ಬಾಂಗ್ಲಾಕ್ಕೆ ರೋ’ಹಿಟ್’: ನೂರನೇ ಪಂದ್ಯದಲ್ಲಿ ರೋಹಿತ್ 85 ; ಭಾರತಕ್ಕೆ 08 ವಿಕೆಟ್ ಗೆಲುವು


Team Udayavani, Nov 7, 2019, 10:29 PM IST

Rohit-t-20

ರಾಜ್ ಕೋಟ್: ಇಲ್ಲಿ ನಡೆಯುತ್ತಿರುವ ಭಾರತ ಮತ್ತು ಬಾಂಗ್ಲಾದೇಶ ನಡುವಿನ ಎರಡನೇ ಟಿ20 ಪಂದ್ಯವನ್ನು ಭಾರತ 08 ವಿಕೆಟ್ ಗಳಿಂದ ಗೆದ್ದುಕೊಂಡಿದೆ. ಅಂತಾರಾಷ್ಟ್ರೀಯ ಟಿ20 ಕೂಟದಲ್ಲಿ ನೂರನೇ ಪಂದ್ಯವನ್ನಾಡುತ್ತಿರುವ ಹಂಗಾಮಿ ನಾಯಕ ರೋಹಿತ್ ಶರ್ಮಾ ಅವರ ಭರ್ಜರಿ ಆಟದ ನೆರವಿನಿಂದ ಭಾರತ ಬಾಂಗ್ಲಾ ವಿರುದ್ಧ ಅಧಿಕಾರಯುತ ಗೆಲುವನ್ನು ಸಂಪಾದಿಸಿತು.

ಅಂತಾರಾಷ್ಟ್ರೀಯ ಟಿ20 ಕ್ರಿಕೆಟ್ ನಲ್ಲಿ 100 ಪಂದ್ಯಗಳನ್ನಾಡಿದ ದ್ವಿತೀಯ ಆಟಗಾರ ಎಂಬ ಖ್ಯಾತಿಗೆ ಪಾತ್ರರಾದ ರೋಹಿತ್ ಶರ್ಮಾ ಅವರು ಕೇವಲ 43 ಎಸೆತಗಳಲ್ಲಿ 85 ರನ್ ಗಳಿಸಿ ಬಾಂಗ್ಲಾ ಬೌಲರ್ ಗಳನ್ನು ಕಾಡಿದರು. ಶರ್ಮಾ ಅವರ ಈ ಸ್ಪೋಟಕ ಇನ್ನಿಂಗ್ಸ್ ನಲ್ಲಿ 06 ಸಿಕ್ಸರ್ ಮತ್ತು 06 ಬೌಂಡರಿ ಒಳಗೊಂಡಿತ್ತು.

ರೋಹಿತ್ ಅಬ್ಬರದ ಮುಂದೆ ಧವನ್ ಆಟ ಮಂಕಾಯಿತು. ಧವನ್ ಅವರು 27 ಎಸೆತಗಳಲ್ಲಿ 31 ರನ್ ಗಳಿಸಿದರು. ಇವರಿಬ್ಬರು ಔಟಾದ ಬಳಿಕ ಕೆ.ಎಲ್. ರಾಹುಲ್ (ಔಟಾಗದೇ 08) ಮತ್ತು ಶ್ರೇಯಸ್ ಐಯರ್ ಅವರ ಅಜೇಯ ಸ್ಪೋಟಕ ಆಟ ಭಾರತವನ್ನು ಇನ್ನೂ 04 ಓವರುಗಳು ಬಾಕಿ ಇರುವಂತೆ ಗೆಲುವಿನ ಗುರಿ ಮುಟ್ಟಿಸಿತು.
ಕೇವಲ 12 ಎಸೆತಗಳಲ್ಲಿ 23 ರನ್ ಸಿಡಿಸಿದ ಶ್ರೇಯಸ್ ಐಯರ್ ಭಾರತದ ಗೆಲುವನ್ನು ಸರಾಗಗೊಳಿಸಿದರು.

ಭಾರತದ ಪರ ಬಿದ್ದ 2 ವಿಕೆಟ್ ಸ್ಪಿನ್ನರ್ ಅಮಿನುಲ್ ಇಸ್ಲಾಂ ಪಾಲಾಯಿತು.
ಸ್ಪೋಟಕ ಇನ್ನಿಂಗ್ಸ್ ಮೂಲಕ ತನ್ನ ನೂರನೇ ಪಂದ್ಯವನ್ನು ಸ್ಮರಣೀಯವಾಗಿಸಿದ ಮತ್ತು ಆ ಮೂಲಕ ತಂಡಕ್ಕೆ ಭರ್ಜರಿ ಜಯ ಲಭಿಸಲು ಕಾರಣರಾದ ರೋಹಿತ್ ಶರ್ಮಾ ಪಂದ್ಯಶ್ರೇಷ್ಠ ಪುರಸ್ಕಾರಕ್ಕೆ ಪಾತ್ರರಾದರು.

