ಭಾರತ ಮಹಿಳಾ ಕ್ರಿಕೆಟ್ ತಂಡದಲ್ಲಿ ‘ಸೈದ್ಧಾಂತಿಕ ಬದಲಾವಣೆ’ ಅಗತ್ಯವಿದೆ: ಕೋಚ್ ರಮೇಶ್ ಪೊವಾರ್
Team Udayavani, Jul 15, 2021, 3:39 PM IST
ಲಂಡನ್: ಇಂಗ್ಲೆಂಡ್ ಮಹಿಳಾ ತಂಡದ ವಿರುದ್ಧ ಏಕದಿನ ಮತ್ತು ಟಿ20 ಎರಡೂ ಸರಣಿಯಲ್ಲಿ ಸೋಲನುಭವಿಸಿರುವ ಭಾರತ ತಂಡದಲ್ಲಿ ಸೈದ್ಧಾಂತಿಕ ಬದಲಾವಣೆಯ ಅಗತ್ಯವಿದೆ ಎಂದು ಕೋಚ್ ರಮೇಶ್ ಪೊವಾರ್ ಅಭಿಪ್ರಾಯಪಟ್ಟಿದ್ದಾರೆ.
ಆಟಗಾರರ ಮನಸ್ಥಿತಿಯಲ್ಲಿ ಬದಲಾವಣೆ ಆಗಬೇಕಿದೆ. ಇಲ್ಲವೇ ಮಧ್ಯ ಕ್ರಮಾಂಕದಲ್ಲಿ ತಂಡದ ಅಗತ್ಯಕ್ಕೆ ತಕ್ಕಂತೆ ಬ್ಯಾಟ್ ಬೀಸಬಲ್ಲ ಆಟಗಾರರ ಅಗತ್ಯವಿದೆ ಎಂದು ಅವರು ಹೇಳಿದ್ದಾರೆ.
“ಆಟಗಾರರು ಅಂಜಿಕೆ ಬಿಟ್ಟು ಆಡಬೇಕಿದೆ. ಇದು ನನ್ನ ಮೊದಲ ಸರಣಿ. ಹಾಗಾಗಿ ಈಗಲೇ ಈ ಬಗ್ಗೆ ಒತ್ತಡ ಹೇರಲಾಗದು. ಅವರು ಒಂದು ಯೋಜನೆಯ ಪ್ರಕಾರ ಆಡುತ್ತಿದ್ದಾರೆ. ಎಲ್ಲವನ್ನೂ ಬದಲಿಸಲು ಸಾಧ್ಯವಿಲ್ಲ. ಆದರೆ ಕೆಲವು ಬದಲಾವಣೆಗಳು ಅಗತ್ಯ” ಎಂದು ರಮೇಶ್ ಪೊವಾರ್ ಹೇಳಿದ್ದಾರೆ.
ಇದನ್ನೂ ಓದಿ:ರಿಷಭ್ ಪಂತ್ ಗೆ ಕೋವಿಡ್ ಪಾಸಿಟಿವ್: ಅಭ್ಯಾಸ ಪಂದ್ಯಕ್ಕಿಲ್ಲ ಡೆಲ್ಲಿ ಡ್ಯಾಶರ್
“ಮುಂದಿನ ವಿಶ್ವಕಪ್ ಒಳಗೆ ನಾವು ಉತ್ತಮ ಮಧ್ಯಮ ಕ್ರಮಾಂಕವನ್ನು ಪಡೆಯಲು ಒಂದು ಮಾರ್ಗವನ್ನು ಕಂಡುಕೊಳ್ಳಬೇಕಿದೆ. ಏಕದಿನ ಮಾದರಿಯಲ್ಲಿ ಸುಲಭವಾಗಿ 250 ರನ್ ಗಳಿಸಬೇಕು. ನಾಯಕಿ, ಉಪನಾಯಕಿ, ಆಯ್ಕೆದಾರರ ಜೊತೆ ಈ ಬಗ್ಗೆ ನಾವು ಚರ್ಚಿಸುತ್ತೇವೆ” ಎಂದು ಪೊವಾರ್ ಹೇಳಿದರು.
ಇಂಗ್ಲೆಂಡ್ ವಿರುದ್ಧ ನಡೆದ ಏಕೈಕ ಟೆಸ್ಟ್ ಪಂದ್ಯದಲ್ಲಿ ಭಾರತ ಡ್ರಾ ಸಾಧಿಸಿತ್ತು. ಏಕದಿನ ಮತ್ತು ಟಿ20 ಸರಣಿಯಲ್ಲಿ 2-1 ಅಂತರದಲ್ಲಿ ಸೋಲನುಭವಿಸಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್
Wrestlers: ದುಬಾೖ ವಿಮಾನ ನಿಲ್ದಾಣದಲ್ಲಿ ಸಿಕ್ಕಿಬಿದ್ದ ಇಬ್ಬರು ಕುಸ್ತಿಪಟುಗಳು
LSG vs CSK: ಲಕ್ನೋದಲ್ಲೂ ಚೆನ್ನೈ ಫೇವರಿಟ್
IPL; ರೋಚಕ ಪಂದ್ಯದಲ್ಲಿ ಪಂಜಾಬ್ ಎದುರು 9 ರನ್ ಜಯ ಸಾಧಿಸಿದ ಮುಂಬೈ
Austria Marathon: ಭಾರತವನ್ನು ಪ್ರತಿನಿಧಿಸಲಿರುವ ಕೊಡಗಿನ ಅಪ್ಪಚಂಗಡ ಬೆಳ್ಯಪ್ಪ
MUST WATCH
ಹೊಸ ಸೇರ್ಪಡೆ
BJP ಮೋದಿ ಮಾಡೆಲ್ ಹೆಸರಿನಲ್ಲಿ ಚೊಂಬಿನ ಮಾಡೆಲ್ ನೀಡಿದೆ: ಸುರ್ಜೇವಾಲ
Davangere: 10 ರೂ.ಗಳ ನಾಣ್ಯ ರೂಪದಲ್ಲಿ 25 ಸಾವಿರ ರೂ. ಠೇವಣಿ ಕಟ್ಟಿದ ಅಭ್ಯರ್ಥಿ!
Bidar; ಬಿರುಗಾಳಿ ಸಹಿತ ಭಾರಿ ಮಳೆ :ಸಿಡಿಲು ಬಡಿದು ರೈತ ಸಾವು
Kalaburgi: ಮಹಿಳೆಯ ಬಾತ್ ರೂಮ್ ವಿಡಿಯೋ ರೆಕಾರ್ಡ್ ಮಾಡಿದ ಸೆಕ್ಯೂರಿಟಿ ಗಾರ್ಡ್
CET ಸುಗಮವಾಗಿ ನಡೆದಿದೆ: ಆಕ್ಷೇಪಣೆ ಸಲ್ಲಿಕೆಗೆ ಏ.27ರವರೆಗೆ ಅವಕಾಶ