ಭಾರತದ ಬ್ಯಾಡ್ಮಿಂಟನ್ ತಾರೆ ಸಿಂಧು ನಿವೃತ್ತಿ ಘೋಷಿಸಿದ್ದೇಕೆ?3 ಪುಟದ ಟ್ವೀಟ್ ನಲ್ಲಿದೆ ರಹಸ್ಯ

ನನ್ನ ಎದುರಾಳಿ ವಿರುದ್ಧ ಪ್ರಬಲ ಪೈಪೋಟಿ ನೀಡಲು ನಾನು ಕಠಿಣ ತರಬೇತಿ ಪಡೆಯುತ್ತಿದ್ದೇನೆ.

Team Udayavani, Nov 2, 2020, 5:56 PM IST

ಭಾರತದ ಬ್ಯಾಡ್ಮಿಂಟನ್ ತಾರೆ ಸಿಂಧು ನಿವೃತ್ತಿ ಘೋಷಿಸಿದ್ದೇಕೆ?3 ಪುಟದ ಟ್ವೀಟ್ ನಲ್ಲಿದೆ ರಹಸ್ಯ

ನವದೆಹಲಿ: ಭಾರತದ ಖ್ಯಾತ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಸೋಮವಾರ(ನವೆಂಬರ್ 02,2020) ತನ್ನ ಸಾಮಾಜಿಕ ಜಾಲತಾಣದಲ್ಲಿ “ನಾನು ನಿವೃತ್ತಿಯಾಗುತ್ತೇನೆ” ಎಂಬ ಶಬ್ದವನ್ನು ಪೋಸ್ಟ್ ಮಾಡುವ ಮೂಲಕ ಎಲ್ಲರನ್ನೂ ಅಚ್ಚರಿಗೆ ದೂಡಿರುವ ಘಟನೆ ನಡೆದಿದೆ.

25ರ ಹರೆಯದ ಪಿವಿ ಸಿಂಧು ಏಕಾಏಕಿ ನಿವೃತ್ತಿ ಬಗ್ಗೆ ಬರೆದುಕೊಂಡಿರುವುದೇಕೆ? ಅದು ಇಂತಹ ಸಮಯದಲ್ಲಿ ಎಂಬ ಜಿಜ್ಞಾಸೆ ನಿಮ್ಮ ಮನಸ್ಸಿನಲ್ಲಿ ಮೂಡಿರಬಹುದು. ಆದರೆ ಸಿಂಧು ಬರೆದಿರುವ ಮೂರು ಪುಟಗಳ ದೀರ್ಘ ಪೋಸ್ಟ್ ಅನ್ನು ಓದಿದರೆ ಇದರ ಹಿಂದಿನ ಸತ್ಯಾಂಶ ಬಯಲಾಗುತ್ತದೆ.

ರಿಯೋ ಒಲಿಂಪಿಕ್ ನ ಬೆಳ್ಳಿ ಪದಕ ವಿಜೇತೆ ಸಿಂಧು, ಡೆನ್ಮಾರ್ಕ್ ಓಪನ್ನಲ್ಲಿ ಭಾಗವಹಿಸಲು ಸಾಧ್ಯವಾಗುತ್ತಿಲ್ಲ ಎಂದು ಉಲ್ಲೇಖಿಸಿರುವುದು ಅಭಿಮಾನಿಗಳು ಗಾಬರಿಗೊಳಗಾಗಿದ್ದರು. ತಾನು ಬ್ಯಾಡ್ಮಿಂಟನ್ ನಿಂದ ನಿವೃತ್ತಿಯಾಗಲು ನಿರ್ಧರಿಸಿದ್ದೇನೆ ಎಂದು ಉಲ್ಲೇಖಿಸಿದ್ದರು.

ವಿದಾಯ ಘೋಷಿಸಿದ್ದು ಯಾವುದಕ್ಕೆ?

ನಾನೀಗ ಸಂಪೂರ್ಣವಾಗಿ ನನ್ನ ಹೊಸತನದ ಆಲೋಚನೆಗಳೊಂದಿಗೆ ಬರುತ್ತಿದ್ದೇನೆ. ಸಾಕಷ್ಟು ದಿನಗಳಿಂದ ನಾನು ಹೆಣಗಾಡುತ್ತಿದ್ದೇನೆ. ಇದು ನನ್ನಲ್ಲಿ ತಪ್ಪು ಭಾವನೆ ಮೂಡಿಸುತ್ತಿದೆ. ನಿಮಗೂ ಗೊತ್ತಿದೆ. ಆ ಕಾರಣಕ್ಕಾಗಿಯೇ ನಾನು ಈ ಪೋಸ್ಟ್ ಅನ್ನು ಬರೆದಿದ್ದೇನೆ.  ಒಂದು ವೇಳೆ ನೀವು ಆಘಾತ ಅಥವಾ ಗೊಂದಲಕ್ಕೆ ಒಳಗಾಗಬಹುದು. ಆದರೆ ನೀವು ನನ್ನ ಪತ್ರವನ್ನು ಸಂಪೂರ್ಣ ಓದಿದ ನಂತರ ನಿಮಗೆ ನನ್ನ ನಿವೃತ್ತಿ ಯಾವುದಕ್ಕೆ ಎಂಬ ಚಿತ್ರಣ ಸಿಗುತ್ತದೆ ಎಂದು ಸಿಂಧು ಬರೆದುಕೊಂಡಿದ್ದಾರೆ.

