ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
Team Udayavani, Jun 26, 2022, 11:26 PM IST
ಡಬ್ಲಿನ್: ಭಾರತ-ಐರ್ಲೆಂಡ್ ನಡುವಿನ ಟಿ20 ಪಂದ್ಯಕ್ಕೆ ಮಳೆಯಿಂದ ಅಡಚಣೆಯಾಗಿದೆ. ಟಾಸ್ ಬಳಿಕ ಸುರಿದ ಮಳೆಯಿಂದಾಗಿ ಪಂದ್ಯದ ಆರಂಭ ವಿಳಂಬಗೊಂಡಿದೆ.
ಇದು ಹಾರ್ದಿಕ್ ಪಾಂಡ್ಯ ನಾಯಕತ್ವದ ಮೊದಲ ಪಂದ್ಯವಾಗಿದ್ದು, ಟಾಸ್ ಗೆದ್ದ ಅವರು ಐರ್ಲೆಂಡನ್ನು ಬ್ಯಾಟಿಂಗ್ಗೆ ಆಹ್ವಾನಿಸಿದರು.
ಈ ನಡುವೆ ವೇಗಿ ಉಮ್ರಾನ್ ಮಲಿಕ್ ಭಾರತದ ಪರ ಮೊದಲ ಅಂತಾರಾಷ್ಟ್ರೀಯ ಪಂದ್ಯ ಆಡುವ ಅವಕಾಶ ಪಡೆದರು. ಅವರಿಗೆ ತಂಡದ ಹಿರಿಯ ಬೌಲರ್ ಭುವನೇಶ್ವರ್ ಕುಮಾರ್ ಕ್ಯಾಪ್ ನೀಡಿ ಸ್ವಾಗತಿಸಿದರು. ಹರ್ಷಲ್ ಪಟೇಲ್ ಸ್ಥಾನ ಮಲಿಕ್ ಪಾಲಾಯಿತು.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಆಡಿದ ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಬದಲು ದೀಪಕ್ ಹೂಡಾ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ ಸ್ಥಾನ ಲಭಿಸಿತು.
ಐರ್ಲೆಂಡ್ ಪರ ಕಾನರ್ ಓಲ್ಫರ್ಟ್ ಟಿ20 ಪದಾರ್ಪಣೆಗೈದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ
Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ
Telangana: ಜಾರ್ಖಂಡ್ ಗವರ್ನರ್ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ
Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ
ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