ಇಂದು ದ್ವಿತೀಯ ಏಕದಿನ: ಸರಣಿ ಮೇಲೆ ಕೌರ್‌ ಪಡೆಯ ಕಣ್ಣು


Team Udayavani, Jul 4, 2022, 6:45 AM IST

ಇಂದು ದ್ವಿತೀಯ ಏಕದಿನ: ಸರಣಿ ಮೇಲೆ ಕೌರ್‌ ಪಡೆಯ ಕಣ್ಣು

ಪಲ್ಲೆಕೆಲೆ: ದ್ವೀಪರಾಷ್ಟ್ರ ಶ್ರೀಲಂಕಾ ವಿರುದ್ಧ ಟಿ20 ಸರಣಿ ಗೆದ್ದ ಭಾರತದ ವನಿತೆಯರಿಗೆ ಇದೀಗ ಏಕದಿನ ಸರಣಿಯನ್ನೂ ವಶಪಡಿಸಿಕೊಳ್ಳುವ ಅವಕಾಶ.

ಸೋಮವಾರ ಪಲ್ಲೆಕೆಲೆಯಲ್ಲಿ ದ್ವಿತೀಯ ಏಕದಿನ ನಡೆಯಲಿದ್ದು, ಇದನ್ನು ಗೆಲ್ಲುವುದು ಹರ್ಮನ್‌ಪ್ರೀತ್‌ ಕೌರ್‌ ಬಳಗದ ಗುರಿ. ಇನ್ನೊಂದೆಡೆ ತವರಿನ ಪಡೆಗೆ ಮತ್ತೂಂದು ಮುಖಭಂಗದಿಂದ ಪಾರಾಗಲೇಬೇಕಾದ ಪರಿಸ್ಥಿತಿ. ಹೀಗಾಗಿ ಈ ಪಂದ್ಯ ಗೆದ್ದು ಸರಣಿಯನ್ನು ಜೀವಂತವಾಗಿರಿಸಲು ಗರಿಷ್ಠ ಪ್ರಯತ್ನ ನಡೆಸಲಿದೆ.

ಇಲ್ಲೇ ನಡೆದ ಮೊದಲ ಮುಖಾಮುಖಿಯನ್ನು ಭಾರತ 4 ವಿಕೆಟ್‌ಗಳಿಂದ ಜಯಿಸಿತ್ತು. ಆಗಿನ್ನೂ 72 ಎಸೆತಗಳು ಬಾಕಿ ಇದ್ದವು ಎಂಬುದು ಗಮನಿಸಬೇಕಾದ ಸಂಗತಿ. ಆದರೆ ಈ ಅಧಿಕಾರಯುತ ಗೆಲುವಿನ ಹೊರತಾಗಿಯೂ ಭಾರತದ ಬ್ಯಾಟಿಂಗ್‌ ವಿಭಾಗದಲ್ಲಿ ಸುಧಾರಣೆ ಆಗಬೇಕಾಗಿರುವುದನ್ನು ಮರೆಯುವಂತಿಲ್ಲ.

ಭಾರತದ ಓಪನಿಂಗ್‌ ಇನ್ನಷ್ಟು ಬಲಿಷ್ಠಗೊಳ್ಳಬೇಕಿದೆ. ಸ್ಮತಿ ಮಂಧನಾ, ಶಫಾಲಿ ವರ್ಮ ಇಬ್ಬರೂ ಕ್ಲಿಕ್‌ ಆಗಬೇಕಿದೆ. ಮೊದಲ ಪಂದ್ಯದಲ್ಲಿ ಶಫಾಲಿ 35 ರನ್‌ ಬಾರಿಸಿದರೂ ಮಂಧನಾ ಮಿಂಚುವಲ್ಲಿ ವಿಫ‌ಲರಾಗಿ ದ್ದರು (4). ಯಾಸ್ತಿಕಾ ಭಾಟಿಯ ಆಟ ಒಂದೇ ರನ್ನಿಗೆ ಮುಗಿದಿತ್ತು. ಬಳಿಕ ಶಫಾಲಿ-ಕೌರ್‌ ಜೋಡಿಯ ಉಪಯುಕ್ತ ಜತೆಯಾಟ, ಹಲೀìನ್‌ ದೇವಲ್‌ ಅವರ ಜವಾಬ್ದಾರಿಯುತ ಬ್ಯಾಟಿಂಗ್‌, ದೀಪ್ತಿ ಶರ್ಮ-ಪೂಜಾ ವಸ್ತ್ರಾಕರ್‌ ಅವರ ಆಲ್‌ರೌಂಡ್‌ ಶೋ ಭಾರತದ ಯಶಸ್ಸಿನಲ್ಲಿ ಪ್ರಮುಖ ಪಾತ್ರ ವಹಿಸಿತ್ತು. ಮೊದಲು ಬ್ಯಾಟಿಂಗ್‌ ನಡೆಸುವ ಅವಕಾಶ ಲಭಿಸಿದರೆ 220ರ ಗಡಿ ದಾಟುವುದಕ್ಕೆ ಆದ್ಯತೆ ನೀಡಬೇಕಿದೆ.

