2ನೇ ಮಹಿಳಾ ಟಿ20: ಭಾರತಕ್ಕೆ ಸರಣಿ ಜಯದ ಗುರಿ


Team Udayavani, Feb 16, 2018, 6:35 AM IST

harmanpreet-kaur-25.jpg

ಈಸ್ಟ್‌ ಲಂಡನ್‌ (ದ.ಆಫ್ರಿಕಾ): ದಕ್ಷಿಣ ಆಫ್ರಿಕಾ ನೆಲದಲ್ಲಿ ಕೊಹ್ಲಿ ಪಡೆಯ ಜತೆ ಭಾರತದ ವನಿತೆಯರೂ ಪೈಪೋಟಿಗೆ ಇಳಿದಿರುವ ರೋಮಾಂಚಕಾರಿ ವಿದ್ಯಮಾನವೀಗ ಕಂಡುಬರುತ್ತಿದೆ. 

ಭಾರತ ಪುರುಷರ ತಂಡಕ್ಕಿಂತಲೂ ಮೊದಲೇ ಏಕದಿನ ಸರಣಿ ವಶಪಡಿಸಿಕೊಂಡ ಮಹಿಳಾ ತಂಡವೀಗ ಟಿ20 ಪಂದ್ಯದಲ್ಲೂ ಗೆಲುವಿನ ಆರಂಭ ಕಂಡುಕೊಂಡಿದೆ. ಶುಕ್ರವಾರ ಈಸ್ಟ್‌ ಲಂಡನ್‌ನಲ್ಲಿ 2ನೇ ಚುಟುಕು ಕ್ರಿಕೆಟ್‌ ಪಂದ್ಯ ನಡೆಯಲಿದ್ದು, ಗೆಲುವಿನ ಲಯವನ್ನು ಮುಂದುವರಿಸಿಕೊಂಡು ಹೋಗುವುದು ಹರ್ಮನ್‌ಪ್ರೀತ್‌ ಕೌರ್‌ ಪಡೆಯ ಯೋಜನೆ.

ಏಕದಿನ ಸರಣಿಯ ಕೊನೆಯ ಪಂದ್ಯದಲ್ಲಿ ಎಡವಿ ಕ್ಲೀನ್‌ಸಿÌàಪ್‌ ಅವಕಾಶವನ್ನು ಕಳೆದುಕೊಂಡ ಭಾರತ, ಟಿ20 ಸರಣಿಯನ್ನು ಸಕಾರಾತ್ಮಕ ರೀತಿಯಲ್ಲೇ ಆರಂಭಿಸಿದೆ. ದಕ್ಷಿಣ ಆಫ್ರಿಕಾ 4ಕ್ಕೆ 164 ರನ್‌ ಬಾರಿಸಿ ಸವಾಲೊಡ್ಡಿದ ಬಳಿಕ ಭಾರತ 18.5 ಓವರ್‌ಗಳಲ್ಲಿ ಗುರಿ ಮುಟ್ಟಿತ್ತು. ಚೇಸಿಂಗ್‌ ವೇಳೆ ಆರಂಭಿಕ ಆಟಗಾರ್ತಿ ಮಿಥಾಲಿ ರಾಜ್‌ (ಔಟಾಗದೆ 54), ಸ್ಮತಿ ಮಂಧನಾ (28), ಮೊದಲ ಪಂದ್ಯವಾಡಿದ ಮುಂಬೈನ 17ರ ಹರೆಯದ ಜೆಮಿಮಾ ರೋಡ್ರಿಗಸ್‌ (37) ಮತ್ತು ವೇದಾ ಕೃಷ್ಣಮೂರ್ತಿ (ಔಟಾಗದೆ 37) ಸೇರಿಕೊಂಡು ಭಾರತವನ್ನು ಸುರಕ್ಷಿತವಾಗಿ ದಡ ಮುಟ್ಟಿಸಿದ್ದರು. ಮಿಥಾಲಿ ರಾಜ್‌ ಇವರಿಬ್ಬರೊಂದಿಗೂ ಅತ್ಯುತ್ತಮ ಜತೆಯಾಟ ನಿಭಾಯಿಸಿದ್ದರು. 3ನೇ ವಿಕೆಟಿಗೆ 69 ರನ್‌, 4ನೇ ವಿಕೆಟಿಗೆ 52 ರನ್‌ ಹರಿದು ಬಂದಿತ್ತು. ಆದರೆ ನಾಯಕಿ ಹರ್ಮನ್‌ಪ್ರೀತ್‌ ಕೌರ್‌ ಮೊದಲ ಎಸೆತದಲ್ಲೇ ರನೌಟ್‌ ಆಘಾತಕ್ಕೆ ಸಿಲುಕಬೇಕಾಯಿತು.

