ರೋಚಕ ಪಂದ್ಯ: ಸೂರ್ಯ, ಕೊಹ್ಲಿ ಪ್ರತಾಪ; ಭಾರತಕ್ಕೆ ಸರಣಿ ಸಂಭ್ರಮ


Team Udayavani, Sep 25, 2022, 10:39 PM IST

ಸೂರ್ಯ, ಕೊಹ್ಲಿ ಪ್ರತಾಪ; ಭಾರತಕ್ಕೆ ಸರಣಿ ಸಂಭ್ರಮ

ಹೈದರಾಬಾದ್‌: ಸೂರ್ಯಕುಮಾರ್‌ ಯಾದವ್‌ ಮತ್ತು ವಿರಾಟ್‌ ಕೊಹ್ಲಿ ಅವರ ಸಿಡಿಲಬ್ಬರದ ಬ್ಯಾಟಿಂಗ್‌ ಶೌರ್ಯದಿಂದ ವಿಶ್ವ ಚಾಂಪಿಯನ್‌ ಆಸ್ಟ್ರೇಲಿಯ ವಿರುದ್ಧದ ಟಿ20 ಸರಣಿಯನ್ನು ಭಾರತ 2-1 ಅಂತರದಿಂದ ತನ್ನದಾಗಿಸಿಕೊಂಡಿದೆ. ರವಿವಾರದ ಹೈದರಾಬಾದ್‌ ಮುಖಾಮುಖಿಯನ್ನು ಟೀಮ್‌ ಇಂಡಿಯಾ 6 ವಿಕೆಟ್‌ಗಳಿಂದ ಗೆದ್ದಿತು.

ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಆಸ್ಟ್ರೇಲಿಯ 7 ವಿಕೆಟಿಗೆ 186 ಪೇರಿಸಿದರೆ, ಭಾರತ 19.5 ಓವರ್‌ಗಳಲ್ಲಿ 4 ವಿಕೆಟಿಗೆ 187 ರನ್‌ ಹೊಡೆದು ಜಯಭೇರಿ ಮೊಳಗಿಸಿತು.

ದೊಡ್ಡ ಮೊತ್ತವನ್ನು ಬೆನ್ನಟ್ಟಬೇಕಿದ್ದ ಭಾರತ ಆರಂಭಿಕರಿಬ್ಬರನ್ನು 4 ಓವರ್‌ ಆಗುವಷ್ಟರಲ್ಲಿ ಕಳೆದುಕೊಂಡಿತು. ರಾಹುಲ್‌ ಒಂದೇ ರನ್ನಿಗೆ ಆಟ ಮುಗಿಸಿದರೆ, ಸಿಡಿಯವ ಸೂಚನೆ ನೀಡಿದ ನಾಯಕ ರೋಹಿತ್‌ ಶರ್ಮ 17 ರನ್‌ ಮಾಡಿ ಔಟಾದರು. 30 ರನ್ನಿಗೆ 2 ವಿಕೆಟ್‌ ಬಿತ್ತು.

ಈ ಹಂತದಲ್ಲಿ ಜತೆಗೂಡಿದ ವಿರಾಟ್‌ ಕೊಹ್ಲಿ-ಸೂರ್ಯಕುಮಾರ್‌ ಯಾದವ್‌ ಆಸೀಸ್‌ ಬೌಲರ್‌ಗಳ ಮೇಲೆರಗಿ ಹೋದರು. ಇಬ್ಬರೂ ಸಿಡಿಲಬ್ಬರದ ಆಟವಾಡಿದರು. ಹತ್ತರ ಸರಾಸರಿಯಲ್ಲಿ ರನ್‌ ಪೇರಿಸುತ್ತ ಹೋದರು. 62 ಎಸೆತಗಳಲ್ಲಿ 104 ರನ್‌ ಒಟ್ಟುಗೂಡಿತು. ಸೂರ್ಯ ಕೇವಲ 36 ಎಸೆತಗಳಿಂದ 69 ರನ್‌ ಸಿಡಿಸಿದರು. 5 ಫೋರ್‌, 5 ಸಿಕ್ಸರ್‌ ಬಾರಿಸಿ ಭರಪೂರ ರಂಜನೆ ಒದಗಿಸಿದರು.

