ಭಾರತಕ್ಕೆ ಸರಣಿ ಗೆಲುವಿನ ನಿರೀಕ್ಷೆ: ಇಂದು ದ.ಆಫ್ರಿಕಾ ವಿರುದ್ಧ ಐದನೇ  ಟಿ20 ಪಂದ್ಯ


Team Udayavani, Jun 19, 2022, 7:20 AM IST

ಭಾರತಕ್ಕೆ ಸರಣಿ ಗೆಲುವಿನ ನಿರೀಕ್ಷೆ: ಇಂದು ದ.ಆಫ್ರಿಕಾ ವಿರುದ್ಧ ಐದನೇ  ಟಿ20 ಪಂದ್ಯಭಾರತಕ್ಕೆ ಸರಣಿ ಗೆಲುವಿನ ನಿರೀಕ್ಷೆ: ಇಂದು ದ.ಆಫ್ರಿಕಾ ವಿರುದ್ಧ ಐದನೇ  ಟಿ20 ಪಂದ್ಯ

ಬೆಂಗಳೂರು: ಪ್ರವಾಸಿ ದಕ್ಷಿಣ ಆಫ್ರಿಕಾ ತಂಡದೆದುರು ಸತತ ಎರಡು ಗೆಲುವಿ ನೊಂದಿಗೆ ಸರಣಿಯಲ್ಲಿ ಸಮಬಲ ಸಾಧಿಸುವಲ್ಲಿ ಯಶಸ್ವಿಯಾಗಿರುವ ಭಾರತೀಯ ಯುವ ತಂಡವು ರವಿವಾರ ನಡೆಯುವ ಸರಣಿ ನಿರ್ಣಾಯಕ ಐದನೇ ಪಂದ್ಯದಲ್ಲಿ ಗೆಲ್ಲುವ ಆತ್ಮವಿಶ್ವಾಸದೊಂದಿಗೆ ಹೋರಾಡಲಿದೆ. ಸರಣಿ ಗೆಲ್ಲುವುದೇ ತಂಡದ ಗುರಿಯಾಗಿದೆ.

ಕಳೆದ ಎಂಟು ದಿನಗಳ ಅಂತರದಲ್ಲಿ ಭಾರತ ಮತ್ತು ದಕ್ಷಿಣ ಆಫ್ರಿಕಾ ನಡುವೆ ನಾಲ್ಕು ಟಿ20 ಪಂದ್ಯಗಳು ನಡೆದಿವೆ. ಯುವ ಆಟಗಾರರನ್ನು ಒಳಗೊಂಡ ಭಾರತೀಯ ತಂಡ ಆರಂಭದ ಎರಡು ಪಂದ್ಯಗಳಲ್ಲಿ ಸೋತಿತ್ತು. ಆದರೆ ವಿಶಾಖಪಟ್ಟಣ ಮತ್ತು ರಾಜ್‌ಕೋಟ್‌ನಲ್ಲಿ ಭರ್ಜರಿ ಅಂತರದ ಗೆಲುವು ಸಾಧಿಸಿದ್ದ ಭಾರತ ಸರಣಿ ನಿರ್ಣಾಯಕದಲ್ಲೂ ಗೆಲ್ಲುವ ಫೇವರಿಟ್‌ ತಂಡವಾಗಿ ಕಾಣಿಸಿಕೊಂಡಿದೆ.

ಮೂರನೇ ಪಂದ್ಯವನ್ನು 47 ಮತ್ತು ನಾಲ್ಕನೇ ಪಂದ್ಯವನ್ನು 82 ರನ್ನುಗಳಿಂದ ಗೆದ್ದಿರುವ ಭಾರತವು ಬ್ಯಾಟಿಂಗ್‌, ಬೌಲಿಂಗ್‌ನಲ್ಲಿ ಗಮನಾರ್ಹ ನಿರ್ವಹಣೆ ನೀಡಿದೆ. ಈ ಎರಡೂ ವಿಭಾಗಗಳಲ್ಲಿ ಪ್ರವಾಸಿ ತಂಡವನ್ನು ಕಟ್ಟಿ ಹಾಕಲು ಯಶಸ್ವಿಯಾಗಿರುವ ಭಾರತ ತಂಡ ಐದನೇ ಪಂದ್ಯದಲ್ಲೂ ಭರ್ಜರಿ ಗೆಲುವಿನ ನಿರೀಕ್ಷೆಯಲ್ಲಿದೆ.

