ಸೆಮಿ ಸಮೀಪಿಸಿದ ಭಾರತಕ್ಕೆ ಆಫ್ರಿಕಾ ಸವಾಲು


Team Udayavani, Jul 8, 2017, 3:40 AM IST

captain-Mithali-Raj.jpg

ಲೀಸ್ಟರ್‌: ಆಡಿದ ಎಲ್ಲ 4 ಪಂದ್ಯಗಳಲ್ಲೂ ಗೆಲುವಿನ ಸವಿಯನ್ನುಂಡು ಅಪಾರ ಆತ್ಮವಿಶ್ವಾಸದಲ್ಲಿರುವ ಮಿಥಾಲಿ ರಾಜ್‌ ನಾಯಕತ್ವದ ಭಾರತ ಶನಿವಾರದ ಐಸಿಸಿ ವನಿತಾ ವಿಶ್ವಕಪ್‌ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ದಕ್ಷಿಣ ಆಫ್ರಿಕಾ ಸವಾಲನ್ನು ಎದುರಿಸಲಿದೆ. ಇದನ್ನು ಗೆದ್ದರೆ ಸೆಮಿಫೈನಲ್‌ ಪ್ರವೇಶಿಸಿದ ಮೊದಲ ತಂಡವೆಂಬ ಹೆಗ್ಗಳಿಕೆ ಭಾರತದ್ದಾಗಲಿದೆ.

ಇನ್ನೊಂದೆಡೆ ದಕ್ಷಿಣ ಆಫ್ರಿಕಾ ಆಡಿದ 4 ಪಂದ್ಯಗಳಲ್ಲಿ ಎರಡರಲ್ಲಷ್ಟೇ ಜಯಿಸಿದೆ. ಅದೂ ಸಾಮಾನ್ಯ ತಂಡಗಳೆದುರು. ಪಾಕಿಸ್ಥಾನ ವಿರುದ್ಧ 3 ವಿಕೆಟ್‌ಗಳಿಂದ, ವೆಸ್ಟ್‌ ಇಂಡೀಸ್‌ ವಿರುದ್ಧ 10 ವಿಕೆಟ್‌ಗಳಿಂದ ಗೆದ್ದಿತ್ತು. ನ್ಯೂಜಿಲ್ಯಾಂಡ್‌ ಎದುರಿನ ಪಂದ್ಯ ಭಾರೀ ಮಳೆಯಿಂದ ರದ್ದುಗೊಂಡಿತ್ತು. ಇಂಗ್ಲೆಂಡ್‌ ವಿರುದ್ಧದ ಮುನ್ನೂರರ ಮೇಲಾಟದಲ್ಲಿ 68 ರನ್‌ ಸೋಲನುಭವಿಸಿತ್ತು. ಈ ಸೋಲು ಭಾರತದೆದುರಿನ ಪಂದ್ಯದ ವೇಳೆ ಹರಿಣಗಳನ್ನು ಮಾನಸಿಕವಾಗಿ ಕಾಡಲೂಬಹುದು.

ಇಲ್ಲಿ ದಕ್ಷಿಣ ಆಫ್ರಿಕಾದ “ಭಾರತ ಭೀತಿ’ಗೆ ಇನ್ನೊಂದು ಕಾರಣವೂ ಇದೆ. ವಿಶ್ವಕಪ್‌ಗ್ೂ ಮುನ್ನ ತನ್ನದೇ ನೆಲದಲ್ಲೇ ನಡೆದ ಚತುಷೊRàಣ ಸರಣಿಯ ಫೈನಲ್‌ನಲ್ಲಿ ದಕ್ಷಿಣ ಆಫ್ರಿಕಾ ತಂಡ ಭಾರತಕ್ಕೆ ಸೋತಿತ್ತು. ಹೀಗಾಗಿ ಭಾರತದ ವಿರುದ್ಧ ಹರಿಣಗಳ ಪಡೆ ವಿಭಿನ್ನ ಕಾರ್ಯತಂತ್ರವನ್ನು ರೂಪಿಸಬೇಕಾಗಬಹುದು. ಹಾಗೆಯೇ ವಿಶ್ವಕಪ್‌ ಎನ್ನುವುದು “ಡಿಫ‌ರೆಂಟ್‌ ಬಾಲ್‌ ಗೇಮ್‌’ ಎಂಬ ಎಚ್ಚರಿಕೆಯೂ ಭಾರತಕ್ಕೆ ಇರಬೇಕಾದುದು ಅಗತ್ಯ.