ಬಳಿಕ ಕೊಹ್ಲಿ ಪಂದ್ಯವನ್ನು ತಮ್ಮ ಹಿಡಿತಕ್ಕೆ ತಂದುಕೊಂಡರು. ಅಂತಿಮ ಓವರ್‌ನಲ್ಲಿ 11 ರನ್‌ ಅಗತ್ಯವಿದ್ದಾಗ ಮೊದಲ ಎಸೆತವನ್ನು ಸಿಕ್ಸರ್‌ಗೆ ಬಡಿದಟ್ಟಿ ಭಾರತದ ಸವಾಲವನ್ನು ಸುಲಭಗೊಳಿಸಿದರು. ಕೊಹ್ಲಿ ಕೊಡುಗೆ 48 ಎಸೆತಗಳಿಂದ 63 ರನ್‌ (3 ಬೌಂಡರಿ, 4 ಸಿಕ್ಸರ್‌). ಪಾಂಡ್ಯ ಅಜೇಯ 25 ರನ್‌ ಮಾಡಿದರು.

ಆಸ್ಟ್ರೇಲಿಯ
ಕ್ಯಾಮರಾನ್‌ ಗ್ರೀನ್‌ ಸಿ ರಾಹುಲ್‌ ಬಿ ಭುವನೇಶ್ವರ್‌ 52
ಆರನ್‌ ಫಿಂಚ್‌ ಸಿ ಪಾಂಡ್ಯ ಬಿ ಅಕ್ಷರ್‌ 7
ಸ್ಟೀವನ್‌ ಸ್ಮಿತ್‌ ಸ್ಟಂಪ್ಡ್ ಕಾರ್ತಿಕ್‌ ಬಿ ಚಹಲ್‌ 9
ಗ್ಲೆನ್‌ ಮ್ಯಾಕ್ಸ್‌ವೆಲ್‌ ರನೌಟ್‌ 6
ಜೋಶ್‌ ಇಂಗ್ಲಿಸ್‌ ಸಿ ರೋಹಿತ್‌ ಬಿ ಅಕ್ಷರ್‌ 24
ಟಿಮ್‌ ಡೇವಿಡ್‌ ಸಿ ರೋಹಿತ್‌ ಬಿ ಹರ್ಷಲ್‌ 54
ಮ್ಯಾಥ್ಯೂ ವೇಡ್‌ ಸಿ ಮತ್ತು ಬಿ ಅಕ್ಷರ್‌ 1
ಡೇನಿಯಲ್‌ ಸ್ಯಾಮ್ಸ್‌ ಔಟಾಗದೆ 28
ಪ್ಯಾಟ್‌ ಕಮಿನ್ಸ್‌ ಔಟಾಗದೆ 0
ಇತರ 5
ಒಟ್ಟು (7 ವಿಕೆಟಿಗೆ) 186
ವಿಕೆಟ್‌ ಪತನ: 1-44, 2-62, 3-75, 4-84, 5-115, 6-117, 7-185.
ಬೌಲಿಂಗ್‌:
ಭುವನೇಶ್ವರ್‌ ಕುಮಾರ್‌ 3-0-39-1
ಅಕ್ಷರ್‌ ಪಟೇಲ್‌ 4-0-33-3
ಜಸ್‌ಪ್ರೀತ್‌ ಬುಮ್ರಾ 4-0-50-0
ಹಾರ್ದಿಕ್‌ ಪಾಂಡ್ಯ 3-0-23-0
ಯಜುವೇಂದ್ರ ಚಹಲ್‌ 4-0-22-1
ಹರ್ಷಲ್‌ ಪಟೇಲ್‌ 2-0-18-1

