ಟಿ20 ಸೆಣೆಸಾಟ : ರಾಹುಲ್, ಅಯ್ಯರ್ ಬ್ಯಾಟಿಂಗ್ ಆರ್ಭಟದಲ್ಲಿ ಕಿವೀಸ್ ಮಣಿಸಿದ ಭಾರತ


Team Udayavani, Jan 24, 2020, 3:50 PM IST

Kiwis-Tour-730

ಆಕ್ಲಂಡ್: ವಿರಾಟ್ ಕೊಹ್ಲಿ ನೇತೃತ್ವದ ಭಾರತ ಕ್ರಿಕೆಟ್ ತಂಡ ತಮ್ಮ ನ್ಯೂಝಿಲ್ಯಾಂಡ್ ಪ್ರವಾಸವನ್ನು ಭರ್ಜರಿ ಗೆಲುವಿನೊಂದಿಗೆ ಶುಭಾರಂಭಗೊಳಿಸಿದೆ. ಆಕ್ಲಂಡ್ ನಲ್ಲಿ ನಡೆದ ಮೊದಲ ಟಿ20 ಪಂದ್ಯವನ್ನು ಭಾರತ 6 ವಿಕೆಟ್ ಗಳಿಂದ ಗೆದ್ದಿದೆ.

ನ್ಯೂಝಿಲ್ಯಾಂಡ್ ನೀಡಿದ 203 ರನ್ ಗಳ ಭರ್ಜರಿ ಸವಾಲನ್ನು ಬೆನ್ನತ್ತಿದ್ದ ಭಾರತ ಕೆ.ಎಲ್. ರಾಹುಲ್ (56), ಶ್ರೇಯಸ್ ಅಯ್ಯರ್ (ಅಜೇಯ 58) ಅವರ ಭರ್ಜರಿ ಅರ್ಧಶತಕ ಹಾಗೂ ನಾಯಕ ವಿರಾಟ್ ಕೊಹ್ಲಿ (45) ಅವರ ಉತ್ತಮ ಬ್ಯಾಟಿಂಗ್ ನೆರವಿನಿಂದ 06 ವಿಕೆಟ್ ಗಳ ಗೆಲುವನ್ನು ತನ್ನದಾಗಿಸಿಕೊಂಡಿತು. 19 ಓವರ್ ಗಳಲ್ಲಿ ಭಾರತ ಗೆಲುವಿನ ಗುರಿ ಮುಟ್ಟಿತು.

ಇದಕ್ಕೂ ಮೊದಲು ಟಾಸ್ ಗೆದ್ದ ವಿರಾಟ್ ಕೊಹ್ಲಿ ನ್ಯೂಝಿಲ್ಯಾಂಡನ್ನು ಬ್ಯಾಟಿಂಗ್ ಗೆ ಇಳಿಸಿದರು. ಕಾಲಿನ್ ಮನ್ರೋ (59), ನಾಯಕ ಕೇನ್ ವಿಲಿಯಮ್ಸನ್ (26 ಎಸೆತೆಗಳಲ್ಲಿ 51) ಮತ್ತು ಇನ್ನಿಂಗ್ಸ್ ನ ಕೊನೆಯಲ್ಲಿ ಅನುಭವಿ ರಾಸ್ ಟಯ್ಲರ್ (27 ಎಸೆತಗಳಲ್ಲಿ ಅಜೇಯ 54) ಅವರ ಸ್ಪೋಟಕ ಆಟದ ನೆರವಿನಿಂದ ನ್ಯೂಝಿಲ್ಯಾಂಡ್ ನಿಗದಿತ 20 ಓವರುಗಳಲ್ಲಿ 05 ವಿಕೆಟ್ ಗಳನ್ನು ಕಳೆದುಕೊಂಡು 203 ರನ್ ಗಳನ್ನು ಕಲೆ ಹಾಕಿತು.