ಮುಂದಿದೆ ಕಠಿನ ಸವಾಲು
ಭಾರತ ತಂಡ ಆತಿಥೇಯ ಇಂಗ್ಲೆಂಡನ್ನೇ ಸದೆಬಡಿದು ಶುಭಾರಂಭ ಮಾಡಿತ್ತು. ಬಳಿಕ ವೆಸ್ಟ್‌ ಇಂಡೀಸ್‌ ಮತ್ತು ಪಾಕಿಸ್ಥಾನವನ್ನು ಅಧಿಕಾರಯುತವಾಗಿ ಬಗ್ಗುಬಡಿಯಿತು. ಶ್ರೀಲಂಕಾ ತುಸು ಪ್ರತಿರೋಧ ಒಡ್ಡಿದರೂ ಮಿಥಾಲಿ ಪಡೆ ಇದನ್ನು ಯಶಸ್ವಿಯಾಗಿಯೇ ನಿಭಾಯಿಸಿತು. ಹೀಗೆ, ಭಾರತದ ಈವರೆಗಿನ ಪಯಣ ಗೆಲುವಿನಿನ ಪಥದಲ್ಲೇ ಸಾಗಿದೆ. ಆದರೆ ಮುಂದಿನ ಸವಾಲು ಅಷ್ಟು ಸುಲಭದ್ದಲ್ಲ.

ವನಿತೆಯರು ಎದುರಿಸಬೇಕಿರುವ ದಕ್ಷಿಣ ಆಫ್ರಿಕಾ, ಆಸ್ಟ್ರೇಲಿಯ ಮತ್ತು ನ್ಯೂಜಿಲ್ಯಾಂಡ್‌ ತಂಡಗಳು ಹೆಚ್ಚು ಬಲಿಷ್ಠವಾಗಿವೆ. ಇವುಗಳ ವಿರುದ್ಧ ಮಿಥಾಲಿ ಟೀಮ್‌ ಎಂದಿಗಿಂತ ಹೆಚ್ಚಿನ ಸಾಮರ್ಥ್ಯ ಪ್ರದರ್ಶಿಸುವ ಜತೆಯಲ್ಲೇ ಬೇರೆಯದೇ ಆದ ರಣತಂತ್ರವನ್ನು ರೂಪಿಸುವುದೂ ಅನಿವಾರ್ಯ. ಅಕಸ್ಮಾತ್‌ ಉಳಿದ ಮೂರೂ ಪಂದ್ಯಗಳಲ್ಲಿ ಹಿನನ್ನಡೆಯಾದರೆ… ಎಂಬ ಮುನ್ನೆಚ್ಚರಿಕೆಯೂ ಇರಬೇಕಾದುದು ಅಗತ್ಯ.