ಪಾಕಿಸ್ಥಾನದ ಶೋಯಬ್ ಮಲಿಕ್ ಅವರು ಅಂತಾರಾಷ್ಟ್ರೀಯ ಟಿ20ಯಲ್ಲಿ 110 ಪಂದ್ಯಗಳನ್ನು ಆಡಿ ಪ್ರಥಮ ಸ್ಥಾನದಲ್ಲಿದ್ದಾರೆ. 100 ಪಂದ್ಯಗಳನ್ನು ಆಡಿರುವ ರೋಹಿತ್ ಶರ್ಮಾ ಎರಡನೇ ಸ್ಥಾನದಲ್ಲಿದ್ದರೆ, ಪಾಕಿಸ್ಥಾನದ ಶಾಹಿದ್ ಅಫ್ರಿದಿ ಅವರು 99 ಪಂದ್ಯಗಳನ್ನು ಆಡುವ ಮೂಲಕ ತೃತೀಯ ಸ್ಥಾನದಲ್ಲಿದ್ದಾರೆ. ಭಾರತ ಕ್ರಿಕೆಟ್ ತಂಡದ ಮಾಜೀ ಕಪ್ತಾನ ಎಂ.ಎಸ್.ಧೋನಿ 98 ಪಂದ್ಯಗಳನ್ನು ಆಡುವ ಮೂಲಕ ನಾಲ್ಕನೇ ಸ್ಥಾನದಲ್ಲಿದ್ದಾರೆ. ಭಾರತ ತಂಡದ ಕಪ್ತಾನ ವಿರಾಟ್ ಕೊಹ್ಲಿ ಅವರು ಇದುವರೆಗೆ 72 ಅಂತಾರಾಷ್ಟ್ರೀಯ ಟಿ20 ಪಂದ್ಯಗಳನ್ನು ಆಡಿದ್ದಾರೆ.

ಇದಕ್ಕೂ ಮೊದಲು ಟಾಸ್ ಸೋತು ಬ್ಯಾಟಿಂಗ್ ಗೆ ಇಳಿಸಲ್ಪಟ್ಟ ಬಾಂಗ್ಲಾ ನಿಗದಿತ 20 ಓವರುಗಳಲ್ಲಿ 06 ವಿಕೆಟುಗಳನ್ನು ಕಳೆದುಕೊಂಡು 153 ರನ್ ಗಳಿಸಿತು. ಬಾಂಗ್ಲಾ ಆರಂಭಿಕರಾದ ಲಿಟನ್ ದಾಸ್ (29) ಮತ್ತು ಮುಹಮ್ಮದ್ ನಯೀಮ್ (36) ತಂಡಕ್ಕೆ ಉತ್ತಮ ಆರಂಭವನ್ನು ಒದಗಿಸಿದರು. ಮೊದಲ ವಿಕೆಟಿಗೆ ಈ ಜೋಡಿ 60 ರನ್ ಗಳ ಅಮೂಲ್ಯ ಭಾಗೀದಾರಿಕೆ ಒದಗಿಸಿದರು.

ಬಳಿಕ ಸೌಮ್ಯ ಸರ್ಕಾರ್ (30) ಬಿರುಸಿನ ಆಟಕ್ಕೆ ಇಳಿದಿದ್ದರಿಂದ ಬಾಂಗ್ಲಾ ಭಾರೀ ಮೊತ್ತ ಪೇರಿಸುವ ಸೂಚನೆ ಲಭಿಸಿತ್ತು. ಆದರೆ 20 ಎಸೆತಗಳಲ್ಲಿ 30 ರನ್ ಸಿಡಿಸಿದ್ದ ಸೌಮ್ಯ ಸರ್ಕಾರ್ ಔಟಾಗುವುದರೊಂದಿಗೆ ಬಾಂಗ್ಲಾ ರನ್ ಓಟಕ್ಕೆ ಕಡಿವಾಣ ಬಿತ್ತು. ಬಾಂಗ್ಲಾ ಬ್ಯಾಟಿಂಗ್ ಸರದಿಯಲ್ಲಿ ಮಿಂಚಿದ ಇನ್ನೊಬ್ಬ ಬ್ಯಾಟ್ಸ್ ಮನ್ ಕಪ್ತಾನ ಮುಹಮದುಲ್ಲಾ 30 ರನ್ ಗಳಿಸಿದರು.

ಭಾರತದ ಪರ ಉತ್ತಮ ದಾಳಿ ಸಂಘಟಿಸಿದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರು 02 ವಿಕೆಟ್ ಗಳಿಸಿದರು. ದೀಪಕ್ ಚಾಹರ್, ಖಲೀಲ್ ಅಹಮ್ಮದ್, ವಾಷಿಂಗ್ಟನ್ ಸುಂದರ್ ತಲಾ ಒಂದು ವಿಕೆಟ್ ಪಡೆದರು.



ಟಾಪ್ ನ್ಯೂಸ್

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

1-wwqwqe

BJP ಶ್ರೀರಾಮುಲು, ಗಾಯತ್ರಿ ಸಿದ್ದೇಶ್ವರ್ ಈಗಾಗಲೇ ಗೆದ್ದಿದ್ದಾರೆ: ಜನಾರ್ದನ ರೆಡ್ಡಿ

Outrage over mistakes in CET exam question paper; Request for mercy marks

CET ಪರೀಕ್ಷೆ ಪ್ರಶ್ನೆಪತ್ರಿಕೆಯಲ್ಲಿ ಲೋಪಕ್ಕೆ ಆಕ್ರೋಶ; ಕೃಪಾಂಕಕ್ಕೆ ಆಗ್ರಹ

1-qweeweq

Viral video; ಯಾರಿವರು ಇಶಾ ಅರೋರಾ? ಮತದಾನದ ದಿನ ಭಾರಿ ಸುದ್ದಿ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ

New Jersey: ಸ್ಥಳೀಯ ಶಾಪ್‌ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

LSG vs CSK: ಲಕ್ನೋದಲ್ಲೂ ಚೆನ್ನೈ  ಫೇವರಿಟ್‌

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ

1aaa

Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

1-aaaaaa

BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ

1-weqwewqe

Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!

Minchu

Bidar; ಬಿರುಗಾಳಿ‌ ಸಹಿತ ಭಾರಿ ಮಳೆ :ಸಿಡಿಲು ಬಡಿದು‌ ರೈತ ಸಾವು

1-wewqewqe

Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್

Exam

CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.