ನಾಯಕತ್ವದ ಒತ್ತಡದಿಂದ ಮುಕ್ತರಾಗಿದ್ದ ಮಿಥಾಲಿ ರಾಜ್‌ ಅವರ ಬಿರುಸಿನ ಬ್ಯಾಟಿಂಗ್‌ ಹಾಗೂ 11ನೇ ಅರ್ಧ ಶತಕ ಭಾರತದ ಸರದಿಯ ಆಕರ್ಷಣೆಯಾಗಿತ್ತು. 48 ಎಸೆತ ಎದುರಿಸಿದ ಮಿಥಾಲಿ 6 ಬೌಂಡರಿ ಹಾಗೂ ಒಂದು ಸಿಕ್ಸರ್‌ ಎತ್ತಿ ಮೆರೆದಿದ್ದರು.

ಬೌಲಿಂಗ್‌ ಸುಧಾರಿಸಬೇಕು: ಆದರೆ ಮೊದಲ ಪಂದ್ಯದಲ್ಲಿ ಭಾರತದ ಬೌಲಿಂಗ್‌ ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಅನುಭವಿ ವೇಗಿ ಜೂಲನ್‌ ಗೋಸ್ವಾಮಿ ಗಾಯಾಳಾಗಿ ಸರಣಿಯಿಂದಲೇ ಹೊರಬಿದ್ದಿರುವುದು ತಂಡಕ್ಕೆ ಬಿದ್ದ ದೊಡ್ಡ ಹೊಡೆತವಾಗಿದೆ. ಶಿಖಾ ಪಾಂಡೆ (41ಕ್ಕೆ 1) ಬಹಳ ದುಬಾರಿಯಾದರೆ, ಯುವ ವೇಗಿ ಪೂಜಾ ವಸ್ತ್ರಾಕರ್‌ (34ಕ್ಕೆ 1) ಸಾಮಾನ್ಯ ಯಶಸ್ಸು ಕಂಡಿದ್ದರು. ಆದರೆ ಟಿ20 ಸೆಷ್ಪಲಿಸ್ಟ್‌ ಸ್ಪಿನ್ನರ್‌ ಅನುಜಾ ಪಾಟೀಲ್‌ 23ಕ್ಕೆ 2 ವಿಕೆಟ್‌ ಕಿತ್ತು ಭರವಸೆ ಮೂಡಿಸಿದ್ದಾರೆ. ಇವರಿಗೆ ಪೂನಂ ಯಾದವ್‌, ರಾಧಾ ಯಾದವ್‌ ಅವರಿಂದ ಸೂಕ್ತ ಬೆಂಬಲ ಲಭಿಸಬೇಕಿದೆ.

ದಕ್ಷಿಣ ಆಫ್ರಿಕಾದ ಕ್ಲೊ ಟ್ರಯಾನ್‌ ಕೇವಲ 7 ಎಸೆತಗಳಲ್ಲಿ ಅಜೇಯ 32 ರನ್‌ (2 ಬೌಂಡರಿ, 4 ಸಿಕ್ಸರ್‌) ಸಿಡಿಸಿ ಭಾರತವನ್ನು ಬೆದರಿಸಿದ್ದರು. ಪುನರ್‌ ಸಂಘಟಿತರಾಗಿ ಆಡಿದರೆ ಸರಣಿಯನ್ನು ಸಮಬಲಕ್ಕೆ ತರಬಹುದೆಂಬುದು ಆತಿಥೇಯ ತಂಡದ ನಾಯಕಿ ಡೇನ್‌ ವಾನ್‌ ನೀಕರ್ಕ್‌ ನಿರೀಕ್ಷೆ.

