ಹಿರಿಯ ಮ್ಯಾಥ್ಯೂಸ್‌ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ: ಚಂಡಿಮಾಲ್‌


Team Udayavani, Nov 16, 2017, 7:00 AM IST

Sri-Lanka-cricket-captain-D.jpg

ಕೋಲ್ಕತಾ:  ಭಾರತ ತಂಡದೆದುರಿನ ಮೊದಲ ಟೆಸ್ಟ್‌ ಪಂದ್ಯದಲ್ಲಿ ತಂಡದ ಹಿರಿಯ ಆಟಗಾರ ಏಂಜೆಲೊ ಮ್ಯಾಥ್ಯೂಸ್‌ ಪ್ರಾಮುಖ್ಯವಾದ ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ ಎಂದು ಶ್ರೀಲಂಕಾ ನಾಯಕ ದಿನೇಶ್‌ ಚಂಡಿಮಾಲ್‌ ದೃಢಪಡಿಸಿದ್ದಾರೆ.

ಬ್ಯಾಟಿಂಗ್‌ ಶಕ್ತಿಯಾಗಿ ಅವರು ನಮಗೆ ಆತ್ಮವಿಶ್ವಾಸ ತುಂಬುತ್ತಾರೆ. ಹಾಗಾಗಿ ಅವರು ನಾಲ್ಕನೇ ಕ್ರಮಾಂಕದಲ್ಲಿ ಆಡಲಿದ್ದಾರೆ. ಅವರಿಗೆ ಅಪಾರ ಅನುಭವವಿದೆ. ಅಗ್ರ ಕ್ರಮಾಂಕದಲ್ಲಿ ಆಡುವ ಮೂಲಕ ಅವರು ಗರಿಷ್ಠ ಲಾಭ ಪಡೆಯಲಿದ್ದರೆ ಎಂದು ಚಂಡಿಮಾಲ್‌ ಹೇಳಿದರು.

2015ರ ಆಗಸ್ಟ್‌ ಬಳಿಕ ಮ್ಯಾಥ್ಯೂಸ್‌ ಒಮ್ಮೆಯೂ ಟೆಸ್ಟ್‌ನಲ್ಲಿ ಶತಕ ಸಿಡಿಸಿಲ್ಲ. ಈ ಹಂತದಲ್ಲಿ ಅವರು 32 ಇನ್ನಿಂಗ್ಸ್‌ ಆಡಿದ್ದು 28.65 ಸರಾಸರಿಯಂತೆ 917 ರನ್‌ ಗಳಿಸಿದ್ದಾರೆ. ಆಶ್ಚರ್ಯವೆಂಬಂತೆ ಅವರ ಈ ಹಿಂದಿನ ಶತಕ ಭಾರತ ವಿರುದ್ಧ ದಾಖಲಾಗಿತ್ತು. ಆಗಸ್ಟ್‌ನಲ್ಲಿ ಕೊಲಂಬೋದಲ್ಲಿ ನಡೆದ ಟೆಸ್ಟ್‌ನಲ್ಲಿ ಅವರು 102 ರನ್‌ ಗಳಿಸಿದ್ದರು.

ಅವರ ಅನುಭವವನ್ನು ನಾವು ಎದುರು ನೋಡುತ್ತಿದ್ದೇವೆ. 2013-14ರ ಋತುವಿನಲ್ಲಿ ಅವರು ಅಸಾಮಾನ್ಯ ನಿರ್ವಹಣೆ ನೀಡಿದ್ದರು. ಈ ಸರಣಿಯಲ್ಲಿ ಅವರಿಂದ ಉತ್ತಮ ಆಟ ನಿರೀಕ್ಷಿಸುತ್ತಿದ್ದೇವೆ ಎಂದು ಚಂಡಿಮಾಲ್‌ ತಿಳಿಸಿದರು. ಗಾಯದ ಸಮಸ್ಯೆಯಿಂದ ಅವರು ಪಾಕಿಸ್ಥಾನ ಸರಣಿಯಿಂದ ದೂರ ಉಳಿದಿದ್ದರು. ಇದೀಗ ಚೇತರಿಸಿಕೊಂಡಿರುವ ಅವರು ಕೇವಲ ಬ್ಯಾಟ್ಸ್‌ಮನ್‌ ಆಗಿ ತಂಡದಲ್ಲಿದ್ದಾರೆ.

