ನಾವು ಯಾರಿಗೂ ಕಮ್ಮಿ ಇಲ್ಲ ;ಹೆಣ್ಮಕ್ಳು ಸ್ಟ್ರಾಂಗು ಗುರೂ..!


Team Udayavani, Mar 3, 2018, 11:52 AM IST

66aa.jpg

ತವರು ನೆಲದಲ್ಲಿಯೇ ಬಲಿಷ್ಠ ದಕ್ಷಿಣ ಆಫ್ರಿಕಾ ಮಹಿಳಾ ತಂಡವನ್ನು ಏಕದಿನ ಹಾಗೂ ಟಿ20 ಮಾದರಿಗಳಲ್ಲಿ ಬಗ್ಗು ಬಡಿಯುವ ಮೂಲಕ ತಾವು ಯಾರಿಗೂ ಕಮ್ಮಿಯಿಲ್ಲ ಎಂಬುದನ್ನು ಭಾರತ ಮಹಿಳಾ ತಂಡ ಸಾಬೀತುಪಡಿಸಿದೆ. ಫೆ.5 ರಿಂದ 24ರವರೆಗೆ ದಕ್ಷಿಣ ಆಫ್ರಿಕಾ ಪ್ರವಾಸ ಕೈಗೊಂಡಿದ್ದ ಭಾರತ ಮಹಿಳಾ ತಂಡ ಇದೇ ಮೊದಲ ಬಾರಿಗೆ ವಿದೇಶದಲ್ಲಿ ಎರಡು ಸರಣಿ ಗೆದ್ದ ಸಾಧನೆ ಮಾಡಿದೆ. ಮೂರು ಏಕದಿನ ಸರಣಿಯನ್ನು 2-1 ಹಾಗೂ 5 ಟಿ20 ಪಂದ್ಯಗಳ ಸರಣಿಯನ್ನು 3-1 ಅಂತರದಲ್ಲಿ ಗೆದ್ದು ಬೀಗಿದೆ. ಈ ಮೂಲಕ ಹೊಸ ಇತಿಹಾಸವನ್ನು ನಿರ್ಮಿಸಿದೆ.

ಇದರ ಜತೆಗೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿ ಭಾರತೀಯ ಮಹಿಳೆಯರು ಹಲವು ಅಪರೂಪದ ದಾಖಲೆಗಳನ್ನು ಬರೆದಿದ್ದಾರೆ. ಯುವ ಆಟಗಾರ್ತಿಯರು ಸಿಕ್ಕ ಒಂದೆರಡು ಅವಕಾಶವನ್ನು ಸಮರ್ಥವಾಗಿ ಬಳಸಿಕೊಳ್ಳುವ ಮೂಲಕ ತಮ್ಮ ಪ್ರತಿಭೆಯನ್ನು ಅನಾವರಣಗೊಳಿಸಿದ್ದಾರೆ.

ಭಾರತ ಪರುಷರ ತಂಡ ಸಹ ಇದೇ ವೇಳೆ ದಕ್ಷಿಣ ಆಫ್ರಿಕಾ ಪ್ರವಾಸದಲ್ಲಿದ್ದ ಪರಿಣಾಮ ಮಹಿಳೆಯ ಪಂದ್ಯಗಳಿಗೆ ಅಷ್ಟು ಮಹತ್ವ ಸಿಕ್ಕಿರಲಿಲ್ಲ. ಆದರೆ, ಪುರುಷರ ತಂಡಕ್ಕೆ ಸರಿಸಮ ಅನ್ನುವಂಥ ಪ್ರದರ್ಶನ ನೀಡುವ ಮೂಲಕ ಮಹಿಳಾ ಕ್ರಿಕೆಟ್‌ ತಂಡವು ಎಲ್ಲರ ಮೆಚ್ಚುಗೆಗೆ ಪಾತ್ರವಾಗಿದೆ.

ಇದೀಗ ಸದ್ಯದ ಭಾರತ ಮಹಿಳಾ ತಂಡದ ಆಟಗಾರ್ತಿಯರನ್ನು ಭಾರತ ಪುರುಷ ತಂಡಕ್ಕೆ ಹೋಲಿಕೆ ಮಾಡುವಂತಿದೆ. ಮಹಿಳಾ ತಂಡ ಹೊಡಿಬಡಿ ಆಟಗಾರ್ತಿ ಸ್ಮತಿ ಮಂದನಾ, ವೀರೇಂದ ಸೆಹವಾಗ್‌ಗೆ, ತಂಡದ ನಾಯಕಿ ಮಿಥಾಲಿ ರಾಜ್‌ ಅವರನ್ನು ವಿರಾಟ್‌ ಕೊಹ್ಲಿಗೆ, ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್‌ ಮಾಡುವ ವೇದಾ ಕೃಷ್ಣಮೂರ್ತಿ ಅವರನ್ನು ಸಿಕ್ಸರ್‌ ವೀರ ಯುವರಾಜ್‌ ಸಿಂಗ್‌ಗೆ ಮತ್ತು ಹರ್ಮನ್‌ಪ್ರೀತ್‌ ಕೌರ್‌ ಅವರನ್ನು ಮ್ಯಾಚ್‌ ಫಿನಿಷರ್‌ ಎಂ.ಎಸ್‌.ಧೋನಿಗೆ ಹೋಲಿಕೆ ಮಾಡಲಾಗುತ್ತಿದೆ.

