ಏಷ್ಯಾ ಕಪ್‌ ಕ್ರಿಕೆಟ್‌: ಭಾರತಕ್ಕೆ ಇಂದು ಹಾಂಕಾಂಗ್‌ ಎದುರಾಳಿ

ಬ್ಯಾಟಿಂಗ್‌, ಬೌಲಿಂಗ್‌ ಶಕ್ತಿ ಪ್ರದರ್ಶನಕ್ಕೆ ಉತ್ತಮ ವೇದಿಕೆ

Team Udayavani, Aug 31, 2022, 9:00 AM IST

ಏಷ್ಯಾ ಕಪ್‌ ಕ್ರಿಕೆಟ್‌: ಭಾರತಕ್ಕೆ ಇಂದು ಹಾಂಕಾಂಗ್‌ ಎದುರಾಳಿ

ದುಬಾೖ: ಏಷ್ಯಾ ಕಪ್‌ ಕ್ರಿಕೆಟ್‌ ಕೂಟದ ಆರಂಭಿಕ ಪಂದ್ಯದಲ್ಲಿ ತನ್ನ ಸಾಂಪ್ರದಾಯಿಕ ಎದುರಾಳಿ ಪಾಕಿಸ್ಥಾನ ವನ್ನು ಐದು ವಿಕೆಟ್‌ಗಳಿಂದ ಬಗ್ಗುಬಡಿದ ಭಾರತವು ಬುಧವಾರ ನಡೆಯುವ ಲೀಗ್‌ ಹಂತದ ಇನ್ನೊಂದು ಪಂದ್ಯ ದಲ್ಲಿ ಹಾಂಕಾಂಗ್‌ ತಂಡವನ್ನು ಎದುರಿಸಲಿದೆ. ಅಷ್ಟೊಂದು ಬಲಿಷ್ಠವಲ್ಲದ ಹಾಂಕಾಂಗ್‌ ವಿರುದ್ಧ ಭಾರತೀಯ ಆಟಗಾರರಿಗೆ ತಮ್ಮ ಶಕ್ತಿ, ಸಾಮರ್ಥ್ಯವನ್ನು ಪ್ರದರ್ಶಿಸಲು ಒಳ್ಳೆಯ ವೇದಿಕೆ ಸಿಕ್ಕಿದೆ.

ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಈ ಹಿಂದಿನ ಪಂದ್ಯಗಳಲ್ಲಿ ವೈಫ‌ಲ್ಯ ಅನು ಭವಿಸಿದ ಆಟಗಾರರು ಇಲ್ಲಿ ಭರ್ಜರಿ ಪ್ರದರ್ಶನ ನೀಡುವ ಸಾಧ್ಯತೆಯಿದೆ. ಕೆ.ಎಲ್‌. ರಾಹುಲ್‌, ಕೊಹ್ಲಿ ಮುಂತಾದ ಆಟಗಾರರಿಗೆ ತಮ್ಮ ಲಯವನ್ನು ಮರಳಿ ಪಡೆಯಲು ಇದಕ್ಕಿಂತ ಸುಲಭವಾದ ಎದುರಾಳಿ ಸಿಗುವ ಸಾಧ್ಯತೆಯಿಲ್ಲ.

ಈ ಪಂದ್ಯ ರೋಹಿತ್‌ ಶರ್ಮ ಪಡೆಗೆ ಬಲುದೊಡ್ಡ ನೆಟ್‌ ಅಭ್ಯಾ ಸವೆಂದು ಹೇಳಬಹುದು. ಹೆಚ್ಚಾಗಿ ಪಾಕಿಸ್ಥಾನ ಮತ್ತು ಭಾರತೀಯ ವಲಸಿಗರನ್ನು ಒಳಗೊಂಡ ಈ ತಂಡವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಆಡಿದ ಅನುಭವವನ್ನು ಪಡೆದಿಲ್ಲ. ಭಾರತೀಯ ಆಟಗಾರರು ಯಾವ ರೀತಿ ಆಡುತ್ತಾರೆ ಎಂಬುದೇ ಇಲ್ಲಿ ಮುಖ್ಯವಾಗಿದೆ.

ಟಿ20 ಪಂದ್ಯದಲ್ಲಿ ಬ್ಯಾಟಿಂಗ್‌ ಮತ್ತು ಬೌಲಿಂಗ್‌ ಬಹಳಷ್ಟು ಪ್ರಾಮುಖ್ಯ ಪಡೆಯುತ್ತದೆ. ಎದುರಾಳಿ ತಂಡದ ರನ್‌ವೇಗಕ್ಕೆ ಕಡಿವಾಣ ಹಾಕಲು ತಂಡ ಯಶಸ್ವಿಯಾಗುವುದು ಅತೀ ಮುಖ್ಯವಾಗಿದೆ. ಇದೇ ವೇಳೆ ಬ್ಯಾಟ್ಸ್‌ಮನ್‌ಗಳು ಕೂಡ ಎದುರಾಳಿ ತಂಡದ ಬೌಲಿಂಗ್‌ ದಾಳಿಯನ್ನು ನಿಭಾಯಿಸಿ ವೇಗವಾಗಿ ರನ್‌ ಪೇರಿ ಸುವುದು ಅಗತ್ಯವಾಗಿದೆ. ಇಲ್ಲಿ ಆಟಗಾರರ ಗುಣಮಟ್ಟದ ಆಟವು ಪ್ರಮುಖ ಪಾತ್ರ ವಹಿಸುತ್ತದೆ. ಮುಂದೆ ಟಿ20 ವಿಶ್ವಕಪ್‌ ಇರುವ ಕಾರಣ ಭಾರತ ಈ ಪಂದ್ಯವನ್ನು ಕೂಡ ಗಂಭೀರವಾಗಿ ಪರಿಗಣಿಸಿ ಅಮೋಘ ಪ್ರದರ್ಶನ ನೀಡುವುದು ಅತೀ ಮುಖ್ಯ ಎನಿಸುತ್ತದೆ.