ಈ ಸರಣಿಯಲ್ಲಿ ದಿನೇಶ್‌ ಕಾರ್ತಿಕ್‌ ನಿರೀಕ್ಷಿತ ನಿರ್ವಹಣೆ ನೀಡಿದ್ದಾರೆ. ಬೌಲಿಂಗ್‌ನಲ್ಲಿ ಹರ್ಷಲ್‌ ಪಟೇಲ್‌ ಮತ್ತು ಆವೇಶ್‌ ಖಾನ್‌ ಮಿಂಚಿದ್ದಾರೆ. ಇನ್ನು ಯಜುವೇಂದ್ರ ಚಹಲ್‌ ತನ್ನ ಐಪಿಎಲ್‌ ತವರು ಮೈದಾನದಲ್ಲಿ ನಿರ್ಣಾಯಕ ಪಂದ್ಯದಲ್ಲಿ ಶ್ರೇಷ್ಠ ನಿರ್ವಹಣೆ ನೀಡಿದರೆ ಭಾರತ ಗೆಲ್ಲುವುದರಲ್ಲಿ ಯಾವುದೇ ಅನುಮಾನವಿಲ್ಲ.

ಒಂದು ವೇಳೆ ಪಂತ್‌ ನಾಯಕತ್ವದಲ್ಲಿ ಭಾರತೀಯ ತಂಡ ಸರಣಿ ಗೆದ್ದರೆ ಮುಂದಿನ ಸರಣಿಗೂ ಪಂತ್‌ ಅವರನ್ನು ನಾಯಕತ್ವದಲ್ಲಿ ಮುಂದುವರಿಸುವ ಸಾಧ್ಯತೆಯಿದೆ. ಆಗ ಹಾರ್ದಿಕ್‌ ಪಾಂಡ್ಯ, ಕೆಎಲ್‌ ರಾಹುಲ್‌ ಕೂಡ ನಾಯಕತ್ವಕ್ಕೆ ಪೈಪೋಟಿ ನೀಡುವ ನಿರೀಕ್ಷೆಯಿದೆ.

ಅಗ್ರ ಕ್ರಮಾಂಕದಲ್ಲಿ ಇಶಾನ್‌ ಕಿಶನ್‌, ಋತುರಾಜ್‌ ಗಾಯಕ್ವಾಡ್‌ ಮತ್ತು ಶ್ರೇಯಸ್‌ ಅಯ್ಯರ್‌ ಉತ್ತಮ ನಿರ್ವಹಣೆ ನೀಡುತ್ತಿದ್ದಾರೆ. ಇವರೆಲ್ಲ ಭಾರತೀಯ ನೆಲದಲ್ಲಿ ಉತ್ತಮವಾಗಿ ಆಡಿದ್ದರೂ ವಿದೇಶದಲ್ಲಿ ಹೇಗೆ ಆಡುತ್ತಾರೆ ಎಂಬ ಅನುಮಾನ ಇದ್ದೇ ಇರಲಿದೆ. ಈ ಬಗ್ಗೆಯೂ ಕೋಚ್‌ ರಾಹುಲ್‌ ದ್ರಾವಿಡ್‌ ಚಿಂತನೆ ಮಾಡಲಿದ್ದಾರೆ.

