ಮತ್ತೊಂದು ಫೈನಲ್ ಓವರ್ ಥ್ರಿಲ್ಲರ್: ಆಸೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯ ಗೆದ್ದ ಮಿಥಾಲಿ ಪಡೆ


Team Udayavani, Sep 26, 2021, 1:29 PM IST

ಮತ್ತೊಂದು ಫೈನಲ್ ಓವರ್ ಥ್ರಿಲ್ಲರ್: ಆಸೀಸ್ ವಿರುದ್ಧ ಅಂತಿಮ ಏಕದಿನ ಪಂದ್ಯ ಮಿಥಾಲಿ ಪಡೆ

ಮಕಾಯ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಏಕದಿನ ಸರಣಿಯ ಮೂರನೇ ಪಂದ್ಯವೂ ಅಂತಿಮ ಓವರ್ ನಲ್ಲಿ ಫಲಿತಾಂಶ ಕಂಡಿತು. ಸರಣಿಯ ಮೂರನೇ ಮತ್ತು ಅಂತಿಮ  ಪಂದ್ಯವನ್ನು ಭಾರತ 2 ವಿಕೆಟ್ ಅಂತರದಿಂದ ಗೆದ್ದುಕೊಂಡಿತು.

ಆಸೀಸ್ ವನಿತೆಯರು ನೀಡಿದ 265 ರನ್ ಗುರಿ ಬೆನ್ನತ್ತಿದ್ದ ಭಾರತ ವನಿತೆಯರ ತಂಡ ಎರಡು ವಿಕೆಟ್ ಅಂತರದ ಜಯ ಸಾಧಿಸಿತು. ಮೊದಲೆರಡು ಪಂದ್ಯ ಸೋತು ಸರಣಿ ಸೋತಿದ್ದರೂ ಕೊನೆಯ ಪಂದ್ಯ ಗೆದ್ದ ಮಿಥಾಲಿ ಪಡೆ ಆಸೀಸ್ ಪ್ರವಾಸದ ಮೊದಲ ಜಯ ಸಾಧಿಸಿತು.

ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಆಸ್ಟ್ರೇಲಿಯಾ ತಂಡ 9 ವಿಕೆಟ್ ನಷ್ಟಕ್ಕೆ 264 ರನ್ ಗಳಿಸಿತು. 87 ರನ್ ಗೆ ನಾಲ್ಕು ವಿಕೆಟ್ ಕಳೆದುಕೊಂಡು ಸಂಕಷ್ಟದಲ್ಲಿದ್ದ ತಂಡಕ್ಕೆ ಬೆತ್ ಮೂನಿ (52 ರನ್) ಮತ್ತು ಗಾರ್ಡ್ನರ್ (62 ರನ್) ಅರ್ಧಶತಕ ಸಿಡಿಸಿ ನೆರವಾದರು. ಉಳಿದಂತೆ ಅಲಿಸಾ ಹೀಲಿ 35 ರನ್, ಟಹಿಲಾ ಮೆಕ್ ಗ್ರಾತ್ 47 ರನ್ ಕಾಣಿಕೆ ನೀಡಿದರು. ಭಾರತದ ಪರ ಜೂಲನ್ ಗೋಸ್ವಾಮಿ ಮತ್ತು ಪೂಜಾ ವಸ್ತ್ರಾಕರ್ ತಲಾ ಮೂರು ವಿಕೆಟ್ ಕಿತ್ತು ಮಿಂಚಿದರು.

