ತಿರುವನಂತಪುರಂ ಏಕದಿನ ಪಂದ್ಯ: ಟೀಮ್ ಇಂಡಿಯಾಕ್ಕೆ ಸರಣಿ ಜಯ 


Team Udayavani, Nov 1, 2018, 5:06 PM IST

kohli.jpg

ತಿರುವನಂತಪುರಂ: ಪ್ರವಾಸಿ ವೆಸ್ಟ್ ಇಂಡೀಸ್ ವಿರುದ್ಧದ ಅಂತಿಮ ಏಕದಿನ ಪಂದ್ಯದಲ್ಲಿ ಭಾರತ ತಂಡ 9 ವಿಕೆಟ್ ಗಳ ಸುಲಭ ಜಯ ಸಾಧಿಸಿದೆ. ವಿಂಡೀಸ್ ನೀಡಿದ 105 ರನ್ ಗಳ ಸುಲಭ ಗುರಿಯನ್ನು ಬೆನ್ನಟ್ಟಿದ ಟೀಮ್ ಇಂಡಿಯಾ 15 ಓವರ್ ಗಳಲ್ಲಿ 1 ವಿಕೆಟ್ ಕಳೆದುಕೊಂಡು ಗೆಲುವಿನ ನಗೆ ಬೀರಿದೆ . ಈ ಗೆಲುವಿನೊಂದಿಗೆ ಭಾರತ ಏಕದಿನ ಸರಣಿಯನ್ನು 3-1 ರ ಅಂತರದಿಂದ ವಶಪಡಿಸಿಕೊಂಡಿತು. 

ತಿರುವನಂತಪುರದ ಗ್ರೀನ್ ಫೀಲ್ಡ್ ಅಂತಾರಾಷ್ತ್ರೀಯ ಕ್ರಿಕೆಟ್ ಮೈದಾನದಲ್ಲಿ ಮೊದಲು ಬ್ಯಾಟಿಂಗ್ ನಡೆಸಿದ ಕೆರೀಬಿಯನ್ ತಂಡ ಕೇವಲ 104 ರನ್ ಗಳಿಸಿ ತನ್ನೆಲ್ಲ ವಿಕೆಟ್ ಕಳೆದುಕೊಂಡಿತು . 25 ರನ್ ಗಳಿಸಿದ ನಾಯಕ ಜೇಸನ್ ಹೋಲ್ಡರ್ ವೆಸ್ಟ್ ಇಂಡೀಸ್ ಪರ ಅಧಿಕ ರನ್ ಸ್ಕೊರರ್. ರವೀಂದ್ರ ಜಡೇಜಾ 4 ವಿಕೆಟ್ ಕಿತ್ತು ಭಾರತದ ಬೌಲಿಂಗ್ ನಲ್ಲಿ ಮಿಂಚಿದರು. 

ರನ್ ಚೇಸಿಂಗ್ ವೇಳೆ  ಭಾರತದ ಆರಂಭ ಉತ್ತಮವೇನು ಇರಲಿಲ್ಲ. ಶಿಖರ್ ಧವನ್ ರ ಕಳಪೆ ಬ್ಯಾಟಿಂಗ್ ಫಾರ್ಮ್ ಅಂತಿಮ ಪಂದ್ಯದಲ್ಲೂ ಮುಂದುವರಿಯಿತು. ಧವನ್ ಈ ಪಂದ್ಯದಲ್ಲಿ ಗಳಿಸಿದ್ದು  ಕೇವಲ 6 ರನ್.  ಮೊದಲ ವಿಕೆಟ್ ಪತನವಾದ ನಂತರ ಉಪನಾಯಕ ರೋಹಿತ್ ಶರ್ಮ ಜೊತೆಗೂಡಿದ ನಾಯಕ ವಿರಾಟ್ ಕೊಹ್ಲಿ ಅಜೇಯ ಬ್ಯಾಟಿಂಗ್ ನಡೆಸಿ ಟೀಮ್ ಇಂಡಿಯಾವನ್ನು ಗೆಲುವಿನ ದಡ ಸೇರಿಸಿದರು. 

