ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ


Team Udayavani, Jul 28, 2021, 11:47 PM IST

ಟರ್ನಿಂಗ್‌ ಟ್ರ್ಯಾಕ್‌ನಲ್ಲಿ ಲಂಕಾಕ್ಕೆ 4 ವಿಕೆಟ್‌ ಜಯ

ಕೊಲಂಬೊ: ಭಾರೀ ಟರ್ನ್ ತೆಗೆದುಕೊಳ್ಳುತ್ತಿದ್ದ ಕೊಲಂಬೊ ಟ್ರ್ಯಾಕ್‌ನಲ್ಲಿ ಶ್ರೀಲಂಕಾ ಬುಧವಾರದ ದ್ವಿತೀಯ ಟಿ20 ಪಂದ್ಯದಲ್ಲಿ ಭಾರತ ವಿರುದ್ದ 4 ವಿಕೆಟ್‌ಗಳ ಗೆಲುವು ದಾಖಲಿಸಿದೆ. ಈ ಗೆಲುವಿನೊಂದಿಗೆ ಸರಣಿ 1-1 ಸಮಬಲಗೊಂಡಿದೆ. ಅಂತಿಮ ಪಂದ್ಯ ಗುರುವಾರ ನಡೆಯಲಿದೆ.

ಟಾಸ್‌ ಸೋತು ಬ್ಯಾಟಿಂಗಿಗೆ ಇಳಿಸಲ್ಪಟ್ಟ ಭಾರತ ನಿಗಧಿತ 20 ಓವರ್‌ಗಳಲ್ಲಿ 5 ವಿಕೆಟಿಗೆ ಕೇವಲ 132 ರನ್‌ ಗಳಿಸಿತು. ಗುರಿ ಬೆನ್ನತ್ತಿದ ಶ್ರೀಲಂಕಾ ಎಚ್ಚರಿಕೆ ಆಟವಾಡುವ ಮೂಲಕ 19.4 ಓವರ್‌ಗಳಲ್ಲಿ 6 ವಿಕೆಟ್‌ ಕಳೆದುಕೊಂಡು 133 ರನ್‌ ಪೇರಿಸಿ ಗೆಲುವಿನ ದಡ ಸೇರಿತು.ಲಂಕಾ ಸರದಿಯಲ್ಲಿ ಭನುಕ 36, ಧನಂಜಯ ಡಿ ಸಿಲ್ವ ಅಜೇಯ 40 ರನ್‌ ಬಾರಿಸಿದರು.

ಭಾರತ ನಿಧಾನಗತಿಯ ಆರಂಭ:

ಭಾರತದ ಪವರ್‌ ಪ್ಲೇ ಅವಧಿಯ ಸ್ಕೋರ್‌ ನೋಲಾಸ್‌ 45. ಮೊದಲ 10 ಓವರ್‌ಗಳಲ್ಲಿ ಒಟ್ಟುಗೂಡಿದ್ದು ಒಂದು ವಿಕೆಟಿಗೆ 61 ರನ್‌ ಮಾತ್ರ. ಕೇವಲ ಆರರ ಸರಾಸರಿಯಲ್ಲಿ ರನ್‌ ಬಂದಿತ್ತು. ಈ ಅವಧಿಯಲ್ಲಿ ಲಂಕಾ 8 ಬೌಲರ್‌ಗಳನ್ನು ದಾಳಿಗಿಳಿಸಿತ್ತು.

ನಾಯಕ ಧವನ್‌ ಮತ್ತು ಋತುರಾಜ್‌ ಗಾಯಕ್ವಾಡ್‌ ಭರ್ತಿ 7 ಓವರ್‌ ನಿಭಾಯಿಸಿ 49 ರನ್‌ ಗಳಿಸಿದರು. ಆಗ 21 ರನ್‌ ಮಾಡಿದ ಗಾಯಕ್ವಾಡ್‌ ವಿಕೆಟ್‌ ಬಿತ್ತು (18 ಎಸೆತ, 1 ಬೌಂಡರಿ). ಶಣಕ ತಮ್ಮ ಮೊದಲ ಓವರಿನಲ್ಲೇ ಯಶಸ್ಸು ಕಂಡಿದ್ದರು.

