ತಾಲೀಮ್‌ ವೇಳೆ ಫ‌ುಟ್‌ಬಾಲ್‌ ಆಟ


Team Udayavani, Oct 20, 2018, 9:21 AM IST

21.jpg

ಗುವಾಹಾಟಿ: ಟೆಸ್ಟ್‌ ಸರಣಿಯ ಬಳಿಕ ಕೆಲವು ದಿನ ವಿಶ್ರಾಂತಿ ಪಡೆದ ಭಾರತೀಯ ಕ್ರಿಕೆಟ್‌ ಆಟಗಾರರು ಶುಕ್ರವಾರ ತಾಲೀಮ್‌ ನಡೆಸಿದರು. ಏಕದಿನ ಸರಣಿಯ ಮೊದಲ ಪಂದ್ಯಕ್ಕಾಗಿ ಆಟಗಾರರು ಮುಖ್ಯ ಕೋಚ್‌ ರವಿಶಾಸ್ತ್ರಿ ಅವರ ಮಾರ್ಗದರ್ಶನದಲ್ಲಿ ತರಬೇತಿಯಲ್ಲಿ ಪಾಲ್ಗೊಂಡರು. ಅಭ್ಯಾಸದ ನಡುವೆ ನಾಯಕ ವಿರಾಟ್‌ ಕೊಹ್ಲಿ, ಧೋನಿ ಅವರು ಕೆಎಲ್‌ ರಾಹುಲ್‌, ಮೊಹಮ್ಮದ್‌ ಶಮಿ ಮತ್ತು ಉಮೇಶ್‌ ಯಾದವ್‌ ಜತೆಗೆ ಫ‌ುಟ್‌ಬಾಲ್‌ ಆಟ ಆಡಿದರು. ಆಟಗಾರರು ತಾಲೀಮ್‌ ನಡೆಸುತ್ತಿರುವ ಚಿತ್ರ ಮತ್ತು ವೀಡಿಯೊ ತುಣುಕೊಂದನ್ನು ಭಾರತೀಯ ಕ್ರಿಕೆಟ್‌ ಮಂಡಳಿ ಸಾಮಾಜಿಕ ಜಾಲತಾಣದಲ್ಲಿ ಹಾಕಿದೆ. 

ಐದು ಪಂದ್ಯಗಳ ಸರಣಿ
ಭಾರತ ಮತ್ತು ವೆಸ್ಟ್‌ಇಂಡೀಸ್‌ ನಡುವೆ ಐದು ಪಂದ್ಯಗಳ ಸರಣಿ ನಡೆಯಲಿದ್ದು ಮೊದಲ ಪಂದ್ಯ ಗುವಾಹಾಟಿಯಲ್ಲಿ ರವಿವಾರ ನಡೆಯಲಿದೆ. ಆಬಳಿಕ ಉಭಯ ತಂಡಗಳು ಮೂರು ಪಂದ್ಯಗಳ ಟ್ವೆಂಟಿ20 ಸರಣಿಯಲ್ಲಿ ಆಡಲಿವೆ.

ದಾಖಲೆಯತ್ತ ಕೊಹ್ಲಿ, ಧೋನಿ
ವಿಂಡೀಸ್‌ ವಿರುದ್ಧದ ಏಕದಿನ ಸರಣಿ ವೇಳೆ ಕೊಹ್ಲಿ ಮತ್ತು ಧೋನಿ ಇನ್ನಷ್ಟು ದಾಖಲೆ ಮುರಿಯುವ ಸಾಧ್ಯತೆಯಿದೆ. ಏಕದಿನದಲ್ಲಿ ವೆಸ್ಟ್‌ ಇಂಡೀಸ್‌ ವಿರುದ್ಧ ಗರಿಷ್ಠ ರನ್‌ ಪೇರಿಸಿದ ಸಾಧಕ ಎಂದೆನಿಸಿಕೊಳ್ಳಲು ವಿರಾಟ್‌ ಕೊಹ್ಲಿ ಅವರಿಗೆ ಇನ್ನು 187 ರನ್‌ ಬೇಕಾಗಿದೆ. ಸದ್ಯ ಈ ದಾಖಲೆ 1573 ರನ್‌ ಗಳಿಸಿರುವ ಸಚಿನ್‌ ತೆಂಡುಲ್ಕರ್‌ ಅವರ ಹೆಸರಲ್ಲಿದೆ. ಏಕದಿನ ಕ್ರಿಕೆಟ್‌ನಲ್ಲಿ 10 ಸಾವಿರ ರನ್‌ ಪೂರ್ತಿಗೊಳಿಸಲು ಕೊಹ್ಲಿ ಅವರಿಗೆ ಇನ್ನು 221 ರನ್‌ ಬೇಕಾಗಿದೆ. ಒಂದು ವೇಳೆ ಅವರು ಈ ಸಾಧನೆ ಮಾಡಿದರೆ ತೆಂಡುಲ್ಕರ್‌ (18,426), ಸೌರವ್‌ ಗಂಗೂಲಿ (11,363), ರಾಹುಲ್‌ ದ್ರಾವಿಡ್‌ (10,889) ಮತ್ತು ಧೋನಿ (10,123) ಅವರ ಸಾಲಿಗೆ ಸೇರ್ಪಡೆಯಾಗಲಿದ್ದಾರೆ.

