ಭಾರತ-ಪಾಕಿಸ್ಥಾನ ಕೇವಲ ಮತ್ತೊಂದು ಪಂದ್ಯ ಅಷ್ಟೇ: ಸೌರವ್ ಗಂಗೂಲಿ
Team Udayavani, Aug 15, 2022, 10:41 PM IST
ಕೋಲ್ಕತಾ: ಭಾರತ-ಪಾಕಿಸ್ಥಾನ ನಡುವಿನ ಏಷ್ಯಾ ಕಪ್ ಕ್ರಿಕೆಟ್ ಪಂದ್ಯದ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿರುವ ಮಾಜಿ ನಾಯಕ, ಬಿಸಿಸಿಐ ಅಧ್ಯಕ್ಷ ಸೌರವ್ ಗಂಗೂಲಿ, ಇದು ಕೂಟದ ಮತ್ತೊಂದು ಪಂದ್ಯ… ಅಷ್ಟೇ ಎಂದಿದ್ದಾರೆ.
“ಇದು ಏಷ್ಯಾ ಕಪ್ ಕ್ರಿಕೆಟ್ ಪಂದ್ಯಾವಳಿಯೇ ಹೊರತು ಭಾರತ-ಪಾಕಿಸ್ಥಾನ ನಡುವಿನ ಸರಣಿ ಎಂದು ನಾನು ಪರಿಗಣಿಸುವುದಿಲ್ಲ. ನನ್ನ ಕ್ರಿಕೆಟ್ ಕಾಲದಲ್ಲಿ ಭಾರತ-ಪಾಕಿಸ್ಥಾನ ನಡುವಿನ ಮುಖಾಮುಖಿ ಎನ್ನುವುದು ನನ್ನ ಪಾಲಿಗೆ ಕೇವಲ ಮತ್ತೊಂದು ಪಂದ್ಯವಾಗಿರುತ್ತಿತ್ತು. ಪಂದ್ಯ, ಪಂದ್ಯಾವಳಿ ಗೆಲ್ಲುವುದೇ ನಮ್ಮ ಪಾಲಿನ ಗುರಿ ಆಗಿರುತ್ತಿತ್ತು’ ಎಂದು ಸೌರವ್ ಗಂಗೂಲಿ ಸಂದರ್ಶನವೊಂದರಲ್ಲಿ ಹೇಳಿದರು.
“ಭಾರತ ತಂಡ ಇತ್ತೀಚಿನ ದಿನಗಳಲ್ಲಿ ಉತ್ತಮ ಪ್ರದರ್ಶನ ಕಾಯ್ದುಕೊಂಡು ಬಂದಿದೆ. ಹೀಗಾಗಿ ಏಷ್ಯಾ ಕಪ್ನಲ್ಲೂ ಉತ್ತಮ ಪ್ರದರ್ಶನ ನೀಡುವ ವಿಶ್ವಾಸವಿದೆ’ ಎಂದರು.
ಸೆ. 16ರಂದು ಈಡನ್ ಗಾರ್ಡನ್ಸ್ನಲ್ಲಿ ನಡೆಯಲಿರುವ ಲೆಜೆಂಡ್ಸ್ ಕ್ರಿಕೆಟ್ ಪಂದ್ಯದಲ್ಲಿ ಸೌರವ್ ಗಂಗೂಲಿ ಆತಿಥೇಯ ತಂಡವನ್ನು ಮುನ್ನಡೆಸಲಿದ್ದಾರೆ. “ಏನಾಗುತ್ತದೋ ನನಗೆ ಗೊತ್ತಿಲ್ಲ. ಹಿಂದಿನಂತೆ ಕವರ್ ಡ್ರೈವ್ ಬಾರಿಸಬಲ್ಲೆ ಎಂಬ ವಿಶ್ವಾಸವಿದೆ. ಹಾಗೆಯೇ ಬ್ಯಾಟ್-ಬಾಲ್ ನಡುವೆ ಉತ್ತಮ ಸಂಪರ್ಕ ಸಾಧ್ಯವಾದೀತು ಎಂದೂ ಭಾವಿಸಿದ್ದೇನೆ’ ಎಂಬುದಾಗಿ ಗಂಗೂಲಿ ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
ಬಾಗಲಕೋಟೆ: ಯಾರೇ ಪಕ್ಷ ಬಿಟ್ಟರೂ ಏನೂ ಆಗಲ್ಲ- ಸಿದ್ದು ಸವದಿ
ಧಾರವಾಡ: “ಶ್ರೀರಾಮ-ಕೃಷ್ಣರ ಜೀವನ ಇಂದಿಗೂ ಆದರ್ಶ’
Kollywood: ಅಜಿತ್ ಹುಟ್ಟುಹಬ್ಬಕ್ಕೆ ಸೂಪರ್ ಹಿಟ್ ʼಬಿಲ್ಲಾʼ ರೀ ರಿಲೀಸ್; ಫ್ಯಾನ್ಸ್ ಖುಷ್
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
Malicious Calls; ಜ್ಞಾನವ್ಯಾಪಿ ಮಸೀದಿ ಸರ್ವೆ ತೀರ್ಪು ನೀಡಿದ್ದ ಜಡ್ಜ್ ಗೆ ಬೆದರಿಕೆ ಕರೆ