ಧವನ್‌-ಪಡಿಕ್ಕಲ್‌ ರನ್‌ ಗತಿ ಏರಿಸಲು ಗರಿಷ್ಠ ಪ್ರಯತ್ನಪಟ್ಟರು. ಆದರೆ 31 ಎಸೆತಗಳಿಂದ ಬಂದದ್ದು ಕೇವಲ 32 ರನ್‌. ದ್ವಿತೀಯ ಸ್ಪೆಲ್‌ ಎಸೆಯಲು ಬಂದ ಧನಂಜಯ ಭಾರತದ ಕಪ್ತಾನನ್ನು ಕ್ಲೀನ್‌ಬೌಲ್ಡ್‌ ಮಾಡಿದರು. ಧವನ್‌ ಗಳಿಕೆ 42 ಎಸೆತಗಳಿಂದ 40 ರನ್‌ (5 ಬೌಂಡರಿ). ಧವನ್‌ ಅವರದೇ ಭಾರತದ ಸರದಿಯ ಗರಿಷ್ಠ ಗಳಿಕೆಯಾಗಿತ್ತು.

ಡೆತ್‌ ಓವರ್‌ ಆರಂಭವಾದರೂ ಭಾರತದ ಮೊತ್ತ ನೂರರ ಗಡಿ ಮುಟ್ಟಿರಲಿಲ್ಲ. ಪಡಿಕ್ಕಲ್‌-ಸಂಜು ಸ್ಯಾಮ್ಸನ್‌ ಜೋಡಿಯ ಮೇಲೆ ತಂಡ ಹೆಚ್ಚಿನ ಭರವಸೆ ಇರಿಸಿತು. ಆದರೆ ಯಾವುದೇ ಲಾಭವಾಗಲಿಲ್ಲ. 16ನೇ ಓವರ್‌ನ 3ನೇ ಎಸೆತದಲ್ಲೇ ಪಡಿಕ್ಕಲ್‌ ಅವರನ್ನು ಹಸರಂಗ ಬೌಲ್ಡ್‌ ಮಾಡಿದರು (23 ಎಸೆತ, 29 ರನ್‌, 1 ಬೌಂಡರಿ, 1 ಸಿಕ್ಸರ್‌). ಸ್ಯಾಮ್ಸನ್‌ ಕೂಡ ಯಶಸ್ಸು ಕಾಣಲಿಲ್ಲ (7).

ದೇವದತ್ತ ಪಡಿಕ್ಕಲ್‌ ಸೇರಿ  ನಾಲ್ವರ ಪದಾರ್ಪಣೆ : ದ್ವಿತೀಯ ಟಿ20 ಪಂದ್ಯದಲ್ಲಿ ಆರ್‌ಸಿಬಿಯ ಬ್ಯಾಟಿಂಗ್‌ ಹೀರೋ ದೇವದತ್ತ ಪಡಿಕ್ಕಲ್‌ ಸೇರಿದಂತೆ ನಾಲ್ವರು ಕ್ರಿಕೆಟಿಗರು ಮೊದಲ ಸಲ ಭಾರತವನ್ನು ಪ್ರತಿನಿಧಿಸುವ ಅವಕಾಶ ಪಡೆದರು. ಉಳಿದ ಮೂವರೆಂದರೆ ಋತುರಾಜ್‌ ಗಾಯಕ್ವಾಡ್‌, ನಿತೀಶ್‌ ರಾಣಾ ಮತ್ತು ಚೇತನ್‌ ಸಕಾರಿಯಾ. ಇವರೆಲ್ಲರೂ ಐಪಿಎಲ್‌ನಲ್ಲಿ ಮಿಂಚಿದ ಕ್ರಿಕೆಟಿಗರೆಂಬುದು ವಿಶೇಷ.

ಭಾರತ ತಂಡದಲ್ಲಿ ಬರೋಬ್ಬರಿ 7 ಬದಲಾವಣೆ ಸಂಭವಿಸಿತ್ತು. ಪೃಥ್ವಿ ಶಾ, ಸೂರ್ಯಕುಮಾರ್‌ ಯಾದವ್‌, ಇಶಾನ್‌ ಕಿಶನ್‌, ದೀಪಕ್‌ ಚಹರ್‌, ಹಾರ್ದಿಕ್‌ ಪಾಂಡ್ಯ, ಕೃಣಾಲ್‌ ಪಾಂಡ್ಯ ಮತ್ತು ಯಜುವೇಂದ್ರ ಚಹಲ್‌ ಹೊರಗುಳಿದರು.