200 ವಿಕೆಟ್‌ ಪಡೆದ ಜೂಲನ್‌
ಏಕದಿನ ಪಂದ್ಯಗಳಲ್ಲಿ ಈಗಾಗಲೇ ಅತಿಹೆಚ್ಚು ವಿಕೆಟ್‌ ಪಡೆದು ದಾಖಲೆ ನಿರ್ಮಿಸಿರುವ ಭಾರತದ ಸ್ಟಾರ್‌ ಬೌಲರ್‌ ಜೂಲನ್‌ ಗೋಸ್ವಾಮಿ ದಕ್ಷಿಣ ಆಫ್ರಿಕಾ ವಿರುದ್ಧ ಆಡಿದ ಎರಡು ಪಂದ್ಯಗಳಲ್ಲಿ 5 ವಿಕೆಟ್‌ ಪಡೆಯುವ ಮೂಲಕ ಏಕದಿನ ಕ್ರಿಕೆಟ್‌ನಲ್ಲಿ 200 ವಿಕೆಟ್‌ ಪಡೆದ ವಿಶ್ವದ ಮೊದಲ ಆಟಗಾರ್ತಿ ಎಂಬ ದಾಖಲೆಯನ್ನು ತಮ್ಮದಾಗಿಸಿಕೊಂಡಿದ್ದಾರೆ.

ತಂಡಕ್ಕೆ ಟಿ20 ಸ್ಪೆಷಲಿಸ್ಟ್‌
ತಂಡಕ್ಕೆ ಇತ್ತೀಚೆಗೆ ಪದಾರ್ಪಣೆ ಮಾಡಿದ ಜಮ್ಮಾಯಿ ರೋಡ್ರಿಗೋಸ್‌ ಬ್ಯಾಟ್‌ ಮಾಡಿದ ಮೂರು ಟಿ20 ಪಂದ್ಯಗಳಲ್ಲಿ ಒಟ್ಟು 81 ರನ್‌ ಗಳಿಸುವ ಮೂಲಕ ಗಮನ ಸೆಳೆದಿದ್ದಾರೆ. ಫೈನಲ್‌ನಲ್ಲಿ ಒತ್ತಡದ ನಡುವೆಯೂ ರೋಡ್ರಿಗೋಸ್‌ 44 ರನ್‌ ಗಳಿಸುವುದರೊಂದಿಗೆ ಅನುಭವಿ ಮಿಥಾಲಿ ರಾಜ್‌ ಅವರೊಂದಿಗೆ 98 ರನ್‌ ಜೊತೆಯಾಟದ ಮೂಲಕ ಭಾರತ ಐತಿಹಾಸಿಕ ಸರಣಿ ಗೆಲ್ಲುವಲ್ಲಿ ಪ್ರಮುಖ ಪಾತ್ರವಹಿಸಿದರು. ಆ ಹಿನ್ನೆಲೆಯಲ್ಲಿ ರೋಡ್ರಿಗೋಸ್‌ ಟಿ20 ಮಾದರಿಯ ಸ್ಪೆಷಲಿಸ್ಟ್‌ ಆಟಗಾರ್ತಿಯಾಗಲಿದ್ದಾರೆ ಎಂದು ಟಿ20 ಸರಣಿಯನ್ನು ಮುನ್ನಡೆಸಿದ ಹರ್ಮನ್‌ಪ್ರೀತ್‌ ಕೌರ್‌ ಭವಿಷ್ಯ ನುಡಿದಿದ್ದಾರೆ.

ಮಿಂಚಿದ ಬೌಲರ್
ದಕ್ಷಿಣ ಆಫ್ರಿಕಾ ಸರಣಿಯುದ್ದಕ್ಕೂ ವಿದೇಶಿ ಪಿಚ್‌ಗಳಲ್ಲಿ ಭಾರತದ ವೇಗ ಹಾಗೂ ಸ್ಪಿನ್‌ ಬೌಲರ್‌ಗಳು ಮೇಲುಗೈ ಸಾಧಿಸಿದ್ದು ವಿಶೇಷವಾಗಿತ್ತು. ಅಂಜುಂ ಪಾಟೀಲ್‌, ಪೂಜಾ ವಸ್ತಾಕರ್‌, ಏಕ್ತಾ ಬಿಸ್ಟ್‌, ರಾಜೇಶ್ವರಿ ಗಾಯಕ್ವಾಡ್‌ ಉತ್ತಮ ಪ್ರದರ್ಶನ ನೀಡಿ ಸೈ ಎನಿಸಿಕೊಂಡರು.