ಏಕದಿನದಲ್ಲಿ ವೆಸ್ಟ್‌ಇಂಡೀಸ್‌ ವಿರುದ್ಧ ಒಂದು ಸಾವಿರ ರನ್‌ ಪೂರ್ತಿಗೊಳಿಸಲು ಧೋನಿ ಅವರಿಗೆ ಇನ್ನು 101 ರನ್‌ ಬೇಕಾಗಿದೆ. ಅವರು ಈಗಾಗಲೇ ಶ್ರೀಲಂಕಾ, ಇಂಗ್ಲೆಂಡ್‌, ಆಸ್ಟ್ರೇಲಿಯ ಮತ್ತು ಪಾಕಿಸ್ಥಾನ ವಿರುದ್ಧ ಒಂದು ಸಾವಿರ ರನ್‌ ಪೂರ್ತಿಗೊಳಿಸಿದ್ದಾರೆ. ರೋಹಿತ್‌ ಶರ್ಮ ಅವರಿಗೆ ವಿಂಡೀಸ್‌ ವಿರುದ್ಧ ಒಂದು ಸಾವಿರ ರನ್‌ ಪೂರ್ತಿಗೊಳಿಸಲು 170 ರನ್‌ ಬೇಕಾಗಿದೆ.

ಕೊಹ್ಲಿ ಆಗಮನ
ವಿರಾಟ್‌ ಕೊಹ್ಲಿ ಏಶ್ಯ ಕಪ್‌ ಕೂಟದಿಂದ ಹೊರಕ್ಕೆ ಉಳಿದಿದ್ದರು. ಇದೀಗ ಕೊಹ್ಲಿ ಮರಳಿ ತಂಡ ಸೇರಿಕೊಂಡಿದ್ದಾರೆ. ವಿಂಡೀಸ್‌ ವಿರುದ್ಧದ ಸರಣಿಯಲ್ಲಿ ಗೆಲುವಿನ ಕನಸು ಹೊತ್ತು ಅವರು ತಂಡವನ್ನು ಮುನ್ನಡೆಸಲಿದ್ದಾರೆ. ಕೆ.ಎಲ್‌.ರಾಹುಲ್‌, ಉಮೇಶ್‌ ಯಾದವ್‌ ಹಾಗೂ ಮೊಹಮ್ಮದ್‌ ಶಮಿ ಅವರಂತಹ ತಾರಾ ಆಟಗಾರರನ್ನು ಹೊಂದಿರುವ ಭಾರತ ಗೆಲ್ಲುವ ಫೇವರಿಟ್‌. ಮೊದಲೆರಡು ಏಕದಿನ ಪಂದ್ಯಕ್ಕೆ ಭಾರತ ತಂಡವನ್ನು ಕಳೆದ ವಾರವೇ ಪ್ರಕಟಿಸಲಾಗಿದ್ದು ರಿಷಭ್‌ ಪಂತ್‌ ತಂಡದಲ್ಲಿ ಸ್ಥಾನ ಪಡೆದು ಅಚ್ಚರಿ ಮೂಡಿಸಿದ್ದಾರೆ. ಪಂತ್‌ ಭವಿಷ್ಯದಲ್ಲಿ ವಿಕೆಟ್‌ ಕೀಪರ್‌ ಆಗಿ ಭಾರತ ತಂಡದಲ್ಲಿ ಸ್ಥಾನ ತುಂಬುವ ಸಾಧ್ಯತೆ ಕಾಣಿಸುತ್ತಿದೆ. ಪಂತ್‌ ಇಂಗ್ಲೆಂಡ್‌ ವಿರುದ್ಧ ತಾನಾಡಿದ ಮೊದಲ ಟೆಸ್ಟ್‌ನಲ್ಲಿ 184 ರನ್‌ ಸಿಡಿಸಿ ಸುದ್ದಿಯಾಗಿದ್ದರು. ಆದರೆ ಮಾಜಿ ನಾಯಕ ಎಂ.ಎಸ್‌.ಧೋನಿ ಏಷ್ಯಾ ಕಪ್‌ನಲ್ಲಿ ಕಳಪೆ ಬ್ಯಾಟಿಂಗ್‌ ಪ್ರದರ್ಶಿಸಿರುವುದು ತಂಡಕ್ಕೆ ಚಿಂತೆಯಾಗಿದೆ. ಇನ್ನು ಗಾಯದ ಕಾರಣದಿಂದ ಹಾರ್ದಿಕ್‌ ಪಾಂಡ್ಯ ಹೊರಬಿದ್ದಿದ್ದಾರೆ. ರವೀಂದ್ರ ಜಡೇಜ ಏಶ್ಯಕಪ್‌ನಲ್ಲಿ ವಿಕೆಟ್‌ ಕಿತ್ತು ಯಶಸ್ವಿಯಾಗಿದ್ದಾರೆ. ಹೀಗಾಗಿ ಅವರಿಗೆ ತಂಡದಲ್ಲಿ ಮತ್ತೂಂದು ಅವಕಾಶ ನೀಡಲಾಗಿದೆ. ರೋಹಿತ್‌, ಧವನ್‌ ಕೂಡ ತಂಡ ಕೂಡಿಕೊಂಡಿದ್ದು ಜಾದೂ ಮಾಡಬಲ್ಲರೆ ಎನ್ನುವುದು ಅಭಿಮಾನಿಗಳ ನಿರೀಕ್ಷೆ.

ಟಾಪ್ ನ್ಯೂಸ್

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

shettar

Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

militry

Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.