ಟಿ20 ಪಂದ್ಯ: ಟಾಸ್ ಗೆದ್ದ ಭಾರತ ಫೀಲ್ಡಿಂಗ್, ಮಳೆ ಅಡಚಣೆ, ಉಮ್ರಾನ್ ಮಲಿಕ್ ಪದಾರ್ಪಣೆ
Team Udayavani, Jun 26, 2022, 11:26 PM IST
ಡಬ್ಲಿನ್: ಭಾರತ-ಐರ್ಲೆಂಡ್ ನಡುವಿನ ಟಿ20 ಪಂದ್ಯಕ್ಕೆ ಮಳೆಯಿಂದ ಅಡಚಣೆಯಾಗಿದೆ. ಟಾಸ್ ಬಳಿಕ ಸುರಿದ ಮಳೆಯಿಂದಾಗಿ ಪಂದ್ಯದ ಆರಂಭ ವಿಳಂಬಗೊಂಡಿದೆ.
ಇದು ಹಾರ್ದಿಕ್ ಪಾಂಡ್ಯ ನಾಯಕತ್ವದ ಮೊದಲ ಪಂದ್ಯವಾಗಿದ್ದು, ಟಾಸ್ ಗೆದ್ದ ಅವರು ಐರ್ಲೆಂಡನ್ನು ಬ್ಯಾಟಿಂಗ್ಗೆ ಆಹ್ವಾನಿಸಿದರು.
ಈ ನಡುವೆ ವೇಗಿ ಉಮ್ರಾನ್ ಮಲಿಕ್ ಭಾರತದ ಪರ ಮೊದಲ ಅಂತಾರಾಷ್ಟ್ರೀಯ ಪಂದ್ಯ ಆಡುವ ಅವಕಾಶ ಪಡೆದರು. ಅವರಿಗೆ ತಂಡದ ಹಿರಿಯ ಬೌಲರ್ ಭುವನೇಶ್ವರ್ ಕುಮಾರ್ ಕ್ಯಾಪ್ ನೀಡಿ ಸ್ವಾಗತಿಸಿದರು. ಹರ್ಷಲ್ ಪಟೇಲ್ ಸ್ಥಾನ ಮಲಿಕ್ ಪಾಲಾಯಿತು.
ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯಲ್ಲಿ ಆಡಿದ ಶ್ರೇಯಸ್ ಅಯ್ಯರ್, ರಿಷಭ್ ಪಂತ್ ಬದಲು ದೀಪಕ್ ಹೂಡಾ ಮತ್ತು ಸೂರ್ಯಕುಮಾರ್ ಯಾದವ್ ಅವರಿಗೆ ಸ್ಥಾನ ಲಭಿಸಿತು.
ಐರ್ಲೆಂಡ್ ಪರ ಕಾನರ್ ಓಲ್ಫರ್ಟ್ ಟಿ20 ಪದಾರ್ಪಣೆಗೈದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