ಬೌಲರ್‌ ಆಗಿ ನಾವು ಮ್ಯಾಥ್ಯೂಸ್‌ ಅವರ ಸೇವೆಯಿಂದ ವಂಚಿತರಾಗಿದ್ದೇವೆ. ಬೌಲಿಂಗ್‌ ನಡೆಸುತ್ತಿದ್ದರೆ ನಮಗೆ ನಿಜವಾಗಿಯೂ ಒಳ್ಳೆಯದಾಗುತ್ತಿತ್ತು. ದುರದೃಷ್ಟವಶಾತ್‌ ಗಾಯದ ಸಮಸ್ಯೆಯಿಂದಾಗಿ ಅವರು ಟೆಸ್ಟ್‌ನಲ್ಲಿ ಬೌಲಿಂಗ್‌ ಮಾಡುವಂತಿಲ್ಲ ಎಂದವರು ವಿವರಿಸಿದರು.

2009ರ ಬಳಿಕ ಶ್ರೀಲಂಕಾ ಭಾರತ ನೆಲದಲ್ಲಿ ಮೊದಲ ಟೆಸ್ಟ್‌ ಆಡುತ್ತಿದ್ದು ಮೊದಲ ಗೆಲುವಿನ ನಿರೀಕ್ಷೆಯಲ್ಲಿದೆ. ಶ್ರೀಲಂಕಾ ತಂಡವು 10 ಪಂದ್ಯಗಳಲ್ಲಿ ಸೋತಿದ್ದು ಆರು ಪಂದ್ಯಗಳಲ್ಲಿ ಡ್ರಾ ಸಾಧಿಸಿದೆ.

ಈಡನ್‌ ಗಾರ್ಡನ್ಸ್‌ನ ಪಿಚ್‌ ಹುಲ್ಲಿನಿಂದ ಆವೃತ್ತವಾಗಿದೆ. ಹೀಗಾಗಿ ಇದರ ಸದುಪಯೋಗವನ್ನು ಬ್ಯಾಟ್ಸ್‌ಮನ್‌ ಮತ್ತು ಬೌಲರ್ ಮಾಡಲಿದ್ದಾರೆ ಎಂಬ ವಿಶ್ವಾಸವಿದೆ ಎಂದು ಚಂಡಿಮಾಲ್‌ ತಿಳಿಸಿದರು. ಇಲ್ಲಿ ನಾವು ಆಡಿದ ಈ ಹಿಂದಿನ ಸರಣಿಯಲ್ಲಿ ನಿಜವಾಗಿಯೂ ಚೆನ್ನಾಗಿ ಆಡಿದ್ದೆವು. ಬೌನ್ಸಿ ಪಿಚ್‌ ಮತ್ತು ಹುಲ್ಲಿನಿಂದ ಆವೃತವಾದ ಪಿಚ್‌ನಲ್ಲಿ ನಾವು ಚೆನ್ನಾಗಿ ಆಡುವ ವಿಶ್ವಾಸ ನನಗಿದೆ ಎಂದು ಚಂಡಿಮಾಲ್‌ ನುಡಿದರು.

ಟಾಪ್ ನ್ಯೂಸ್

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

1-aasasa

IPL; ಈಡನ್‌ನಲ್ಲಿ ಕೆಕೆಆರ್‌-ಡೆಲ್ಲಿ ಮೇಲಾಟ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

Madikeri ಕೊಡವ ಹಾಕಿ ಕೂಟಕ್ಕೆ ಗಿನ್ನೆಸ್‌ ಗರಿ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

crime (2)

Minor girl ಪ್ರೀತಿಸಿ ಮದುವೆ; ವೈಮನಸ್ಸಾಗಿ ದೂರ: ಕತ್ತು ಸೀಳಿ ಬರ್ಬರ ಹತ್ಯೆ!

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.