ಕೃಣಾಲ್‌ ಪಾಂಡ್ಯ ಅವರ ಕೊರೊನಾ ವರದಿ ಫ‌ಲಿತಾಂಶ ಪಾಸಿಟಿವ್‌ ಬಂದ ಕಾರಣ ಪಂದ್ಯವನ್ನು ಒಂದು ಮುಂದೂಡಲಾಗಿತ್ತು.

ಟಾಪ್ ನ್ಯೂಸ್

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

Hubballi: ಮೂವರು ನಕಲಿ ಸಿಐಡಿ ಅಧಿಕಾರಿಗಳ ಬಂಧನ… ಮೊಬೈಲ್, ಬೈಕ್ ವಶ

ತಾಳಿಭಾಗ್ಯ ಯೋಜನೆ ತಂದ ಕಾಂಗ್ರೆಸ್ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

ತಾಳಿಭಾಗ್ಯ ಯೋಜನೆ ತಂದ ‘ಕಾಂಗ್ರೆಸ್’ ಕಿತ್ತುಕೊಳ್ಳುವ ಕೆಲಸ ಎಂದೂ ಮಾಡಲ್ಲ: H.K. Patil

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

Mumbai Airport: ನ್ಯೂಡಲ್ಸ್‌ ಪ್ಯಾಕೇಟ್‌ ನೊಳಗೆ ಕೋಟ್ಯಂತರ ಮೌಲ್ಯದ ವಜ್ರ ಕಳ್ಳಸಾಗಣೆ!

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ʼದುರ್ಗಿʼಯಾಗಿ ಚಂದನವನಕ್ಕೆ ಕಾಲಿಟ್ಟ ಕಾಲಿವುಡ್‌ ಬೆಡಗಿ: ಡಾಲಿ ಜೊತೆ ರೊಮ್ಯಾನ್ಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-wewqwewq

IPL; ಲಕ್ನೋ ಸೂಪರ್‌ ಜೈಂಟ್ಸ್‌ ಎದುರಾಳಿ:ಚೆನ್ನೈಗೆ ಇದು ಸೇಡಿನ ಪಂದ್ಯ

1-ewewewq

IPL; ಆಸ್ಟ್ರೇಲಿಯನ್‌ ಆಲ್‌ರೌಂಡರ್‌ ಮಾರ್ಷ್‌ ಔಟ್‌

Kohli IPL 2024

IPL ನಾಯಕರಿಗೆ ದಂಡ, ಕೊಹ್ಲಿಗೂ ದಂಡ ; 29 ಸಲ 200 ರನ್‌ ನೀಡಿದ ಆರ್‌ಸಿಬಿ!

1-eewqewqe

IPL; ಮುಂಬೈ ಎದುರು ರಾಜಸ್ಥಾನ್ ಯಶಸ್ವಿ ಗೆಲುವಿನ ಓಟ: ಜೈಸ್ವಾಲ್ ಅಮೋಘ ಶತಕ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

IPL 2024; ಏಳು ಪಂದ್ಯ ಸೋತರೂ ಇನ್ನೂ ಆರ್ ಸಿಬಿಗೆ ಇದೆ ಪ್ಲೇ ಆಫ್ ಅವಕಾಶ: ಇಲ್ಲಿದೆ ವಿವರ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

ಬಿಜೆಪಿ ದಲಿತರ ಪರ ಮೊಸಳೆ ಕಣ್ಣೀರು: ಬಿ.ಕೆ. ಹರಿಪ್ರಸಾದ

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Haveri Lok Sabha constituency: “ಮೇ 7 ರಂದು ತಪ್ಪದೇ ಮತದಾನ ಮಾಡಿ’

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

Neha ಕೊಲೆ ಆರೋಪಿ ನಿರ್ದೋಷಿಯಾಗಿ ಹೊರಗೆ ಬಂದ್ರೆ ನಾವೇ ಶಿಕ್ಷೆ ಕೊಟ್ಟು ಜೈಲಿಗೆ ಹೋಗಲು ಸಿದ್ಧ

18

ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Belagavi Lok sabha: ಧರ್ಮಯುದ್ಧಕ್ಕಿಂತ ಮೊದಲೇ ದಿಂಗಾಲೇಶ್ವರ ಶ್ರೀ ಶಸ್ತ್ರತ್ಯಾಗ!

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.