ಈ ಗುರಿಯನ್ನು ಬೆನ್ನತ್ತಲಾರಂಭಿಸಿದ ಭಾರತಕ್ಕೆ ಉತ್ತಮ ಆರಂಭವೇನೂ ಲಭಿಸಲಿಲ್ಲ. ತಂಡದ ಮೊತ್ತ 16 ಆಗುವಷ್ಟರಲ್ಲಿ ರೋಹಿತ್ ಶರ್ಮಾ 07 ರನ್ ಗಳಿಸಿ ಔಟಾದರು. ಈ ಸಂದರ್ಭದಲ್ಲಿ ರಾಹುಲ್ ಜೊತೆಯಾದ ವಿರಾಟ್ ಕೊಹ್ಲಿ ಕಿವೀಸ್ ಬೌಲರ್ ಗಳನ್ನು ದಂಡಿಸುತ್ತಾ ತಂಡದ ಮೊತ್ತವನ್ನು ಏರಿಸುವ ಜೊತೆಯಾಟವನ್ನು ಕಟ್ಟಿದರು. ಎರಡನೇ ವಿಕೆಟಿಗೆ ಈ ಜೋಡಿ 99 ರನ್ ಗಳನ್ನು ಕಲೆಹಾಕುವ ಮೂಲಕ ಗೆಲುವಿನ ಬುನಾದಿಯನ್ನು ಕಟ್ಟಿಕೊಟ್ಟರು.

ಈ ಸಂದರ್ಭದಲ್ಲಿ ಭರ್ಜರಿಯಾಗಿ ಬ್ಯಾಟ್ ಬೀಸುತ್ತಿದ್ದ ಕೆ.ಎಲ್. ರಾಹುಲ್ ಅವರು 56 ರನ್ ಗಳಿಸಿ ಔಟಾದರು. ಇವರು ಕೇವಲ 27 ಎಸೆತಗಳಲ್ಲಿ 3 ಸಿಕ್ಸರ್ ಹಾಗೂ 4 ಬೌಂಡರಿ ನೆರವಿನಿಂದ 56 ರನ್ ಸಿಡಿಸಿದ್ದು ವಿಶೇಷವಾಗಿತ್ತು.

ರಾಹುಲ್ ಬೆನ್ನಲ್ಲೇ ವಿರಾಟ್ ಕೊಹ್ಲಿ 45 ರನ್ ಗಳಿಸಿ ಔಟಾದರು. ಈ ಸಂದರ್ಭದಲ್ಲಿ ತಂಡದ ಗೆಲುವಿಗೆ 80ಕ್ಕೂ ಹೆಚ್ಚು ರನ್ ಗಳ ಅಗತ್ಯವಿತ್ತು ಬಾಕಿ ಇದ್ದಿದ್ದು 9 ಓವರ್ ಗಳು ಮಾತ್ರ. ಈ ಹಂತದಲ್ಲಿ ಶ್ರೇಯಸ್ ಅಯ್ಯರ್ ಅವರು ಏಕಾಂಗಿ ಹೋರಾಟ ನಡೆಸಿ ತಂಡವನ್ನು ಗೆಲುವಿನ ದಡ ಮುಟ್ಟಿಸಿದರು. ಇವರಿಗೆ ಶಿವಂ ದುಬೆ (13) ಮತ್ತು ಮನೀಶ್ ಪಾಂಡೆ (ಅಜೇಯ 14) ಅವರಿಂದ ಉತ್ತಮ ಬೆಂಬಲ ಲಭಿಸಿತು.

ಭಾರತವನ್ನು ಗೆಲುವಿನ ದಡ ಮುಟ್ಟಿಸಿದ ಶ್ರೇಯಸ್ ಅಯ್ಯರ್ ಅವರು ಕೇವಲ 29 ಎಸೆತಗಳಲ್ಲಿ 58 ರನ್ ಬಾರಿಸಿ ಅಜೇಯರಾಗಿ ಉಳಿದರು. ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ 5 ಬೌಂಡರಿ ಹಾಗೂ 3 ಸಿಕ್ಸರ್ ಸಹ ಒಳಗೊಂಡಿತ್ತು.