ರೋಹಿತ್ ಶರ್ಮ ಅಜೇಯ 63 ರನ್ ಮತ್ತು ವಿರಾಟ್ ಕೊಹ್ಲಿ33 ರನ್ ಗಳಿಸಿ ಮಿಂಚಿದರು. ವೆಸ್ಟ್ ಇಂಡೀಸ್ ಪರ ಓಷನೇ ಥಾಮಸ್ ಏಕೈಕ ವಿಕೆಟ್ ಪಡೆದರು. 

4 ವಿಕೆಟ್ ಪಡೆದ ರವೀಂದ್ರ ಜಡೇಜಾ ಪಂದ್ಯ ಶ್ರೇಷ್ಠ ಪ್ರಶಸ್ತಿ ಪಡೆದರೆ, ವಿರಾಟ್ ಕೊಹ್ಲಿ ಸರಣಿ ಶ್ರೇಷ್ಠ ಪುರಸ್ಕಾರಕ್ಕೆ ಭಾಜನರಾದರು. 

50 ಓವರ್ ಕೂಡ ನಡೆಯದ ಪಂದ್ಯ: ಈ ಏಕದಿನ ಪಂದ್ಯದಲ್ಲಿ ಎಸೆದಿದ್ದು ಕೇವಲ 46.4 ಓವರ್  . ವೆಸ್ಟ್ ಇಂಡೀಸ್ 31.5 ಓವರ್ ನಲ್ಲಿ ತನ್ನೆಲ್ಲ ಗಂಟು ಮೂಟೆ ಕಟ್ಟಿದರೆ, ಭಾರತ ಸುಲಭ ಗುರಿಯನ್ನು ಕೇವಲ 14.5  ಓವರ್ ನಲ್ಲಿ ತಲುಪಿತು. ಭಾರತ ತಂಡ ತನ್ನ ಏಕದಿನ ಇತಿಹಾಸದಲ್ಲಿ ಓವರ್ ಲೆಕ್ಕದಲ್ಲಿ ಆಡಿದ ಅತ್ಯಂತ ಸಣ್ಣ ಪಂದ್ಯ. ಈ ಹಿಂದೆ ನ್ಯೂಜಿಲ್ಯಾಂಡ್ ವಿರುದ್ಧದ 2010ರ ಚೆನ್ನೈ ಪಂದ್ಯ 48.1 ಓವರ್ ನಲ್ಲಿ ಮುಗಿದಿತ್ತು. 

ಕೊಹ್ಲಿ ಮತ್ತೊಂದು ದಾಖಲೆ: ದಾಖಲೆಯ ಮೇಲೆ ದಾಖಲೆ ಮಾಡುತ್ತಿರುವ ನಾಯಕ ಕೊಹ್ಲಿ ಮತ್ತೊಂದು ದಾಖಲೆ ನಿರ್ಮಿಸಿದ್ದಾರೆ. 5 ಏಕದಿನ ಪಂದ್ಯಗಳ ದ್ವಿಪಕ್ಷೀಯ ಸರಣಿಯಲ್ಲಿ ಅತಿ ಹೆಚ್ಚು ರನ್ ಗಳಿಸಿದ ಭಾರತೀಯ ಧಾಖಲೆಯನ್ನು ಕೊಹ್ಲಿ ತನ್ನ ಹೆಸರಿಗೆ ಬರೆದುಕೊಂಡರು. ಈ ಸರಣಿಯಲ್ಲಿ ಕೊಹ್ಲಿ ಗಳಿಸಿದ ಒಟ್ಟು ರನ್ 453. 

ಟಾಪ್ ನ್ಯೂಸ್

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

ಕಾರ್ಗಿಲ್‌ ಯೋಧ ಮೆಲ್ವಿನ್‌ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

High Court ಮೆಟ್ಟಿಲೇರಿದ್ದ ಕೋವಿ ಪರವಾನಿಗೆದಾರರು

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

ಜಯಪ್ರಕಾಶ್‌ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್‌ ಕುಮಾರ್‌ ಮುರೊಳ್ಳಿ

1-wqeqweqweeqweqe

Brahmos; ಫಿಲಿಪ್ಪೀನ್ಸ್‌ಗೆ ಬ್ರಹ್ಮೋಸ್‌: ಭಾರತದ ಮೊದಲ ರಫ್ತು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್‌ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

ಅಡಿಕೆ ಎಲೆ ಹಳದಿ ರೋಗದ ವರದಿ ಬಿಡುಗಡೆ-ಹಕ್ಕೊತ್ತಾಯ ಮಂಡನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.