ಗುರಿ ಬೆನ್ನತ್ತಿದ ಭಾರತಕ್ಕೆ ಸ್ಮೃತಿ ಮಂಧನಾ ಮತ್ತು ಶಫಾಲಿ ವರ್ಮಾ ಮೊದಲ ವಿಕೆಟ್ ಗೆ ಅರ್ಧಶಕತ ಜೊತೆಯಾಟವಾಡಿ ಆರಂಭ ಒದಗಿಸಿದರು. ಮಂಧನಾ 22 ರನ್ ಗೆ ಔಟಾದರು. ಬಳಿಕ ಯಾಸ್ತಿಕಾ ಭಾಟಿಯಾ ಜೊತೆಗೂಡಿದ ಶಫಾಲಿ ಶತಕದ ಜೊತೆಯಟವಾಡಿದರು. ಶಫಾಲಿ 56 ರನ್ ಗಳಿಸಿದರೆ, ಯಾಸ್ತಿಕಾ ಭಾಟಿಯಾ 64 ರನ್ ಗಳ ಇನ್ನಿಂಗ್ಸ್ ಉಪಯುಕ್ತ ಇನ್ನಿಂಗ್ಸ್ ಆಡಿದರು.

ಇದನ್ನೂ ಓದಿ:ಆರ್ ಸಿಬಿ ನಾಯಕತ್ವ ಯಾರಿಗೆ? ಮೂರು ಹೆಸರು ಸೂಚಿಸಿದ ಸಂಜಯ್ ಮಾಂಜ್ರೇಕರ್

ಒಂದು ಹಂತದಲ್ಲಿ ಕೇವಲ ಒಂದು ವಿಕೆಟ್ ನಷ್ಟಕ್ಕೆ 160 ರನ್ ಗಳಿಸಿದ್ದ ಮಿಥಾಲಿ ಪಡೆ ಬಳಿಕ ಸತತ ವಿಕೆಟ್ ಕಳೆದಕೊಂಡಿತು. ರಿಚಾ ಘೋಷ್, ಮಿಥಾಲಿ ರಾಜ್ ಮತ್ತು ಪೂಜಾ ವಸ್ತ್ರಾಕಾರ್ ಬೇಗನೇ ವಿಕೆಟ್ ಒಪ್ಪಿಸಿದರು. ಅಂತ್ಯದಲ್ಲಿ ದೀಪ್ತಿ ಶರ್ಮಾ 31 ರನ್, ಸ್ನೇಹ್ ರಾಣಾ 30 ರನ್ ಗಳಿಸಿದರು.

ಅಂತಿಮ ಓವರ್ ನಲ್ಲಿ ತಂಡಕ್ಕೆ ಗೆಲುವಿಗೆ ನಾಲ್ಕು ರನ್ ಅಗತ್ಯವಿತ್ತು. ಜೂಲನ್ ಗೋಸ್ವಾಮಿ ಮತ್ತು ಮೇಘಾ ಸಿಂಗ್ ಕ್ರೀಸ್ ನಲ್ಲಿದ್ದರು. ಸೋಫಿ ಮೊಲಿನಕ್ಸ್ ಎಸೆದ ಅಂತಿಮ ಓವರ್ ನ ಮೊದಲ ಎಸೆತದಲ್ಲಿ ರನ್ ಬರಲಿಲ್ಲ. ಎರಡನೇ ಎಸೆತಕ್ಕೆ ಮೇಘಾ ಒಂಟಿ ರನ್ ತೆಗೆದರು. ಮೂರನೇ ಎಸೆತದಲ್ಲಿ ಬೌಂಡರಿ ಬಾರಿಸಿದ ಜೂಲನ್ ಗೆಲುವನ್ನು ಖಚಿತಪಡಿಸಿದರು.

ಟಾಪ್ ನ್ಯೂಸ್

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

Loan: ಸಾಲ ಪಡೆಯಲು ಸತ್ತ ವ್ಯಕ್ತಿಯನ್ನೇ ಬ್ಯಾಂಕಿಗೆ ಕರೆತಂದ ಮಹಿಳೆ… ಕೊನೆಗೆ ಆದದ್ದೇ ಬೇರೆ

Loan: ಸತ್ತ ವ್ಯಕ್ತಿಯನ್ನು ಕರೆತಂದು ಸಾಲ ಪಡೆಯಲು ಮುಂದಾದ ಮಹಿಳೆ… ಕೊನೆಗೆ ಆದದ್ದೇ ಬೇರೆ

Kalaburagi; Congress government has given 2000 compensation to farmers like beggars: Vijayendra

