ್‌ ಗಾಯಾಳಾಗಿ ಈ ಸರಣಿಯಿಂದ ಬೇರ್ಪಟ್ಟಿದ್ದಾರೆ.

ಭಾರತ ತಂಡ: ರೋಹಿತ್‌ ಶರ್ಮ (ನಾಯಕ), ಶುಭಮನ್‌ ಗಿಲ್‌, ವಿರಾಟ್‌ ಕೊಹ್ಲಿ, ಶ್ರೇಯಸ್‌ ಅಯ್ಯರ್‌, ಹನುಮ ವಿಹಾರಿ, ಚೇತೇಶ್ವರ್‌ ಪೂಜಾರ, ರಿಷಭ್‌ ಪಂತ್‌, ಕೆ.ಎಸ್‌. ಭರತ್‌, ರವೀಂದ್ರ ಜಡೇಜ, ಆರ್‌. ಅಶ್ವಿ‌ನ್‌, ಶಾರ್ದೂಲ್‌ ಠಾಕೂರ್‌, ಮೊಹಮ್ಮದ್‌ ಶಮಿ, ಜಸ್‌ಪ್ರೀತ್‌ ಬುಮ್ರಾ, ಮೊಹಮ್ಮದ್‌ ಸಿರಾಜ್‌, ಉಮೇಶ್‌ ಯಾದವ್‌, ಪ್ರಸಿದ್ಧ್ ಕೃಷ್ಣ.

ಟೀಮ್‌ ಇಂಡಿಯಾ ಕಠಿನ ಅಭ್ಯಾಸ :

ಈಗಾಗಲೇ ಇಂಗ್ಲೆಂಡ್‌ಗೆ ಆಗಮಿಸಿರುವ ಭಾರತೀಯ ಕ್ರಿಕೆಟ್‌ ತಂಡದ ಸದಸ್ಯರು ಕಠಿನ ಅಭ್ಯಾಸದಲ್ಲಿ ತೊಡಗಿದ್ದಾರೆ. ಲಂಡನ್‌ನಿಂದ ಲೀಸೆಸ್ಟರ್‌ಶೈರ್‌ಗೆ ಭಾರತೀಯರ ಅಭ್ಯಾಸ ತಾಣ ಸ್ಥಳಾಂತರಗೊಂಡಿದ್ದು, ಸೋಮವಾರ ಇಲ್ಲಿ ಮೊದಲ ಸುತ್ತಿನ ನೆಟ್‌ ಪ್ರ್ಯಾಕ್ಟೀಸ್‌ ನಡೆಸಿದರು.

ನಾಯಕ ರೋಹಿತ್‌ ಶರ್ಮ ಮತ್ತು ಶುಭಮನ್‌ ಗಿಲ್‌ ನಿರಂತರ ಬ್ಯಾಟಿಂಗ್‌ ಅಭ್ಯಾಸದಲ್ಲಿ ನಿರತರಾಗಿದ್ದುದು ಕಂಡುಬಂತು. ಇಬ್ಬರೂ ಫ್ರಂಟ್‌ಫ‌ುಟ್‌ ಡಿಫೆನ್ಸ್‌ಗೆ ಹೆಚ್ಚಿನ ಗಮನ ನೀಡಿದರು.

ಮುಂದೂಡಲ್ಪಟ್ಟ ಏಕೈಕ ಟೆಸ್ಟ್‌ ಪಂದ್ಯಕ್ಕೂ ಮುನ್ನ ಭಾರತ ತಂಡ ಜೂ. 24ರಿಂದ 27ರ ತನಕ ಲೀಸೆಸ್ಟರ್‌ಶೈರ್‌ ಕೌಂಟಿ ವಿರುದ್ಧ ಅಭ್ಯಾಸ ಪಂದ್ಯವೊಂದನ್ನು ಆಡಲಿದೆ.

 

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಎಲ್ಲೆ ಮೀರಿ ವಿಕೆಟ್‌ ಸಂಭ್ರಮಾಚರಣೆಡೆಲ್ಲಿ ವೇಗಿ ರಸಿಕ್‌ ಸಲಾಂಗೆ ಛೀಮಾರಿ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

IPL: ಇಂಪ್ಯಾಕ್ಟ್ ಪ್ಲೇಯರ್‌ ನಿಯಮಕ್ಕೆ ಅಕ್ಷರ್‌ ಪಟೇಲ್‌ ಕೂಡ ವಿರೋಧ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.