ಈಗಿನ ಲೆಕ್ಕಾಚಾರದಲ್ಲಿ ಆಸ್ಟ್ರೇಲಿಯ, ಭಾರತ ಮತ್ತು ಇಂಗ್ಲೆಂಡ್‌ ತಂಡಗಳ ಸೆಮಿಫೈನಲ್‌ ಖಚಿತ. ಹಾಗೆಯೇ ಪಾಕಿಸ್ಥಾನ, ಶ್ರೀಲಂಕಾ, ವೆಸ್ಟ್‌ ಇಂಡೀಸ್‌ ಕೂಟದಿಂದ ಗಂಟುಮೂಟೆ ಕಟ್ಟುವುದೂ ಖಾತ್ರಿ. ಆಗ ನ್ಯೂಜಿಲ್ಯಾಂಡ್‌ ಮತ್ತು ದಕ್ಷಿಣ ಆಫ್ರಿಕಾ ನಡುವೆ ಒಂದು ಸೆಮಿಫೈನಲ್‌ ಸ್ಥಾನಕ್ಕೆ ತೀವ್ರ ಸ್ಪರ್ಧೆ ಎದುರಾಗಬಹುದು. ಎರಡೂ ಸಮಬಲ ಸಾಧನೆಯೊಂದಿಗೆ 5 ಅಂಕಗಳನ್ನು ಹೊಂದಿವೆ. ರನ್‌ರೇಟ್‌ನಲ್ಲಿ ಕಿವೀಸ್‌ ಸ್ವಲ್ಪ ಮುಂದಿದೆ. ಹೀಗಾಗಿ ಭಾರತದೆದುರಿನ ಪಂದ್ಯ ದಕ್ಷಿಣ ಆಫ್ರಿಕಾಕ್ಕೆ ಹೆಚ್ಚು ಮಹತ್ವದ್ದಾಗಿದೆ. ದಿನದ ಇನ್ನೊಂದು ಪಂದ್ಯದಲ್ಲಿ ನ್ಯೂಜಿಲ್ಯಾಂಡ್‌-ಪಾಕಿಸ್ಥಾನ ಎದುರಾಗಲಿವೆ. ಇಲ್ಲಿ ಕಿವೀಸ್‌ ನೆಚ್ಚಿನ ತಂಡವಾಗಿರುವುದೂ ಹರಿಣಗಳ ಒತ್ತಡವನ್ನು ಹೆಚ್ಚಿಸಿದೆ.

ಭಾರತದ ಬ್ಯಾಟಿಂಗ್‌ ಹಾಗೂ ಬೌಲಿಂಗ್‌ ವಿಭಾಗಗಳೆರಡೂ ಬಲಿಷ್ಠ. ಆರಂಭಿಕ ಆಟಗಾರ್ತಿ ಸ್ಮತಿ ಮಂಧನಾ ಕೊನೆಯ 2 ಪಂದ್ಯಗಳಲ್ಲಿ ವಿಫ‌ಲರಾದರೂ ದೀಪ್ತಿ ಶರ್ಮ, ಮಿಥಾಲಿ ರಾಜ್‌ ಸೇರಿಕೊಂಡು ಪರಿಸ್ಥಿತಿಯನ್ನು ಸಮರ್ಥ ರೀತಿಯಲ್ಲೇ ನಿಭಾಯಿಸಿದ್ದಾರೆ. ಮಧ್ಯಮ-ಕೆಳ ಕ್ರಮಾಂಕದಲ್ಲಿ ವೇದಾ ಕೃಷ್ಣಮೂರ್ತಿ, ಹರ್ಮನ್‌ಪ್ರೀತ್‌ ಕೌರ್‌ ತಂಡದ ನೆರವಿಗೆ ನಿಲ್ಲಬಲ್ಲರು. ಬೌಲಿಂಗ್‌ ವಿಭಾಗ ಏಕ್ತಾ ಬಿಷ್ಟ್, ಪೂನಂ ಯಾದವ್‌, ಜೂಲನ್‌ ಗೋಸ್ವಾಮಿ ಅವರನ್ನು ನೆಚ್ಚಿಕೊಂಡಿದೆ.

ನಿಯಂತ್ರಿತ ಬೌಲಿಂಗ್‌; ನೀಕರ್ಕ್‌
ವೆಸ್ಟ್‌ ಇಂಡೀಸನ್ನು 48 ರನ್ನಿಗೆ ಉಡಾಯಿಸಿದ ಬಳಿಕ ಹರಿಣಗಳ ಬೌಲಿಂಗ್‌ ಇಂಗ್ಲೆಂಡ್‌ ವಿರುದ್ಧ ಹಳಿ ತಪ್ಪಿತ್ತು. ಅಲ್ಲಿ 373 ರನ್‌ ಸೋರಿ ಹೋಗಿತ್ತು. ಇನ್ನು ಇಂಥ ಧಾರಾಳತನಕ್ಕೆ ಅವಕಾಶ ಇಲ್ಲ ಎಂದಿದ್ದಾರೆ ನಾಯಕಿ ಡೇನ್‌ ವಾನ್‌ ನೀಕರ್ಕ್‌.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.