ಶ್ರೇಯಸ್‌ ಅಯ್ಯರ್‌ ಈ ಸರಣಿಯುದ್ದಕ್ಕೂ ಆಡಿದ್ದಾರೆ. ಇದರಿಂದಾಗಿ ಮುಂದಿನ ಅಯರ್‌ಲ್ಯಾಂಡ್‌ ವಿರುದ್ಧದ ಟಿ20 ಪಂದ್ಯಕ್ಕಾಗಿ ಅವರ ಬದಲು ಸೂರ್ಯಕುಮಾರ್‌ ಯಾದವ್‌ ಆಡಲಿದ್ದಾರೆ. ಮುಂದಿನ ದಿನಗಳಲ್ಲಿ ಹಲವು ಐಸಿಸಿ ಕೂಟಗಳು ನಡೆಯಲಿರುವ ಕಾರಣ ದಿನೇಶ್‌ ಕಾರ್ತಿಕ್‌ ಇನ್ನಷ್ಟು ಉತ್ತಮ ಆಟ ಪ್ರದರ್ಶಿಸಬೇಕಾಗಿದೆ. ನಾಲ್ಕನೇ ಪಂದ್ಯದಲ್ಲಿ ಗೆಲುವಿನ ರೂವಾರಿಯಾಗಿ ಕಾಣಿಸಿಕೊಂಡಿರುವ ಅವರು ನಿರ್ಣಾಯಕ ಪಂದ್ಯದಲ್ಲೂ ಉತ್ತಮ ನಿರ್ವಹಣೆ ನೀಡುವ ನಿರೀಕ್ಷೆ ಇಡಲಾಗಿದೆ.

ಬೌಲರ್‌ಗಳ ಪೈಕಿ ಭುವನೇಶ್ವರ್‌ ಕುಮಾರ್‌ ಹೊಸ ಚೆಂಡಿನೊಂದಿಗೆ ಗಮನಾರ್ಹ ದಾಳಿ ಸಂಘಟಿಸುವ ಸಾಧ್ಯತೆಯಿದೆ. ಆವೇಶ್‌ ಖಾನ್‌ ಮತ್ತೂಮ್ಮೆ ದಕ್ಷಿಣ ಆಫ್ರಿಕಾದ ಮೇಲೆ ದಾಳಿಗೆ ಸಿದ್ಧವಾಗಿದ್ದಾರೆ. ಸ್ಪಿನ್ನರ್‌ಗಳು ಈ ಸರಣಿಯಲ್ಲಿ ಉತ್ತಮ ಪ್ರಯತ್ನ ನಡೆಸಿದ್ದಾರೆ. ಅಕ್ಷರ್‌ ಪಟೇಲ್‌, ಚಹಲ್‌ ಇನ್ನಷ್ಟು ಬಿಗು ದಾಳಿ ಸಂಘಟಿಸಿದರೆ ಭಾರತ ಗೆಲ್ಲಬಹುದು.

ಬವುಮ ಅನುಮಾನ ?
ನಾಯಕ ತೆಂಬ ಬವುಮ ಗಾಯದಿಂದ ಚೇತರಿಸಿಕೊಳ್ಳದಿದ್ದರೆ ಪ್ರವಾಸಿ ತಂಡಕ್ಕೆ ದೊಡ್ಡ ಹೊಡೆತ ಬೀಳುವ ಸಾಧ್ಯತೆಯಿದೆ. ಇದರಿಂದಾಗಿ ತಂಡ ಒಳ್ಳೆಯ ನಾಯಕ ಮತ್ತು ಆಟಗಾರನೋರ್ವನನ್ನು ಕಳೆದುಕೊಳ್ಳುವ ಸಾಧ್ಯತೆಯಿದೆ.