ಟಾಪ್ ನ್ಯೂಸ್

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Bidar; Will file Defamation case against Khooba: Eshwar Khandre

Bidar; ಖೂಬಾ ವಿರುದ್ಧ ಮಾನನಷ್ಟ ಮೊಕದ್ದಮೆ ಹೂಡುವೆ: ಈಶ್ವರ್ ಖಂಡ್ರೆ

12-mng

Neha ಹತ್ಯೆ ಪ್ರಕರಣ; ಎನ್‌ಐಎ ತನಿಖೆ; ಮಹಿಳೆಯರು ಕಿರುಕತ್ತಿ ಹೊಂದಲು ಅವಕಾಶ:ವಿಎಚ್‌ಪಿ ಆಗ್ರಹ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ

ಅಂಡಾಶಯದ ಕ್ಯಾನ್ಸರ್ ನಿಂದ 30 ರ ಹರೆಯದಲ್ಲಿ ಖ್ಯಾತ ಫ್ಯಾಷನ್‌ ಇನ್‌ ಫ್ಲುಯೆನ್ಸರ್‌ ನಿಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL; To win the RCB Cup first….: What did Robin Uthappa say?

IPL; ಆರ್ ಸಿಬಿ ಕಪ್ ಗೆಲ್ಲಬೇಕಾದರೆ ಮೊದಲು….: ರಾಬಿನ್ ಉತ್ತಪ್ಪ ಹೇಳಿದ್ದೇನು?

kl rahul breaks ms dhoni record in ipl

IPL 2024; ಎಂ.ಎಸ್ ಧೋನಿ ದಾಖಲೆ ಮುರಿದ ಕೆ.ಎಲ್ ರಾಹುಲ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

MSD ಎಂಟ್ರಿ ಶಬ್ಧಕ್ಕೆ ಕಿವುಡುತನ ಸಾಧ್ಯತೆ; ವೈರಲ್ ಆಯ್ತು ಡಿಕಾಕ್ ಪತ್ನಿಯ ಇನ್ಸ್ಟಾ ಪೋಸ್ಟ್

1-aqweq

Delhi ತವರಿಗೆ ಮರಳಿದ ಖುಷಿಯಲ್ಲಿ: ಕೋಟ್ಲಾದಲ್ಲಿ ಹೈದರಾಬಾದ್‌ ವಿರುದ್ಧ ಮುಖಾಮುಖಿ

1-RCB

RCB ; ರವಿವಾರ ಕೆಕೆಆರ್‌ ವಿರುದ್ಧ ಈಡನ್‌ನಲ್ಲಿ ಗೋ ಗ್ರೀನ್‌ ಗೇಮ್‌

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

14-fusion

Karataka Damanaka: ಭಟ್ರಾ ಗರಡಿಲಿ ತಯಾರಾದ ಕರಟಕ ದಮನಕ

12

ʼಭಜರಂಗಿ ಭಾಯಿಜಾನ್‌ʼ, ʼರೌಡಿ ರಾಥೋರ್ʼ ಸೀಕ್ವೆಲ್‌ ಬಗ್ಗೆ ಬಿಗ್‌ ಅಪ್ಡೇಟ್‌ ಕೊಟ್ಟ ನಿರ್ಮಾಪಕ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

Mysore; ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸಿಕೊಳ್ಳುವುದು ದುರ್ದೈವದ ಸಂಗತಿ: ಸಿದ್ದರಾಮಯ್ಯ

1-wewqewqe

Revealed; ನೇಹಾ ಹಿರೇಮಠ ಹಂತಕ ಫಯಾಜ್‌ನ ಮತ್ತೊಂದು ಕರಾಳ ಮುಖ ಅನಾವರಣ

13-jp-hegde

Congress: ಸರ್ಕಾರದ ಯೋಜನೆಗಳು ಜನಸ್ನೇಹಿಯಾಗಿರಬೇಕು: ಕೆ.ಜಯಪ್ರಕಾಶ್ ಹೆಗ್ಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.