ಕೋವಿಡ್ 19 ಸೋಂಕಿನ ಕಾಲಘಟ್ಟ ನನ್ನ ಕಣ್ಣು ತೆರೆಸಿರುವ ಕಾಲವಾಗಿದೆ. ನನ್ನ ಎದುರಾಳಿ ವಿರುದ್ಧ ಪ್ರಬಲ ಪೈಪೋಟಿ ನೀಡಲು ನಾನು ಕಠಿಣ ತರಬೇತಿ ಪಡೆಯುತ್ತಿದ್ದೇನೆ. ಈ ಹಿಂದೆಯೂ ಇದೇ ತರಬೇತಿ ಪಡೆಯುತ್ತಿದ್ದೆ, ಆದರೆ ಈ ಕಣ್ಣಿಗೆ ಕಾಣದ ವೈರಸ್ ಅನ್ನು ನಾನು ಹೇಗೆ ಸೋಲಿಸಲಿ? ಇಡೀ ಜಗತ್ತೇ ಇದರ ವಿರುದ್ಧ ಹೋರಾಡುತ್ತಿದೆ. ನನ್ನ ಮುಂದೆ ಹಲವಾರು ಪ್ರಶ್ನೆಗಳು ಸುಳಿದಾಡುತ್ತಿದೆ. ಅಲ್ಲದೇ ಡೆನ್ಮಾರ್ಕ್ ಓಪನ್ ನಲ್ಲಿ ನಾನು ಭಾರತವನ್ನು ಪ್ರತಿನಿಧಿಸಲು ಸಾಧ್ಯವಾಗುತ್ತಿಲ್ಲ ಎಂದು ಸಿಂಧು ತಿಳಿಸಿದ್ದಾರೆ.

ನಾನು ನನ್ನ ಬ್ಯಾಡ್ಮಿಂಟನ್ ಕ್ಷೇತ್ರದಿಂದ ನಿವೃತ್ತಿ ಪಡೆಯುತ್ತಿಲ್ಲ, ಬದಲಾಗಿ ಪ್ರಸ್ತುತ ಕೋವಿಡ್ ನ ಸನ್ನಿವೇಶದಿಂದ ನಾನು ನಿವೃತ್ತಿಯನ್ನು ಆಯ್ಕೆ ಮಾಡಿಕೊಂಡು ನೆಗೆಟಿವಿಟಿಯಿಂದ, ಪ್ರಸ್ತುತ ಭಯದಿಂದ ಮತ್ತು ಅನಿಶ್ಚಿತತೆಯಿಂದ ನಿವೃತ್ತಿಯಾಗಿ ಮುಂದಿನ ಸ್ಪರ್ಧೆಗೆ ಹೊಸ ಹುಮ್ಮಸ್ಸಿನಿಂದ ಆಟವಾಡಲು ಅಣಿಯಾಗುತ್ತಿದ್ದೇನೆ ಎಂದು ಪಿವಿ ಸಿಂಧು ಟ್ವೀಟ್ ನ ಕೊನೆಯಲ್ಲಿ ಟ್ವಿಸ್ಟ್ ನೀಡುವ ಮೂಲಕ ಅಭಿಮಾನಿಗಳಲ್ಲಿ ನಿಟ್ಟುಸಿರು ಬಿಡುವಂತೆ ಮಾಡಿದ್ದಾರೆ.

ಟಾಪ್ ನ್ಯೂಸ್

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

Kasaragod ವಿವಿಪ್ಯಾಟ್‌ಗಳಲ್ಲಿ ದೋಷಗಳಿಲ್ಲ: ಚುನಾವಣಾಧಿಕಾರಿ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್‌ ಭಾಟಿಯಾ ವ್ಯಂಗ್ಯ

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

ರಾಜ್ಯಕ್ಕೆ ಅನ್ಯಾಯವಾದಾಗ ಸ್ಪಂದಿಸದ ಕೇಂದ್ರ ಸರಕಾರ: ಇಂಧನ ಸಚಿವ ಜಾರ್ಜ್‌

kejriwal 2

ED; ನಾನು ತಿಂದದ್ದು ಮೂರೇ ಮಾವು: ಕೋರ್ಟ್‌ಗೆ ಕೇಜ್ರಿವಾಲ್‌ ಮಾಹಿತಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-ewqe

Olympics ಅರ್ಹತೆ ತಪ್ಪುವ ಭೀತಿಯಲ್ಲಿ ದೀಪಕ್‌, ಸುಜೀತ್‌

1-wqewqewq

Doping: ಶಾಲು ಚೌಧರಿ ದೋಷಮುಕ್ತ

1-aaaaaawwq

Bumrah ಎಸೆತಕ್ಕೆ ಸ್ವೀಪ್‌ ಶಾಟ್‌: ಅಶುತೋಷ್‌ ಶರ್ಮ ಫುಲ್‌ ಖುಷ್‌

1aaaa

IPL; ಚೆನ್ನೈ ವಿರುದ್ಧ ಲಕ್ನೋಗೆ 8 ವಿಕೆಟ್ ಗಳ ಅಮೋಘ ಜಯ

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Narayan Murthy INFOSYS

Infosys; ಮೂರ್ತಿ ಮೊಮ್ಮಗನಿಗೆ ಸಿಕ್ತು 4.2 ಕೋಟಿ ಡಿವಿಡೆಂಡ್‌

1-weweqwe

Globant; ಮನೆಯಿಂದಲೇ 30,000 ಮಂದಿ ಕೆಲಸ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ

1-pak

Pak ಆತ್ಮಾಹುತಿ ದಾಳಿ: ಐವರು ಜಪಾನೀಯರು ಪಾರು

mamata

EC ಚುನಾವಣ ಆಯೋಗ ಅಲ್ಲ, ಬಿಜೆಪಿ ಆಯೋಗ: ಮಮತಾ ಬ್ಯಾನರ್ಜಿ ಟೀಕಾಸ್ತ್ರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.