ಭಾರತ
ಕೆ.ಎಲ್‌. ರಾಹುಲ್‌ ಸಿ ವೇಡ್‌ ಬಿ ಸ್ಯಾಮ್ಸ್‌ 1
ರೋಹಿತ್‌ ಶರ್ಮ ಸಿ ಸ್ಯಾಮ್ಸ್‌ ಬಿ ಕಮಿನ್ಸ್‌ 17
ವಿರಾಟ್‌ ಕೊಹ್ಲಿ ಸಿ ಫಿಂಚ್‌ ಬಿ ಸ್ಯಾಮ್ಸ್‌ 63
ಸೂರ್ಯಕುಮಾರ್‌ ಸಿ ಫಿಂಚ್‌ ಬಿ ಹೇಝಲ್‌ವುಡ್‌ 69
ಹಾರ್ದಿಕ್‌ ಪಾಂಡ್ಯ ಔಟಾಗದೆ 25
ದಿನೇಶ್‌ ಕಾರ್ತಿಕ್‌ ಔಟಾಗದೆ 1
ಇತರ 11
ಒಟ್ಟು (19.5 ಓವರ್‌ಗಳಲ್ಲಿ 4 ವಿಕೆಟಿಗೆ) 187
ವಿಕೆಟ್‌ ಪತನ: 1-5, 2-30, 3-134, 4-182.
ಬೌಲಿಂಗ್‌:
ಡೇನಿಯಲ್‌ ಸ್ಯಾಮ್ಸ್‌ 3.5-0-33-2
ಜೋಶ್‌ ಹೇಝಲ್‌ವುಡ್‌ 4-0-40-1
ಆ್ಯಡಂ ಝಂಪ 4-0-44-0
ಪ್ಯಾಟ್‌ ಕಮಿನ್ಸ್‌ 4-0-40-1
ಕ್ಯಾಮರಾನ್‌ ಗ್ರೀನ್‌ 3-0-14-0
ಗ್ಲೆನ್‌ ಮ್ಯಾಕ್ಸ್‌ವೆಲ್‌ 1-0-11-0

ಟಾಪ್ ನ್ಯೂಸ್

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

UPSC Result: ವಿಜಯಪುರದ ವಿಜೇತಾಗೆ ಯುಪಿಎಸ್‍ಸಿಯಲ್ಲಿ 100ನೇ ರ್‍ಯಾಂಕ್

17=

Mangaluru: ಬೈಕ್‌ಗೆ ಕಾರು ಢಿಕ್ಕಿ: ವಿದ್ಯಾರ್ಥಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Heavy Rain: ಹಿಮಾಚಲದಲ್ಲಿ ಭಾರೀ ಮಳೆ… 112 ರಸ್ತೆಗಳು ಬಂದ್‌

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಹಣ

Dharawad: ಮದ್ಯದ ಶೋಧಕ್ಕೆ ಹೋದ ಅಧಿಕಾರಿಗಳಿಗೆ ಸಿಕ್ಕಿದ್ದು ಕಂತೆ ಕಂತೆ ಕೋಟಿಗಟ್ಟಲೆ ಹಣ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

ಇನ್ನು ಹಣಕೊಟ್ಟರೆ ಮಾತ್ರ ಟ್ವಿಟರ್‌ನಲ್ಲಿ ಪೋಸ್ಟ್‌, ಲೈಕ್‌ ರಿಪ್ಲೈ ಗೆ ಅವಕಾಶ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

Bantwal: ಮೂರ್ಛೆ ರೋಗದಿಂದ ಬಳಲುತ್ತಿದ್ದ ಮಹಿಳೆ ನದಿಗೆ ಹಾರಿ ಆತ್ಮಹತ್ಯೆ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

2018ರಲ್ಲಿ ನಡೆದ ಬಾಲ್ಯ ವಿವಾಹ ಪ್ರಕರಣ: 7 ಜನರಿಗೆ ಕಠಿಣ ಶಿಕ್ಷೆ ವಿಧಿಸಿದ ನ್ಯಾಯಾಲಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.