ಶ್ರೀಲಂಕಾವನ್ನು 170ರ ಗಡಿಯಲ್ಲಿ ನಿಲ್ಲಿಸುವಲ್ಲಿ ಭಾರತದ ಬೌಲರ್ ವಹಿಸಿದ ಪಾತ್ರ ಅಮೋಘ. ನಿಜಕ್ಕಾದರೆ ಇದು ಬೌಲರ್‌ಗಳದೇ ಪಂದ್ಯವಾಗಿತ್ತು. ರೇಣುಕಾ ಸಿಂಗ್‌, ದೀಪ್ತಿ ಶರ್ಮ, ಪೂಜಾ ವಸ್ತ್ರಾಕರ್‌ ಘಾತಕ ದಾಳಿ ನಡೆಸಿ ಆತಿಥೇಯರನ್ನು ಕಟ್ಟಿ ಹಾಕಿದರು. ಬಳಿಕ ಬ್ಯಾಟಿಂಗ್‌ನಲ್ಲೂ ಮಿಂಚಿದ ದೀಪ್ತಿ, ಪೂಜಾ ಅಜೇಯರಾಗಿ ಉಳಿದು ಭಾರತದ ಗೆಲುವು ಸಾರಿದ್ದರು.

ಅತಪಟ್ಟು ಟಾರ್ಗೆಟ್‌
ಶ್ರೀಲಂಕಾದ ಬ್ಯಾಟಿಂಗ್‌ ಸರದಿ ನಾಯಕಿ ಚಾಮರಿ ಅತಪಟ್ಟು ಅವರನ್ನು ನೆಚ್ಚಿಕೊಂಡಿದೆ. ಇವರು ಸಿಡಿದು ನಿಂತರೆ ಏನಾಗುತ್ತದೆ, ಬೇಗನೇ ಔಟಾದರೆ ಏನಾಗುತ್ತದೆ ಎಂಬುದಕ್ಕೆ ಅಂತಿಮ ಟಿ20 ಮತ್ತು ಮೊದಲ ಏಕದಿನ ಪಂದ್ಯವೇ ಸಾಕ್ಷಿ. ಮೊನ್ನೆ ರೇಣುಕಾ ಸಿಂಗ್‌ ಎರಡೇ ರನ್ನಿಗೆ ಅತಪಟ್ಟು ಆಟ ಮುಗಿಸಿದ್ದರು. ಸೋಮವಾರವೂ ಅಷ್ಟೇ, ಅತಪಟ್ಟು ಅವರೇ ಭಾರತದ ಮೊದಲ ಟಾರ್ಗೆಟ್‌ ಆಗಿರಬೇಕು.

ಬೆಳಗ್ಗೆ 10 ಗಂಟೆಗೆ ಆರಂಭವಾಗಲಿ ರುವ ಈ ಪಂದ್ಯ, ಡಿಡಿ ಸ್ಪೋರ್ಟ್ಸ್ ಚಾನೆ ಲ್‌ನಲ್ಲಿ ನೇರ ಪ್ರಸಾರ ಕಾಣಲಿದೆ.

ಟಾಪ್ ನ್ಯೂಸ್

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

9-bantwala

Bantwala: ಬಾಲಕಿಯೊಂದಿಗೆ ಅನುಚಿತ ವರ್ತನೆ; ಆರೋಪಿ ವಿರುದ್ಧ ಪ್ರಕರಣ ದಾಖಲು

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

 Delhi: ಬ್ಯಾಂಕ್‌ ಮ್ಯಾನೇಜರ್‌ ಅಪಹರಣ…ಮಾಜಿ ಬಾಡಿಗೆದಾರರನಿಂದ ಸಂಚು!

pralhad joshi

Hubli; ದ್ವಂದ್ವತೆ, ತುಷ್ಟೀಕರಣ ಕಾಂಗ್ರೆಸ್ ರಕ್ತದ ಕಣಕಣದಲ್ಲಿದೆ: ಪ್ರಹ್ಲಾದ ಜೋಶಿ

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು

ಹೆದ್ದಾರಿ ಬದಿ ನಿಂತಿದ್ದ ಟ್ರಕ್ ಗೆ ಕಾರು ಡಿಕ್ಕಿ… ಮಗು ಸೇರಿ 6 ಮಂದಿ ಸ್ಥಳದಲ್ಲೇ ಮೃತ್ಯು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

Ipl: ಡೆಲ್ಲಿ ಗೆಲುವಿಗೆ ಪಂತ್‌, ಪಟೇಲ್‌ ನೆರವು

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

IPL: ಮತ್ತೂಂದು ದೊಡ್ಡ ಮೊತ್ತಕ್ಕೆ ಎಸ್‌ಆರ್‌ಎಚ್‌ ಸ್ಕೆಚ್‌

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

siddaramaiah

Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ‌ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ‌

10-screenshot

Students Notes: ಸ್ಕ್ರೀನ್‌ ಶಾರ್ಟ್‌ಗಳೆಂದು ಪುಸ್ತಕವಾಗದಿರಲಿ

Telugu version of ‘Markasthra’ titled ‘Maranayudham

ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ

bike

Devadurga: ಅಪಘಾತದಲ್ಲಿ ಬೈಕ್ ಸವಾರರಿಬ್ಬರು ಸಾವು

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Arunachal Pradesh: ಧಾರಾಕಾರ ಮಳೆ… ಭೂಕುಸಿತ, ಕೊಚ್ಚಿಹೋದ ಚೀನಾ ಗಡಿ ಸಂಪರ್ಕ ಹೆದ್ದಾರಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.