ಕೊಹ್ಲಿ ಶತಕ.. ಭಾರತಕ್ಕೆ ಗೆಲುವಿನ ಪುಳಕ


Team Udayavani, Aug 12, 2019, 7:40 AM IST

virat

ಪೋರ್ಟ್‌ ಆಫ್‌ ಸ್ಪೇನ್:‌ ರನ್‌ ಮಶಿನ್‌ ವಿರಾಟ್‌ ಕೊಹ್ಲಿಯ ಭರ್ಜರಿ ಶತಕ, ಶ್ರೇಯಸ್‌ ಅಯ್ಯರ್‌ ಜವಾಬ್ಧಾರುಯುತ ಅರ್ಧ ಶತಕ, ಭುವನೇಶ್ವರ್‌ ಕುಮಾರ್‌ ಮಿಂಚಿನ ಬೌಲಿಂಗ್‌ ಸಾಧನೆಯಿಂದ ವಿಂಡೀಸ್‌ ವಿರುದ್ಧದ ಎರಡನೇ ಏಕದಿನ ಪಂದ್ಯವನ್ನು ಭಾರತ 59 ರನ್‌ ಅಂತರದಿಂದ ಗೆದ್ದುಕೊಂಡಿದೆ.

ಮೊದಲು ಬ್ಯಾಟಿಂಗ್‌ ಮಾಡಿದ ಭಾರತ ನಿಗಧಿತ 50 ಓವ್‌ ಗಳಲ್ಲಿ ಏಳು ವಿಕೆಟ್‌ ನಷ್ಟಕ್ಕೆ 279 ರನ್‌ ಗಳಿಸಿದರೆ, ಮಳೆಯ ಕಾರಣದಿಂದ 46 ಓವರ್‌ ಗೆ 270 ರನ್‌ ಗಳಿಸುವ ಗುರಿ ಪಡೆದ ವಿಂಡೀಸ್‌ 210 ರನ್‌ ಗಳಿಗೆ ತನ್ನೆಲ್ಲಾ ವಿಕೆಟ್‌ ಕಳೆದುಕೊಂಡು ಪಂದ್ಯ ಕೈಚೆಲ್ಲಿತು.

ಟಾಸ್‌ ಗೆದ್ದು ಮೊದಲು ಬ್ಯಾಟಿಂಗ್‌ ಆಯ್ಕೆ ಮಾಡಿದ ಭಾರತಕ್ಕೆ ಮತ್ತೆ ಆರಂಭಿಕರು ಕೈಕೊಟ್ಟರು. ಕೇವಲ ಎರಡು ರನ್‌ ಗಳಿಸಿದ ಶಿಖರ್‌ ಧವನ್‌ ಮೊದಲ ಓವರ್‌ ನಲ್ಲೇ ಪೆವಿಲಿಯನ್‌ ಗೆ ಮರಳಿದರು. ಕ್ವೀನ್ಸ್‌ ಪಾರ್ಕ್‌ ಓವಲ್‌ ನಲ್ಲಿ ಬ್ಯಾಟಿಂಗ್‌ ನಡೆಸಲು ಪರದಾಡಿದ ರೋಹಿತ್‌ 34 ಎಸೆತ ಎದುರಿಸಿ 18 ರನ್‌ ಗಳಿಸಿದ್ದಾಗ ದೊಡ್ಡ ಹೊಡೆತಕ್ಕೆ ಕೈ ಹಾಕಿ ಪೂರನ್‌ ಗೆ ಕ್ಯಾಚ್‌ ನೀಡಿ ಔಟಾದರು. ನಂತರ ಬಂದ ಪಂತ್‌ ಕೂಡಾ 20 ರನ್‌ ಗೆ ವಿಕೆಟ್‌ ಒಪ್ಪಿಸಿದರು.

ಆದರೆ ನಾಲ್ಕನೇ ವಿಕೆಟ್‌ ಗೆ ಕೊಹ್ಲಿ ಜೊತೆಯಾದ ಶ್ರೇಯಸ್‌ ಅಯ್ಯರ್‌ ನಿಧಾನವಾಗಿ ತಂಡದ ಮೊತ್ತ ಹೆಚ್ಚಿಸಿದರು. ಕೊಹ್ಲಿ- ಅಯ್ಯರ್‌ ಜೋಡಿ 125 ರನ್‌ ಜೊತೆಯಾಟ ನಡೆಸಿದರು. ನಾಯಕ ವಿರಾಟ್‌ ತಾಳ್ಮೆಯಿಂದ ಇನ್ನಿಂಗ್ಸ್‌ ಕಟ್ಟಿ ತಮ್ಮ ಏಕದಿನ ಬಾಳ್ವೆಯ 42ನೇ ಶತಕ ಬಾರಿಸಿದರು. 125 ಎಸೆತ ಎದುರಿಸಿದ ವಿರಾಟ್ 14 ಬೌಂಡರಿ ಮತ್ತು ಒಂದು ಸಿಕ್ಸರ್‌ ನೆರವಿನಿಂದ 120 ರನ್‌ ಗಳಿಸಿ ಬ್ರಾಥ್‌ ವೇಟ್‌ ಗೆ ವಿಕೆಟ್‌ ಒಪ್ಪಿಸಿದರು.