ಕಂಠೀರವದಲ್ಲಿ ವಾಹನ ನಿಲುಗಡೆ ಇಲ್ಲ
ಬೆಂಗಳೂರು: ರವಿವಾರ ಚಿನ್ನಸ್ವಾಮಿ ಮೈದಾನದಲ್ಲಿ ನಡೆಯಲಿರುವ 5ನೇ ಟಿ20 ಪಂದ್ಯವನ್ನು ನೋಡಲು ಆಗಮಿಸುವ ಅಭಿಮಾನಿಗಳಿಗಾಗಿ ಕರ್ನಾಟಕ ಕ್ರಿಕೆಟ್‌ ಸಂಸ್ಥೆ (ಕೆಎಸ್‌ಸಿಎ) ಹಲವು ವ್ಯವಸ್ಥೆಗಳನ್ನು ಮಾಡಿದೆ. ಆದರೆ ವಾಹನ ನಿಲುಗಡೆಗೆ ಮಾಡಿದ್ದ ವ್ಯವಸ್ಥೆಯಲ್ಲಿ ಪ್ರಮುಖ ಬದಲಾವಣೆಯೊಂದನ್ನು ಮಾಡಿದೆ. ಈ ಮುಂಚೆ ಶ್ರೀ ಕಂಠೀರವ ಮೈದಾನದಲ್ಲಿ ವಾಹನ ನಿಲ್ಲಿಸಬಹುದೆಂದು ಕೆಎಸ್‌ಸಿಎ ತಿಳಿಸಿತ್ತು. ಆದರೆ ಕೆಲವು ಅನಿವಾರ್ಯ ಕಾರಣಗಳಿಂದ ಕಂಠೀರವದಲ್ಲಿ ಅಭಿಮಾನಿ ಗಳು ವಾಹನ ನಿಲ್ಲಿಸಲು ಸಾಧ್ಯವಿಲ್ಲ ಎಂದು ತಿಳಿಸಿದೆ. ಇದರ ಬದಲು ಶಾಂತಿನಗರ ಬಸ್‌ ನಿಲ್ದಾಣ, ಯುಬಿ ಸಿಟಿ ಮಾಲ್‌, ಸೇಂಟ್‌ ಜೋಸೆಫ್ ಬಾಲಕರ ಪ್ರೌಢಶಾಲೆ (ಮ್ಯೂಸಿಯಂ ರಸ್ತೆ), ಸೇಂಟ್‌ ಜೋಸೆಫ್ ಇಂಡಿಯನ್‌ ಪ್ರೌಢಶಾಲೆಯಲ್ಲಿ (ವಿಟuಲ ಮಲ್ಯ ರಸ್ತೆ) ವಾಹನಗಳನ್ನು (ದ್ವಿಚಕ್ರ ಮತ್ತು ಕಾರುಗಳು) ನಿಲ್ಲಿಸಬಹುದು ಎಂದು ತಿಳಿಸಿದೆ.

ಪಂದ್ಯ ಆರಂಭ ಸಂಜೆ ರಾತ್ರಿ 7:00

ಟಾಪ್ ನ್ಯೂಸ್

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Gold price drops by Rs 1,530 in one day

Gold Rate; ಚಿನ್ನದ ಬೆಲೆ ಒಂದೇ ದಿನ 1,530 ರೂ. ಇಳಿಕೆ: ಗ್ರಾಹಕರಿಗೆ ನಿರಾಳ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ

ನಿಮ್ಮ ಮನೆ ದೇವರು, ಮತದಾರರು ಒಳ್ಳೆಯದು ಮಾಡ್ತಾರಾ?: ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

IPL 2024; ಫಿಟ್‌ ಆಗಿದ್ದೇ ನಿನ್ನೆ: ಸಂದೀಪ್‌ ಶರ್ಮ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Northamptonshire: ಕೌಂಟಿ ಕ್ರಿಕೆಟ್‌ನಲ್ಲಿ ಕರುಣ್‌ ನಾಯರ್‌ ದ್ವಿಶತಕ

Pakistan cricket team military training wasted

PCB; ಪಾಕ್‌ ಕ್ರಿಕೆಟ್‌ ತಂಡದ ಸೇನಾ ತರಬೇತಿ ವ್ಯರ್ಥ: ಹಾಸ್ಯ

Shotgun

Shotgun ಶೂಟಿಂಗ್‌ ಅರ್ಹತಾ ಸುತ್ತಿನಲ್ಲಿ ಕರಣ್‌: ವಿವಾದ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Uppinangady : ಗ್ರಾ.ಪಂ. ಸಿಬಂದಿ ಆತ್ಮಹತ್ಯೆ

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

Subrahmanya: ಬಸ್ಸಿನಿಂದ ಬಿದ್ದು ಪ್ರಯಾಣಿಕ ಸಾವು

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

ಬರ ಪರಿಹಾರದಲ್ಲಿ ಸಿಎಂ, ಕಾಂಗ್ರೆಸ್‌ ರಾಜಕೀಯ: ಅಶೋಕ್‌

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

“ಬರ ಪರಿಹಾರ ಕೊಡಿ, ಇಲ್ಲವೇ ರಾಜ್ಯಕ್ಕೆ ಬರಲೇಬೇಡಿ’

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.