ಟಾಪ್ ನ್ಯೂಸ್

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

UPSC Result: ಬೀದರ್ ನ ಮೊಹಮ್ಮದ್ ಅಸೀಮ್‌ ಮುಜತೇಬಾಗೆ 481ನೇ ರ‍್ಯಾಂಕ್‌

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

ವಿಜಯಪುರ: ಗಂಡನಿಂದ ಕಿತ್ತು ಹೆಂಡತಿಗೆ ಕೊಡುವುದೇ ಸಿದ್ದು ಗ್ಯಾರಂಟಿ: ಸಿ.ಟಿ.ರವಿ ವಾಗ್ದಾಳಿ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Bigg Boss OTT ಸೀಸನ್‌ -3 ಅನೌನ್ಸ್:‌ ಈ ಬಾರಿ ಮತ್ತೆ ಸಲ್ಮಾನ್‌ ಖಾನ್ ನಿರೂಪಣೆ

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

Dwarakish:ಸೋಲು, ಗೆಲುವಿನ ಪಯಣ; ವ್ಯಾಪಾರ ಬಿಟ್ಟು ಖ್ಯಾತ ನಟನಾದ ಪ್ರಚಂಡ ಕುಳ್ಳ ದ್ವಾರಕೀಶ್!

19

Aamir Khan: ರಾಜಕೀಯ ಪಕ್ಷದ ಪರ ಪ್ರಚಾರ; ನಕಲಿ ವಿಡಿಯೋ ವಿರುದ್ಧ FIR ದಾಖಲಿಸಿದ ಆಮಿರ್‌


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

BCCI instructions to share photos of the IPL match day ground!

IPL 2024 ಪಂದ್ಯ ದಿನ ಮೈದಾನದ ಫೋಟೋ ಹಂಚದಂತೆ ಬಿಸಿಸಿಐ ಸೂಚನೆ!

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

ಮಣಿಪಾಲ್ ಆಸ್ಪತ್ರೆಯ ವಿಶೇಷ ಆಯೋಜನೆ: RCBvsSRH ಪಂದ್ಯ ವೀಕ್ಷಿಸಿದ ಕ್ಯಾನ್ಸರ್‌ ಪೀಡಿತರು

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

IPL 2024; ಮುಂಬೈ ಪಂದ್ಯದ ಟಾಸ್ ಕಳ್ಳಾಟ ಬಿಚ್ಚಿಟ್ಟ ಆರ್ ಸಿಬಿ ನಾಯಕ ಫಾಫ್| Video

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

RCBsvSRH; ಚಿನ್ನಸ್ವಾಮಿಯಲ್ಲಿ ರೆಕಾರ್ಡ್ಸ್ ಸುರಿಮಳೆ; ದಾಖಲೆಗಳ ವಿವರ ಇಲ್ಲಿದೆ

‘Please sell the RCB team to someone else’; Tennis star appeal

IPL 2024; ‘ದಯವಿಟ್ಟು ಆರ್ ಸಿಬಿ ತಂಡವನ್ನು ಬೇರೆಯವರಿಗೆ ಮಾರಿ ಬಿಡಿ’; ಟೆನ್ನಿಸ್ ತಾರೆ ಮನವಿ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

UPSC ಪರೀಕ್ಷೆಯಲ್ಲಿ 101ನೇ ರ್‍ಯಾಂಕ್ ಪಡೆದ ಸೌಭಾಗ್ಯಗೆ ಗುರುವಾಗಿ ನಿಂತದ್ದು ಡಾ.ಅಶ್ವಿನಿ

7-

Obsessive Psychiatry: ಗೀಳು ಮನೋರೋಗ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

ಛತ್ತೀಸ್‌ಗಢದ ಕಂಕೇರ್‌ನಲ್ಲಿ ಎನ್ ಕೌಂಟರ್: ನಕ್ಸಲ್ ನಾಯಕ ಸೇರಿ 18 ಮಾವೋವಾದಿಗಳ ಹತ್ಯೆ

6-thyroid

Thyroid Disease: ಥೈರಾಯ್ಡ್ ಅನಾರೋಗ್ಯ ನಿರ್ಲಕ್ಷಿಸಿದರೆ ಮಾರಕವಾದೀತು ಎಚ್ಚರ!

5-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇವಸ್ಥಾನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.