ವರವಾಗುತ್ತಿದೆ ನೇರಪ್ರಸಾರ
ವಿಶ್ವಾದ್ಯಂತ ಮಹಿಳಾ ಕ್ರಿಕೆಟ್‌ ಪ್ರೇಮಿಗಳ ಸಂಖ್ಯೆ ಹೆಚ್ಚಾಗುತ್ತಿದೆ. ಈ ಹಿನ್ನೆಲೆಯಲ್ಲಿ ಹಿಂದೆ ವಿಶ್ವಕಪ್‌ ಅಥವಾ ಅತ್ಯಂತ ಹೆಚ್ಚಿನ ಮಹತ್ವ ಹೊಂದಿರುವ ಪಂದ್ಯಗಳನ್ನು ಮಾತ್ರ ನೇರ ಪ್ರಸಾರ ಮಾಡುತ್ತಿದ್ದ ಕ್ರೀಡಾ ಚಾಲನ್‌ಗಳು ಇತ್ತೀಚಿನ ದಿನಗಳಲ್ಲಿ ಮಹಿಳಾ ತಂಡಗಳ ನಡುವಿನ ಪ್ರತಿಯೊಂದು ಪಂದ್ಯವನ್ನೂ ನೇರ ಪ್ರಸಾರ ಮಾಡುತ್ತಿವೆ. ಇದು ಮಹಿಳಾ ಕ್ರಿಕೆಟ್‌ ಭವಿಷ್ಯದ ದೃಷ್ಟಿಯಿಂದ ಆಟಗಾರ್ತಿಯರಿಗೆ ಮತ್ತು ಮಹಿಳಾ ಕ್ರಿಕೆಟ್‌ ಬೆಳವಣಿಗೆಗೆ ವರವಾಗುತ್ತಿದೆ.

ಚುಟುಕು ಕ್ರಿಕೆಟ್‌ನಲ್ಲಿ ಮಿಥಾಲಿ ಅಬ್ಬರ ಮೂರು ಏಕದಿನ ಪಂದ್ಯಗಳಲ್ಲಿ ರನ್‌ ಗಳಿಸಲು ಪರದಾಡಿದ ಮಿಥಾಲಿ ರಾಜ್‌ ಚುಟುಕು ಕ್ರಿಕೆಟ್‌ನಲ್ಲಿ ಅಬ್ಬರಿಸಿದ್ದು ವಿಶೇಷವಾಗಿತ್ತು. ಮೂರು ಏಕದಿನ ಪಂದ್ಯಗಳಲ್ಲಿ ಕೇವಲ 65 ರನ್‌ಗಳಿಸಿದ ಮಿಥಾಲಿ, ಚುಟುಕು ಕ್ರಿಕೆಟ್‌ನಲ್ಲಿ ಮೂರು ಅರ್ಧ ಶತಕಗಳನ್ನು ಒಳಗೊಂಡಂತೆ ಒಟ್ಟು 192 ರನ್‌ ಗಳಿಸುವ ಮೂಲಕ ಸರಣಿ ಶ್ರೇಷ್ಠ ಪ್ರಶಸ್ತಿಗೆ ಪಾತ್ರರಾದರು.

 ವೆಂ.ಸುನೀಲ್‌ ಕುಮಾರ್‌

ಟಾಪ್ ನ್ಯೂಸ್

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

bahumuki

ಅರಮನೆಯಂಥ ಬಂಗಲೆ ಇದೆ, ಏನುಪಯೋಗ?

ಮೊದಲ ಗುರಿಯೇ ಕೊನೆಯದೂ ಆಗಿದೆ!

ಮೊದಲ ಗುರಿಯೇ ಕೊನೆಯದೂ ಆಗಿದೆ!

bahumuki

ಹುಡುಗಿಯ ಚುಂಬನ ಮತ್ತು ಆಗಸದ ತಾರೆ

ಟೊಮೇಟೊ ಹಣ್ಣಿನ ಗೊಜ್ಜು

ಟೊಮೇಟೊ ಹಣ್ಣಿನ ಗೊಜ್ಜು

ದೀಪವನ್ನೇ ಏಕೆ ಬಳಸಬೇಕು?

ದೀಪವನ್ನೇ ಏಕೆ ಬಳಸಬೇಕು?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Ashwin Vaishnav

Bullet train ಮೊದಲ ಬಾರಿಗೆ ಬ್ಯಾಲೆಸ್ಟ್‌ಲೆಸ್‌ ಟ್ರ್ಯಾಕ್‌: ರೈಲ್ವೇ ಸಚಿವ ವೈಷ್ಣವ್‌

1-addasd

Mumbai Indians: ಸೂರ್ಯಕುಮಾರ್‌ ಶೀಘ್ರ ಚೇತರಿಕೆ ಸಾಧ್ಯತೆ

1-eewqeeeqwewqewq

Australia; ಕೇಂದ್ರೀಯ ಗುತ್ತಿಗೆ ಪಟ್ಟಿ: ವಾರ್ನರ್‌, ಸ್ಟೋಯಿನಿಸ್‌, ಅಗರ್‌ ಹೊರಕ್ಕೆ

1-hanuma

ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್‌

1-wewqqewqe

Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.