ಸಿಕ್ಕ ಅವಕಾಶವನ್ನು ಉತ್ತಮವಾಗಿ ಉಪಯೋಗಿಸಿಕೊಂಡ ಅಯ್ಯರ್‌ 71 ರನ್‌ ಮಾಡಿ ಔಟಾದರೆ, ಜಾಧವ್‌, ಜಡೇಜಾ ತಲಾ 16 ರನ್‌ ಗಳಿಸಿದರು. ವಿಂಡೀಸ್‌ ಪರ ಬ್ರಾಥ್ ವೇಟ್‌ ಮೂರು ವಿಕೆಟ್‌ ಪಡೆದು ಮಿಂಚಿದರು.

280 ರನ್‌ ಗುರಿ ಬೆನ್ನಟ್ಟಿದ ವೆಸ್ಟ್‌ ಇಂಡೀಸ್‌ ಗೆ ಉತ್ತಮ ಆರಂಭ ಸಿಗಲಿಲ್ಲ. 300ನೇ ಏಕದಿನ ಪಂದ್ಯ ಆಡಲಿಳಿದ ಗೇಲ್‌ 11 ರನ್‌ ಗಳಿಸಿ ಭುವನೇಶ್ವರ್‌ ಕುಮಾರ್‌ ಗೆ ವಿಕೆಟ್‌ ಒಪ್ಪಿಸಿದರು. ವಿಕೆಟ್‌ ಕೀಪರ್‌ ಶಾಯ್‌ ಹೋಪ್‌ ಕೂಡಾ 5 ರನ್‌ ಗೆ ಔಟಾದರು. ಆರಂಭಿಕ ಆಟಗಾರ ಇವಿನ್‌ ಲೂಯಿಸ್‌ 65 ರನ್‌ ಗಳಿಸಿದರು. ಮಧ್ಯದಲ್ಲಿ ಮಳೆಯಿಂದಾಗಿ ಪಂದ್ಯಕ್ಕೆ ಅಡಚಣೆಯಾಗಿ ಡಕ್ ವರ್ತ್‌ ಲೂಯಿಸ್‌ ನಿಯಮದಡಿ ವಿಂಡೀಸ್‌ ಗೆ  46 ಓವರ್‌ ನಲ್ಲಿ 270 ರನ್‌ ಗಳಿಸುವ ಹೊಸ ಗುರಿ ನೀಡಲಾಯಿತು. ಆದರೆ ಮಧ್ಯಮ ಕ್ರಮಾಂಕದಲ್ಲಿ ಪೂರನ್‌ ಬಿಟ್ಟರೆ ಬೇರಾವ ಆಟಗಾರನೂ ತಂಡದ ಕೈ ಹಿಡಿಯಲಿಲ್ಲ.

ಪೂರನ್‌ 42 ರನ್‌ ಗಳಸಿದರು ಅಂತಿಮವಾಗಿ 210 ರನ್‌ ಗೆ ತನ್ನೆಲ್ಲಾ ವಿಕೆಟ್‌ ಕಲೆದುಕೊಂಡ ಹೋಲ್ಡರ್‌ ಪಡೆ 59 ರನ್‌ ಗಳಿಂದ ಶರಣಾಯಿತು.  ಭಾರತದ ಪರ ಭುವಿ ನಾಲ್ಕು ವಿಕೆಟ್‌, ಶಮಿ ಮತ್ತು ಕುಲದೀಪ್‌ ತಲಾ ಎರಡು ವಿಕೆಟ್‌ ಪಡೆದರು. ಭರ್ಜರಿ ಶತಕ ಬಾರಿಸಿದ ವಿರಾಟ್‌ ಕೊಹ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ಪಡೆದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-asdasdas

IPL; ಸ್ಟಾಯಿನಿಸ್‌ ಏಟಿಗೆ ತವರಲ್ಲೆ ಚಾಂಪಿಯನ್‌ ಚೆನ್ನೈ ಠುಸ್‌!

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

IPL 2024; Chahal’s 200-wicket haul; First bowler to achieve this feat

IPL 2024; ಚಹಲ್‌ 200 ವಿಕೆಟ್‌ಗಳ ಕಮಾಲ್‌; ಈ ಸಾಧನೆಗೈದ ಮೊದಲ ಬೌಲರ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

CSKvsLSG: ಶತಕ ಸಿಡಿಸಿದ ಚೆನ್ನೈನ ಮೊದಲ ನಾಯಕ ಗಾಯಕ್ವಾಡ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

Rajastan Royals; ಪ್ಲೇ ಆಫ್ ಮೊದಲ ಗುರಿ: ಸಂಜು ಸ್ಯಾಮ್ಸನ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.