ನಿಸ್ಸಂಶಯವಾಗಿ ಹಾಂಕಾಂಗ್‌ನ ಬೌಲಿಂಗ್‌ ಗುಣಮಟ್ಟ ಪಾಕಿ ಸ್ಥಾನ ದಷ್ಟು ನಿಖರವಾಗಿಲ್ಲ. ಆದರೆ ಅವರ ದಾಳಿಯನ್ನು ಹಗುರವಾಗಿ ಕಾಣುವ ಸಾಧ್ಯತೆಯಿಲ್ಲ. ಅವರು ಯಾವ ರೀತಿ ಬೌಲಿಂಗ್‌ ಮಾಡುತ್ತಾರೆಂದು ನಿಖರವಾಗಿ ತಿಳಿದಿಲ್ಲ ವಾದ್ದರಿಂದ ಆಟಗಾರರು ಎಚ್ಚರಿಕೆ ಯಿಂದ ಆಡುವುದು ಅತೀ ಅಗತ್ಯ ವಾಗಿದೆ. ಹೀಗಾಗಿ ರಾಹುಲ್‌ ಸಹಿತ ಎಲ್ಲ ಆಟಗಾರರು ಬಹಳಷ್ಟು ಎಚ್ಚರಿಕೆ ಯಿಂದ ಆಡಿ ಉತ್ತಮ ಪ್ರದರ್ಶನ ನೀಡಲು ಪ್ರಯತ್ನಿಸಬೇಕಾಗಿದೆ.

ಪಾಕ್‌ ವಿರುದ್ಧ ಗೆಲುವಿನ ರೂವಾರಿ ಯಲ್ಲಿ ಒಬ್ಬರಾಗಿದ್ದ ರವೀಂದ್ರ ಜಡೇಜ 4ನೇ ಕ್ರಮಾಂಕದಲ್ಲಿ ಆಡುವ ಸಾಧ್ಯತೆ ಯಿದೆ ಎಂಬುದು ಆಸಕ್ತಿಯ ವಿಷಯ ವಾಗಿದೆ. ಇದೇ ವೇಳೆ ಕಾರ್ತಿಕ್‌ಗೆ ವಿಶ್ರಾಂತಿ ನೀಡಿ ಪಂತ್‌ ಅವರನ್ನು ಆಡಿಸುವ ಸಾಧ್ಯತೆಯಿದೆ ಎನ್ನಲಾಗಿದೆ.

ಇಂದಿನ ಪಂದ್ಯ
ಭಾರತ-ಹಾಂಕಾಂಗ್‌
ಸ್ಥಳ: ದುಬಾೖ
ಆರಂಭ: 7.30
ಪ್ರಸಾರ: ಸ್ಟಾರ್‌ ಸ್ಪೋರ್ಟ್ಸ್

ಟಾಪ್ ನ್ಯೂಸ್

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

ಬಿಜೆಪಿ-ಜೆಡಿಎಸ್‌ ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

BJP-JDS ಮೈತ್ರಿ ಮುಂದುವರಿಯುತ್ತದಾ?: ತೇಜಸ್ವಿನಿ ಗೌಡ

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

Hassan Pen Drive Case: ಕಾಂಗ್ರೆಸ್‌ ಪ್ರತಿಭಟನಕಾರರ ವಿರುದ್ಧ ಜೆಡಿಎಸ್‌ ದೂರು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

SIT ತನಿಖೆ ಆರಂಭ: ಇಬ್ಬರು ಸಂತ್ರಸ್ತೆಯರ ಹೇಳಿಕೆ ದಾಖಲು

BCCI

T20 World Cup: ಇಂದು ಭಾರತ ತಂಡ ಪ್ರಕಟ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

BCCI

T20 World Cup: ಇಂದು ಭಾರತ ತಂಡ ಪ್ರಕಟ?

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

K. S. Eshwarappa ಮೋದಿ ಫೋಟೋ ಬಳಕೆ: ಇನ್ನೂ ಬಾರದ ಕೋರ್ಟ್‌ ತೀರ್ಪು

1-wqqwqwqeqwe

Kodava Hockey: ಚೇಂದಂಡಕ್ಕೆ 3ನೇ ಪ್ರಶಸ್ತಿ

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

Mudigere; ಈಜಲು ಹೋಗಿದ್ದ ಎಂಜಿನಿಯರಿಂಗ್‌ ವಿದ್ಯಾರ್ಥಿ ಸಾವು

1-wwwewqe

IPL; ವಿಲ್‌ ಜಾಕ್ಸ್‌ ಭಾರೀ ಸಂಚಲನ: ಆರೇ ನಿಮಿಷದಲ್ಲಿ ಅರ್ಧ ಶತಕ!

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

PM ಮೋದಿ ಸ್ಟೇಟ್ಸ್‌ ಮ್ಯಾನ್‌ ಅಲ್ಲ, ಸೇಲ್ಸ್‌ಮ್ಯಾನ್‌: ಬಿ.ಕೆ ಹರಿಪ್ರಸಾದ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.