Kalaburagi; ಕಾಂಗ್ರೆಸ್ ಸರಕಾರ ರೈತರಿಗೆ ಭಿಕ್ಷುಕರಂತೆ 2ಸಾವಿರ ಪರಿಹಾರ ನೀಡಿದೆ: ವಿಜಯೇಂದ್ರ

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

ದ. ಭಾರತದಲ್ಲಿ ಬಿಜೆಪಿ ಎಷ್ಟು ಸ್ಥಾನಗಳಲ್ಲಿ ಜಯಗಳಿಸಬಹುದು? ರೇವಂತ್‌ ರೆಡ್ಡಿ ಲೆಕ್ಕಚಾರವೇನು!

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Pushpa 2: ದಾಖಲೆ ಬೆಲೆಗೆ ʼಪುಷ್ಪ-2ʼ ಡಿಜಿಟಲ್‌ ಹಕ್ಕನ್ನು ಖರೀದಿಸಿದ ನೆಟ್‌ಫ್ಲಿಕ್ಸ್

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Rohit Sharma spoke about team selection for T20 World Cup

T20 WC; ‘ಎಲ್ಲವೂ ಸುಳ್ಳು…’: ತಂಡದ ಆಯ್ಕೆ ಬಗ್ಗೆ ಮಹತ್ವದ ಅಪ್ಡೇಟ್ ನೀಡಿದ ರೋಹಿತ್ ಶರ್ಮಾ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

IPL 2024; Suresh Raina made an important statement about Dhoni’s IPL future

IPL 2024; ಧೋನಿ ಐಪಿಎಲ್ ಭವಿಷ್ಯದ ಬಗ್ಗೆ ಮಹತ್ವದ ಹೇಳಿಕೆ ನೀಡಿದ ಸುರೇಶ್ ರೈನಾ

Virat Kohli and Rohit to open in t20 world cup; report

T20 World Cup; ರೋಹಿತ್‌, ವಿರಾಟ್‌ ಆರಂಭಿಕರು? ಅಚ್ಚರಿಯ ಮುಖಗಳಿಲ್ಲ?

1eqqewe

IPL; ಪಂಜಾಬ್‌ ಕಿಂಗ್ಸ್‌-ಮುಂಬೈ ಇಂಡಿಯನ್ಸ್‌ : ಒಂದೇ ದೋಣಿಯ ಪಯಣಿಗರು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

Chattisgarh: ಕಳೆದ 4 ತಿಂಗಳಲ್ಲಿ 80 ನಕ್ಸಲೀಯರ ಸಾವು, 125 ಮಂದಿ ಬಂಧನ; 150 ಶರಣಾಗತಿ!

ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Election; ಡಿ.ಕೆ.ಶಿವಕುಮಾರ್, ಪ್ರಿಯಾಂಕ್ ಖರ್ಗೆ ವಿರುದ್ಧ ಬಿಜೆಪಿ ದೂರು

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

Karwar; ಬಿಜೆಪಿ ಅಭ್ಯರ್ಥಿ ಕಾಗೇರಿ ಜಿಲ್ಲಾ ವಿಭಜನೆಗೆ ಯತ್ನಿಸಿಲ್ಲ: ಸದಾನಂದ ಭಟ್

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

ದಳಪತಿ ಅಭಿಮಾನಿಗಳ ಟ್ರೋಲ್‌ನಿಂದ ಇನ್ಸ್ಟಾ ಖಾತೆಯನ್ನು ನಿಷ್ಕ್ರಿಯಗೊಳಿಸಿದ್ರಾ ಯುವನ್ ಶಂಕರ್?

19-rcb

RCB: ಈ  ಸಲ ಕಪ್‌ ನಮ್ಮದು…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.